Blog Archive

ಕೊರೋನಾ ಸೋಂಕು ಆಗಸ್ಟ್ 6 : ದಕ್ಷಿಣ ಕನ್ನಡ 173, ಸಾವು 11, ಉಡುಪಿ ಜಿಲ್ಲೆ 217, ಸಾವು 6

Friday, August 7th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ  173 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಸದ್ಯ ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.  ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ. ಗುರುವಾರ […]

ಕೊರೋನಾ ಸೋಂಕು ಆಗಸ್ಟ್ 5 : ದಕ್ಷಿಣ ಕನ್ನಡ 149, ಸಾವು 10, ಉಡುಪಿ ಜಿಲ್ಲೆ 173, ಸಾವು 2

Thursday, August 6th, 2020
corona

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಬುಧವಾರ 149 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 6542ಕ್ಕೆ ಏರಿಕೆಯಾಗಿದೆ. ಬುಧವಾರದಂದು 82 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ 3009 ಮಂದಿ ಇಲ್ಲಿಯ ತನಕ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಬುಧವಾರದಂದು ಮತ್ತೆ 10 ಮಂದಿ ಸೋಂಕಿಗೆ ಬಲಿಯಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ 190ಕ್ಕೆ ಏರಿಕೆಯಾಗಿದೆ. ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ […]

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಸೋಂಕು ದೃಢ

Wednesday, August 5th, 2020
HarishPoonja

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಹರೀಶ್ ಪೂಂಜಾ ಅವರು ಇತ್ತೀಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ಕಾರಣದಿಂದಾಗಿ ಮಂಗಳೂರಿನಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು. ಇದರೊಂದಿಗೆ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ವರದಿ ಲಭ್ಯವಾಗಿದ್ದು, ಪಾಸಿಟಿವ್ ಎಂಬುವುದಾಗಿ ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಶಾಸಕ ಹರೀಶ್ ಪೂಂಜಾ ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಕೊರೊನಾ […]

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ದೃಢ

Tuesday, August 4th, 2020
Siddaramaiah

ಬೆಂಗಳೂರು: ಕರ್ನಾಟಕ ಮುಖ್ಯ ಮಂತ್ರಿ ಯಡಿಯೂರಪ್ಪಕೊರೋನಾ ಪಾಸಿಟಿವ್ ಆದ ಬೆನ್ನಲ್ಲೇ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಕೊರೋನಾ ಸೋಂಕು ದೃಢವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನ್ನ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಯಾವುದೇ ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ […]

ಕೊರೋನಾ ಸೋಂಕು ಜುಲೈ 27 : ದಕ್ಷಿಣ ಕನ್ನಡ 119, ಉಡುಪಿ ಜಿಲ್ಲೆ 225

Tuesday, July 28th, 2020
coronavirus

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಂದು 119 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  ಸೋಂಕಿತರ ಸಂಖ್ಯೆ ಐದು ಸಾವಿರದ ಸನಿಹಕ್ಕೆ ತಲುಪಿದೆ. ಉಡುಪಿ ಜಿಲ್ಲೆಯಲ್ಲಿ 225 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4930ಕ್ಕೆ ಏರಿಕೆಯಾಗಿದೆ. ಈ ಪೈಕಿ 2502 ಮಂದಿ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸೋಮವಾರದಂದು 80 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ 2297 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸೋಮವಾರ ಪತ್ತೆಯಾದ ಸೋಂಕಿತರ ಪೈಕಿ 46 ಮಂದಿಯಲ್ಲಿ […]

ಕೊರೋನಾ ಸೋಂಕು ಶುಕ್ರವಾರ : ದಕ್ಷಿಣ ಕನ್ನಡ ಜಿಲ್ಲೆ 311, ಉಡುಪಿ ಜಿಲ್ಲೆ84, ಕಾಸರಗೋಡು ಜಿಲ್ಲೆ 32

Saturday, July 18th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 311 ಮಂದಿಯಲ್ಲಿ ಕೊರೋನಾ  ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3074ಕ್ಕೆ ಏರಿಕೆಯಾಗಿದೆ. 1725 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ 15 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಒಟ್ಟು 1278 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 23168 ಮಂದಿಯ ವರದಿ ಜಿಲ್ಲೆಯಲ್ಲಿ ಇಲ್ಲಿಯ ತನಕ ನೆಗೆಟಿವ್ ಬಂದಿದೆ. ಶುಕ್ರವಾರದಂದು ಜಿಲ್ಲೆಯಲ್ಲಿ ಕೊರೊನಾ ಸೋಂಕೊನಿಂದಾಗಿ 8 ಮಂದಿ ಮೃತಪಟ್ಟಿ ದ್ದಾರೆ.  ಮಂಗಳೂರಿನ 72 ವರ್ಷದ […]

ಕೊರೋನಾ ಸೋಂಕಿತರು : ದಕ್ಷಿಣ ಕನ್ನಡ ಜಿಲ್ಲೆ 73, ಉಡುಪಿ ಜಿಲ್ಲೆ 53, ಕಾಸರಗೋಡು ಜಿಲ್ಲೆ 74

Thursday, July 16th, 2020
corona virus

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಬುಧವಾರ 73 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  ಜಿಲ್ಲೆಯಲ್ಲಿ 104 ಮಂದಿಯ ಬುಧವಾರದಂದು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2525 ಕ್ಕೆ ಏರಿಕೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ 1089 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1379 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ 22740 ಮಂದಿಯ ವರದಿ ನೆಗೆಟಿವ್ ಬಂದಿದೆ. ದಕ್ಷಿಣ ಕನ್ನಡದಲ್ಲಿ  ಬುಧವಾರದಂದು ನಾಲ್ವರು ಸೋಂಕಿನಿಂದಾಗಿ […]

ಕೊರೋನಾ ಸೋಂಕು : ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 196, ಉಡುಪಿ ಜಿಲ್ಲೆ 41

Sunday, July 12th, 2020
corona positive

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ  196 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಸದ್ಯ ಸೋಂಕಿತರ ಸಂಖ್ಯೆ 2230ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1308 ಸಕ್ರೀಯ ಪ್ರಕರಣಗಳಿವೆ. ಮತ್ತೆ 94 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಆ ಮೂಲಕ 876 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸೋಂಕಿಗೆ 5 ಮಂದಿ ಮೃತಪಟ್ಟಿದ್ದು, ಮೃತರಲ್ಲಿ ಬೆಳ್ತಂಗಡಿಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ, ಪುತ್ತೂರಿನ‌ ಮೂಲಡ್ಕ ನಿವಾಸಿ 50 ವರ್ಷದ ವ್ಯಕ್ತಿ , ಮಂಗಳೂರಿನ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಪತ್ರಕರ್ತರಿಗೆ ಕೊರೋನಾ ಸೋಂಕು ಪತ್ತೆ

Sunday, July 12th, 2020
journalist

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಪತ್ರಕರ್ತರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಖಾಸಗಿ ಚಾನಲ್ಗಳ ಕ್ಯಾಮೆರಾಮೆನ್ಗಳಾಗಿರುವ ಇಬ್ಬರಿಗೆ ಮೊನ್ನೆ ತಲೆನೋವು ಜ್ವರದ ಲಕ್ಷಣ ಕಂಡು ಬಂದಿದ್ದು, ಈ ಹಿನ್ನೆಲೆ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಭಾನುವಾರ ವರದಿ ಬಂದಿದ್ದು, ಇವರಲ್ಲಿ ಸೋಂಕು ಇರುವುದು ದೃಢಗೊಂಡಿದೆ. ಇದೀಗ ಇಬ್ಬರೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರ ಆರೋಗ್ಯ ಪರಿಸ್ಥಿತಿಯೂ ಉತ್ತಮವಾಗಿದೆ. ಪತ್ರಕರ್ತರು ಗುರುಪುರ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಿದ ನಂತರ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ ಎನ್ನಲಾಗಿದೆ. ಕೊರೊನಾ ಪ್ರಕರಣಗಳು ದ.ಕ.ಜಿಲ್ಲೆಯಲ್ಲಿ‌ ಕಾಣಿಸಿಕೊಳ್ಳುತ್ತಿದ್ದ […]

ಮಂಗಳೂರು : 30 ಮಂದಿ ಸಿಐಎಸ್‌ಎಫ್ ಯೋಧರು ಸೇರಿ ಸುರತ್ಕಲ್‌ ಪರಿಸರದಲ್ಲಿ 45 ಮಂದಿಗೆ ಕೊರೋನಾ ಸೋಂಕು

Wednesday, July 8th, 2020
cisf

ಮಂಗಳೂರು : ಸುರತ್ಕಲ್‌ ಪರಿಸರದಲ್ಲಿ ಬುಧವಾರ ಒಟ್ಟು 45 ಮಂದಿಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ. ಇದರಲ್ಲಿ ಸಿಐಎಸ್‌ಎಫ್ ಯೋಧರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬುಧವಾರ ದ.ಕ. ಜಿಲ್ಲೆಯಲ್ಲಿ 183 ಮಂದಿಗೆ ಕೋವಿಡ್ ದೃಢವಾಗಿದ್ದು, ಅದರಲ್ಲಿ ಎಂಆರ್‌ಪಿಎಲ್‌ ಪರಿಸರದ ಸಿಐಎಸ್‌ಎಫ್ ಯೂನಿಟ್‌ನ 30 ಮಂದಿಗೆ ದೃಢವಾಗಿದೆ. ಇವರನ್ನು ರ್‍ಯಾಂಡಮ್‌ ಪರೀಕ್ಷೆಗೆ ಒಳಪಡಿಸಿದಾಗ ಹೆಚ್ಚಿನವರಿಗೆ ಸೋಂಕು ತಗಲಿರುವುದು ಗೊತ್ತಾಗಿದೆ. ಉಳಿದಂತೆ ಸುರತ್ಕಲ್‌ ಇಡ್ಯಾದ ವಸತಿ ಸಮುಚ್ಚಯ ಮತ್ತು ಕಾಟಿಪಳ್ಳದ ಮೂವರು ಸಹಿತ 15 ಮಂದಿಗೆ ಸೋಂಕು ತಗಲಿದೆ. ಸುರತ್ಕಲ್‌ನಲ್ಲಿ ರ್‍ಯಾಂಡಮ್‌ ಪರೀಕ್ಷೆಗೆ […]