Blog Archive

ಕೈದಿಗಳ ನಿಯಮಿತ ಆರೋಗ್ಯ ತಪಾಸಣೆ: ಜಿಲ್ಲಾಧಿಕಾರಿ ಸೂಚನೆ

Tuesday, March 24th, 2015
dc Jail

ಮಂಗಳೂರು : ಜೈಲಿನಲ್ಲಿರುವ ಖೈದಿಗಳ ಆರೋಗ್ಯವನ್ನು ವೈದ್ಯಕೀಯ ಕಾಲೇಜುಗಳ ಸಹಕಾರದೊಂದಿಗೆ ನಿಯಮಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾ ಕಾರಾಗೃಹದಲ್ಲಿ ಸಂದರ್ಶಕ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದಲ್ಲದೆ, ದಂತ ಕಾಲೇಜುಗಳ ನೆರವಿನೊಂದಿಗೆ ಕೈದಿಗಳ ದಂತ ಪರೀಕ್ಷೆಯನ್ನು ನಡೆಸಲು ಅವರು ತಿಳಿಸಿದರು. ಮೊದಲ ಬಾರಿಗೆ ಸಣ್ಣ ಪುಟ್ಟ ಅಪರಾಧಗಳನ್ನು ಎಸಗಿ ಬಂಧನಕ್ಕೊಳಗಾಗಿ ಜೈಲಿಗೆ ಬರುವವರನ್ನು ಮತ್ತು ವಿದ್ಯಾರ್ಥಿ ಆರೋಪಿಗಳನ್ನು ಜೈಲಿನಲ್ಲಿ ಕುಖ್ಯಾತ ಆರೋಪಿಗಳಿರುವ ಸೆಲ್‌ನಲ್ಲಿರಿಸದೆ, ಅವರನ್ನು ಪ್ರತ್ಯೇಕ ಸೆಲ್‌ನಲ್ಲಿಡಬೇಕು. ಅಂತರ್ ಜಿಲ್ಲಾ […]

ನಗರೋತ್ಥಾನ ಕಾಮಗಾರಿ: ತ್ವರಿತಗೊಳಿಸಲು ಸಚಿವರ ಸೂಚನೆ

Tuesday, March 10th, 2015
dc meeting

ಮಂಗಳೂರು : ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಕಾರ್ಯಕ್ರಮ ನಗರೋತ್ಥಾನ ಯೋಜನೆ-2ರಡಿ ಜಿಲ್ಲೆಯ ಎಲ್ಲಾ ಪಟ್ಟಣ ಪ್ರದೇಶಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅರಣ್ಯ ಮತತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರೋತ್ಥಾನ ಯೋಜನೆಯ ಪ್ರಗತಿ ಪರಿಶೀಲಿಸಿ ಮಾತನಾಡುತ್ತಿದ್ದರು. ಯೋಜನೆಯಡಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಜಿಲ್ಲೆಯಲ್ಲಿ ಕಾಮಗಾರಿಯ ನಿಗದಿತ ಕಾಲಾವಧಿ ಮುಗಿದಿದ್ದರೂ, ಹಲವು ಕಾಮಗಾರಿಗಳು ಇನ್ನೂ ಪ್ರಾರಂಭಗೊಂಡಿಲ್ಲ ಎಂದು ಅವರು […]

ವಿಳಂಬಧೋರಣೆ ಭ್ರಷ್ಟಾಚಾರಕ್ಕೆ ಸಮಾನ: ಜಿಲ್ಲಾಧಿಕಾರಿ

Monday, October 27th, 2014
AB Ibrahim

ಮಂಗಳೂರು : ಸಾರ್ವಜನಿಕ ಕರ್ತವ್ಯ ನಿರ್ವಹಣೆಯಲ್ಲಿ ನಿಧಾನಗತಿ ಅನುಸರಿಸುವುದು ಮತ್ತು ಸೇವೆಯನ್ನು ಒದಗಿಸುವುದರಲ್ಲಿ ವಿಳಂಭವಾಗಿಸುವುದು ಭ್ರಷ್ಟಾಚಾರಕ್ಕೆ ಸಮಾನವಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಹೇಳಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಭ್ರಾಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅಕ್ಟೋಬರ್ 27ರಿಂದ ನವೆಂಬರ್ 1ರವರೆಗೆ ನಡೆಯಲಿರುವ ಜಾಗೃತಿ ಅರಿವು ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದರು. ದಕ್ಷ ಆಡಳಿತ ಮತ್ತು ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಭ್ರಷ್ಟಾಚಾರವು ದೊಡ್ಡ ಪಿಡುಗಾಗಿದೆ. ಆದರೆ, ಭ್ರಷ್ಟಾಚಾರದೊಂದಿಗೆ ಹೊಂದಾಣಿಕೆಯು ಉತ್ತಮ ಸಮಾಜ ನಿರ್ಮಾಣಕ್ಕೆ […]

ಗ್ಯಾಸ್ ಸಿಲಿಂಡರ್ ನ ತೂಕಕ್ಕೆ ಕ್ರಮ: ಬಳಕೆದಾರರ ವೇದಿಕೆ ಸ್ವಾಗತ

Tuesday, July 15th, 2014
Gas

ಮಂಗಳೂರು: ಪ್ರತೀ ಗ್ರಾಹಕರ ಎದುರೇ ಗ್ಯಾಸ್ ಸಿಲಿಂಡರ್ ತೂಕ ಮಾಡಿ ಕೊಡುವ ಮೂಲಕ ಸುಪ್ರೀಮ್ ಕೋರ್ಟ್ ನ ಆದೇಶವನ್ನು ಪಾಲಿಸಬೇಕು ಎಂದಿರುವ ದ.ಕ.ಜಿಲ್ಲಾಧಿಕಾರಿಯವರ ಹೇಳಿಕೆಯನ್ನು ಗ್ಯಾಸ್ ಮತ್ತು ಬಳಕೆದಾರರ ವೇದಿಕೆ ಸ್ವಾಗತಿಸಿದೆ. ಇದರಿಂದ ಗ್ರಾಹಕರಿಗೆ ತಮಗೆ ಸರಿಯಾಗಿ ತೂಗಿ ಕೊಡಲಾಗುತ್ತಿದೆ ಎಂಬ ವಿಶ್ವಾಸ ಮೂಡುವುದಲ್ಲದೆ ಗ್ಯಾಸ್ ಕಡಿಮೆ ಮಾಡಿ ಕೊಡಲಾಗುತ್ತದೆ ಎಂಬ ದೂರುಗಳಿಗೆ ಕಡಿವಾಣ ಹಾಕಬಹುದಾಗಿದೆ. ಗ್ಯಾಸ್ ಮತ್ತು ಬಳಕೆದಾರರ ವೇದಿಕೆ ಈ ಬೇಡಿಕೆಯನ್ನು ಈ ಹಿಂದೆ ಹಲವು ಬಾರಿ ಅಧಿಕಾರಿಗಳ ಮುಂದೆ ಪ್ರಸ್ತಾಪಿಸಿದೆಯಾದರೂ ಅದರ ಜಾರಿಗೆ […]

ಬಲ್ಮಠ-ಬೆಂದೂರ್ವೆಲ್ ರಸ್ತೆಯ ಏಕಮುಖ ಸಂಚಾರ ಅವ್ಯವಸ್ಥೆ ಜಿಲ್ಲಾಧಿಕಾರಿಗೆ ದೂರು

Friday, July 11th, 2014
Bendoor Road

ಮಂಗಳೂರು: ಮಂಗಳೂರಿನ ಸಂಚಾರಿ ಪೊಲೀಸರು ನಗರದ ಬೆಂದೂರುವೆಲ್-ಬಲ್ಮಠ ರಸ್ತೆಯನ್ನು ಏಕಮುಖ ಸಂಚಾರ ವ್ಯವಸ್ಥೆಗೊಳಿಸಿರುವುದರಿಂದ ಸ್ಥಳೀಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಆಸ್ಪತ್ರೆಗೆ ಬರುವ ರೋಗಿಗಳಿಗೆ, ಪರಿಸರದಲ್ಲಿ ವ್ಯಾಪಾರ ವಹಿವಾಟು ನಡೆಸುವ ಉದ್ಯಮಿಗಳಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಬಹಳಷ್ಟು ತೊಂದರೆ ಆಗುತ್ತಿದೆ ಎಂದು ಆರೋಪಿಸಿ ಹಾಗೂ ತಕ್ಷಣ ಈ ರಸ್ತೆಯ ಅವ್ಯವಸ್ಥೆಯನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕೆಂದು ಆಗ್ರಹಿಸಿ ಬೆಂದೂರ್ವೆಲ್-ಬಲ್ಮಠ-ಕಂಕನಾಡಿ ಪರಿಸರದ ನಿವಾಸಿಗಳು ಹಾಗೂ ಸ್ಥಳೀಯ ವ್ಯಾಪಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು. ಸದ್ರಿ ರಸ್ತೆಯನ್ನು ಏಕಮುಖ ಸಂಚಾರಿ ರಸ್ತೆಯನ್ನಾಗಿ […]

ಬೆಲೆ ವಿಮೆ ವ್ಯಾಪ್ತಿಗೆ ಅಡಿಕೆ: ಪ್ರಸ್ತಾವನೆಗೆ ಡಿಸಿ ಸೂಚನೆ

Friday, May 30th, 2014
DC Mangalore

ಮಂಗಳೂರು : ಅಡಿಕೆ ಬೆಲೆಯನ್ನು ತೋಟಗಾರಿಕೆ ಇಲಾಖೆಯ ಮೂಲಕ ಬೆಳೆ ವಿಮೆ ವ್ಯಾಪ್ತಿಗೆ ತರುವ ಸಂಬಂಧ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ರಾಷ್ಟ್ರೀಯ ಕೃಷಿ ವಿಮಾ ಯೋಜನೆ ಮುಂಗಾರು 2014ರ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡುತ್ತಿದ್ದರು. ಅಡಿಕೆ ಅಲ್ಲದೆ, ಕಾಳುಮೆಣಸು, ಕೋಕಾ, ಅನಾನಸು, ಗೇರು ಕೃಷಿಯನ್ನು ಬೆಳೆ ವಿಮಾ ವ್ಯಾಪ್ತಿಗೆ ತರಲು ಪ್ರಸ್ತಾವನೆ ಸಿದ್ಧಪಡಿಸುವಂತೆ ಅವರು ತೋಟಗಾರಿಕಾ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ದಕ್ಷಿಣ […]

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರ ಚುನಾವಣೆಯ ಪ್ರಕ್ರಿಯೆಗಳ ಗೊಂದಲಗಳನ್ನು ಸರಿಪಡಿಸಲು ಜಿಲ್ಲಾಧಿಕಾರಿಗೆ ಮನವಿ

Wednesday, April 30th, 2014
bjp memorandum

ಮಂಗಳೂರು : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರ ಚುನಾವಣೆಯ ಪ್ರಕ್ರಿಯೆಗಳ ಗೊಂದಲಗಳನ್ನು ಕೂಡಲೇ ಸರಿಪಡಿಸಿ ಸೂಕ್ತ ಕ್ರಮ ಕೈಗೊಳ್ಳುಬೇಕೆಂದು ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಹಿಂದಿನ ಸಹಕಾರಿ ಸಂಸ್ಥೆಗಳಿಗೆ ಚುನಾವಣೆ ನಡೆಯುವ ಸಂದರ್ಭದಲ್ಲಿ ಮಹಾಸಭೆಯ ನೋಟೀಸಿನ ಜೊತೆಯಲ್ಲಿಯೆ ಸ್ಪರ್ಧಿಸುವ ಅಭ್ಯರ್ಥಿಗಳ ಅರ್ಜಿ ಯ ನಮೂನೆಯನ್ನು ಕೂಡಾ ಕಳುಹಿಸಲಾಗುತ್ತಿತ್ತು. ಇದೀಗ ದಿನಾಂಕ 25.5.2014 ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಚುನಾವಣೆಯು ನಡೆಯಲಿದ್ದು, ಸಂಘದ ಪ್ರತಿನಿಧಿ ನಿಯೋಜಿಸುವ ಅರ್ಜಿ […]

ನ್ಯಾಯಬೆಲೆ ಅಂಗಡಿಗಳ ತಪಾಸಣೆಗೆ ಡಿಸಿ ಸೂಚನೆ

Wednesday, April 30th, 2014
Ibrahim

ಮಂಗಳೂರು : ಜಿಲ್ಲೆಯಲ್ಲಿರುವ ನ್ಯಾಯಬೆಲೆ ಅಂಗಡಿಗಳ ತಪಾಸಣೆಯನ್ನು ಆಹಾರ ಇಲಾಖೆಯು ಆಗಿಂದಾಗ್ಗೆ ನಿಗದಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ. ಅವರು ಬುಧವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು. ನ್ಯಾಯಬೆಲೆ ಅಂಗಡಿಗಳ ತಪಾಸಣೆ ಕುಂಠಿತಗೊಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನ್ಯಾಯಬೆಲೆ ಅಂಗಡಿಗಳ ತೂಕದ ತಕ್ಕಡಿಗಳು ಸಮರ್ಪಕವಾಗಿ ಕಾರ್ಯವಾಗುತ್ತಿರುವುದನ್ನು ತೂಕ ಮತ್ತು ಅಳತೆ ಇಲಾಖೆಯು ನೀಡಿರುವ ಪ್ರಮಾಣಪತ್ರಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಜಿಲ್ಲೆಯಲ್ಲಿ 500 ನ್ಯಾಯಬೆಲೆ ಅಂಗಡಿಗಳು ಅಸ್ತಿತ್ವದಲ್ಲಿದೆ. ನೂತನ ನ್ಯಾಯಬೆಲೆ […]

ಡಿಸಿ ಕಚೇರಿ ಎದುರಲ್ಲೇ ವಾಮಾಚಾರ!

Wednesday, February 5th, 2014
vomachara

ಮೈಸೂರು: ನಗರ  ಪ್ರದೇಶವಾದ  ಮೈಸೂರುನಲ್ಲಿ  ಇತ್ತೀಚಿನ ದಿನಗಳಲ್ಲಿ ವಾಮಾಚಾರ ಹೆಚ್ಚಾಗಿದೆ. ವಿದ್ಯಾವಂತರು ಸಹ ವಾಮಾಚಾರದಂಥ ಮೂಢನಂಬಿಕೆಯನ್ನು ಅನುಸರಿಸುತ್ತಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಎದುರು ವಾಮಾಚಾರ ಮಾಡಿಸಿರುವುದು ಮಂಗಳವಾರ ಪತ್ತೆಯಾಗಿದೆ. ಸೋಮವಾರ ರಾತ್ರಿ ಯಾರೋ ವಾಮಾಚಾರ ಮಾಡಿಸಿ, ಜಿಲ್ಲಾಧಿಕಾರಿ ಕಚೇರಿಯಿಂದ ಮಹಾರಾಣಿ ಕಾಲೇಜಿನತ್ತ ಹೋಗುವ ರಸ್ತೆಯ ಮಧ್ಯಭಾಗದಲ್ಲಿ ಇರಿಸಿದ್ದಾರೆ.ಬಟ್ಟೆಯೊಂದರಲ್ಲಿ ಅದೇನನ್ನೋ ಸುತ್ತಿಟ್ಟಿದ್ದಾರೆ. ಅದಕ್ಕೆ ಅರಿಶಿನನ, ಕುಂಕುಮ ಹಚ್ಚಿದ್ದಾರೆ. ಅಲ್ಲದೆ, ತೆಂಗಿನ ಕಾಯೊಂದನ್ನು ಒಡೆಯಲಾಗಿದೆ. ಆ ಮಾರ್ಗವಾಗಿ ಸಂಚರಿಸುವವರು ವಾಮಾಚಾರವನ್ನು ನೋಡಿ ಆತಂಕಗೊಳ್ಳುತ್ತಿದ್ದಾರೆ. ಮಹಾರಾಣಿ ಮಹಿಳಾ […]

ಇ.ಎಸ್.ಐ. ಆಸ್ಪತ್ರೆಗೆ ಸಂಭಂಧಟ್ಟ ಬೇಡಿಕೆಗಳನ್ನು ಈಡೇರಿಸುವಂತೆ ಉಪವಾಸ ಸತ್ಯಾಗ್ರಹ

Tuesday, August 20th, 2013
Indefinite hunger strike begins demanding end to ESI Hospital problems

ಮಂಗಳೂರು :  ಅಖಿಲ ಭಾರತ ಕಾರ್ಮಿಕ ಸಂಘದ ರಾಜ್ಯ ಘಟಕ ಪ್ರಧಾನ ಕಾರ್‍ಯದರ್ಶಿ ಸುದತ್ತ ಜೈನ್ ಶಿರ್ತಾಡಿ ಅವರ ನೇತೃತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲ ವ್ಯಾಪ್ತಿಗೆ ಇ.ಎಸ್.ಐ.ಸಿ. ಸೌಲಭ್ಯ  ಒದಗಿಸುವಂತೆ ಅಗ್ರಹಿಸಿ ಹಾಗೂ ಕದ್ರಿಯ ಇ.ಎಸ್.ಐ. ಆಸ್ಪತ್ರೆಯನ್ನು ಸಂಪೂರ್ಣ ಕೇಂದ್ರ ಸರಕಾರ ವಹಿಸಿಕೊಳ್ಳುವಂತೆ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಿಂದ ಪಾದಯಾತ್ರೆಯಲ್ಲಿ ಸಾಗಿ ಕದ್ರಿ ಶಿವಭಾಗ್‌ನ ಇ.ಎಸ್.ಐ. ಆಸ್ಪತ್ರೆ ಎದುರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು. ಉಪವಾಸ ಸತ್ಯಾಗ್ರಹವನ್ನುದ್ದೇಶಿಸಿ ಮಾತನಾಡಿ ಜಿಲ್ಲೆಯಲ್ಲಿ ಇಂದು ಅನೇಕರು ಅಸುರಕ್ಷಿತ ಸ್ಥಳಗಳಲ್ಲಿ ಕೆಲಸ […]