ಮಂಗಳೂರು ಜ್ಯುವೆಲ್ಲರ್ಸ್‌ ನ ಸೇಲ್ಸ್‌ಮ್ಯಾನ್ ಕೊಲೆ, ಶಂಕಿತ ಆರೋಪಿಯ ಸಿಸಿಟಿವಿ ಫೂಟೇಜ್ ಸಂಗ್ರಹ

Monday, February 6th, 2023
ಮಂಗಳೂರು ಜ್ಯುವೆಲ್ಲರ್ಸ್‌ ನ ಸೇಲ್ಸ್‌ಮ್ಯಾನ್ ಕೊಲೆ, ಶಂಕಿತ ಆರೋಪಿಯ ಸಿಸಿಟಿವಿ ಫೂಟೇಜ್ ಸಂಗ್ರಹ

ಮಂಗಳೂರು : ನಗರದ ಬಲ್ಮಠ-ಹಂಪನಕಟ್ಟೆ ರಸ್ತೆಯಲ್ಲಿರುವ ಮಂಗಳೂರು ಜ್ಯುವೆಲ್ಲರ್ಸ್‌ನ ಸೇಲ್ಸ್‌ಮ್ಯಾನ್ ರಾಘವೇಂದ್ರ ಆಚಾರ್ಯರನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯ ಸಿಸಿಟಿವಿ ಚಿತ್ರ ಪೊಲೀಸರಿಗೆ ಲಭ್ಯವಾಗಿದೆ. ಶಂಕಿತ ಆರೋಪಿಯ ಬಗ್ಗೆ ಮಾಹಿತಿ ದೊರೆತಲ್ಲಿ ನಗರ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಫೆ. 3ರಂದು ಮಧ್ಯಾಹ್ನ ಸುಮಾರು 3:30 ಗಂಟೆಯಿಂದ 3:45ರ ನಡುವೆ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ಮಠ ರಸ್ತೆಯಲ್ಲಿನ ಮಂಗಳೂರು ಜ್ಯುವೆಲ್ಲರ್ಸ್ ಗೆ […]

ಲಾರಿ ಚಾಲಕನನ್ನು ಕುತ್ತಿಗೆಗೆ ಶಾಲ್ ನಿಂದ ಬಿಗಿದು ಕೊಲೆ

Tuesday, January 31st, 2023
murder

ಕಾರ್ಕಳ :  ಲಾರಿ ಚಾಲಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿ ಎಂಬಲ್ಲಿ ಜ.30ರಂದು ರಾತ್ರಿ ವೇಳೆ ನಡೆದಿದೆ. ಲಾರಿಯ ಚಾಲಕ ತಮಿಳುನಾಡಿನ ಮಣಿ (36) ಎಂಬವರು ಕೊಲೆಯಾಗಿದ್ದು, ಕೊಲೆ ಆರೋಪಿ  ಲಾರಿ ಚಾಲಕ ವೀರಬಾಹು ಎಂದು ಗುರುತಿಸಲಾಗಿದೆ. ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿಗೆ ಪ್ರತಿವರ್ಷ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅದರಲ್ಲಿ‌ ಬಂದವರು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು. ಜ.30ರಂದು […]

ಪತ್ನಿಯನ್ನು ಕೊಲೆಗೈದು ಗೋಣಿಚೀಲದಲ್ಲಿಟ್ಟಿದ್ದ ಪತಿಯ ಬಂಧನ

Saturday, November 26th, 2022
imran-shiekh

ಸುಳ್ಯ : ಪತ್ನಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ಮೃತದೇಹವನ್ನು ತುಂಬಿಸಿಟ್ಟು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಇಮ್ರಾನ್ ಶೇಖ್ ಬಂಧಿತ ಆರೋಪಿ. ಪಶ್ಚಿಮ ಬಂಗಾಳದ ಪೊಲೀಸರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಿ ಸುಳ್ಯ ಪೊಲೀಸರು ನವೆಂಬರ್ 24ರಂದು ಸಂಜೆ ಸುಳ್ಯಕ್ಕೆ ಕರೆ ತಂದಿದ್ದಾರೆ. ಸುಳ್ಯದ ಬೀರಮಂಗಳದ ಮನೆಯೊಂದರಲ್ಲಿ ಕಳೆದ ಏಳು ತಿಂಗಳಿಂದ ವಾಸವಾಗಿದ್ದು, ಸ್ಥಳೀಯ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಕೆಲ ದಿನಗಳ ಹಿಂದೆ ಊರಿಗೆ ತೆರಳುವುದಾಗಿ ಹೊಟೇಲ್‌ನವರಲ್ಲಿ ಹೇಳಿ ಹೋಗಿದ್ದ. […]

ನಡು ರಾತ್ರಿಯಲ್ಲಿ ಆಟೋ ಚಾಲಕನ ಕಡಿದು ಕೊಲೆ ಮಾಡಲು ಬಂದ ದುಷ್ಕರ್ಮಿಗಳು

Tuesday, November 15th, 2022
ನಡು ರಾತ್ರಿಯಲ್ಲಿ ಆಟೋ ಚಾಲಕನ ಕಡಿದು ಕೊಲೆ ಮಾಡಲು ಬಂದ  ದುಷ್ಕರ್ಮಿಗಳು

ಬಂಟ್ವಾಳ : ರಾತ್ರಿ 2 ಗಂಟೆಯ ವೇಳೆಗೆ ಆಟೋ ಚಾಲಕನೋರ್ವನನ್ನು ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಅಬೂಬಕ್ಕರ್ ಪುತ್ರ ಆಟೋ ಚಾಲಕ ಶಾಕೀರ್ ಹಲ್ಲೆಗೊಳಗಾದ ವ್ಯಕ್ತಿ. ಕಬಡ್ಡಿ ಮ್ಯಾಚ್ ಮುಗಿಸಿ ರಾತ್ರಿ 2 ಗಂಟೆಯ ಬಳಿಕ ಮನೆಗೆ ಹಿಂತಿರುಗುತ್ತಿದ್ದ ಶಾಕೀರ್‌ನನ್ನು ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ತಡೆದು ನಾಲ್ವರು ದುಷ್ಕರ್ಮಿಗಳಿಂದ ತಲವಾರಿನಿಂದ ದಾಳಿ ನಡೆಸಿದ್ದಾರೆ. ದಾಳಿಯ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಿಚಯಸ್ಥರೇ ಈ […]

ಯುವಕನನ್ನು ಕಿಡ್ನಾಪ್ ಮಾಡಿ ಪೆಟ್ರೋಲ್ ಹಚ್ಚಿ ಕೊಲೆ, ಶವ ಪತ್ತೆ

Tuesday, November 8th, 2022
ಯುವಕನನ್ನು ಕಿಡ್ನಾಪ್ ಮಾಡಿ ಪೆಟ್ರೋಲ್ ಹಚ್ಚಿ ಕೊಲೆ, ಶವ ಪತ್ತೆ

ಬಂಟ್ವಾಳ : ಯುವಕನೋರ್ವನನ್ನು ಕಿಡ್ನಾಪ್ ಮಾಡಿ ಬಳಿಕ ಪೆಟ್ರೋಲ್ ಹಚ್ಚಿ ಕೊಲೆ ಮಾಡಿರುವ ಘಟನೆ ಇರಾ ಪದವು ಎಂಬಲ್ಲಿ ನಡೆದಿದೆ. ಕೊಲೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ವ್ಯಕ್ತಿಯೋರ್ವನ ನ್ನು ಬಂಧಿಸಿದ್ದಾರೆ. ಬೊಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಬಂಧಿತ ಆರೋಪಿ. ಸುರಿಬೈಲು ನಿವಾಸಿ ಸುಲೈಮಾನ್ ಅವರ ಪುತ್ರ ಅಬ್ದುಲ್ ಸಮದ್ ಎಂಬವನನ್ನು ಕಿಡ್ನಾಪ್ ಮಾಡಿ ಕೊಲೆಮಾಡಿರುವುದಾಗಿ ಬಂಧಿಸಿರುವ ವ್ಯಕ್ತಿ ಬಾಯಿ ಬಿಟ್ಟಿದ್ದಾನೆ. ಬಂಧಿತ ಆರೋಪಿ ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ […]

ಮೊಹಮ್ಮದ್ ಫಾಝಿಲ್ ಕೊಲೆಗೆ ಕಾರು ನೀಡಿದಾತನ ಬಂಧನ

Sunday, July 31st, 2022
Mohammed Fazil Murder

ಮಂಗಳೂರು : ನಗರದ ಹೊರವಲಯದಲ್ಲಿನ ಸುರತ್ಕಲ್ ನಲ್ಲಿ ನಡೆದಿದ್ದ ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದಲ್ಲಿ ಕಾರು ಬಾಡಿಗೆ ನೀಡಿದಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಜಿತ್ ಎಂಬಾತ ಫಾಝಿಲ್ ಕೊಲೆ ಗಾರರಿಗೆ ಕಾರು ನೀಡಿ ಸಹಾಯ ಮಾಡಿದ್ದ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ಅಜಿತ್ ಬಂಧನದ ವಿಚಾರವನ್ನು ಸ್ವತಃ ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕಳೆದ ಗುರುವಾರ ರಾತ್ರಿ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಮಂಗಳಪೇಟೆ ನಿವಾಸಿ 23 ವರ್ಷದ ಫಾಝಿಲ್ ನ ಮೇಲೆ ಮಾರಕಾಸ್ತ್ರಗಳಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. […]

ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಮಹೇಶ್ ಕುಮಾರ್

Sunday, July 31st, 2022
Mahesh Kumar

ಮಂಗಳೂರು : ಮುಹಮ್ಮದ್ ಫಾಝಿಲ್ ಅವರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರನ್ನು ನಿಯೋಜಿಸಲಾಗಿದೆ. ಪ್ರಕರಣದ ತನಿಖೆಯನ್ನು ಉನ್ನತ ಅಧಿಕಾರಿಗಳಿಂದ ನಡೆಸುವಂತೆ ಫಾಝಿಲ್ ಕುಟುಂಬ ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಎಸಿಪಿಯನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಮನೆಗೆ ಬಸವರಾಜ ಬೊಮ್ಮಾಯಿ

Thursday, July 28th, 2022
CMBellare

ಮಂಗಳೂರು : ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಅವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಸಂಜೆ ಆಗಮಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದರಾದ ನಳೀನ್ ಕುಮಾರ್ ಕಟೀಲ್, ಸಿ.ಟಿ ರವಿ, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ […]

ಪೆರ್ಲಂಪಾಡಿಯಲ್ಲಿ ಯುವಕನ ಹತ್ಯೆ, ಮೂವರು ಪೊಲೀಸರು ವಶ

Monday, June 6th, 2022
charanraj Murder

ಪುತ್ತೂರು : ಪೆರ್ಲಂಪಾಡಿಯಲ್ಲಿ ಚರಣ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರಿನ ಕೆಯ್ಯೂರು ಪಲ್ಲತ್ತಡ್ಕದಿಂದ ನರ್ಮೇಶ್ ರೈ(29), ನಿತಿಲ್ ಶೆಟ್ಟಿ(23), ವಿಜೇಶ್(22) ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಆರೋಪಿಗಳ ಪತ್ತೆಗೆ ಪೊಲೀಸರ ಶೋಧ ಕಾರ್ಯ ಮುಂದುವರೆಸಿದ್ದಾರೆ. ಇದೊಂದು ಪೂರ್ವ ದ್ವೇಷದ ಹತ್ಯೆ ಪೊಲೀಸರು ಹೇಳಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯ ರವಿ, ಬೆಳ್ಳಾರೆ ಠಾಣಾ ಪಿಎಸ್‌ಐ ರುಕ್ಮ ನಾಯ್ಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕಿಶೋರ್ ಪೂಜಾರಿ […]

ರೌಡಿಶೀಟರ್ ರಾಹುಲ್‌ ತಿಂಗಳಾಯ ಕೊಲೆ, ಆರು ಮಂದಿ ಆರೋಪಿಗಳ ಬಂಧನ

Monday, May 9th, 2022
Rahul Murder

ಮಂಗಳೂರು : ರೌಡಿಶೀಟರ್ ರಾಹುಲ್‌ ತಿಂಗಳಾಯ ಯಾನೆ ಕಕ್ಕೆ ರಾಹುಲ್ ಎಂಬಾತನ ಕೊಲೆ ಮಾಡಿದ ಆರು ಮಂದಿ ಆರೋಪಿಗಳನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮಹೇಂದ್ರ ಶೆಟ್ಟಿ (27), ಅಕ್ಷಯಕುಮಾರ್ (25), ಸುಶಿತ್ (20) ದಿಲ್ಲೆಶ್ ಬಂಗೇರ (21), ಶುಭಂ (26) ಮತ್ತು ವಿಷ್ಣು.ಪಿ (20) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು 13 ಜನ ಭಾಗಿಯಾಗಿದ್ದರು. ಏಪ್ರಿಲ್ 28ರಂದು ಮಂಗಳೂರು ಎಮ್ಮೆಕರ ಮೈದಾನಕ್ಕೆ ಕೋಳಿ ಅಂಕಕ್ಕೆ ಬಂದಿದ್ದ ಹೊಯ್ ಬಜಾರ್ ನಿವಾಸಿ ಕಕ್ಕೆ ರಾಹುಲ್ […]