Blog Archive

ದೇಶದಲ್ಲಿ ನಿರ್ಮಾಣವಾಗಿರುವ ಆರ್ಥಿಕ ತುರ್ತು ಪರಿಸ್ಥಿತಿಗೆ ಮೋದಿಯೇ ಕಾರಣ, ಅವರೇ ಜನತೆಗೆ ಉತ್ತರ ನೀಡಲಿ: ಪೂಜಾರಿ

Wednesday, November 16th, 2016
janardana-poojary

ಮಂಗಳೂರು: ಸದ್ಯ ದೇಶದಲ್ಲಿ ನಿರ್ಮಾಣವಾಗಿರುವ ಆರ್ಥಿಕ ತುರ್ತು ಪರಿಸ್ಥಿತಿಯಂತಹ ವಾತಾವರಣಕ್ಕೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ. ಈ ಪರಿಸ್ಥಿತಿಗೆ ವಾಸ್ತವ ಕಾರಣ ಏನು ಎಂಬುದನ್ನು ಅವರೇ ಜನತೆಗೆ ಉತ್ತರ ನೀಡಲಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜನಾರ್ದನ ಪೂಜಾರಿ ಹೇಳಿದರು. ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ಪುಹಣ ತಡೆಯಲು ದೇಶದ ಆದಾಯ ತೆರಿಗೆ ಕಾನೂನು ಇದೆ. ಸೆಕ್ಷನ್‌‌ 276 ‘ಎ’ ಮತ್ತು 276 ‘ಬಿ’ಯಲ್ಲಿ ದೇಶದಲ್ಲಿ ಕಪ್ಪುಹಣ ನಿಯಂತ್ರಿಸಲು ಯಾವ ಕ್ರಮ ಕೈಗೊಳ್ಳಬಹುದು ಎನ್ನುವ […]

ನೈತಿಕತೆಯಿದ್ದರೆ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ: ಜನಾರ್ದನ ಪೂಜಾರಿ

Saturday, November 12th, 2016
Janardana poojary

  ಮಂಗಳೂರು: ಸಿಎಂ ಅವರೇ, ನಿಮಗೆ ನೈತಿಕತೆಯಿದ್ದರೆ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಂಜೆಯೊಳಗೆ ಸಚಿವ ಸಂಪುಟದಿಂದ ವಜಾ ಮಾಡಿ ಎಂದು ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, `ಸಿಎಂ ಅವರೇ ತನ್ವೀರ್ ಸೇಠ್‌ ರಾಜೀನಾಮೆ ತೆಗೆದುಕೊಳ್ಳಲು ಆಗದಿದ್ದರೆ. ಅದನ್ನು ಜನತೆಯ ಮುಂದೆ ನೀವು ದುರ್ಬಲಾಗಿದ್ದೀರಿ ಎಂಬುದನ್ನು ಒಪ್ಪಿಕೊಳ್ಳಿ. ಈಗ ನೀವು ನಿದ್ದೆ ಮಾಡಿದರೆ ಚುನಾವಣೆ ಸಂದರ್ಭದಲ್ಲಿ ಜನರೇ […]

ಸಿದ್ಧರಾಮಯ್ಯ ಅವರು ಪಕ್ಷದ ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉಪಚುನಾವಣೆಗೆ ಸಿದ್ಧರಾಗಬೇಕು: ಪೂಜಾರಿ ಸಲಹೆ

Friday, November 4th, 2016
Janardhan Poojary

ಮಂಗಳೂರು: ಮೈಸೂರಿನಲ್ಲಿ ನಡೆಯುವ ಉಪಚುನಾವಣೆ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಕ್ಷದ ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಿದ್ಧರಾಗಬೇಕು. ಪ್ರತಿಪಕ್ಷಗಳು ಒಗ್ಗಟ್ಟಾದರೆ ಸಿಎಂ ಮನೆಗೆ ಹೋಗಬೇಕಾದೀತು ಎಂದು ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಸಲಹೆ ಮಾಡಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಚುನಾವಣೆ ಎದುರಿಸಲು ಕಸರತ್ತು ಆರಂಭಿಸಿವೆ. ದೇವೇಗೌಡರು ಈಗಾಗಲೇ ಶ್ರೀನಿವಾಸ್‌ ಪ್ರಸಾದ್‌ ಪಕ್ಷೇತರರಾಗಿ ಸ್ಪರ್ಧಿಸಿದರೆ ಜೆಡಿಎಸ್‌ ಬೆಂಬಲಿಸುವುದಾಗಿ ಹೇಳಿದ್ದಾರೆ. ಈ ಸಂದರ್ಭ […]

ತಮಿಳುನಾಡಿಗೆ ಕಾವೇರಿ ನೀರು ಬಿಡುವುದೇ ಬೇಡ: ಜನಾರ್ದನ ಪೂಜಾರಿ

Saturday, October 1st, 2016
covrway-water

ಮಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದೇ ಬೇಡ. ವಿಧಾನಸಭೆ ಹಾಗೂ ವಿಧಾನಪರಿಷತ್ ಮಾಡಿದ ನಿರ್ಣಯವನ್ನೇ ರಾಜ್ಯ ಸರ್ಕಾರ ಅನುಸರಿಸಲಿ. ಕೋರ್ಟ್‌ ನಿಂದನೆ ಮಾಡಿದ ಕಾರಣಕ್ಕೆ ನನ್ನನ್ನು ಜೈಲಿಗಟ್ಟಿದರೂ ತೊಂದರೆಯಿಲ್ಲ ಎಂದು ಕೇಂದ್ರದ ಮಾಜಿ ಸಚಿವರಾದ ಬಿ. ಜನಾರ್ದನ ಪೂಜಾರಿ ಖಡಕ್‌ ಆಗಿ ಹೇಳಿದ್ದಾರೆ. ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸುಪ್ರೀಂ ತಮಿಳುನಾಡಿಗೆ ದಿನಕ್ಕೆ 6 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಆದೇಶಿಸಿ ಅನ್ಯಾಯದ ಮೇಲೆ ಅನ್ಯಾಯ ಮಾಡುತ್ತಿದೆ. ಕರ್ನಾಟಕ ಈಗಾಗಲೇ ತಮಿಳುನಾಡು […]

ಕಾವೇರಿ ವಿವಾದ ಇತ್ಯರ್ಥಕ್ಕೆ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜಾರಿ ಉರುಳು ಸೇವೆ

Monday, September 19th, 2016
janardana-poojary

ಮಂಗಳೂರು: ಕಾವೇರಿ ನದಿ ನೀರು ಹಂಚಿಕೆ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ನದಿ ವಿವಾದದ ಇತ್ಯರ್ಥಕ್ಕಾಗಿ ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಉರುಳು ಸೇವೆ ಮಾಡಿದರು. ಗೋಕರ್ಣನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬೆಳ್ಳಿಯ ರಥದಲ್ಲಿ ದೇವರ ರಥೋತ್ಸವ ನಡೆಯಿತು. ರಥವನ್ನು ಎಳೆಯುತ್ತಿದ್ದಂತೆ ಮುಂಭಾಗದಲ್ಲಿ ಜನಾರ್ದನ ಪೂಜಾರಿ ಉರುಳು ಸೇವೆ ನಡೆಸಿದರು. 20 ನಿಮಿಷದಲ್ಲಿ ದೇವಸ್ಥಾನದ ಹೊರಾಂಗಣದಲ್ಲಿ ಒಂದು ಸುತ್ತು ಉರುಳು ಸೇವೆ ನಡೆಸಿದರು. ಶಾಸಕ ಜೆ.ಆರ್.ಲೋಬೋ, […]

ಜನಾರ್ದನ ಪೂಜಾರಿ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ದೂರು

Monday, September 19th, 2016
dinesh-gundurao

ಉಡುಪಿ: ‘ಕರ್ನಾಟಕ ಸರ್ಕಾರದ ವಿರುದ್ಧ ಪದೇ ಪದೇ ಅನಾವಶ್ಯಕ ಟೀಕೆ ಮಾಡುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಭಾನುವಾರ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ‘ಸರ್ಕಾರದ ವಿರುದ್ಧ ಅವರು ಅನಾವಶ್ಯಕವಾಗಿ ಪದೇ ಪದೇ ಟೀಕೆ ಮಾಡುತ್ತಿದ್ದಾರೆ. ಅಲ್ಲದೆ, ಅವರ ಟೀಕೆಗಳಿಗೆ ಆಧಾರವಿಲ್ಲ. ಅದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ತಿಳಿಸಿದರು. ‘ಹಿರಿಯ ನಾಯಕರ ಹೇಳಿಕೆ ಸರ್ಕಾರ ಹಾಗೂ […]

ಬಂಗಾರಪ್ಪನವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಿರಿ: ಜನಾರ್ದನ ಪೂಜಾರಿ

Tuesday, September 13th, 2016
janardhan-pujary

ಮಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್‌ ತೀರ್ಪಿನ ಬಳಿಕ ನಡೆದ ಸರ್ವಪಕ್ಷ ಸಭೆಯ ನಿರ್ಧಾರವನ್ನು ಪಾಲಿಸಲು ಮುಖ್ಯಮಂತ್ರಿಯವರು ಬದ್ಧತೆ ತೋರಿಸಿಲ್ಲ. 24 ಗಂಟೆಯೊಳಗೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ರಾಜ್ಯದ ಜನರಿಗೆ ತಮ್ಮ ನಿರ್ಧಾರ ಸ್ಪಷ್ಟಪಡಿಸಬೇಕು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಿರಿ ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಾಕೀತು ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರೂ ಈವರೆಗೆ ಮಾತಾಡಿಲ್ಲ. ರಾಜ್ಯದ ಜನರ ಭಾವನೆ […]

ಸಿದ್ದರಾಮಯ್ಯ,ಡಿವಿಎಸ್‌ ಮತ್ತು ಮೊಯ್ಲಿ ಅವರಿಗೆ ಕ್ರೀಡಾಪಟುಗಳಿಗೆ ನೀಡುವ ಖೇಲ್‌ ರತ್ನ ಪ್ರಶಸ್ತಿ ಕೊಡಬೇಕು: ಪೂಜಾರಿ

Saturday, September 3rd, 2016
Janardana-poojary

ಮಂಗಳೂರು : ಕಾಂಗ್ರೆಸ್‌ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಮತ್ತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಕಿಡಿಕಾರಿದ್ದಾರೆ. ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯನ್ನುದ್ದೇಸಿ ಮಾತನಾಡಿದ ಪೂಜಾರಿ ಅವರು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಸಂಸದ ವೀರಪ್ಪ ಮೊಯ್ಲಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದರು. ಎತ್ತಿನಹೊಳೆ ಯೋಜನೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಬದ್ಧರಾಗಿರುವ ಸಿದ್ದರಾಮಯ್ಯನವರು ಯೋಜನೆಗೆ ಅಡ್ಡ ಬಂದರೆ ಅವರನ್ನು ನನ್ನ ಬಳಿ ಕಳುಹಿಸಿ […]

ಮುಖ್ಯಮಂತ್ರಿಯವರ ಮೇಲೆ ಪೂಜಾರಿ ಮಾಡಿರುವ ಟೀಕೆ ಸರಿಯಲ್ಲ : ಖಾದರ್‌

Wednesday, August 17th, 2016
Khader Press

ಮಂಗಳೂರು:  ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಮಹಾದಾಯಿ ಪ್ರತಿಭಟನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ನೀಡಿರುವ ಹೇಳಿಕೆ ನನಗೆ ನೋವು ತಂದಿದೆ ಎಂದು ಸಚಿವ ಯು.ಟಿ. ಖಾದರ್‌ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರ ಶಾಪ ತಟ್ಟಲಿದೆ ಎಂಬ ಪೂಜಾರಿಯವರ ಹೇಳಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜನಾರ್ದನ ಪೂಜಾರಿ ನನ್ನ ನಾಯಕರು. ನನ್ನ ರಾಜಕೀಯ ಭವಿಷ್ಯ ರೂಪಿಸಿದವರು. ಅವರ ಮೇಲೆ ಅಪಾರ ಗೌರವ ಇದೆ. ಆದರೆ ಮಹಾದಾಯಿ ವಿಚಾರದಲ್ಲಿ […]

ಕಾರ್ಮಿಕರ ಸಮಸ್ಯೆ ಆಲಿಸದ ಸರಕಾರ ಎಂಥದ್ದು ಎಂದು ಪ್ರಶ್ನಿಸಿದ ಜನಾರ್ದನ ಪೂಜಾರಿ

Wednesday, July 27th, 2016
Janardhana-poojary

ಮಂಗಳೂರು: ಸಿದ್ದರಾಮಯ್ಯ ಆಡಳಿತದಲ್ಲಿ ಕಾಂಗ್ರೆಸ್ ಅವನತಿಯಂಚಿನಲ್ಲಿದೆ. ಅವರ ಉಡಾಫೆ ಮಾತಿನಿಂದ ಕಾಂಗ್ರೆಸ್ ಶಕ್ತಿ ಕಳೆದುಕೊಂಡು ಬಲಹೀನವಾಗುತ್ತಿದೆ. ಕಾಂಗ್ರೆಸ್‍ಗೆ ಕೆಟ್ಟ ಹೆಸರು ತರುತ್ತಿದ್ದಾರೆ. ಜನ ಬೀದಿಯಲ್ಲಿ ನಿಂತು ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ಸಿಗ ಬಿ.ಜನಾರ್ದನ ಪೂಜಾರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಮೂರು ವರ್ಷಗಳಿಂದ ಯಾವುದೇ ಅಭ್ಯುದಯಕಾರಿ ಕಾರ್ಯಕ್ರಮ ನೀಡಿಲ್ಲ. ಪೊಲೀಸ್ ಅಧಿಕಾರಿಗಳು ತಮ್ಮ ಮೇಲಾಧಿಕಾರಿಗಳಿಂದ ಬೇಸತ್ತು ಆತ್ಮಹತ್ಯೆ ಹಾಗೂ ಆತ್ಮಹತ್ಯೆ ಯತ್ನ ನಡೆಸುತ್ತಿದ್ದರೆ […]