Blog Archive

ಜನಾರ್ದನ ಪೂಜಾರಿಗೆ ಅನಾರೋಗ್ಯ ವದಂತಿ: ಸುಳ್ಳು ಸುದ್ದಿ ಹರಿಡಿದವರ ವಿರುದ್ಧ ದೂರು

Tuesday, November 27th, 2018
janardhan-poojary

ಮಂಗಳೂರು: ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ತೀವ್ರ ಅನಾರೋಗ್ಯದಲ್ಲಿದ್ದಾರೆ ಸಾಮಾಜಿಕ ಜಾಲತಾಣಗಳಲ್ಲಿ ಎಂದು ಸುಳ್ಳು ಸಂದೇಶ ಹರಡಿದವರ ವಿರುದ್ಧ, ಬಂಟ್ವಾಳ ನಗರ ಠಾಣೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ ದೂರು ನೀಡಿದ್ದಾರೆ. ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅನಾರೋಗಕ್ಕೀಡಾಗಿರುವ ಜನಾರ್ದನ ಪೂಜಾರಿ, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುಳ್ಳು ಸಂದೇಶ ಹರಡುತ್ತಿದ್ದಾರೆ. ಇದರ ಹಿಂದಿರುವ ಆರೋಪಿಳನ್ನು ಪತ್ತೆಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಪೊಲೀಸ್ ದೂರಿನಲ್ಲಿ ಒತ್ತಾಯಿಸಿದ್ದಾರೆ. ಜನಾರ್ದನ ಪೂಜಾರಿ ಆರೋಗ್ಯವಾಗಿದ್ದು ಬಂಟ್ವಾಳದ ಸ್ವಗೃಹದಲ್ಲಿ […]

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಜನಾರ್ದನ ಪೂಜಾರಿ ದೋಷ ಮುಕ್ತಿ

Saturday, October 6th, 2018
poojary

ಮಂಗಳೂರು: ಚುನಾವಣೆಯ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಮೇಲೆ ಇದ್ದ ಪ್ರಕರಣ ಖುಲಾಸೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಿಂದ ಜನಾರ್ದನ ಪೂಜಾರಿ ನಿರಾಳರಾಗಿದ್ದಾರೆ. ಈ ಬಗ್ಗೆ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾದ ಬಗ್ಗೆ ಮಾಹಿತಿ ನೀಡಲು ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಸಮ್ಮುಖದಲ್ಲಿ ವಕೀಲ ಪದ್ಮರಾಜ್ ಅವರು ಈ ಮಾಹಿತಿ ನೀಡಿದರು. ನೀರಿನ ದರ ಏರಿಕೆ ಸಂಬಂಧಿಸಿದಂತೆ ಚುನಾವಣಾ […]

ಕಾಂಗ್ರೆಸ್‌ನಿಂದ ನನಗೆ ಅವಮಾನ ಆಗಿಲ್ಲ: ಜನಾರ್ದನ ಪೂಜಾರಿ

Wednesday, May 9th, 2018
janardhan-poojary

ಮಂಗಳೂರು: ನನಗೆ ಕಾಂಗ್ರೆಸ್‌ನಿಂದ ಅಪಮಾನ ಆಗಿಲ್ಲ. ಹರಿಕೃಷ್ಣ ಬಂಟ್ವಾಳ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜನರು ಬಿಜೆಪಿ ಅಭ್ಯರ್ಥಿ ಹರಿಕೃಷ್ಣರ ಮಾತು ನಂಬುವಷ್ಟು ದಡ್ಡರಲ್ಲ, ಹರಿಕೃಷ್ಣ ಯಾರು? ಪೂಜಾರಿ ಯಾರು? ಎಂದು ಜನರಿಗೆ ಗೊತ್ತಿದೆ. ಸಿದ್ದರಾಮಯ್ಯ ಬಗ್ಗೆ ಖಡಕ್ ಮಾತಾಡಿದ್ದು ಹೌದು. ಸರ್ಕಾರಕ್ಕೆ ನಾನು ಸಲಹೆ ಕೊಟ್ಟಿದ್ದೇನೆ ಅದು ತಪ್ಪೇ? ಎಂದ ಅವರು, ಸಿಎಂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದರು. ಆಸ್ಕರ್ ಫರ್ನಾಂಡೀಸ್ […]

ದ.ಕ.ಜಿಲ್ಲೆಯ 8 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು: ಜನಾರ್ದನ ಪೂಜಾರಿ

Wednesday, May 9th, 2018
j-r-lobo

ಮಂಗಳೂರು: ದ.ಕ. ಜಿಲ್ಲೆಯ 8 ಕ್ಷೇತ್ರದಲ್ಲೂ ಕೂಡ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಹೇಳಿದರು. ನಗರದ ಕದ್ರಿಯಲ್ಲಿರುವ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ 7 ಸ್ಥಾನಗಳನ್ನು ಗೆದ್ದಿದ್ದರೆ ಈ ಬಾರಿ 8 ಸ್ಥಾನವನ್ನೂ ಗೆಲ್ಲಲಿದೆ. ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸಲಿದ್ದಾರೆ ಎಂದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ಜೆ.ಆರ್.ಲೋಬೊ ವಿರುದ್ಧ ತೀವ್ರ ಅಪಪ್ರಚಾರ ಮಾಡಲಾಗುತ್ತಿದೆ. ಇದು […]

ಜನಾರ್ದನ ಪೂಜಾರಿಗೆ ಮಾನಸಿಕ ಹಿಂಸೆ ನೀಡಿರುವುದು ಸಚಿವ ರೈ: ಹರಿಕೃಷ್ಣ ಬಂಟ್ವಾಳ

Friday, May 4th, 2018
bantwal

ಬಂಟ್ವಾಳ: “ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಗೆ ಮಾನಸಿಕ ಹಿಂಸೆ ನೀಡಿರುವುದು ಸಚಿವ ರಮಾನಾಥ ರೈ ಅವರೇ ಹೊರತು ನಾನಲ್ಲ” ಎಂದು ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ ಆರೋಪಿಸಿದ್ದಾರೆ. ಗುರುವಾರ ಸಂಜೆ ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾನು ಅವರಿಗೆ ಮಾನಸಿಕ ಹಿಂಸೆ ನೀಡಿದ್ದರೆ, ಕಳೆದ 35 ವರ್ಷಗಳ ಕಾಲ ಪೂಜಾರಿಯವರ ಜೊತೆಯಲ್ಲಿರುತ್ತಿರಲಿಲ್ಲ ಎಂದರು. ರಮಾನಾಥ ರೈ ಮುಂದೆ ಸದಾ ಕೈ ಕಟ್ಟಿ ನಿಲ್ಲುವ ಬೇಬಿ ಕುಂದರ್ ಎಂಬವರು ರಮಾನಾಥ ರೈ ಅವರ […]

ಮೋದಿ ಬಸವಣ್ಣನ ವಚನ ಪುಸ್ತಕ ಓದಿ, ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ರಾಹುಲ್‌ ಗಾಂಧಿ

Friday, April 27th, 2018
speech-rahul

ಮಂಗಳೂರು: ಸಚಿವ ರಮಾನಾಥ ರೈ ಮತಕ್ಷೇತ್ರ ಬಂಟ್ವಾಳದಲ್ಲಿ ನಡೆದ ಕಾಂಗ್ರೆಸ್‌ನ ಬೃಹತ್‌ ಸಮಾವೇಶದಲ್ಲಿ ಎಐಸಿಸಿ ರಾಹುಲ್‌ ಗಾಂಧಿ ಭಾಗವಹಿಸಿ ಬಿಜೆಪಿ ಹಾಗೂ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮೋದಿ ಹೋದಲ್ಲೆಲ್ಲಾ ಮನ್ ಕೀ ಬಾತ್ ಹೇಳ್ತಾರೆ. ನಮ್ಮದು ಕರ್ನಾಟಕದ ಜನರ ಮನದ ಮಾತು. ಜನರ ಮನವನ್ನು ನಾವು ಪ್ರಣಾಳಿಕೆಯಲ್ಲಿ ಅಳವಡಿಸಿದ್ದೇವೆ. ಮುಚ್ಚಿದ ಕೋಣೆಯಲ್ಲಿ ನಾವು ಪ್ರಣಾಳಿಕೆ ತಯಾರಿಸಿಲ್ಲ. ಬಸವಣ್ಣನ ವಚನ ನುಡಿದಂತೆ ನಡೆಯನ್ನು ನಾವು ಅನುಸರಿಸಿದ್ದೇವೆ. ರೆಡ್ಡಿ ಬ್ರದರ್ಸ್‌ಗೆ 8 ಟಿಕೆಟ್ ಕೊಟ್ಟಿದ್ದಾರೆ. ರೆಡ್ಡಿ, ಯಡಿಯೂರಪ್ಪ, […]

ಪೂಜಾರಿಗೆ ಮೊಳಗಿದ ಜೈಕಾರ ಕೇಳಿ, ಭಾಷಣ ಅರ್ಧಕ್ಕೆ ನಿಲ್ಲಿಸಿದ ಸಿಎಂ ಸಿದ್ದರಾಮಯ್ಯ

Friday, April 27th, 2018
janardhan-poojary

ಬಂಟ್ವಾಳ: ಕಾಂಗ್ರೆಸ್ ಮುಖಂಡರಿಗೆ ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿಯವರ ಜನಪ್ರಿಯತೆ ಬಂಟ್ವಾಳದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಪ್ರಚಾರ ಸಭೆಯಲ್ಲಿ ಕೇಳಿಬಂದ ಜೈಕಾರದಿಂದ  ಮನದಟ್ಟಾಗಿದೆ. ಸಮಾವೇಶಕ್ಕೆ ಜನಾರ್ದನ ಪೂಜಾರಿಯವರು ಆಗಮಿಸಿದ ಸಂದರ್ಭ ಕೇಳಿಬಂದ ಜೈಕಾರದ ಅಬ್ಬರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭಾಷಣವನ್ನೇ ಕೆಲಕಾಲ ನಿಲ್ಲಿಸಿ ಬಿಟ್ಟರು. ಜನಾರ್ದನ ಪೂಜಾರಿಯವರನ್ನು ವೇದಿಕೆಗೆ ಬರಮಾಡಿಕೊಂಡ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮ ಪಕ್ಕದಲ್ಲೇ ಕುಳ್ಳಿರಿಸಿಕೊಂಡರು. ಬಳಿಕ ಭಾಷಣ ಮುಂದುವರೆಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಮೂರು ಕಾಸಿನ ಮಾನ ಮರ್ಯಾದೆ […]

ಬಿಜೆಪಿಯವರು ತಾವು ಹೇಳಿದ ಮಾತಿಗೆ ಬದ್ಧರಾಗಿಲ್ಲ ಮಂಗಳೂರಿನಲ್ಲಿ ರಾಹುಲ್ ಗಾಂಧಿ

Friday, April 27th, 2018
rahul-gandhi-

ಮಂಗಳೂರು : ಎಐಸಿಸಿ ಅಧ್ಯಕ್ಷ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳೂರಿನಲ್ಲಿ ಬಹುನಿರೀಕ್ಷಿತ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಮಂಗಳೂರಿನ ಟಿಎಂಎ ಪೈ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು ಮಂಗಳೂರಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲು ಖುಷಿಯಾಗುತ್ತಿದೆ. ಈ ಪ್ರಣಾಳಿಕೆಯನ್ನು ನಾಲ್ಕು ಗೋಡೆಗಳ ಮಧ್ಯೆ ಕುಳಿತ ನಾಲ್ವರು ತಯಾರಿಸಿದ್ದಲ್ಲ. ಎಲ್ಲಾ ಸಮುದಾಯಗಳನ್ನು ಕೇಳಿ ಇದನ್ನು ರಚಿಸಲಾಗಿದೆ. ನಿಮ್ಮ ಸರಕಾರ ಏನು ಮಾಡಬೇಕು ಎಂಬುದನ್ನು ಜನರಿಂದಲೇ ಕೇಳಿ ಇದನ್ನು ರಚಿಸಲಾಗುತ್ತದೆ. ಇದು […]

ಜನಾರ್ದನ ಪೂಜಾರಿ ಕಾಲಿಗೆರಗಿ ಆಶೀರ್ವಾದ ಪಡೆದ ಶಾಸಕ ಸೊರಕೆ

Thursday, April 19th, 2018
janardhan-poojary

ಮಂಗಳೂರು: ಉಡುಪಿ ಜಿಲ್ಲೆಯ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಅವರು ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿಯವರನ್ನು ದ.ಕ ಜಿಲ್ಲೆಯ ಬಂಟ್ವಾಳದ ಮನೆಯಲ್ಲಿ ಭೇಟಿ ಮಾಡಿ ಆಶೀರ್ವಾದ ಕೋರಿದರು. ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಕರಾವಳಿಯಲ್ಲಿ ಬಿಲ್ಲವ ಸಮುದಾಯದ ಹಿರಿಯ ಮುಖಂಡರಾಗಿದ್ದು, ಸ್ವಪಕ್ಷದಲ್ಲಿನ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿ ಸುದ್ದಿಯಾಗಿದ್ದರು. ಬಿಲ್ಲವ ಸಮುದಾಯದಿಂದ ಬಂದ ಕಾಂಗ್ರೆಸ್ ಶಾಸಕ ವಿನಯಕುಮಾರ್ ಸೊರಕೆ ಅವರು ಪೂಜಾರಿ ಅವರ ಕಾಲಿಗೆರಗಿದರು, ಅವರಿಗೆ ಪೂಜಾರಿ ಶುಭ ಹಾರೈಸಿದರು […]

ನಾಮಪತ್ರ ಸಲ್ಲಿಸುವ ಮುನ್ನ ಜನಾರ್ದನ ಪೂಜಾರಿಯಿಂದ ಆಶೀರ್ವಾದ ಪಡೆದ ರೈ

Wednesday, April 18th, 2018
janardhan

ಮಂಗಳೂರು: ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರು ನಾಮಪತ್ರ ಸಲ್ಲಿಸುವುದಕ್ಕೆ ಪೂರ್ವಭಾವಿಯಾಗಿ ಇಂದು ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಕೇಂದ್ರ ಸಚಿವರೂ ಆಗಿರುವ ಜನಾರ್ದನ ಪೂಜಾರಿಯವರ ನಿವಾಸಕ್ಕೆ ತೆರಳಿ ಅವರ ಆಶೀರ್ವಾದ ಪಡೆದರು. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಳಿವೇ ಇಲ್ಲ, ಜಿಲ್ಲೆಯಲ್ಲಿ ಎಲ್ಲ ಸ್ಥಾನಗಳನ್ನು ಕಾಂಗ್ರೆಸ್ ಪಡೆಯುವುದರೊಂದಿಗೆ ರಾಜ್ಯದಲ್ಲೂ ಅತೀ ಹೆಚ್ಚಿನ ಸ್ಥಾನ ಗಳಿಸುತ್ತದೆ. ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಪೂಜಾರಿಯವರು ಇದೇ ವೇಳೆ ನುಡಿದರು. ರೈ ಅವರೇ ನಿಮ್ಮಂಥ […]