Blog Archive

ಲೋಕಸಭಾ ಅಭ್ಯರ್ಥಿ ಆಯ್ಕೆ, ಕಾಂಗ್ರೆಸ್ ನ ಜನಾರ್ದನ ಪೂಜಾರಿ ಮತ್ತು ವಿನಯ್ ಕುಮಾರ್ ಸೊರಕೆ ನಡುವೆ ಪೈಪೋಟಿ

Friday, November 30th, 2012
Congress LS ticket

ಮಂಗಳೂರು :ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಗುರುವಾರ ಬೆಳಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ಜನಾರ್ದನ ಪೂಜಾರಿ ಮತ್ತು ವಿನಯ್ ಕುಮಾರ್ ಸೊರಕೆ ಈ ಇಬ್ಬರು ನಾಯಕರ ಬೆಂಬಲಿಗರ ಬಿರುಸಿನ ಚಟುವಟಿಕೆ ಕಂಡುಬಂದಿತು. ಈ ಬಿರುಸಿನ ಚಟುವಟಿಕೆಯಲ್ಲಿ ಎಐಸಿಸಿ ವೀಕ್ಷಕರಾಗಿ ಆಗಮಿಸಿದ್ದ ಕೇರಳದ ಮಾಜಿ ಶಾಸಕ ಮುರಳೀಧರನ್ ಜಿಲ್ಲಾ ಕಾಂಗ್ರೆಸ್ ನಾಯಕರುಗಳಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ರಮಾನಾಥ ರೈ, ಶಾಸಕರಾದ ಯು.ಟಿ. ಖಾದರ್, ವಸಂತ ಬಂಗೇರ, ಕೆಪಿಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಅಶ್ವಿನಿಕುಮಾರ್ ರೈ, ಮಾಜಿ […]

ಕುದ್ರೋಳಿ: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರಿಂದ ನೂತನ ಸಭಾಭವನದ ಉದ್ಘಾಟನೆ

Saturday, November 17th, 2012
ಕುದ್ರೋಳಿ: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರಿಂದ ನೂತನ ಸಭಾಭವನದ ಉದ್ಘಾಟನೆ

ಮಂಗಳೂರು :ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಜೀರ್ಣೋದ್ದಾರ ಕಾರ್ಯದ ರೂವಾರಿ ಹಾಗು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರು ಶ್ರೀ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಲಾದ ಜಯ ಸಿ. ಸುವರ್ಣ ಸಭಾಭವನ ಹಾಗೂ ರಾಘವೇಂದ್ರ ಕೆ. ಭೋಜನ ಶಾಲೆಯ ಉದ್ಘಾಟನೆಯನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಈ ಹಿಂದೆ ಮೊದಲ ಸಭಾ ಭವನ ನಿರ್ಮಾಣ ಕಾರ್ಯ ಪ್ರಾರಂಭಿಸಿದಾಗ ಹೆಚ್ಚಿನ ಆರ್ಥಿಕ ಸಮಸ್ಯೆ ಇದ್ದರೂ ಸಹ ಸಭಾ ಭವನದ ನಿರ್ಮಾಣ ಕಾರ್ಯ ಯಶಸ್ವಿಯಾಗಿ ನೆರವೇರಿತ್ತು. ಈಗ ಶ್ರೀ ಕ್ಷೇತ್ರದಲ್ಲಿ  ಒಟ್ಟು […]

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ

Wednesday, October 31st, 2012
Indira Gandhi Death Aniversary

ಮಂಗಳೂರು: ದಿವಂಗತ ಇಂದಿರಾಗಾಂದಿಯವರ ಪುಣ್ಯತಿಥಿಯ ಸ್ಮರಣಾರ್ಥ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಪುರಭವನದಲ್ಲಿ ಇಂದು ನಡೆಯಿತು. ಈ ಕಾರ್ಯಕ್ರಮಕ್ಕೆ ದಕ್ಷಿಣ ಭಾರತ ಸೇವಾದಳ ಉಸ್ತುವಾರಿ ವಿನಯ್ ಕುಮಾರ್ ಸೊರಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂಧಿರಾಗಾಂಧಿಯವರು ಮಹಾತ್ಮಗಾಂಧಿಯವರ ಬಡತನ ನಿರ್ಮೂಲನೆಯ ಕನಸನ್ನು ನನಸಾಗಿಸಲು ಸಾಕಷ್ಟು ಶ್ರಮಿಸಿದರು. ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟರು ಅವರ ಪುಣ್ಯತಿಥಿಯ ಈ ದಿನವನ್ನು ಜನ ಸೇವೆಗೆ ಮುಡಿಪಾಗಿಡಬೇಕು ಎಂದು ಕರೆನೀಡಿದರು. ಎಐಸಿಸಿ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ ನೀಡಿದ ಸೋನಿಯ ಗಾಂಧಿ

Friday, October 19th, 2012
Sonia Kudroli

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶತಮಾನೋತ್ಸವ ಸಮಾರಂಭ ಹಾಗೂ ಮಂಗಳೂರು ದಸರವನ್ನು ಎಐಸಿಸಿ ಅಧ್ಯಕ್ಷೆಯಾದ ಸೋನಿಯ ಗಾಂಧಿಯವರು ಗುರುವಾರ ಉಧ್ಘಾಟಿಸುವ ಮೂಲಕ ಮಂಗಳೂರು ದಸರಕ್ಕೆ ಅಧಿಕೃತ ಚಾಲನೆ ನೀಡಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಕುದ್ರೋಳಿ ಕ್ಷೇತ್ರದಲ್ಲಿ ಜನಾರ್ದನ ಪೂಜಾರಿ ಹಾಗೂ ಆಡಳಿತ ಮಂಡಳಿ ನೇತ್ರತ್ವದಲ್ಲಿ ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳಾದ ಜಾತ್ಯಾತೀತ ಪರಿಕಲ್ಪನೆ, ಸಾಮಾಜಿಕ ಪರಿವರ್ತನೆ ಕಾರ್ಯಗಳು ಇನ್ನಷ್ಟು ಬಲಿಷ್ಠವಾಗಿ ಮುಂದುವರಿಯಲಿ ಎಂದು ಹಾರೈಸಿದರು. 19ನೇ ಶತಮಾನದಲ್ಲಿ ನಾರಾಯಣ ಗುರುಗಳು ಪ್ರವರ್ತಿಸಿದ ಮಹಾನ್ ಸಿದ್ಧಾಂತಗಳಾದ […]

ಡಾ. ಬಿ.ಮಾಧವ ಭಂಡಾಯವರಿಗೆ ಗಣ್ಯರಿಂದ ಅಂತಿಮ ನಮನ

Friday, July 20th, 2012
Madava Bandary

ಮಂಗಳೂರು : ಮಂಗಳವಾರ ರಾತ್ರಿ ನಿಧನರಾದ ಆರೆಸ್ಸೆಸ್ ಮಾಜಿ ವಿಭಾಗ ಸಂಘ ಚಾಲಕ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಮಾಧವ ಭಂಡಾರಿ ಯವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಗರದ ಬೋಳೂರು ರುದ್ರಭೂಮಿಯಲ್ಲಿನೆರವೇರಿತು. ನಗರದ ಸಂಘನಿಕೇತನದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು  ಸಮಾಜ ಬಾಂಧವರು ಪಡೆದು ಗೌರವ ಸಲ್ಲಿಸಿದರು. ಬಿ. ಜನಾರ್ದನ ಪೂಜಾರಿ  ಮಾಧವ ಭಂಡಾರಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಈ ಸಂದರ್ಭದಲ್ಲಿ ಆರೆಸ್ಸೆಸ್ ಹಿರಿಯ ನಾಯಕ ದಾ.ಮ. ರವೀಂದ್ರ, ಆರೆಸ್ಸೆಸ್ ನಲ್ಲಿ […]

ಕಂಕನಾಡಿ ಕೋಟಿ ಚೆನ್ನಯ ಗರಡಿ ಕ್ಷೇತ್ರದಲ್ಲಿ ದೇಯಿ ಬೈದೆತಿ ಬಿಂಬ ಪ್ರತಿಷ್ಠಾಪನೆ

Tuesday, January 3rd, 2012
kankanady garadi

ಮಂಗಳೂರು : ನಗರದ ಕಂಕನಾಡಿ  ಕೋಟಿ ಚೆನ್ನಯ ಗರಡಿ ಕ್ಷೇತ್ರದಲ್ಲಿ ಸೋಮವಾರ  ದೇಯಿ ಬೈದೆತಿ ಬಿಂಬ ಪ್ರತಿಷ್ಠಾಪನೆ ಹಾಗೂ ವಿವಿಧ ಸೇವೆಗಳ ಸಮರ್ಪಣಾ ಸಭಾ ಕಾರ್ಯಕ್ರಮ  ನಡೆಯಿತು. ಬಿ. ಜನಾರ್ದನ ಪೂಜಾರಿ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ

ಮಂಗಳೂರು ದಸರಾಕ್ಕೆ ಸಚಿವ ವಯಲಾರ್‌ ರವಿ ಅವರಿಂದ ವಿದ್ಯುಕ್ತ ಚಾಲನೆ

Monday, October 3rd, 2011
Vayalar Ravi

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರಖ್ಯಾತ ಮಂಗಳೂರು ದಸರಾಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಹಾಗೂ ಸಾಗರೋತ್ತರ ಭಾರತೀಯರ ವ್ಯವಹಾರಗಳ ಸಚಿವ ವಯಲಾರ್‌ ರವಿ ಅವರು ರವಿವಾರ ಚಾಲನೆ ನೀಡಿದರು. ಬ್ರಹ್ಮಶ್ರೀ ನಾರಾಯಣ ಗುರುಗಳು ಸಾರಿ ಸಾರಿರುವ ಸಂದೇಶ ವಿಶ್ವಮಾನ್ಯವಾಗಿದೆ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬುದಾಗಿ ಏಕತೆಯ ಸಂದೇಶ ನಮ್ಮೆಲ್ಲರ ಶಕ್ತಿ. ನಾನು ಬಾಲ್ಯದಿಂದಲೂಅವರ ಸಂದೇಶ ನನ್ನ ಚಿಂತನೆಗಳನ್ನು ಕೇಳುತ್ತಿದ್ದೆ. ಚಿಕ್ಕಂದಿನಲ್ಲಿ ವರ್ಕಳ ಶಿವಗಿರಿ ಮಠಕ್ಕೆ ಹೋಗುತ್ತಿದ್ದ ಪ್ರವಚನಗಳು ಇಂದಿಗೂ ನನ್ನ ಮೇಲೆ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬೆಳ್ಳಿರಥ ಮಂದಿರ ಉದ್ಘಾಟನೆ

Saturday, October 1st, 2011
Kudroli-chriot

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಲಾದ ಬೆಳ್ಳಿರಥ ಮಂದಿರವನ್ನು ಶುಕ್ರವಾರ ಸಚಿವ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಶತಮಾನದ ಹಿಂದೆ ಸ್ಥಾಪಿಸಿದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿಯವರ ಆಶಯದಂತೆ ಕ್ಷೇತ್ರವು ಸಮಾಜದ ಸರ್ವರಿಗೂ ಆತ್ಮವಿಶ್ವಾಸ ನೀಡುವ ಶ್ರದ್ಧಾಕೇಂದ್ರವಾಗಿದೆ ಎಂದರು. ದೇಶವಿದೇಶಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಕ್ಷೇತ್ರವು ಧಾರ್ಮಿಕ ಆಚರಣೆಗಳ ಜತೆಗೆ ಸಮಾಜದ ಅಗತ್ಯಗಳಿಗೂ ಸ್ಪಂದಿಸುತ್ತಿದೆ. ಅದರ ಜೊತೆಗೆ ಸಾಮಾಜಿಕ ಬದಲಾವಣೆಗೆ ಕಾರಣವಾಗಿದೆ ಎಂದು ಪೂಜಾರಿ ವಿವರಿಸಿದರು. ಜಯ ಸಿ. ಸುವರ್ಣ, ಕೆ.ಪಿ. […]

ಸೋನಿಯಾ ಗಾಂಧಿ ಗುಣಮುಖರಾಗಲು ಪೂಜಾರಿ ನೇತೃತ್ವದಲ್ಲಿ ಉರುಳು ಸೇವೆ

Sunday, August 7th, 2011
Janardhana Poojary/ಪೂಜಾರಿ ನೇತೃತ್ವದಲ್ಲಿ ಉರುಳು ಸೇವೆ

ಮಂಗಳೂರು : ಸೋನಿಯಾ ಗಾಂಧಿ ಅವರು ಶೀಘ್ರ ಗುಣಮುಖರಾಗಿ ಭಾರತಕ್ಕೆ ಮರಳಿ ಬರಲಿ ಎಂದು ಪ್ರಾರ್ಥಿಸಿ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶನಿವಾರ ವಿಶೇಷ ಪೂಜೆ ಹಾಗೂ ಉರುಳು ಸೇವೆ ಜರಗಿತು. ಸೋನಿಯಾ ಗಾಂಧಿ ಅವರು ಶೀಘ್ರ ಗುಣಮುಖರಾಗಿ ಭಾರತಕ್ಕೆ ಮರಳಿ ಬರಲಿ ಎಂದು ಪ್ರಾರ್ಥಿಸಿ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ […]