Blog Archive

ಪಂಪ್ ವೆಲ್ ಮೇಲ್ಸೇತುವೆಯಲ್ಲಿ ಕಾರು ಪಲ್ಟಿ, ಚಾಲಕ ಪಾರು

Saturday, August 8th, 2020
pumpwell

ಮಂಗಳೂರು:  ಪಂಪ್ ವೆಲ್ ಮೇಲ್ಸೇತುವೆಯ ಮೇಲೆ ಕಾರೊಂದು ಪಲ್ಟಿಯಾಗಿ, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯ ಕಾರಣದಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಕಾರು ಸಂಪೂರ್ಣ ತಲೆಕೆಳಗಾಗಿ ಬಿದ್ದಿದ್ದು, ಸ್ಥಳಿಯರು ಚಾಲಕನನ್ನು ಹೊರತೆಗೆದರು. ಪಂಪ್ ವೆಲ್ ಸೇತುವೆಯಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿತ್ತು.  

ಹೊಸಂಗಡಿಯಲ್ಲಿ ಪೇಪರ್ ಬಂಡಲ್ ಹೇರಿದ ಲಾರಿ ಪಲ್ಟಿ- ಚಾಲಕ, ಕ್ಲೀನರ್ ಆಸ್ಪತ್ರೆಗೆ

Friday, May 15th, 2020
paper Lorry

ಮಂಜೇಶ್ವರ:- ರಾಷ್ಟ್ರೀಯ ಹೆದ್ದಾರಿ ಹೊಸಂಗಡಿಯಲ್ಲಿ ಪೇಪರ್ ಬಂಡಲ್ ಹೇರಿಕೊಂಡು ಮಂಗಳೂರುವಿನಿಂದ ಕಾಸರಗೋಡು ಭಾಗಕ್ಕೆ ತೆರಳುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇದೀಗ 11 ಗಂಟೆ ವೇಳೆ ನಡೆದಿದೆ. ಈ ವೇಳೆ ಭಾರಿ ಶಬ್ದ ಕೇಳಿ ಬಂದ ಹಿನ್ನೆಲೆಯಲ್ಲಿ ಪರಿಸರ ನಿವಾಸಿಗಳು ಹಾಗೂ ಕೋವಿಡ್ ನ ಹಿನ್ನೆಲೆಯಲ್ಲಿ ಪೇಟೆಯಲ್ಲಿ ಕಾರ್ಯಚರಿಸುತ್ತಿದ್ದ ಪೊಲೀಸರು ತಲುಪಿದ್ದು, ಲಾರಿ ಚಾಲಕನನ್ನು ಹಾಗೂ ಕ್ಲೀನರ್ ನನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಲು ನೆರವಾದರು. ಕ್ಲಿನರ್ ಗಾಯಗಲಿಲ್ಲದೇ ಪಾರಾಗಿದ್ದಾರೆ. ಘಟನೆಯನ್ನರಿತು ಮಂಜೇಶ್ವರ ಪೊಲೀಸರು ಸ್ಥಳಕ್ಕೆ […]

ತುಮಕೂರಿನಲ್ಲಿ ಖಾಸಗಿ ಬಸ್ ಪಲ್ಟಿ : ಏಳು ಜನರ ಸಾವು; ಹಲವರಿಗೆ ಗಂಭೀರ ಗಾಯ

Wednesday, October 30th, 2019
tumakur

ತುಮಕೂರು : ಖಾಸಗಿ ಬಸ್ ಪಲ್ಟಿಯಾಗಿ ಏಳು ಜನರು ಸಾವನ್ನಪ್ಪಿ , 20ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡ ಭೀಕರ ದುರ್ಘಟನೆ ಕೊರಟಗೆರೆ ಜೆಟ್ಟಿ ಅಗ್ರಹಾರದ ಬಳಿ ನಡೆದಿದೆ. ಕೊರಟಗೆರೆಯಿಂದ ತುಮಕೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಜೆಟ್ಟಿ ಅಗ್ರಹಾರದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.  

ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣಕ್ಕೆ ಸಿಗದೆ ಉರುಳಿ ಬಿದ್ದ ಲಾರಿ

Wednesday, August 24th, 2016
LOry

ಮಂಗಳೂರು: ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣಕ್ಕೆ ಸಿಗದ ಲಾರಿಯೊಂದು ಉರುಳಿ ಬಿದ್ದ ಘಟನೆ ಬಂಟ್ವಾಳದ ಎಸ್‌ವಿಎಸ್ ಕಾಲೇಜು ಬಳಿ ಸಂಜೆ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಅಭಿಲಾಷ್ (40) ಗಂಭೀರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಲೀನರ್ ಮನ್ಸೂರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ. ಲೊರೆಟ್ಟೋ ಕಡೆಯಿಂದ ಕೋಳಿ ಗೊಬ್ಬರ ಹೇರಿಕೊಂಡು ಬರುತ್ತಿದ್ದ ಲಾರಿ ಎಸ್‌‌ವಿಎಸ್ ಕಾಲೇಜು ಬಳಿಯ ಇಳಿಜಾರು ರಸ್ತೆಯಲ್ಲಿ ಬ್ರೇಕ್ ವೈಫಲ್ಯದಿಂದ ನಿಯಂತ್ರಣ ತಪ್ಪಿದೆ. ಇದೇ ವೇಳೆ ಕಾಲೇಜಿನ ಅನೇಕ ವಿದ್ಯಾರ್ಥಿಗಳು ಬಸ್ಸಿಗಾಗಿ ರಸ್ತೆ ಬದಿ […]

ಕಾರ್ಕಳ ಭೀಕರ ಅಪಘಾತ : ಬೆಂಗಳೂರು ಡಿಸಿಪಿ ಪತ್ನಿ ಹಾಗು ಚಾಲಕ ಬಲಿ

Thursday, April 3rd, 2014
Police Jeep

ಕಾರ್ಕಳ: ಪೊಲೀಸ್‌ ಬೊಲೆರೋ ಜೀಪ್‌ ಹಾಗೂ ಸರಕಾರಿ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಜೀಪ್‌ನಲ್ಲಿದ್ದ ಬೆಂಗಳೂರು ಪಶ್ಚಿಮ ವಲಯದ ಡಿಸಿಪಿ ಲಾಬೂರಾಮ್‌ ಅವರ ಪತ್ನಿ ಗಾಯತ್ರಿ (35) ಹಾಗೂ ಜೀಪ್‌ ಚಾಲಕ ನಟರಾಜ್‌ ಸಾವಿಗೀಡಾಗಿ, ಉಳಿದ ಮೂವರು ಗಾಯಗೊಂಡ ಘಟನೆ ತಾಲೂಕಿನ ಬೈಲೂರು ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಬೊಲೇರೊ ಪೊಲೀಸ್‌ ಜೀಪ್‌ ಧರ್ಮಸ್ಥಳದಿಂದ ಕಾರ್ಕಳ ಮೂಲಕ ಉಡುಪಿಗೆ ಸಾಗುತ್ತಿದ್ದು ಅದರಲ್ಲಿ 5 ಜನ ಪ್ರಯಾಣಿಕರಿದ್ದರು. ಬಸ್‌ ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿತ್ತು. ಮಧ್ಯಾಹ್ನ 1.30ರ […]