Blog Archive

ಕೊರೋನ ಸೋಂಕು ಸೆ .3 : ದಕ್ಷಿಣ ಕನ್ನಡ 316, ಸಾವು 3, ಉಡುಪಿ, 226, ಸಾವು 3, ಕಾಸರಗೋಡು 133

Thursday, September 3rd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 316 ಮಂದಿಯಲ್ಲಿ ಕೊರೋನ ಸೋಂಕಿನ ಪಾಟಿಸಿವ್ ಪತ್ತೆಯಾಗಿದ್ದು, 3 ಮಂದಿ ಬಲಿಯಾಗಿದ್ದಾರೆ. ಗುರುವಾರ ವರದಿಯಾದ 316 ಮಂದಿಯ ಸಹಿತ ಈವರೆಗೆ ಜಿಲ್ಲೆಯಲ್ಲಿ ಒಟ್ಟು 13,795 ಮಂದಿಗೆ ಕೊರೋನ ಸೋಂಕು ತಗುಲಿದೆ. ಗುರುವಾರ ಪಾಸಿಟಿವ್‌ಗೊಳಗಾದ 316 ಮಂದಿಯಲ್ಲಿ ಮಂಗಳೂರಿನ 190, ಬಂಟ್ವಾಳದ 40, ಪುತ್ತೂರಿನ 21, ಸುಳ್ಯದ 16, ಬೆಳ್ತಂಗಡಿಯ 16 ಮತ್ತು ಇತರ ಜಿಲ್ಲೆಯ 33 ಮಂದಿ ಸೇರಿದ್ದಾರೆ. ಮಂಗಳೂರು ತಾಲೂಕಿನ 2 ಮತ್ತು ಹೊರಜಿಲ್ಲೆಯ ಒಬ್ಬರು ಸಹಿತ ಜಿಲ್ಲೆಯಲ್ಲಿ ಗುರುವಾರ […]

ಕೊರೋನ ಸೋಂಕು ಸೆ.2 : ದಕ್ಷಿಣ ಕನ್ನಡ 414, ಸಾವು 6, ಉಡುಪಿ 167, ಸಾವು 3

Wednesday, September 2nd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 414 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 6 ಮಂದಿ ಬಲಿಯಾಗಿದ್ದಾರೆ. ಬುಧವಾರ ಪಾಸಿಟಿವ್‌ಗೊಳಗಾದ 414 ಮಂದಿಯಲ್ಲಿ ಮಂಗಳೂರಿನ 222, ಬಂಟ್ವಾಳದ 64, ಪುತ್ತೂರಿನ 49, ಸುಳ್ಯದ 31, ಬೆಳ್ತಂಗಡಿಯ 28 ಮತ್ತು ಇತರ ಜಿಲ್ಲೆಯ 20 ಮಂದಿ ಸೇರಿದ್ದಾರೆ. ಬುಧವಾರ ವರದಿಯಾದ 414 ಮಂದಿಯ ಸಹಿತ ಈವರೆಗೆ ಜಿಲ್ಲೆಯಲ್ಲಿ ಒಟ್ಟು 13,479 ಮಂದಿಗೆ ಕೊರೋನ ಸೋಂಕು ತಗುಲಿದೆ. ಮಂಗಳೂರು ತಾಲೂಕಿನ 4, ಬೆಳ್ತಂಗಡಿ 1 ಮತ್ತು ಹೊರಜಿಲ್ಲೆಯ ಒಬ್ಬರು ಸಹಿತ […]

ಕೊರೋನ ಸೋಂಕು ಆಗಸ್ಟ್ 12 : ದಕ್ಷಿಣ ಕನ್ನಡ 229 , ಉಡುಪಿ 263

Wednesday, August 12th, 2020
coronavirus

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ದಂದು 229 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ಸೋಂಕಿನಿಂದ 498 ಮಂದಿ ಗುಣಮುಖರಾಗಿ ಬಿಡುಗಡೆಗೊಂದಿದ್ದಾರೆ. ‘ಪಾಂಡೆಮಿಕ್’ ಕಿರು ಚಿತ್ರ ಆಗಸ್ಟ್ 15 ರಂದು ಮೆಗಾ ಮೀಡಿಯಾ ನ್ಯೂಸ್ ಯೌಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ  ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7825ಕ್ಕೆ ಏರಿಕೆಯಾಗಿದೆ. ಈ ಪೈಕಿ 5232 ಮಂದಿ ಒಟ್ಟು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 2349 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಬುಧವಾರದಂದು ಮತ್ತೆ 7 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು […]

ಕೊರೋನ ಸೋಂಕು ಜುಲೈ 20 : ದಕ್ಷಿಣ ಕನ್ನಡ 89, ಉಡುಪಿ ಜಿಲ್ಲೆ 99, ಕಾಸರಗೋಡು 28

Tuesday, July 21st, 2020
CORONA

ಮಂಗಳೂರು :  ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಸೋಮವಾರ  89 ಮಂದಿಯಲ್ಲಿ ಕೊರೋನ ಸೋಂಕು ಕಾಣಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,685ಕ್ಕೆ ಏರಿಕೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 11 ಮಂದಿ, ಶೀತ-45, ತೀವ್ರ ಉಸಿರಾಟ ತೊಂದರೆ-16, ವಿದೇಶದಿಂದ ಆಗಮಿಸಿದ ಇಬ್ಬರು, ಕಾಂಟ್ಯಾಕ್ಟ್ ಅಂಡರ್ ಟ್ರೇಸಿಂಗ್‌ನ 15 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ […]

ಕೊರೋನ ಸೋಂಕು ರವಿವಾರ : ದಕ್ಷಿಣ ಕನ್ನಡ 285, ಉಡುಪಿ ಜಿಲ್ಲೆ 134, ಕಾಸರಗೋಡು 57

Sunday, July 19th, 2020
coronavirus

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿರವಿವಾರ 285 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.  ಈಗ  ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 3,596ಕ್ಕೆ ಏರಿಕೆಯಾಗಿದೆ. ಕೋವಿಡ್‌ಗೆ ರವಿವಾರ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ ತೀವ್ರ ಉಸಿರಾಟ ಸಮಸ್ಯೆ (ಸಾರಿ) ಮತ್ತು ಶೀತ (ಐಎಲ್‌ಐ) ಪ್ರಕರಣಗಳು ಹೆಚ್ಚಿದ್ದು, ಸೋಂಕು ಮೂಲ ಪತ್ತೆಯಾಗದ ಪ್ರಕರಣಗಳು ಕೂಡ 60ಕ್ಕೂ ಹೆಚ್ಚಿವೆ. ಸೋಂಕಿತರ ಪ್ರಾಥಮಿಕ ಸಂಪರ್ಕದಿಂದಲೂ ಅನೇಕರಿಗೆ ಸೋಂಕು ಹರಡಿದ್ದು, ಇಂಥವರ ಸಂಪರ್ಕದಲ್ಲಿರುವವರ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿವಿಧ ಆಸ್ಪತ್ರೆ, ಆರೈಕೆ […]

ಕೊರೋನ ಸೋಂಕು ಶನಿವಾರ : ದಕ್ಷಿಣ ಕನ್ನಡ ಜಿಲ್ಲೆ 237, ಉಡುಪಿ ಜಿಲ್ಲೆ109, ಕಾಸರಗೋಡು 29

Sunday, July 19th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಶನಿವಾರ ಒಂದೇ ದಿನದಲ್ಲಿ 237 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗಿನ ಕೊರೋನ ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಇದರಲ್ಲಿ 12 ಮಂದಿ ಹೊರ ಜಿಲ್ಲೆಯವರು. ಕೋವಿಡ್‌ನಿಂದಾಗಿ ಶನಿವಾರ ನಾಲ್ವರು ಮೃತಪಟ್ಟಿದ್ದಾರೆ. ಶನಿವಾರ ಸಾವಿಗೀಡಾದವರಲ್ಲಿ ಮೂವರು ಮಹಿಳೆಯರಾಗಿದ್ದರೆ, ಒಬ್ಬರು ಪುರುಷ. ಮೃತರಲ್ಲಿ ಮಂಗಳೂರಿನ ಮೂವರು ಹಾಗೂ ಪುತ್ತೂರಿನ ಮತ್ತೋರ್ವರು ಇದ್ದಾರೆ. ಮೃತರು 49 ವರ್ಷ ಮೇಲ್ಪಟ್ಟವರು. ಇವರೆಲ್ಲರೂ ಕೊರೋನದೊಂದಿಗೆ ಇತರ ಕಾಯಿಲೆಗಳಿಂದಲೂ ಬಳಲುತ್ತಿದ್ದರು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ. ಮಂಗಳೂರಿನ 67 […]

ಕೊರೋನ ಸೋಂಕು ಗುರುವಾರ : ದಕ್ಷಿಣ ಕನ್ನಡ ಜಿಲ್ಲೆ 238, ಉಡುಪಿ ಜಿಲ್ಲೆ 109, ಕಾಸರಗೋಡು ಜಿಲ್ಲೆ 18

Thursday, July 16th, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ದಾಖಲೆಯ 238 ಕೊರೋನ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,738ಕ್ಕೆ ಏರಿಕೆಯಾಗಿದೆ. ಗುರುವಾರ ಹೊಸದಾಗಿ ಸೋಂಕು ಪತ್ತೆಯಾದ 238 ಮಂದಿಯಲ್ಲಿ ಕೇವಲ 23 ಮಂದಿಗೆ ಮಾತ್ರ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಬಂದಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯ 17 ಪ್ರಕರಣಗಳು ಇವೆ. ವಿದೇಶದಿಂದ ಬಂದ 19 ಮಂದಿಗೆ ಮಾತ್ರ ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ […]

ಬಂಟ್ವಾಳ : ಕೇಂದ್ರದ ಮಾಜಿ ಸಚಿವ ಹಾಗೂ ಅವರ ಪತ್ನಿಗೆ ಕೊರೋನ ಸೋಂಕು ದೃಢ

Sunday, July 5th, 2020
Bantwal Covid

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ  ಬಂಟ್ವಾಳ ತಾಲೂಕಿನಲ್ಲಿರುವ ಕೇಂದ್ರದ ಮಾಜಿ ಸಚಿವ ಹಾಗೂ ಅವರ ಪತ್ನಿ, ಮಕ್ಕಳಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಅವರ ಹಿರಿಯ ಪುತ್ರ ಸಾಮಾಜಿಕ ಜಾಲತಾಣದಲ್ಲಿ ‘ತಂದೆ ಕ್ಷೇಮವಾಗಿದ್ದಾರೆ’ ಎಂದು ತಿಳಿಸಿದ್ದಾರೆ. ತಂದೆಗೆ ಶನಿವಾರ ಕೋವಿಡ್ ತಪಾಸಣೆ ನಡೆಸಲಾಗಿದ್ದು ವರದಿ ಪಾಸಿಟಿವ್ ಬಂದಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕ್ಷೇಮವಾಗಿದ್ದು ಕೊರೋನ ಸಂಬಂಧಿಸಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 75 ಹೊಸ ಕೊರೋನ ಸೋಂಕು ಪ್ರಕರಣಗಳು ಪತ್ತೆ

Saturday, July 4th, 2020
corona virus

ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 75 ಹೊಸ ಕೊರೋನ  ಸೋಂಕು ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1095ಕ್ಕೆ ಏರಿಕೆಯಾಗಿದೆ. 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರ ಸೋಂಕು ತಗುಲಿದ 75 ಮಂದಿಯಲ್ಲಿ ಉಸಿರಾಟ ಸಂಬಂಧಿ ತೊಂದರೆಯುಳ್ಳ ‘ಸಾರಿ’ ಮತ್ತು ‘ಐಎಲ್‌ಐ’ ಪ್ರಕರಣಗಳೇ ಅತ್ಯಧಿಕ (35 ಪ್ರಕರಣ) ಆಗಿರುವುದು ಆತಂಕಕ್ಕೆ ಕಾರಣವಾಗಿದೆ. ಉಳಿದಂತೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 25 ಮಂದಿ ಹೊಸದಾಗಿ ಸೋಂಕಿಗೆ ತುತ್ತಾಗಿದ್ದರೆ, ವಿದೇಶಗಳಿಂದ ಆಗಮಿಸಿದ 11 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಸೋಂಕಿನ […]

ದಕ್ಷಿಣ ‌ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಇಬ್ಬರು ಬಲಿ

Wednesday, July 1st, 2020
corona-death

ಮಂಗಳೂರು : ಬುಧವಾರ ದಕ್ಷಿಣ ‌ಕನ್ನಡ ಜಿಲ್ಲೆಯಲ್ಲಿ ಇಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು 51 ವರ್ಷದ ಬೆಂಗ್ರೆ ನಿವಾಸಿ ಮತ್ತು 31 ವರ್ಷದ ಭಟ್ಕಳ ‌ನಿವಾಸಿ ಎಂದು ಗುರುತಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಕೊರೋನದಿಂದ ಸಾವಿಗೀಡಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಬೆಂಗ್ರೆ ನಿವಾಸಿ, ಡಯಾಬಿಟಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ 51 ವರ್ಷದ ಸೋಂಕು ಪೀಡಿದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮತ್ತೋರ್ವ ಯುವಕನನ್ನು 31 ವರ್ಷದ ಭಟ್ಕಳ ‌ನಿವಾಸಿ […]