Blog Archive

ಅವರಿಬ್ಬರ ನಡುವಿನ ಸಂಶಯ ಕೊಲೆ ಮಾಡುವ ವರೆಗೆ ಮುಟ್ಟಿತು !

Tuesday, July 16th, 2013
Gangadhar Padubidre

ಮಂಗಳೂರು : ದೂರದರ್ಶನದ (ಡಿ.ಡಿ-1) ವರದಿಗಾರ ಗಂಗಾಧರ್ ಪಡುಬಿದ್ರೆ ತನ್ನ ಪತ್ನಿಯನ್ನು ಹತೈಗೈದ ಘಟನೆ ಸೋಮವಾರ ಸಂಜೆ ಕೋಡಿಕಲ್‌ನ ಜೆ.ಬಿ.ರಸ್ತೆಯ ಮನೆಯೊಂದರಲ್ಲಿ ನಡೆದಿದೆ. ಅರೋಪಿ ಗಂಗಾಧರ್ ಪಡುಬಿದ್ರೆ ದೂರದರ್ಶನದ (ಡಿ.ಡಿ-1) ವರದಿಗಾರರಾಗಿದ್ದರು. ಮತ್ತು ಆಕೆಸ್ಟ್ರಾ ತಂಡ ಕಟ್ಟಿ ರಸಮಂಜರಿ ಕಾರ್ಯಕ್ರಮಗಳನ್ನು ನೀಡುತ್ತಿದ್ದರು. ಮಮತಾ ಶೆಟ್ಟಿ ( 32) ನಗರದ ಎಸ್.ಡಿ.ಎಮ್ ಕಾಲೇಜಿನ ಶಿಕ್ಷಕಿ ಯಾಗಿದ್ದರು. ಕೊಲೆಯಾದ ಮಮತಾ ಎಳವೆಯಲ್ಲಿಯೇ  ಹೆತ್ತವರನ್ನು ಕಳೆದುಕೊಂಡು  ಹಾಸ್ಟೆಲ್‌ನಲ್ಲಿದ್ದಳು. ಅಲ್ಲಿಂದ ಮಮತಾಳನ್ನು ಕರೆತಂದ ಗಂಗಾಧರ ಪಡುಬಿದ್ರಿ ಆಕೆಗೆ ಶಿಕ್ಷಣ ಕೊಡಿಸಿದ್ದ, ಆಕೆ ಕಾನೂನು […]

ಕಾಸರಗೋಡು ಯುವಕನ ಇರಿದು ಕೊಲೆ, ಮೂವರು ವಶಕ್ಕೆ

Wednesday, July 10th, 2013
Sabith murder

ಕಾಸರಗೋಡು: ಮೀಪುಗುರಿಯ  ಜೆ.ಪಿ. ಕಾಲನಿ ಬಳಿ ಜುಲೈ 7ರಂದು ಬಟ್ಟೆ ಅಂಗಡಿ ಉದ್ಯೋಗಿ ಟಿ.ಎ. ಸಾಬಿತ್(19)ರನ್ನು ಇರಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ. ಭಾನುವಾರ ಬೆಳಗ್ಗೆ ಗೆಳೆಯ ರಶೀದ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಇನ್ನೊಂದು ಬೈಕ್‌ನಲ್ಲಿ ಬಂದ ತಂಡವೊಂದು ಇರಿದು ಪರಾರಿಯಾಗಿತ್ತು. ತೀವ್ರವಾಗಿ ಗಾಯಗೊಂಡ ಸಾಬೀತ್  ನನ್ನು ಕೂಡಲೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸಿದೆ ಭಾನುವಾರ ಮಧ್ಯಾಹ್ನ ಮೃತಪಟ್ಟಿದ್ದಾನೆ. ಕೃತ್ಯದಲ್ಲಿ ನೇರವಾಗಿ ಶಾಮೀಲಾಗಿದ್ದ ಅಕ್ಷಯ್ ಮತ್ತು […]

ಕಾಸರಗೋಡು ಯುವಕನ ಕೊಲೆ, 7ಮಂದಿಯ ವಿರುದ್ಧ ದೂರು ದಾಖಲು ; ಒಂದು ವಾರ ನಿಷೇಧಾಜ್ಞೆ ಜಾರಿ

Monday, July 8th, 2013
Kasaragod youth Murder

ಕಾಸರಗೋಡು : ಕಾಸರಗೋಡು ಸಮೀಪದ ವಿದ್ಯಾನಗರ, ನುಳ್ಳಿಪಾಡಿಯ ಜೆಪಿ ನಗರ ನಿವಾಸಿ ಟಿ.ಎ. ಸಾಬೀದ್(18) ತನ್ನ ಸ್ನೇಹಿತನ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಇರಿದು  ಕೊಲೆ ಮಾಡಿದ  ಘಟನೆ ಭಾನುವಾರ ನಡೆದಿದೆ. ಟಿ.ಎ. ಸಾಬೀದ್ ಕಾಸರಗೋಡು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಭಾನುವಾರ ಬೆಳಗ್ಗೆ ಗೆಳೆಯ ರಶೀದ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಇನ್ನೊಂದು ಬೈಕ್‌ನಲ್ಲಿ ಬಂದ ತಂಡವೊಂದು ಇರಿದು ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡ ಸಾಬೀದ್ ನನ್ನು ಸ್ಥಳೀಯರು ಕೂಡಲೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ […]

ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರ ಕತ್ತು ಕೊಯ್ದ ಕೊಲೆ

Wednesday, July 3rd, 2013
Shamsid Uda

ಬೆಂಗಳೂರು : ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರನ್ನು ಅವರ ಕಚೇರಿಯಲ್ಲೇ ಕತ್ತು ಕೊಯ್ದ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಟ್ಯಾನರಿ ರಸ್ತೆಯ ಈದ್ಗಾ ಕಾಂಪ್ಲೆಕ್ಸ್ ನಲ್ಲಿಯ ಕ್ರೆಡಿಟ್ ಕೋ ಆಪರೇಟಿವ್ ಕಚೇರಿಯಲ್ಲಿಯೇ ಶಂಷಿಲ್ ಉದಾ (63) ಕೊಲೆಯಾದ ದುರ್ದೈವಿ. ಬುಧವಾರ ಬೆಳಗ್ಗೆ ಶಂಷಿಲ್ ಅವರನ್ನು  ಕೊಲೆ ಮಾಡಲಾಗಿದೆ. ಪ್ರತಿದಿನ ಶಂಷಿಲ್ 8.30ಕ್ಕೆ ಸೊಸೈಟಿಗೆ ಆಗಮಿಸುತ್ತಿದ್ದರು. ಬುಧವಾರ ಸಹ ಅವರು ಕಚೇರಿಗೆ […]

ಆಸ್ತಿ ವಿವಾದ : ಚಿಕ್ಕಪ್ಪನಿಂದ ಕೊಲೆಯಾದ ಯುವಕ

Wednesday, April 3rd, 2013
Sullia Youth killed

ಸುಳ್ಯ : ಆಲೆಟ್ಟಿ ಗ್ರಾಮದ ಬೊಳ್ಳೂರು ಎಂಬಲ್ಲಿ ಆಸ್ತಿ ವಿವಾದದಿಂದಾಗಿ ಯುವಕನೋರ್ವ ಆತನ ಚಿಕ್ಕಪ್ಪನಿಂದಲೇ ಕೊಲೆಯಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಬೊಳ್ಳೂರು ಬೆಳ್ಳಂಪಾರೆಯ ಅಪ್ಪಯ್ಯ ನಾಯ್ಕ ಎಂಬವರ ಪುತ್ರ ಸದಾಶಿವ ನಾಯ್ಕ(೨೬) ಮೃತ ವ್ಯಕ್ತಿ ಯಾಗಿದ್ದು, ಈತ  ಹಾಗು ಈತನ ಚಿಕ್ಕಪ್ಪ ನಾರಾಯಣ ನಾಯ್ಕ ಈ ಇಬ್ಬರ ಕುಟುಂಬದ ನಡುವೆ ಆಸ್ತಿ ವಿಷಯವಾಗಿ ಆಗಾಗ್ಗೆ  ಕಲಹ ನಡೆಯುತ್ತಿದ್ದು ನಿನ್ನೆ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿದೆ. ಕೊಲೆ ಆರೋಪಿನಾರಾಯಣ ನಾಯ್ಕ ಸುಳ್ಯ ರೋಟರಿ ಶಾಲೆಯಲ್ಲಿ ಅಟೆಂಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಮಂಗಳವಾರ […]

ಕಿನ್ನಿಪದವು ಕೊಲೆ ಚಿನ್ನ ದೋಚುವ ಉದ್ದೇಶದಿಂದ ಕೃತ್ಯ , ಆರೋಪಿಯ ಬಂಧನ

Saturday, February 16th, 2013
Kinnipadavu maurder case

ಮಂಗಳೂರು : ಬುಧವಾರ ರಾತ್ರಿ ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಕೊಲೆಯಾದ ಸಂಕಲರಿಯ ನಿವಾಸಿ ಯಶವಂತ ಮಡಿವಾಳ ಕೊಲೆಗೆ ಸಂಬಂಧಿಸಿದಂತೆ ಬಜ್ಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಿನ್ನಿಪದವು ನಿವಾಸಿ ದತ್ತ ಕೃಷ್ಣ ಶೆಟ್ಟಿ(21) ಬಂಧಿತ ಆರೋಪಿಯಾಗಿದ್ದಾನೆ. ಹಲವು ವರ್ಷಗಳಿಂದ ಯಶವಂತ ಮಡಿವಾಳ ಮತ್ತು  ದತ್ತ ಸ್ನೇಹಿತರಾಗಿದ್ದರು. ಯಾವಾಗಲೂ ಜತೆಯಾಗಿಯೇ ಓಡಾಡುತ್ತಿದ್ದ ಇವರು ಘಟನೆಯ ಮುನ್ನಾ ದಿನ ಕಿನ್ನಿಪದವಿನ ಮಾಂಕಾಳಿ ದೈವಸ್ಥಾನದಲ್ಲಿನ ನೇಮದಲ್ಲಿ ಯಶವಂತ ಮತ್ತು ದತ್ತ ಒಟ್ಟಾಗಿ ಕೋಲದಲ್ಲಿ ಭಾಗವಹಿಸಿದ್ದರು ಆದರೆ ಯಶವಂತರು ಹಾಕಿದ್ದ ಚಿನ್ನದ ಉಂಗುರ,ಬ್ರಾಸ್‌ ಲೈಟ್‌ನ್ನು […]

ರಿಯಲ್ ಎಸ್ಟೇಟ್ ಉದ್ಯಮಿ ಗಿರೀಶ್ ಪುತ್ರನ್ ರ ಕೊಲೆ, ಆರೋಪಿಯ ಬಂಧನ

Monday, February 11th, 2013
Girish Putran murder case

ಮಂಗಳೂರು : ಮಂಗಳೂರಿನ ಹೊಯಿಗೆ ಬಜಾರ್ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಗಿರೀಶ್ ಪುತ್ರನ್ ರ ಕೊಲೆಗೆ ಸಂಬಂಧಪಟ್ಟಂತೆ ಕೋಡಿಕಲ್ ನ ನತಾಶ(28) ಎಂಬ ಯುವತಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದು, ಫೆಬ್ರವರಿ 23ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಯುವತಿಗೆ ಕಿರುಕುಳ ಹಾಗೂ ಅತಿಯಾದ ಚಿನ್ನಾಭರಣ ಧರಿಸುತ್ತಿದ್ದುದು ಕೊಲೆಗೆ ಕಾರಣ ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಬಂಧಿತ ಯುವತಿ ನತಾಶ ಗೆ  ಮದುವೆ ನಿಶ್ಚಿತಾರ್ಥ ನಡೆದಿದ್ದರೂ, ಗಿರೀಶ್ ಪುತ್ರನ್ ಆಕೆಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ನೊಂದ ಯುವತಿ ಗಿರೀಶ್ […]

ಉಸಿರುಗಟ್ಟಿಸಿ ಬ್ಯಾಂಕ್ ಮ್ಯಾನೇಜರ್ ಕೊಲೆ

Monday, September 26th, 2011
BANK MANAGER

ಬೆಂಗಳೂರು : ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಅವರು ವಾಸವಾಗಿರುವ ಮನೆಯಲ್ಲೇ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಘಟನೆ ಶನಿವಾರ ರಾತ್ರಿ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಓರಿಯೆಂಟಲ್ ಬ್ಯಾಂಕ್ ನಲ್ಲಿ ಚೀಫ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪಡುಕೋಣೆ ಮೂಲದ ಶಂಕರ್ ಪೂಜಾರಿ (55) ಅವರ ಕೊಲೆ ನಡೆದಿರುವುದು ಬೆಳಕಿಗೆ ಬಂದಿದ್ದು, ಭಾನುವಾರ ರಾತ್ರಿ ವೇಳೆಗೆ ಕೊಲೆ ನಡೆದಿರಬಹುದು ಎಂದು ಡೆಪ್ಯುಟಿ ಕಮಿಷನರ್ ಸೋನಿಯಾ ನಾರಂಗ್ ತಿಳಿಸಿದ್ದಾರೆ. ಕೊಲೆಯನ್ನು ಪೂಜಾರಿಗೆ ಬಲ್ಲವರೇ ಮಾಡಿರಬಹುದೆಂದು ಶಂಕಿಸಲಾಗಿದ್ದು. ಹೊರಬಾಗಿಲಿಗೆ ಒಳಗಿನಿಂದ […]