Blog Archive

ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಸನ್ನಿಹಿತ: ಯಡಿಯೂರಪ್ಪ

Tuesday, December 19th, 2017
bjp-karnataka

ಕೊಪ್ಪಳ: ಕಾಂಗ್ರೆಸ್ ಮುಕ್ತ ಭಾರತದ ಕನಸು ದೂರವಿಲ್ಲ. ಈಗಾಗಲೇ ಗುಜರಾತ್ ಮತ್ತು ಹಿಮಾಚಲದ ಜನತೆ ವಿಕಾಸಕ್ಕೆ ಜನಾದೇಶ ನೀಡುವ ಮೂಲಕ ಬಿಜೆಪಿಯನ್ನು ಬೆಂಬಲಿಸಿದ್ದಾರೆ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಕಾಂಗ್ರೆಸ್ ಅಂತ್ಯ ಸನ್ನಿಹಿತವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಕುಕನೂರಿನಲ್ಲಿಂದು ಪರಿವರ್ತನಾ ಯಾತ್ರೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಪಕ್ಷದ ಮುಖಂಡರಾದ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಮುರುಗೇಶ್ ನಿರಾಣಿ, ಶಿವಕುಮಾರ್ ಉದಾಸಿ, ರಾಜು ಗೌಡ ಮುಂತಾದವರು ಸಮಾವೇಶದಲ್ಲಿ […]

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಂತೆ ಇದೊಂದು ಆಂತರಿಕ ವಿಚಾರ ಇದನ್ನು ಪಕ್ಷದೊಳಗೆ ಬಗೆಹರಿಸಿಕೊಳ್ಳುತ್ತೇವೆ: ಜಗದೀಶ್ ಶೆಟ್ಟರ್

Thursday, December 8th, 2016
Jagadeesh Shettar

ಮಂಗಳೂರು: ಬಿಜೆಪಿ ಮುಖಂಡ ಕೆ. ಎಸ್. ಈಶ್ವರಪ್ಪ ಆರಂಭಿಸಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಂತೆ ಬಹಿರಂಗವಾಗಿ ಚರ್ಚಿಸುತ್ತಿಲ್ಲ ಎಂದು ರಾಜ್ಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟವಾಗಿ ಹೇಳಿದ್ದಾರೆ. ಮಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಆಂತರಿಕ ವಿಚಾರ. ಇದನ್ನು ಪಕ್ಷದೊಳಗೆ ಬಗೆಹರಿಸಿಕೊಳ್ಳುತ್ತೇವೆ ಎಂದರು. ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಯನ್ನು ರಕ್ಷಿಸಲು ಎಸಿಬಿಯನ್ನು ರಚಿಸಲಾಗಿದೆ. ಅವರನ್ನೇ ಬಳಸಿಕೊಂಡು ಭ್ರಷ್ಟಾಚಾರ ಮಾಡಲಾಗುತ್ತಿದೆ. ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ, ಬೆಲೆ ಇಲ್ಲದಂತಾಗಿದೆ ಎಂದು ಭ್ರಷ್ಟಾಚಾರ ಕುರಿತ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಬೆಂಗಳೂರಿನ […]

ಬಿಎಸ್‌ವೈ ಮುನಿಸು: ರಾಜ್ಯ ಬಿಜೆಪಿ ಇಕ್ಕಟ್ಟಿನಲ್ಲಿ

Tuesday, January 28th, 2014
B-S-Yeddyurappa

ಬೆಂಗಳೂರು : ಬಿಜೆಪಿಯ ಜೊತೆ ಇತ್ತೀಚೆಗಷ್ಟೇ ಕೆಜೆಪಿಯನ್ನು ವಿಲೀನಗೊಳಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇದೀಗ ಬಿಜೆಪಿ ಯಲ್ಲಿ ಮೂಲೆ ಗುಂಪಾಗಿದ್ದು, ರಾಜ್ಯ ನಾಯಕರ ವರ್ತನೆಗೆ ಬೇಸತ್ತು ಅಧಿ ವೇಶನ ಸೇರಿದಂತೆ ಪಕ್ಷದ ಚಟುವಟಿಕೆ ಯಿಂದ ದೂರ ಉಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಮುಂಬರುವ ಲೋಕಸಭಾ ಚುನಾ ವಣೆಗೂ ಮುನ್ನವೇ ಬಿಜೆಪಿಯಲ್ಲಿ ಅಸ ಮಾಧಾನದ ಹೊಗೆ ಎದ್ದಿದೆ. ಮುನಿಸಿ ಕೊಂಡಿರುವ ಯಡಿಯೂರಪ್ಪರನ್ನು ಸಮಾಧಾನಪಡಿಸಲು ಬಿಜೆಪಿ ನಾಯಕ ರಾರೂ ಮುಂದಾಗುತ್ತಿಲ್ಲ. ಇದರಿಂದಾಗಿ […]

ರಾಜ್ಯದಲ್ಲಿನ ವಿದ್ಯುತ್ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಲಾಗುವುದು : ಜಗದೀಶ್ ಶೆಟ್ಟರ್

Monday, March 18th, 2013
CM Jagadish Shettar vist Mangalore

ಮಂಗಳೂರು : ಮಾರ್ಚ್ 18, ಸೋಮವಾರ ಮಂಗಳೂರಿನಲ್ಲಿ  ವಿವಿಧ ಯೋಜನೆಗಳ ಉದ್ಘಾಟನೆಯನ್ನು ನೆರವೇರಿಸಲು ಇಂದು ಬೆಳಗ್ಗೆ ಮಂಗಳೂರು  ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ  ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವರನ್ನು  ಬಿಜೆಪಿ   ನಾಯಕರಾದ ಎನ್.ಯೋಗಿಶ್ ಭಟ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ, ಶಾಸಕ ಕೃಷ್ಣ ಜೆ.ಪಾಲೆಮಾರ್, ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಸ್ವಾಗತಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಯಚೂರಿನಲ್ಲಿನ  ಜಲವಿದ್ಯುತ್ ಸ್ಥಾವರದಲ್ಲಿನ ಉತ್ಪಾದನಾ ಸಮಸ್ಯೆ ಹಾಗೂ ತಾಂತ್ರಿಕ ಸಮಸ್ಯೆಗಳಿಂದ ವಿದ್ಯುತ್ ಪೂರೈಕೆಯಲ್ಲಿ ಕೊರತೆ ಉಂಟಾಗಿದೆ ಇದನ್ನು […]

ಇತಿಹಾಸ ಪ್ರಸಿದ್ಧ ಕದ್ರಿ ಕಂಬಳ

Monday, December 3rd, 2012
Kadri Kambala

ಮಂಗಳೂರು :ಡಿಸೆಂಬರ್ 2 ಭಾನುವಾರ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವರ ಕಂಬಳವು ಕದ್ರಿ ಶ್ರೀ ಯೋಗೀಶ್ವರ ಮಠದ ಮಹಂತರಸ ರಾಜಯೋಗಿ ಶ್ರೀ ಸಂದ್ಯಾನಾಥ್ ಅವರ ಉಪಸ್ಥಿಯಲ್ಲಿ ಜರಗಿತು. ಇದೆ ಪ್ರಪ್ರಥಮ ಬಾರಿಗೆ ಕದ್ರಿ ಕಂಬಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾರ್ಯಕ್ರಮವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಮಾತನಾಡಿದ ಅವರು ಕಂಬಳ ದಕ್ಷಿಣ ಕನ್ನಡದ ಸಾಂಸ್ಕೃತಿಕ ಕ್ರೀಡೆ, ಇಲ್ಲಿನ ಜನತೆಯು ಕಂಬಳಕ್ಕೆ ಹೆಚ್ಚು ಮಾನ್ಯತೆ ನೀಡಿದ್ದಾರೆ. ಇದಕ್ಕೆ ಅಪಾರ ಜನ ಬೆಂಬಲವಿದೆ ಎಂದರು. […]