Blog Archive

ಉಳ್ಳಾಲ : ಮರಳು ಸಾಗಾಟ ಲಾರಿ – ಖಾಸಗಿ ಬಸ್ ಮುಖಾಮುಖಿ ಢಿಕ್ಕಿ

Thursday, September 19th, 2019
lorry

ಉಳ್ಳಾಲ : ಮರಳು ಸಾಗಾಟದ ಲಾರಿ ಖಾಸಗಿ ಬಸ್ ಗೆ ಢಿಕ್ಕಿ ಹೊಡೆದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಕಲ್ಕಟ್ಟ ಎಂಬಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ‌ . ಘಟನೆಯಲ್ಲಿ ಬಸ್ ನಲ್ಲಿದ್ದವರು ಸಣ್ಣ ಪುಟ್ಟ ಗಾಯಗೊಂಡಿದ್ದು, ಕೆಲಕಾಲ ರಸ್ತೆ ಸಂಚಾರ ಅಡ್ಡಿಯಾಗಿದೆ. ತೌಡುಗೋಳಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಗೆ ವಿರುದ್ದ ದಿಕ್ಕಿನಿಂದ ಹರೇಕಳ ಕಡೆಯಿಂದ ಕೇರಳ ಕಡೆಗೆ ಮರಳು ಸಾಗಾಟ ನಡೆಸುತ್ತಿದ್ದ ಲಾರಿ ಮುಖಾಮುಖಿ ಢಿಕ್ಕಿ ಹೊಡೆದಿದೆ. ಬೆಳಗ್ಗಿನ ಸಮಯವಾದ್ದರಿಂದ ಬಸ್ಸಿನಲ್ಲಿ ಪ್ರಯಾಣಿಕರು ಹೆಚ್ಚಿದ್ದು, ವಿದ್ಯಾರ್ಥಿಗಳು […]

ಮಾಣಿ : ರಸ್ತೆಯ ಹೊಂಡಕ್ಕೆ ಖಾಸಗಿ ಬಸ್; ಸಂಚಾರಕ್ಕೆ ಅಡಚಣೆ

Saturday, September 14th, 2019
maani

ವಿಟ್ಲ : ಬೆಂಗಳೂರು ಕಡೆಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ರಸ್ತೆ ಹೊಂಡಕ್ಕೆ ಸಿಕ್ಕಿಹಾಕಿಕೊಂಡ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಹೊಂಡಗಳು ನಿರ್ಮಾಣಗೊಂಡಿದ್ದು, ಬೆಳಗ್ಗೆ ಹೊಂಡದಲ್ಲಿ ಬಸ್ ಸಿಲುಕಿದೆ. ಇದರಿಂದ ಘನ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿ 2 ತಾಸುಗಳ ವರೆಗೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಂಗಳೂರು ಸುತ್ತಮುತ್ತಲಿನ ಪ್ರಯಾಣಿಕರು ರಸ್ತೆಯಲ್ಲಿ ಕಾಲಕಳೆಯುವಂತಾಯಿತು. ಬಳಿಕ ಉಪ್ಪಿನಂಗಡಿಯಿಂದ ಕ್ರೇನ್ ತರಿಸಿ ಬಸ್ಸನ್ನು […]

ಆಗುಂಬೆ : ಕಾರಿನಲ್ಲಿ ಬಂದ ಗೂಂಡಾಗಳಿಂದ ಖಾಸಗಿ ಬಸ್ ಸಿಬ್ಬಂದಿಗಳ ಮೇಲೆ ಹಲ್ಲೆ, 20,000 ರೂ ದರೋಡೆ

Tuesday, July 2nd, 2019
Gundas

ಉಡುಪಿ  : ಶಿವಮೊಗ್ಗ ದಿಂದ ಮಂಗಳೂರು ಮಧ್ಯೆ ಸಂಚರಿಸುವ  ಖಾಸಗಿ ಬಸ್ ಸೈಡ್  ಕೊಟ್ಟಿಲ್ಲ ಎಂಬ ಕಾರಣಕ್ಕೆ ಕಾರಿನಲ್ಲಿದ್ದ ಗೂಂಡಾಗಳು ನಿರ್ವಾಹಕ ಮತ್ತು ಡ್ರೈವರ್ ಮೇಲೆ  ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ  ಆಗುಂಬೆ ಸಮೀಪ  ದ ಸೀತಾನದಿ ಬಳಿ ಭಾನುವಾರ ನಡೆದಿದೆ. ಆಗುಂಬೆ ಘಾಟಿಯಲ್ಲಿ ಸೈಡ್ ಕೊಡುವಷ್ಟು ಸ್ಥಳವಿಲ್ಲ ಆದರೂ ಅರ್ಥ ಮಾಡದ ಗೂಂಡಾಗಳು  ಕುಡಿದ ಮತ್ತಿನಲ್ಲಿ ಬಸ್ ಅಡ್ಡಗಟ್ಟಿ ಚಾಲಕ, ನಿರ್ವಾಹಕ ನ ಮೇಲೆ ಮಾರಣಾಂತಿಕ ಹಲ್ಲೆನಡೆಸಿದ್ದಾರೆ. ಗೂಂಡಾಗಳು ನಡೆಸಿದ ಈ ಎಲ್ಲಾ ಕೃತ್ಯಗಳು ಬಸ್ಸಿನಲ್ಲಿ ಅಳವಡಿಸಿದ ಸಿಸಿ  ಟಿವಿ ಯಲ್ಲಿ […]

ಭಾರತ ಬಂದ್ : ಕಂಕನಾಡಿ ವೃತ್ತ, ಬಲ್ಮಠ ಸರ್ಕಲ್ ನಲ್ಲಿ ಟೈಗರ್ ಗೆ ಬೆಂಕಿ

Wednesday, January 9th, 2019
Tyre

ಮಂಗಳೂರು : ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಹಿನ್ನೆಲೆಯಲ್ಲಿ ಹಲವು ಸರ್ಕಲ್ ಗಳಲ್ಲಿ ಕಿಡಿಗೇಡಿಗಳು  ಟೈರ್ ಗೆ ಬೆಂಕಿ ಹಚ್ಚಿದ ಘಟನೆ ಮಂಗಳೂರಿನ ಕಂಕನಾಡಿ ವೃತ್ತ, ಬಲ್ಮಠ ಸರ್ಕಲ್ ನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಮೂರು ಗಂಟೆಯಿಂದ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಕಾರರು ಯಶಸ್ವಿಯಾಗಿ ದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ  ಪೊಲೀಸರು ಬೆಂಕಿ ನಂದಿಸಿ ಕಿಡಿಗೇಡಿಗಳ ನ್ನು ಓಡಿಸಿದ್ದಾರೆ. ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಅಖಿಲ ಭಾರತ ಬಂದ್ ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ  ಕೂಡ ನೀರಸ […]

ಮಂಗಳೂರು-ಮಣಿಪಾಲ ಖಾಸಗಿ ಬಸ್‌ಗಳಲ್ಲಿ ಕನ್ನಡ ಭಾಷೆಯ ಕಡೆಗಣನೆ

Monday, March 12th, 2018
express-bus

ಮಂಗಳೂರು: ರಾಜ್ಯದಲ್ಲಿ ಸಂಚರಿಸುವ ಎಲ್ಲ ಖಾಸಗಿ ಹಾಗೂ ಸರಕಾರಿ ಬಸ್‌ಗಳಲ್ಲಿ ಸಾಮಾನ್ಯವಾಗಿ ಕನ್ನಡದ ನಾಮಫಲಕಗಳು ಇರುತ್ತವೆ. ಆದರೆ, ಮಂಗಳೂರು-ಉಡುಪಿ-ಮಣಿಪಾಲ ನಡುವೆ ಸಂಚರಿಸುವ ಕೆಲವೊಂದು ಖಾಸಗಿ ಬಸ್‌ಗಳಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣ ಕಡೆಗಣಿಸಲಾಗಿದ್ದು, ಇಂಗ್ಲಿಷ್‌ ನಾಮಫಲಕಗಳೇ ರಾರಾಜಿಸುತ್ತಿವೆ. ಸಾಮಾನ್ಯವಾಗಿ ನಗರದ ಸಿಟಿ ಬಸ್‌ ಸೇರಿದಂತೆ ಸರಕಾರಿ ಬಸ್‌ಗಳಲ್ಲಿ ಆಂಗ್ಲ ಭಾಷೆಯಲ್ಲಿ ನಾಮಫಲಕ ನಮೂದಾಗಿದ್ದರೂ ಕನ್ನಡ ಭಾಷೆಗೆ ಪ್ರಾಶಸ್ತ್ಯ ನೀಡಲಾಗುತ್ತದೆ. ಆದರೆ ಇಲ್ಲಿನ ಕೆಲವು ಖಾಸಗಿ ಬಸ್‌ಗಳು ಆಂಗ್ಲಭಾಷಾ ಮೋಹಕ್ಕೆ ತುತ್ತಾಗಿರುವುದು ಸಾರ್ವಜನಿಕರ ಅದರಲ್ಲಿಯೂ ಕನ್ನಡಾಭಿಮಾನಿಗಳ ಕೆಂಗಣ್ಣಿಗೆ ಗುರಿ ಯಾಗಿದೆ. […]

ಮಂಗಳೂರು-ಬೆಂಗಳೂರು ರೈಲು ವಿಳಂಬಕ್ಕೆ ಬಸ್‌ ಲಾಬಿ ಕಾರಣವೇ?

Monday, December 11th, 2017
moodbidre

  ಮೂಡಬಿದಿರೆ: ಮಂಗಳೂರು-ಬೆಂಗಳೂರು ರೈಲು ಮಾರ್ಗವು ಬ್ರಾಡ್‌ಗೆಜ್‌ಗೆ ಬದಲಾದ ಬಳಿಕವೂ ರೈಲಿನಲ್ಲಿ ಬೆಂಗಳೂರು ತಲುಪಲು 13ರಿಂದ 15 ಗಂಟೆ ತಗಲುತ್ತಿದೆ. ಈ ವಿಳಂಬದ ಹಿಂದೆ ಖಾಸಗಿ ಬಸ್‌ ಲಾಬಿ ಇದೆಯೇ? ಈ ಬಗ್ಗೆ ಪರಿಶೀಲನೆ ಮಾಡುವ ಅಧಿಕಾರವುಳ್ಳ ಸಂಸದ ನಳಿನ್‌ಕುಮಾರ್‌ ಕಟೀಲು ಅವರು ಕೂಡಲೇ ಗಮನಹರಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ, ರಾಜ್ಯ ಸರಕಾರದ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಹೇಳಿದರು. ಮೂಡಬಿದಿರೆಯ ತಮ್ಮ ಜನಸ್ಪಂದನ ಕಚೇರಿಯಲ್ಲಿ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಇಂದಿರಾ ಕ್ಯಾಂಟೀನ್‌: ದ.ಕ. […]

ಕಲ್ಲಾಪು: ಖಾಸಗಿ ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು

Monday, November 6th, 2017
accident

ಮಂಗಳೂರು:ನಗರದ ಕಲ್ಲಾಪುವಿನಲ್ಲಿ ಖಾಸಗಿ ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ  ನಡೆದಿದೆ. ಉಳ್ಳಾಲ ಬೈಲ್ ನಿವಾಸಿ ಮಹಮ್ಮದ್ ಸಯ್ಯದ್ ಶಲೀಲ್ ಮೃತ ವಿದ್ಯಾರ್ಥಿ. ತುಂಬೆ ಬಿಎ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿಯಾದ ಈತ, ಮೊಬೈಲ್‌ನ ಇಯರ್ ಫೋನ್‌ನಲ್ಲಿ ಸಂಭಾಷಣೆ ಮಾಡುತ್ತ ಬೈಕ್ ಚಲಾಯಿಸುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿದೆ. ಈ ವೇಳೆ ಖಾಸಗಿ ಬಸ್‌ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿದ್ದಾನೆ. ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಉಡುಪಿಯಲ್ಲಿ ನರ್ಮ್-ಕೆಎಸ್‌ಆರ್‌ಟಿಸಿ ಸಿಟಿ ಬಸ್‌ಗಳ ಓಡಾಟಕ್ಕೆ ಚಾಲನೆ

Thursday, September 8th, 2016
udupi-nurm-bus

ಉಡುಪಿ: ಉಡುಪಿ ನಗರ ಮತ್ತು ಗ್ರಾಮೀಣ ಭಾಗಗಳಿಂದ ಬೇಡಿಕೆ ಬಂದರೆ ಮತ್ತಷ್ಟು ಸರಕಾರಿ ಬಸ್‌ಗಳನ್ನು ಓಡಿಸಲು ಸರಕಾರ ಸಿದ್ಧವಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದ್ದಾರೆ. ಸೆ. 7ರಂದು ಉಡುಪಿಯಲ್ಲಿ ನರ್ಮ್-ಕೆಎಸ್‌ಆರ್‌ಟಿಸಿ ಸಿಟಿ ಬಸ್‌ಗಳ ಓಡಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಖಾಸಗಿ ಬಸ್‌ ಮಾಲಕರ ಲಾಬಿಗೆ ಮಣಿಯುವ ಪ್ರಶ್ನೆಯೇ ಇಲ್ಲ. ಉಡುಪಿ ನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಆರಂಭವಾಗುತ್ತಿರುವುದು ಐತಿಹಾಸಿಕ. ಖಾಸಗಿ ಬಸ್‌ ಮಾಲಕರ ಒತ್ತಡ ಇದ್ದರೂ ಅದನ್ನು ಲೆಕ್ಕಿಸದೆ ಸಾರ್ವಜನಿಕರು, ವಿಶೇಷವಾಗಿ ವಿದ್ಯಾರ್ಥಿಧಿಗಳ ಹಿತದೃಷ್ಟಿಯಿಂದ ನರ್ಮ್ […]

ಕುಂದಾಪುರದತ್ತ ಸಾಗುತ್ತಿದ್ದ ಖಾಸಗಿ ಬಸ್‌ ಕಾರಿಗೆ ಢಿಕ್ಕಿ ಹೊಡೆದು ಹಲವರಿಗೆ ಗಾಯ

Saturday, September 3rd, 2016
Kundapur-accident

ಕುಂದಾಪುರ: ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಅನ್ನುವಳ್ಳಿ ಸೇತುವೆ ಬಳಿ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಪಲ್ಟಿಯಾದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ತೀರ್ಥಹಳ್ಳಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಬಸ್ಸು ಮೇಗರವಳ್ಳಿ ಹತ್ತಿರ ಬರುತ್ತಿದ್ದಾಗ ಆಗುಂಬೆಯಿಂದ ತೀರ್ಥಹಳ್ಳಿಯತ್ತ ಸಾಗುತ್ತಿದ್ದ ಕಾರು ಬಸ್ಸಿನ ಹಿಂಬದಿಯ ಚಕ್ರಕ್ಕೆ ಬಲವಾಗಿ ಢಿಕ್ಕಿಹೊಡೆದ ಪರಿಣಾಮ ಬಸ್ಸಿನ ಹೌಸಿಂಗ್‌ ಪೂರ್ಣ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿದ ಬಸ್‌ ಪಲ್ಟಿಯಾಗಿತ್ತು. ಪಲ್ಟಿಯಾದ ರಭಸಕ್ಕೆ ಬಸ್ಸು ನಜ್ಜುಗುಜ್ಜಾಗಿತ್ತು. ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ಕುಂದಾಪುರದ ಬಳಿಯ ಬಸ್ರೂರಿನ ಸಯ್ಯದ್‌ಮಹಜಾಲಿನ್‌ ಹಾಗೂ […]

ಖಾಸಗಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

Thursday, February 25th, 2016
sampath

ಕುಂಬಳೆ: ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರರಾದ ಯುವಕ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಪೆರ್ಲ ಸಮೀಪದ ಶೇಣಿ ನಡುಬೈಲು ನಿವಾಸಿ ದಿ.ಅಮ್ಮು ರೈ ಮತ್ತು ಧೂಮಕ್ಕ ದಂಪತಿಯ ಪುತ್ರ ಸಂಪತ್ (28) ಸಾವನ್ನಪ್ಪಿದ ಯುವಕ. ಅಂಗಡಿಮೊಗರು ಬಳಿಯ ನಾಟೆಕಲ್ಲು ಕೋರೆ ಪರಿಸರದ ರಸ್ತೆಯಲ್ಲಿ ಗುರುವಾರ ಪೂರ್ವಾಹ್ನ ಈ ದುರ್ಘಟನೆ ಸಂಭವಿಸಿದೆ. ಸಂಪತ್ ಬೈಕ್‌ನಲ್ಲಿ ಸೀತಾಂಗೋಳಿ ಬರುತ್ತಿದ್ದರು. ಈ ವೇಳೆ ಕುಂಬಳೆಯಿಂದ ಪೆರ್ಲಕ್ಕೆ ಹೋಗುತ್ತಿದ್ದ ಮಹಾಲಕ್ಷ್ಮಿ ಖಾಸಗಿ ಬಸ್ ಮತ್ತು ಬೈಕ್ ಪರಸ್ಪರ […]