ಸೋಲಿನ ಬಗ್ಗೆ ನಿರಾಸೆ ಬೇಡ, ಪ್ರತಾಪಸಿಂಹ ನಾಯಕ್
Monday, February 29th, 2016ಬಂಟ್ವಾಳ: ಕಾರ್ಯಕರ್ತರು ವಿಶ್ವಾಸವನ್ನು ಬೆಳೆಸಿಕೊಂಡು, ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಮುಂದಿನ ಚುನಾವಣೆಯನ್ನು ಎದುರಿಸಿ ಎಂದು ಬಿ.ಜೆ.ಪಿ ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್ ಅವರು ಕರೆ ನೀಡಿದರು. ಅವರು ಬಿ.ಸಿರೋಡ್ ಬಿ.ಜೆ.ಪಿ ಕಛೇರಿಯಲ್ಲಿ ನಡೆದ ಸಜಿಪ ಮುನ್ನೂರು ಜಿ.ಪಂ. ಕ್ಷೇತ್ರದ ಕಾರ್ಯಕರ್ತರ ಅವಲೋಕನ ಸಭೆಯಲ್ಲಿ ಮಾತನಾಡಿದರು. ಸೋಲಿನ ಬಗ್ಗೆ ಗೊಂದಲ ಮತ್ತು ನಿರಾಸೆ ಬೇಡ ಮುಂದಿನ ಚುನಾವಣೆಯ ದೃಷ್ಟಿಯಿಂದ ಸೋಲನ್ನು ಸವಾಲಾಗಿ ಸ್ವೀಕರಿಸಿ ಗೆಲುವಿಗಾಗಿ ಶ್ರಮಿಸಿ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಬಿಜೆಪಿ ಅಧ್ಯಕ್ಷ ಜಿ.ಆನಂದ ವಹಿಸಿದ್ದರು. ವೇದಿಕೆಯಲ್ಲಿ ಪಕ್ಷದ […]