Blog Archive

ಚುನಾವಣೆ ಬಗ್ಗೆ ಅಂಬರೀಶ್‍ ನಡೆ… ಕುತೂಹಲದ ಕಡೆ

Monday, April 9th, 2018
ambareesh

ಬೆಂಗಳೂರು: ಪಕ್ಷದ ವರಿಷ್ಠರು ನೀಡಿದ ಗಡುವನ್ನೂ ಉಲ್ಲಂಘಿಸಿದ ನಟ ಹಾಗೂ ಮಾಜಿ ಸಚಿವ ಅಂಬರೀಶ್ ಈವರೆಗೆ ತಮ್ಮ ನಿಲುವು ತಿಳಿಸಿಲ್ಲ. ಅಲ್ಲದೇ ಕಾಂಗ್ರೆಸ್‍ ತೊರೆಯುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಬಗ್ಗೆ ಯಾವುದೇ ತೀರ್ಮಾನ ಪ್ರಕಟಿಸಲು ನಿನ್ನೆ ಸಂಜೆ 4 ಗಂಟೆಯವರೆಗೆ ಪಕ್ಷ ಅವರಿಗೆ ಗಡುವು ನೀಡಿತ್ತು. ಸಂಜೆಯೊಳಗೆ ನಿರ್ಧಾರ ತಿಳಿಸಿ ಎಂದು ಕಾಂಗ್ರೆಸ್‍ ರಾಜ್ಯ ಉಸ್ತುವಾರಿ ಮುರಳೀಧರ ರಾವ್‍ ಸೂಚಿಸಿದ್ದರು. ಆದರೆ ಈ ಗಡುವಿಗೆ ಉತ್ತರ ನೀಡದ ಅಂಬರೀಶ್‍, ಪಕ್ಷ ಬಯಸಿದರೆ ಮಂಡ್ಯದಿಂದ […]

ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಅಂಬಿ ಹೇಳಿದ್ದೇನು!?

Saturday, March 31st, 2018
ambareesh

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೆ, ಏಪ್ರಿಲ್ 2 ರಂದು ಈ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ತಿಳಿಸಿದ್ದಾರೆ. ನಗರದಲ್ಲಿ ಇಂದು ನಡೆದ ಬೆಂಬಲಿಗರ ಸಭೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ರಾಜಕೀಯ ಎಲ್ಲ ಗೌರವಗಳನ್ನು ಸಿಗುವಂತೆ ಮಾಡಿದೆ. ಸಿನಿಮಾ ಮತ್ತು ರಾಜಕೀಯದಲ್ಲಿ ಸೋಲು, ಗೆಲುವು ಕಂಡಿದ್ದೇನೆ. ಹಾಗಾಗಿ ಎಲ್ಲವನ್ನು ಸಮಚಿತ್ತದಿಂದ ಕಾಣುವುದಾಗಿ ಹೇಳಿದರು. ನನ್ನನ್ನು ನಾಯಿ, ಕತ್ತೆ ಎಂದೆಲ್ಲ ಹೇಳಿದರು. ನಾಯಿಯ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಸಂಖ್ಯೆ ಶೇ. 11 ಹೆಚ್ಚಳ

Tuesday, March 27th, 2018
sesikanth-senthil

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಕ್ರಿಯಗೊಂಡಿದೆ. ಚುನಾವಣೆಯ ಪೂರ್ವ ತಯಾರಿಯ ಕುರಿತು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಈ ಕುರಿತು ವಿವರ ನೀಡಿದರು.ಜಿಲ್ಲೆಗೆ ಇವಿಎಂ ಯಂತ್ರಗಳು ಈಗಾಗಲೇ ಬಂದಿದ್ದು, ಪರಿಶೀಲನೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16,67,194 ಮತದಾರರಿದ್ದು, ಕಳೆದ ಸಾಲಿಗಿಂತ ಶೇ.11ರಷ್ಟು ಮತದಾರರು ಹೆಚ್ಚುವರಿಯಾಗಿ ಸೇರ್ಪಡೆಗೊಂಡಿದ್ದಾರೆ ಎಂದು ಹೇಳಿದರು. ಜಿಲ್ಲೆಯಲ್ಲಿ 8,21,123 ಪುರುಷ ಹಾಗೂ 8,46,030 ಮಹಿಳೆ ಮತದಾರರು ಜಿಲ್ಲೆಯಲ್ಲಿದ್ದಾರೆ. ಈ ಬಾರಿ ಚುನಾವಣೆಯಲ್ಲಿ 41 […]

ನೀತಿ ಸಂಹಿತೆ ಜಾರಿ: ಸರ್ಕಾರಿ ಕಾರು ಬಿಟ್ಟು ಬಸ್‌ನಲ್ಲೇ ಪ್ರಯಾಣಿಸಿದ ಶಾಸಕಿ ಶಕುಂತಲಾ ಶೆಟ್ಟಿ

Tuesday, March 27th, 2018
shakuntala-shetty

ಪುತ್ತೂರು: ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಪರಿಣಾಮವಾಗಿ ಶಾಸಕಿ ಶಕುಂತಲಾ ಶೆಟ್ಟಿ ಅವರು ಸರ್ಕಾರಿ ಕಾರು ಬಿಟ್ಟು ಬಸ್‌ನಲ್ಲಿ ಪ್ರಯಾಣ ಬೆಳಸಿದರು. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಶಕುಂತಲಾ ಶೆಟ್ಟಿ ಅವರು ಸರ್ಕಾರಿ ಕಾರು ಬಿಟ್ಟು ಬಿಟ್ಟು ಬಸ್‌ನಲ್ಲೇ ಪ್ರಯಾಣಿಸಿದರು. ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಹಾಗಿಗಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.

ಮುಸ್ಲಿಮರಲ್ಲಿ ಹೆಚ್ಚಿನವರು ಎಸ್.ಡಿ.ಪಿ.ಐ ನವರು ಅವರನ್ನು ನಂಬಲು ಸಾದ್ಯವಿಲ್ಲ: ಕವಿತಾ ಸನಿಲ್

Friday, March 23rd, 2018
kavita-sanil

ಮಂಗಳೂರು: ಕರಾವಳಿಯಲ್ಲಿ ವಿಧಾನಸಭಾ ಚುನಾವಣಾ ಅಖಾಡಾ ರಂಗೇರುತ್ತಿದೆ. ಕರಾವಳಿಯಲ್ಲಿ ಎಐಸಿಸಿ ಅದ್ಯಕ್ಷ ರಾಹುಲ್ ಗಾಂಧಿ ಪ್ರವಾಸ ಕರಾವಳಿ ಕೈ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಆದರೆ ಈ ನಡುವೆ ಕರಾವಳಿಯ ಕಾಂಗ್ರೆಸ್ ಮುಖಂಡರು ಒಂದರ ಮೇಲೊಂದು ಎಡವಟ್ಟುಗಳನ್ನು ಮಾಡಿಕೊಳ್ಳುತಲೇ ಇದ್ದು ಚುನಾವಣೆಯಲ್ಲಿ ಇದು ಹಿನ್ನಡೆಯಾಗಿ ಪರಿಣಮಿಸಬಹುದೇ ಎಂಬ ಅನುಮಾನ ಕಾಡುತ್ತಿದೆ. ಒಂದೆಡೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಯ್ಕೆ ಸಂದರ್ಭದಲ್ಲಿ ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ನ ಮುಸ್ಲಿಂ ಮುಖಂಡರು ಭಾರೀ ಒತ್ತಡ ಹೇರಿದ್ದರು. ಅದರೆ […]

ಚುನಾವಣೆ ಕಣಕ್ಕೆ ಧುಮುಕುವುದಾಗಿ ಘೋಷಣೆ ಮಾಡಿದ ಮಠಾಧೀಶರು!

Saturday, March 10th, 2018
election

ಉಡುಪಿ: ರಾಜ್ಯದಲ್ಲಿ ಚುನಾವಣೆ ಕಾವು ಏರಿರುವಾಗಲೇ ಮಠಾಧೀಶರು ಕೂಡ ಚುನಾವಣಾ ಕಣಕ್ಕೆ ಧುಮುಕಲು ಮುಂದಾಗಿದ್ದಾರೆ. ಹೌದು, ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರು ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಅವಕಾಶ ಸಿಕ್ಕರೆ ಬಿಜೆಪಿಯಿಂದ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಗೆ ಇಳಿಯುತ್ತೇನೆ ಎಂದು ಸ್ವಾಮೀಜಿ ಘೋಷಿಸಿದ್ದಾರೆ. ಜನಪ್ರತಿನಿಧಿಗಳು ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ. ಅದಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಜನಸೇವೆ ಮಾಡಲು ನಿರ್ಧರಿಸಿದ್ದೇನೆ. ಮಠಾಧೀಶರು ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂದೇನಿಲ್ಲ. ಯೋಗಿ ಆದಿತ್ಯನಾಥ್ ನನ್ನ ರೋಲ್ ಮಾಡೆಲ್ ಇದ್ದ […]

ಬಿಜೆಪಿ ಭಿನ್ನಮತ: ವಿಜಯೋತ್ಸವಕ್ಕೂ ಎರಡು ಬಣ

Wednesday, December 20th, 2017
bjp-election

ಮಂಗಳೂರು: ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಮೂಲ್ಕಿಯ ಅಂಗಾರಗುಡ್ಡೆ ಎಂಬಲ್ಲಿ ಕಳೆದ ಕೆಲ ತಿಂಗಳಿನಿಂದ ಬಿಜೆಪಿಯ ಎರಡು ಬಣಗಳ ನಡುವಿನ ಭಿನ್ನಮತ ಪರಾಕಾಷ್ಠೆಗೇರಿದೆ. ಗುಜರಾತ್-ಹಿಮಾಚಲ ಪ್ರದೇಶ ಚುನಾವಣೆಯ ಗೆಲುವನ್ನೂ ಪ್ರತ್ಯೇಕವಾಗಿ ಆಚರಿಸಿಕೊಂಡಿದ್ದಾರೆ. ಚುನಾವಣೆಯ ಮತ ಎಣಿಕೆ ಮುಗಿಯುವ ಮುನ್ನವೇ ಒಂದು ಬಣ ಕಿಲ್ಪಾಡಿ ಪಂಚಾಯತಿ ಮಾಜಿ ಆಧ್ಯಕ್ಷರ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿದ್ದರೆ ಇನ್ನೊಂದು ಬಣ ಅತಿಕಾರಿಬೆಟ್ಟು ಗ್ರಾ.ಪಂ. ಸದಸ್ಯ ಜೀವನ್‌ ಶೆಟ್ಟಿ ನೇತೃತ್ವದಲ್ಲಿ ಅಂಗರಗುಡ್ಡೆಯಲ್ಲಿ ವಿಜಯೋತ್ಸವ ಆಚರಿಸಿ ಬಿಜೆಪಿ ವರಿಷ್ಠರಿಗೆ ಸೆಡ್ಡು ಹೊಡೆದಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆಯೂ […]

ಜನಪ್ರತಿನಿಧಿಗಳಿಗೆ ಮಗ್ಗುಲ ಮುಳ್ಳಾಗಲಿದಿಯೇ ಎತ್ತಿನ ಹೊಳೆ?

Monday, December 18th, 2017
janaprathinidi

ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ.ಒಂದೆಡೆ ರಥಯಾತ್ರೆಗಳು ಆರಂಭವಾದರೆ ಇನ್ನೊಂಡೆದಡೆ ಪಾದಯಾತ್ರೆಗಳಿಗೆ ಚಾಲನೆ ನೀಡಲಾಗಿದೆ.ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯ ಎತ್ತಿನಹೊಳೆ ಯೋಜನೆ ಹೋರಾಟ ಮುಂಬರು ಚುನಾವಣೆಯ ಪ್ರಮುಖ ವಿಷಯವಾಗಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನಗಳು ಆರಂಭಗೊಂಡಿದೆ. ಈ ಬಾರಿಯ ವಿಧಾನಸಭಾ ಚುನಾವಣೆಗೆ ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟಗಾರರು ದುಮುಕಲು ಮುಂದಾಗಿದ್ದಾರೆ.ಬಯಲು ಸೀಮೆಗೆ ನೀರುಣಿಸುವ ಉದ್ದೇಶಹೊಂದಿರುವ ಎತ್ತಿನಹೊಳೆ ಯೋಜನೆ ವಿವಾದದ ಮೂಲ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಎತ್ತಿನಹೊಳೆ ಹೋರಾಟಗಾರರು ಚುನಾವಣೆಗೆ ಸ್ಪರ್ದಿಸಲು ಮುಂದಾಗಿದ್ದಾರೆ. ಕರಾವಳಿಯನ್ನೇ […]

ಕಾಂಗ್ರೆಸ್ ಹಿಂದೆಹಿಂದೆ, ಬಿಜೆಪಿ ಮುಂದೆಮುಂದೆ

Monday, December 18th, 2017
himachala

ಅಹ್ಮದಾಬಾದ್: ಈ ವರ್ಷದ ಕಟ್ಟಕಡೆಯ ಚುನಾವಣೆ ರಿಯಾಲಿಟಿ ಶೋಗೆ ಗುಜರಾತ್ ಅಣಿಯಾಗಿದೆ. ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ತಿಳಿಯಲು ಕ್ಷಣಗಣನೆ ಆರಂಭವಾಗಿದೆ. 22 ವರ್ಷಗಳ ಕಾಲ ಆಡಳಿತ ನಡೆಸಿರುವ ಭಾರತೀಯ ಜನತಾ ಪಕ್ಷ ಪ್ರಥಮ ಬಾರಿಗೆ ಕಾಂಗ್ರೆಸ್ಸಿನಿಂದ ಭಾರೀ ತುರುಸಿನ ಸ್ಪರ್ಧೆಯನ್ನು ಈ ಬಾರಿ ಎದುರಿಸಿದೆ. ತಕ್ಕಡಿ ಯಾವುದೇ ಬದಿಗೂ ತೂಗಬಹುದು ಎನ್ನುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. LIVE : ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ 9.56 : ಬಿಜೆಪಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ರಾಜಕೋಟ್ ಪಶ್ಚಿಮ […]

2018ರ ಚುನಾವಣೆ ಕಡೆಯ ಚುನಾವಣೆ, ಇನ್ನು ಚುನಾವಣೆಗೆ ನಿಲ್ಲಲ್ಲ :ಸಿದ್ದರಾಮಯ್ಯ

Wednesday, October 4th, 2017
CM

ಮೈಸೂರು:  “ರಾಜಕೀಯವಾಗಿ ಜನ್ಮ ನೀಡಿದ, ಉಪ ಚುನಾವಣೆಯಲ್ಲಿ ಮರುಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. 2018ರ ವಿಧಾನಸಭೆ ಚುನಾವಣೆಯೇ ನನ್ನ ಕಡೆಯ ಚುನಾವಣೆ “ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹೂಟಗಳ್ಳಿಯ ಸಂತೆ ಮೈದಾನದಲ್ಲಿಮಂಗಳವಾರ ಏರ್ಪಡಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು  “2013ರ ಚುನಾವಣೆಯೇ ಅಂತಿಮ, ಇನ್ನು ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದೆ, ಆದರೆ, ಕಾಂಗ್ರೆಸ್‌ ಹೈಕಮಾಂಡ್‌ ನನ್ನ ನಾಯಕತ್ವದಲ್ಲೇ ಚುನಾವಣೆಗೆ ಹೋಗಲು ಹೇಳಿರುವುದರಿಂದ ಅನಿವಾರ್ಯವಾಗಿ 2018ರ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಇದೊಂದೇ ಚುನಾವಣೆ, ಇನ್ನು […]