Blog Archive

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23 ರಿಂದ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ

Tuesday, June 22nd, 2021
Kota Srinivas Poojary

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಿಂದ ಬೆಳಗ್ಗೆಯಿಂದ 6 ರಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ ಕಾರಣ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ‌. ಪ್ರಸ್ತುತ ನಾವು ಕಠಿಣ ಪರಿಸ್ಥಿತಿಯಲ್ಲಿ […]

ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ದಿನಸಿ ಕಿಟ್ ನೆರವು

Tuesday, June 15th, 2021
SCDCC-Kit

ಮಂಗಳೂರು : ಕೊರೋನ ಸಂಕಷ್ಟದ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಪತ್ರಕರ್ತರಿಗೆ ದಿನಸಿ ಕಿಟ್ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಮಂಗಳವಾರ ನಗರದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಸಭಾಂಗಣದಲ್ಲಿ ಪತ್ರಕರ್ತರಿಗೆ ಕಿಟ್ ವಿತರಿಸಿದರು. ಲಾಕ್ ಡೌನ್ ನ್ನು ಶೀಘ್ರ ತೆರವು ಗೊಳಿಸುವ ಆಶಯವನ್ನು ಸರಕಾರ ಹೊಂದಿದೆ ಎಂದರು. ಕೊರೋನ ಸಂಕಷ್ಟದ ಸಂದರ್ಭ ದಲ್ಲಿ ಬ್ಯಾಂಕ್ ತನ್ನ ಗ್ರಾಹಕರು ಅಲ್ಲದೆ ತೊಂದರೆಗೀಡಾದ ಜನರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬಂದಿದೆ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್  ಹೇಳಿದರು. […]

ದಕ್ಷಿಣ ಕನ್ನಡ ಮತ್ತು ಇತರ ಎಂಟು ಜಿಲ್ಲೆಗಳಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಮುಂದುವರಿಕೆ

Thursday, June 10th, 2021
Koata Srinivas

ಮಂಗಳೂರು : ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ನಡೆಸಿದ ವಿಡಿಯೊ ಕಾನ್ಫರೆನ್ಸ್ ಬಳಿಕ ಅವರು ಮಂಗಳೂರಿನಲ್ಲಿ  ಮಾಧ್ಯಮದೊಂದಿಗೆ ಹೇಳಿದರು, ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ವಿಸ್ತರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆವು. ಇದಕ್ಕೆ ಮುಖ್ಯಮಂತ್ರಿ ಒಪ್ಪಿಗೆ […]

ಪ್ರತೀ ಜಿಲ್ಲೆಯಲ್ಲಿಯೂ ಬ್ಲ್ಯಾಕ್ ಫಂಗಸ್‍ಗೆ ಉಚಿತ ಚಿಕಿತ್ಸೆಗೆ ಕ್ರಮ : ಕೋಟ ಶ್ರೀನಿವಾಸ ಪೂಜಾರಿ

Wednesday, May 26th, 2021
srinivas Poojary

ಬೈಂದೂರು :   ಪ್ರತೀ ಜಿಲ್ಲೆಯಲ್ಲಿಯೂ ಬ್ಲ್ಯಾಕ್ ಫಂಗಸ್‍ಗೆ ಆಸ್ಪತ್ರೆ ವ್ಯವಸ್ಥೆಗೊಳಿಸಿ ಅಲ್ಲಿ ಉಚಿತ ಚಿಕಿತ್ಸೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಮಾಡಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಬುಧವಾರ ಅವರು ಬೈಂದೂರು ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣ ಕಾರ್ಯಪಡೆಯ ಕಾರ್ಯನಿರ್ವಹಣೆಯ ಬಗ್ಗೆ ಪ್ರವಾಸ ಕೈಗೊಂಡು ಉಪ್ಪುಂದದಲ್ಲಿ ಸಭೆಯ ಬಳಿಕ ಮಾತನಾಡಿದರು. ಕೊರೊನಾ ನಿಯಂತ್ರಣದಲ್ಲಿ ಗ್ರಾಮ ಪಂಚಾಯತ್‍ಗಳಿಗೂ ಜವಾಬ್ದಾರಿ ನೀಡಿದೆ. ಕೊರೊನಾ ಸೋಂಕಿತರನ್ನು ಕರೆತರಲು ವಾಹನ ಖರೀದಿಸಲು ಪಂಚಾಯತ್‍ಗಳಿಗೂ ಅವಕಾಶ ನೀಡಿದೆ ಎಂದರು. ಪಂಚಾಯತ್ ಸದಸ್ಯರು ಟಾಸ್ಕ್‌‌ಫೋರ್ಸ್‌ ಸಮಿತಿ ಸದಸ್ಯರಾಗಿರುತ್ತಾರೆ. […]

ಮುಖ್ಯಮಂತ್ರಿಗಳಿಗೆ ತಲುಪಿದ ಕುಕ್ಕೆ ಸುಬ್ರಮಣ್ಯ ದೇವರ ಹೋಮದ ಪ್ರಸಾದ, ರೂ.100.00 ಕೋಟಿ ಬಿಡುಗಡೆಗೆ ಸಚಿವರ ಮೊರೆ

Thursday, May 20th, 2021
Angara

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವ ಎಸ್.ಅಂಗಾರ ಅವರ ನೇತೃತ್ವದಲ್ಲಿ ಶಾಸಕರ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿಪ್ರಕೃತಿ ವಿಕೋಪ ನಿಧಿಯಿಂದ ರೂ. 100.00 ಕೋಟಿಗಳನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು. ಕೊರೋನಾ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಬಂದು ಸರ್ವರಿಗೆ ಸುಖ, ಆರೋಗ್ಯ,ಸಮೃದ್ಧಿ ಕರುಣಿಸಲೆಂದು ಶ್ರೀ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ನಡೆಸಲಾದ ಧನ್ವಂತರಿ ಹೋಮ, ಕ್ರಿಮಿಹಾರ ಸೂಕ್ತ ಹೋಮ, ಚಂಡಿಕಾ ಯಾಗ, ಶ್ರೀ ಸುಬ್ರಮಣ್ಯ ದೇವರ ಪ್ರಸಾದವನ್ನು […]

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೋನಾ ಸೋಂಕು ದೃಢ

Saturday, April 10th, 2021
kota

ಉಡುಪಿ : ಕೇರಳ ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಊರಿಗೆ ಬಂದಿದ್ದ ರಾಜ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕೋವಿಡ್-19 ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್-19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. […]

ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ಸಚಿವ ಎಸ್.ಅಂಗಾರ ಮತ್ತು ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಭಿನಂದನೆ

Saturday, February 6th, 2021
SCDCC Bank

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ರಾಜ್ಯ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿ ನೇಮಕಗೊಂಡ ಕೋಟ ಶ್ರೀನಿವಾಸ ಪೂಜಾರಿ ಮತ್ತು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರಿಗೆ  ಶನಿವಾರ ಅಭಿನಂದನಾ ಕಾರ್ಯಕ್ರಮ ನಡೆಯಿತು. ಎಸ್ ಸಿಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿ ಸಭಾಂಗಣದಲ್ಲಿಂದು ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ […]

ರಾಜ್ಯ ಸರಕಾರಕ್ಕೆ ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಪಡಿಸುವ ಅಧಿಕಾರವಿಲ್ಲ : ಯು.ಟಿ ಖಾದರ್

Thursday, January 14th, 2021
ut Khader

ಮಂಗಳೂರು : ಸುಳ್ಯ ಶಾಸಕ ಎಸ್. ಅಂಗಾರ ಸಚಿವರಾಗಿರುವುದು ಸಂತೋಷದ ವಿಷಯ. ಕೋಟ ಶ್ರೀನಿವಾಸ ಪೂಜಾರಿ ಕೂಡಾ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಅವರನ್ನೇ ಉಸ್ತುವಾರಿ ಸಚಿವರನ್ನಾಗಿ ಮುಂದುವರಿಸುವುದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಅವರನ್ನು ಉಡುಪಿಯ ಬದಲು ದ.ಕ. ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಿರುವುದರ ಉದ್ದೇಶವೇನು ಎಂಬುದನ್ನು ಸರಕಾರ ಸ್ಪಷ್ಟಪಡಿಸಲಿ ಎಂದು ಶಾಸಕ ಯು.ಟಿ  ಖಾದರ್  ಪ್ರಶ್ನಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕ ಸುನೀಲ್ ಕುಮಾರ್ ಕೂಡಾ ‘ನನಗೆ ಪಕ್ಷ ನಿಷ್ಠೆ ಗೊತ್ತು, ಬ್ಲಾಕ್ ಮೇಲ್ ಗೊತ್ತಿಲ್ಲ’ […]

ದೇಶದ 9 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಸುಮಾರು 18,000 ಕೋಟಿ ರೂ.ಗಳು ವರ್ಗಾವಣೆ

Friday, December 25th, 2020
Vajapayee Birthday

ಮಂಗಳೂರು :  ರಾಜಕೀಯವನ್ನು ಪ್ರಾಮಾಣಿಕತೆ, ಶ್ರದ್ಧೆ ಹಾಗೂ ರಾಷ್ಟ್ರಭಕ್ತಿಯ ಚೌಕಟ್ಟಿನಲ್ಲಿ ನಿಲ್ಲಿಸಿದವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. ಇದೀಗ ಅವರ ಚಿಂತನಾ ಹಾದಿಯಲ್ಲಿ ಪ್ರಧಾನಿ ಮೋದಿಯವರು ಕಿಸಾನ್ ಸಮ್ಮಾನ್‌ನಂತಹ ಹಲವಾರು ಯೋಜನೆ, ಕಾಯ್ದೆಗಳ ಮೂಲಕ ರೈತರಿಗೂ ಸ್ವಾಭಿಮಾನದ ಬದುಕನ್ನು ಕಲ್ಪಿಸುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನಗದರ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ದ.ಕ. ಜಿಲ್ಲಾ ಬಿಜೆಪಿ ಘಟಕ ಹಾಗೂ ರೈತ ಮೋರ್ಛಾದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ […]

ಕಾಂಗ್ರೆಸ್ ಪಕ್ಷ ಸೋತಾಗ ಮಾತ್ರ ಮತಯಂತ್ರ ಕೆಟ್ಟಿರುತ್ತವೆ – ಕೋಟ ಶ್ರೀನಿವಾಸ ಪೂಜಾರಿ

Tuesday, November 17th, 2020
Kota Srinivasa

ಮಂಗಳೂರು : ಸಿದ್ಧರಾಮಯ್ಯ ಗೆದ್ದಾಗ ಮತಯಂತ್ರ ಸರಿ ಇತ್ತು ಎನ್ನುವ ಕಾಂಗ್ರೆಸ್ ಪಕ್ಷ. ಈಗ ಉಪ ಚುನಾವಣೆಯಲ್ಲಿ ಅವರ ಅಭ್ಯರ್ಥಿಗಳು ಸೋತಾಗ ಹಾಳಾಗಿದೆ ಎನ್ನುತ್ತಾರೆ. ಇಂತಹ ಮಾತುಗಳು  ಭೂಷಣವಲ್ಲ. ಮತಯಂತ್ರ ಕೆಟ್ಟಿಲ್ಲ, ಮನಸ್ಸು ಕೆಟ್ಟಿದೆ” ಯಾವುದೇ ರಾಜಕೀಯ ಪಕ್ಷವಿರಲಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ  ಹೇಳಿದ್ದಾರೆ. ಎಲ್ಲಾ ಆರೋಗ್ಯ ಇಲಾಖೆಗಳಲ್ಲಿ ಕೊರೊನಾ ಟೆಸ್ಟ್ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಲವು ಕಡೆಗಳಲ್ಲಿ ಏನಾದರೂ ಲೋಪಗಳಾಗಿದ್ದಲ್ಲಿ, ಸಾರ್ವಜನಿಕರಿಂದ ದೂರು ಬಂದಲ್ಲಿ, […]