Blog Archive

ಮಂಗಳೂರು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಯಾಗಿ ಜನಾರ್ದನ ಪೂಜಾರಿ ನಾಮಪತ್ರ ಸಲ್ಲಿಕೆ

Thursday, March 27th, 2014
Poojary

ಮಂಗಳೂರು: ನಾಮಪತ್ರ ಸಲ್ಲಿಸಲು ಕೊನೆಯದಿನವಾದ ಬುಧವಾರ ಮಂಗಳೂರು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಯಾಗಿ ಜನಾರ್ದನ ಪೂಜಾರಿ ನಾಮಪತ್ರ ಸಲ್ಲಿಸಿದರು. ಆರೋಗ್ಯ ಸಚಿವ ಯು ಟಿ ಖಾದರ್‌ ,ಜಿಲ್ಲಾಉಸ್ತುವಾರಿ ಹಾಗೂ ಅರಣ್ಯ ಸಚಿವ ರಮನಾಥ್‌ ರೈ, ಶಾಸಕ ಜೆ. ಆರ್‌ .ಲೋಬೋ, ಮತ್ತು ಮುಖಂಡ ಪಿ ವಿ ಮೋಹನ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿಮ ಪೂಜಾರಿ ಅವರು, ಜನತೆ ಕೊಮುವಾದಿಗಳನ್ನು ತಿರಸ್ಕರಿಸುವುದು ಖಂಡಿತ ಎಂದರು. ಕಾಂಗ್ರೆಸ್ ಮಾಡಿದ ಅಭಿವ್ರುದ್ದಿ ಕೆಲಸಗಳೇ ನನಗೆ ಗೆಲುವು […]

ಪೂಜಾರಿಗೆ ಒಲಿದ ಮತದೇವರು!

Monday, March 10th, 2014
Janardhan-Poojary

ಮಂಗಳೂರು: ಕಾಂಗ್ರೆಸ್ ಆಂತರಿಕ ಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಗೆಲವು ಸಾಧಿಸಿದ್ದು, ಮಂಗಳೂರು ಲೋಕಸಭೆ ಕ್ಷೇತ್ರದಿಂದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಭಾನುವಾರ ನಡೆದ ಆಂತರಿಕ ಚುನಾವಣೆಯಲ್ಲಿ 598 ಮತಗಳ ಪೈಕಿ 547 ಮತಗಳು ಚಲಾವಣೆಯಾಗಿದ್ದು, 7 ಮತಗಳು ಅಸಿಂಧುಗೊಂಡಿವೆ. ಈ ಪೈಕಿ ಜನಾರ್ದನ ಪೂಜಾರಿ 478 ಮತ ಪಡೆದರೆ, ಕಣಚೂರು ಮೋನು 62 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. 10 ನಿಮಿಷ ತಡವಾಗಿ ಬಂದ ಶಾಸಕ ಮೊಯಿನುದ್ದೀನ್ ಬಾವಾಗೆ ಮತ ಹಾಕುವ ಅವಕಾಶ ನೀಡಲಿಲ್ಲ. […]

26 ಕೈಯಾಳುಗಳು ಅಂತಿಮ, ಲಕ್ಷ್ಮಿ, ನಿವೇದಿತ್, ನಿಲೇಕಣಿ, ರಮ್ಯಾ, ಸುರೇಶ್, ಕುಮಾರ್ ಕ್ಲಿಯರ್

Saturday, March 8th, 2014
Janardhana-poojary

ನವದೆಹಲಿ: ಕರ್ನಾಟಕದಿಂದ ಅತಿ ಹೆಚ್ಚು ಸ್ಥಾನ ನಿರೀಕ್ಷಿಸಿರುವ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ 26 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಖೈರುಗೊಳಿಸಿದೆ. ಆಂತರಿಕ ಚುನಾವಣೆ ಮೂಲಕ ಆಯ್ಕೆ ಮಾಡಬೇಕಾದ ಮಂಗಳೂರು ಮತ್ತು ಬೆಂಗಳೂರು ಉತ್ತರ ಕ್ಷೇತ್ರಗಳ ಪೈಕಿ ಮಂಗಳೂರಿಗೆ ಜನಾರ್ದನ ಪೂಜಾರಿ ಅವರನ್ನೇ ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಈ ಹಿಂದೆಯೇ ನಿರ್ಧರಿಸಿದ್ದಂತೆ ಎಲ್ಲ 9 ಹಾಲಿ ಸಂಸದರು ಟಿಕೆಟ್ ಗಿಟ್ಟಿಸಿದ್ದಾರೆ.  ಶುಕ್ರವಾರ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸುದೀರ್ಘ ಚರ್ಚೆ ನಂತರ […]

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ವಿಧವಾ ಅರ್ಚಕಿಯರ ನೇಮಕ

Thursday, October 3rd, 2013
Two widows given right to perform puja at Kudroli Gokarnatheshwara Temple

ಮಂಗಳೂರು: ವೇದ ಪುರಾಣಗಳನ್ನು ಕಲಿಸಿ ಅ.6ರಂದು ವಿಧವೆಯರಿಂದ ಪೂಜಾವಿಧಾನ ನಡೆಸುವುದರೊಂದಿಗೆ ಅವರನ್ನು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಅರ್ಚಕರಾಗಿ ನೇಮಕ ಮಾಡಲಾಗುವುದು ಎಂದು  ಬಿ.ಜನಾರ್ದನ ಪೂಜಾರಿ  ಗುರುವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಈ ಇಬ್ಬರು ಅರ್ಚಕಿಯರಿಗೆ ನಾಲ್ಕು ತಿಂಗಳಿನಿಂದ ವೇದ ಪುರಾಣಗಳ ತರಬೇತಿಯನ್ನು ನೀಡಲಾಗಿದೆ, ವಿಧವೆಯರನ್ನೂ ಸಮಾಜ ಕೀಳು ದೃಷ್ಟಿಯಿಂದ ಕಾಣುತ್ತಿದೆ ಈ ಭಾವನೆಯನ್ನು ಹೋಗಲಾಡಿಸಲು ವಿಧವೆಯರಿಗೆ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು. ಅ.5 ರಂದು ಬೆಳಿಗ್ಗೆ 11ಕ್ಕೆ ಶಾರದೆ ಮತ್ತು ನವದುರ್ಗೆಯರು, ಗಣಪತಿ, ಪ್ರತಿಷ್ಟೆ ನಡೆಯಲಿದೆ ಎಂದು ಹೇಳಿದರು. ಅ.12 ರಂದು ಕ್ಷೇತ್ರದ ಅಭೀವೃದ್ಧಿ ಸಮಿತಿ […]

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡವರಿಗೆ ಕೆ.ಜಿ.ಗೆ 1 ರೂ.ಗೆ ಅಕ್ಕಿ : ಜನಾರ್ದನ ಪೂಜಾರಿ

Friday, March 15th, 2013
Bantwal Congress victory procession

ಬಂಟ್ವಾಳ : ಪುರಸಭಾ-ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿರುವ ಹಿನ್ನಲೆಯಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾರ್ಚ್ ೧೪  ಗುರುವಾರ ಸಂಜೆ ಬಿ.ಸಿ. ರೋಡಿನ ಪೂಂಜಾ ಮೈದಾನದಲ್ಲಿ ನೂತನ ಕಾಂಗ್ರೆಸ್ ಸದಸ್ಯರ ಅಭಿನಂದನೆ ಮತ್ತು ಮತದಾರರಿಗೆ ಕೃತಜ್ಞತಾ ಸಭೆಯನ್ನು ಆಯೋಗಿಸಲಾಗಿತ್ತು. ಸಮಾರಂಭಕ್ಕೂ ಮೊದಲು ನೂತನ ಸದಸ್ಯರನ್ನು ಬಿ.ಸಿ.ರೋಡಿನ ಮುಖ್ಯ ವೃತ್ತದ ಬಳಿಯಿಂದ ಮೈದಾನದವರೆಗೆ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಕರೆತರಲಾಯಿತು. ಸಭೆಯನ್ನು  ಕೇಂದ್ರದ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ಉದ್ಘಾಟಿಸಿದರು. ಸ್ಥಳೀಯ […]

ಜನತೆಗೆ ನೀಡಿದ ಭರವಸೆಗಳ ಈಡೇರಿಕೆಗೆ ಕಾಂಗ್ರೆಸ್ ಬದ್ದ : ಜನಾರ್ದನ ಪೂಜಾರಿ

Tuesday, March 12th, 2013
Janardhan Poojary

ಮಂಗಳೂರು : ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹೆಚ್ಚಿನ ಕಡೆಗಳಲ್ಲಿ  ಕಾಂಗ್ರೆಸ್ ಗೆಲುವನ್ನು ಸಾಧಿಸಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿರುವ ಜನತೆಗೆ ಪ್ರಣಾಳಿಕೆಯಲ್ಲಿ ಪಕ್ಷವು ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಕಾಂಗ್ರೆಸ್‌ ಪಕ್ಷದ ಜಿಲ್ಲಾ ಚುನಾವಾಣಾ ಉಸ್ತುವಾರಿ ವಹಿಸಿದ್ದ ಹಿರಿಯ ಕಾಂಗ್ರೆಸ್‌ ನಾಯಕ ಬಿ. ಜನಾರ್ದನ ಪೂಜಾರಿ ತಿಳಿಸಿದರು. ಅವರು  ಸೋಮವಾರ ಕಾಂಗ್ರೆಸ್ ನ ಪ್ರಚಾರ ಸಮಿತಿ ಸಭೆಯಲ್ಲಿ ನಡೆದ ಸುದ್ದಿಗೋಷ್ಠಿಯನ್ನು ದ್ದೇಶಿಸಿ ಮಾತನಾಡಿದರು. ಮುಂದಿನ 5 ವರ್ಷಗಳ ಕಾಲ ಆಸ್ತಿ ತೆರಿಗೆಯನ್ನು ಮತ್ತು ನೀರಿನ […]

ಮೃತ ಸೌಮ್ಯಾ ಳ ಮನೆಗೆ ಜನಾರ್ದನ ಪೂಜಾರಿ, ಕಾಂಗ್ರೆಸ್ಸ್ ನಾಯಕರ ಭೇಟಿ, ಸಾಂತ್ವಾನ

Thursday, February 28th, 2013
Janardhana poojaary visit Sowmya's family

ಬಂಟ್ವಾಳ : ಬಾಳ್ತಿಲ ಗ್ರಾಮದ ಕುಂಟಲ್ಪಾಡಿ ಯಲ್ಲಿ ಸೋಮವಾರ ಅತ್ಯಾಚಾರ ಯತ್ನದ ಬಳಿಕ ಕೊಲೆಗೀಡಾಗಿರುವ ಸೌಮ್ಯಾ ಅವರ ಮನೆಗೆ ಬುಧವಾರ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಮತ್ತು ಕಾಂಗ್ರೆಸ್ಸ್ ನಾಯಕರು ಭೇಟಿ ನೀಡಿ ಮೃತಳ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಹಾಗು ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಕಾರ್ಯಕರ್ತರಿಂದ ಮಂಗಳವಾರ ಸಂಗ್ರಹಿಸಿದ 1.10 ಲಕ್ಷ ರೂಪಾಯಿಗಳನ್ನು  ಸೌಮ್ಯಾ ಳ ಹೆತ್ತವರಿಗೆ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಮಹಿಳೆಗೆ ರಕ್ಷಣೆ ಇಲ್ಲದಂತಹ  ಸ್ಥಿತಿ ನಿರ್ಮಾಣವಾಗಿದ್ದು, […]

ವಿಧಾನಸಭೆ ಚುನಾವಣೆಯಿಂದ ಸೊರಕೆ ಔಟ್

Tuesday, February 12th, 2013
Vinaykumar Sorake

ಮಂಗಳೂರು : ಮಾಜಿ ಸಂಸದ ವಿನಯ ಕುಮಾರ್ ಸೊರಕೆ ಮತ್ತೊಮ್ಮೆ ಸಂಸದರಾಗುವ ಆಸೆ ಹೊತ್ತಿದ್ದಾರೆ. ವಿನಯ ಕುಮಾರ್ ಸೊರಕೆಯವರನ್ನು ವಿಧಾನ ಸಭೆಯ ಚುನಾವಣೆಯ ಅಭ್ಯರ್ಥಿಯಾಗಿಸುವ ಪ್ರಯತ್ನಗಳು ವಿಫಲವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಸಾಮರ್ಥ್ಯದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುವ ಉದ್ದೇಶದಿಂದ ಕಾಂಗ್ರೆಸ್ ನ ಹಿರಿಯ ನಾಯಕರು ವಿಧಾನಸಭೆಗೆ ವಿನಯ ಕುಮಾರ್ ಸೊರಕೆ ಹೆಸರನ್ನು ತೇಲಿ ಬಿಟ್ಟಿದ್ದರು. ಪುತ್ತೂರು ಮೂಲದವರಾದ ಸೊರಕೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯಲಿದ್ದಾರೆ ಎಂಬುದು ಒಂದು ಕಡೆ ಚರ್ಚೆಯಲ್ಲಿರುವಾಗಲೇ, ಸೊರಕೆಯ ಹೆಸರು ಬೆಳ್ತಂಗಡಿ […]

ಧಾರ್ಮಿಕ ಕಟ್ಟು ಪಾಡುಗಳನ್ನು ಬದಿಗೊತ್ತಿದ ಮಂಗಳೂರಿನ ಶ್ರೀ ಗೋಕರ್ಣನಾಥ ದೇವಸ್ಥಾನ

Wednesday, January 2nd, 2013
Padapooja at Kudroli temple

ಮಂಗಳೂರು : ಮಂಗಳೂರು ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ದಲಿತ ಮಹಿಳೆಯೊಬ್ಬರ ಪಾದ ಪೂಜೆ ಹಾಗೂ ಅವರಿಂದಲೇ ಚಂಡಿಕಾ ಹೋಮದ ಎಲ್ಲಾ ಕಾರ್ಯಗಳನ್ನು ಮಾಡಿಸುವ ಮೂಲಕ ಜಾತಿಯ ಕಟ್ಟುಪಾಡು, ಧಾರ್ಮಿಕ ಕ್ಷೇತ್ರದಲ್ಲಿ ಲಿಂಗ ತಾರತಮ್ಯದ ಕಟ್ಟುಪಾಡುಗಳನ್ನು ದೂರ ಮಾಡುವ ಪ್ರಯತ್ನ ನಡೆಯಿತು. ಈ ಮೂಲಕ ದೇವಸ್ಥಾನಗಳು ಜಾತಿ ಕೇಂದ್ರಿತವಾಗಿರಬಾರದು ಹಾಗೂ ಮಹಿಳೆ ಎಂದೂ ಈ ಸಮಾಜಕ್ಕೆ ನಿಷಿದ್ಧವಲ್ಲ ಎಂಬ ಸಂದೇಶವನ್ನು ಮಂಗಳವಾರ ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಸಮಾಜಕ್ಕೆ ನೀಡಿದರು. ಮಂಗಳವಾರ ಬೆಳಗ್ಗೆ […]

ಲೋಕಸಭೆ ಚುನಾವಣೆಯಲ್ಲಿ ಪೂಜಾರಿ ಎಂಟ್ರಿ !

Tuesday, December 11th, 2012
Janardhan Poojari & Vinaykumar Sorake

ಮಂಗಳೂರು :ಲೋಕಸಭಾ ಚುನಾವಣೆಯಲ್ಲಿ ನಾಲ್ಕು ಬಾರಿ ಸೋಲು ನಾಲ್ಕು ಬಾರಿ ಗೆಲುವು ದಾಖಲಿಸಿರುವ ಜನಾರ್ದನ ಪೂಜಾರಿ ಐದನೆಯ ದಾಖಲೆಗಾಗಿ ಕೊನೆಯ ಹೋರಾಟಕ್ಕೆ ಇಳಿದಿದ್ದಾರೆ. ತನ್ನನ್ನು ಬೆಂಬಲಿಸಿ ಎಂದು ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಕರೆ ಮಾಡುತ್ತಿದ್ದಾರೆ ಆಯ್ದ ಕೆಲವರೊಂದಿಗೆ ಆತ್ಮೀಯ ಸಭೆಯನ್ನು ನಡೆಸಿದ್ದಾರೆ. ಕಾರ್ಪೊರೇಟರ್ ಗಳಿಗೆ ತನ್ನನ್ನೇ ಬೆಂಬಲಿಸುವಂತೆ ಕೋರುವ ಆದೇಶವನ್ನೂ ನೀಡಿರುವುದು ಹೊಸ ಬೆಳವಣಿಗೆ. ತೀರಾ ಇತ್ತೀಚೆಗೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕಾರ್ಪೊರೇಟರ್ ಗಳ ಗುಪ್ತ ಸಭೆ ಕರೆದು ತನಗೆ ಬೆಂಬಲಿಸುವವರ ಪಡೆಯನ್ನು ಪೂಜಾರಿ ಖಾತ್ರಿ […]