Blog Archive

ನಗರದ ವುಡ್‌ಲ್ಯಾಂಡ್ಸ್ ನಲ್ಲಿ ಜೂಟ್ ಮೇಳ ಉದ್ಘಾಟನೆ

Thursday, August 1st, 2013
Jute fair

ಮಂಗಳೂರು : ನಗರದ ವುಡ್‌ಲ್ಯಾಂಡ್ಸ್ ನಲ್ಲಿ ಜುಲೈ 31 ರಿಂದ 5 ದಿನಗಳ ಕಾಲ ನಡೆಯಲಿರುವ  ಜೂಟ್ ಮೇಳವನ್ನು  ಜಿಲ್ಲಾಧಿಕಾರಿ ಎನ್.ಪ್ರಕಾಶ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ಲಾಸ್ಟಿಕ್ ಬಳಕೆಯ ಪರ್ಯಾಯ ಉತ್ಪನ್ನವಾಗಿ ಜೂಟ್‌ನಿಂದ ತಯಾರಾದ ವಸ್ತುಗಳನ್ನು ಬಳಸಬಹುದು. ಜೂಟ್‌ ಪರಿಸರ ಸ್ನೇಹಿ ಉತ್ಪನ್ನವಾಗಿದ್ದು ಪ್ಲಾಸ್ಟಿಕ್ ವಸ್ತುಗಳಿಗೆ ಬದಲಾಗಿ ಅವುಗಳನ್ನು ಬಳಸಬಹುದು ಎಂದು ಹೇಳಿದರು. ಮೇಳದಲ್ಲಿ ಗ್ರಾಹಕರ ಮೆಚ್ಚುಗೆಯ ವಸ್ತುಗಳಾದ ಅಲಂಕಾರಿಕ ಸಾಮಾಗ್ರಿಗಳು, ಮನೆಯ ಸಾಮಾಗ್ರಿಗಳು, ಹಾಗೂ ಇನ್ನಿತ್ತರ ಉತ್ಪನ್ನಗಳನ್ನು ಮಾರಾಟಮಾಡಲಾಗುತ್ತಿದೆ, ಜೂಟ್ ಉತ್ಪನ್ನಗಳು ಪರಿಸರ ನೈರ್ಮಲ್ಯಕ್ಕೆ ಸಹಕಾರಿ ಎಂದು ತಿಳಿಸಿದರು. ನ್ಯಾಷನಲ್ […]

ಡೆಂಗ್ಯೂ ಪೀಡಿತರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ.

Thursday, June 13th, 2013
ಡೆಂಗ್ಯೂ ಪೀಡಿತರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ.

ಮಂಗಳೂರು : ಕೆಎಂಸಿ ಅತ್ತಾವರ ಆಸ್ಪತ್ರೆಯಲ್ಲಿ ಡೆಂಗ್ಯೂ ಪೀಡಿತರನ್ನು ಇಂದು ಜಿಲ್ಲಾಧಿಕಾರಿ ಶ್ರೀ ಎನ್. ಪ್ರಕಾಶ್ ಅವರು ಭೇಟಿ ಮಾಡಿ, ಸಾಂತ್ವಾನ ಹೇಳಿದರು. ಜ್ವರ ಪೀಡಿತರ ಬಗ್ಗೆ ವಿಶೇಷ ಮುತುವರ್ಜಿವಹಿಸಿ ಶುಶ್ರೂಸೆ ನೀಡಿ ಎಂದು ಜಿಲ್ಲಾಧಿಕಾರಿಗಳು ವೈದ್ಯರಿಗೆ ಸೂಚನೆ ನೀಡಿದರು. ನಗರದ ಅತ್ತಾವರದಲ್ಲಿ ಒಟ್ಟು ಏಳು ಜನರು  ಡೆಂಗ್ಯೂ ಪೀಡಿತರಾಗಿದ್ದಾರೆ ಎಂಬ ಮಾಹಿತಿಯ ಹಿನ್ನಲೆಯಲ್ಲಿ ಅವರನ್ನು ವೀಕ್ಷಿಸಲು ತೆರಳಿದ ಜಿಲ್ಲಾಧಿಕಾರಿ ರೋಗ ಪೀಡಿತರಿಗೆ ನೀಡಿರುವ  ಚಿಕಿತ್ಸೆಯ ಬಗ್ಗೆ ಪರಿಶೀಲನೆ ನಡೆಸಿದರು.  ಇಬ್ಬರನ್ನು ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು, ಪುತ್ತೂರಿನ […]

ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನಿಷೇಧ ಮೂರ್ಖತನದ ನಿರ್ಧಾರ

Saturday, November 24th, 2012
Plastic Bag

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನಿಷೇಧ ಎನ್ನುವ ಬೋರ್ಡ್ ತಗಲಿಸಿ ಬಹಳ ದಿನಗಳೇ ಸರಿದು ಹೋದವು.. ಆದರೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಗೊತ್ತಿಲ್ಲ. ಕರ್ನಾಟಕದ ಮಟ್ಟಿಗೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ತಯಾರಿಸುವ ಅತಿ ಹೆಚ್ಚು ಕಂಪೆನಿಗಳು ಇರುವುದು ಮಂಗಳೂರಿನಲ್ಲಿ. ಇದಕ್ಕಾಗಿ ಉದ್ಯಮಿಗಳು ಕೋಟಿಗಳ ರೂಪದಲ್ಲಿ ಬ್ಯಾಂಕ್ ಸಾಲ ಮಾಡಿ ಬಂಡವಾಳ ಹೂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅಂದಾಜು 50ರಷ್ಟು ಪ್ಲಾಸ್ಟಿಕ್ ತಯಾರಿಕೆ ಘಟಕಗಳು ಮತ್ತು ವರ್ತಕರು ಇದ್ದಾರೆ. ಸುಮಾರು ಐದು ಸಾವಿರ ಮಂದಿ ನೇರವಾಗಿ […]

ರಾಷ್ಟ್ರೀಯ ಹೆದ್ದಾರಿ : ಮಂದಗತಿಯ ಕಾಮಗಾರಿ, ಅಲ್ಲಲ್ಲಿ ಟೋಲ್‌ಗೇಟ್‌ – ಸಭೆ

Sunday, November 27th, 2011
DC Chennappa Gowda

ಮಂಗಳೂರು: ಸುರತ್ಕಲ್‌- ಬಿ.ಸಿ. ರೋಡ್‌ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಿರ್ವಹಣೆಯ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ  ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಹೆದ್ದಾರಿ ಚತುಷ್ಪಥ ಕಾಮಗಾರಿಯ ಬಗ್ಗೆ ನಾಗರಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಒಂದು ಟೋಲ್‌ಗೇಟ್‌ನಿಂದ ಕನಿಷ್ಠ 60 ಕಿ. ಮೀ. ದೂರದಲ್ಲಿ ಇನ್ನೊಂದು ಟೋಲ್‌ಗೇಟ್‌ ನಿರ್ಮಿಸಬಹುದು. ಅಲ್ಲದೆ ಮಹಾನಗರ ಪಾಲಿಕೆಯ ಗಡಿಯಿಂದ 10 ಕಿ. ಮೀ. ಅನಂತರ ಇನ್ನೊಂದು ಟೋಲ್‌ಗೇಟ್‌ ನಿರ್ಮಿಸಬಹುದು ಎನ್ನುವ ನಿಯಮವಿದೆ. ಬ್ರಹ್ಮರಕೂಟ್ಲುವಿನಲ್ಲಿ ರಾ. ಹೆದ್ದಾರಿಯಲ್ಲಿ ಟೋಲ್‌ಗೇಟ್‌ ನಿರ್ಮಿಸಲಾಗಿದ್ದು, ಬೈಕಂಪಾಡಿ ಪರಿಸರದಲ್ಲಿ ಇನ್ನೊಂದು […]

ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಪೊಲೀಸ್‌ ಹುತಾತ್ಮರ ದಿನಾಚರಣೆ

Saturday, October 22nd, 2011
Chennappa-Gowda

ಮಂಗಳೂರು: ಮಂಗಳೂರು ಪೊಲೀಸ್‌ ಕಮಿಷನರೇಟ್‌ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಪೊಲೀಸ್‌ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಉಪಸ್ಥಿತರಿದ್ದ ಅತಿಥಿಗಳು ಮತ್ತು ಕನ್ನಡ ಜಿಲ್ಲಾಧಿಕಾರಿ ಡಾ| ಎನ್‌.ಎಸ್‌. ಚನ್ನಪ್ಪ ಗೌಡ, ಪಶ್ಚಿಮ ವಲಯದ ಐಜಿಪಿ ಆಲೋಕ್‌ ಮೋಹನ್‌ ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳು ಹುತಾತ್ಮ ಪೊಲೀಸರಿಗೆ ಹೂಗುಚ್ಚ ಅರ್ಪಿಸಿ ಗೌರವ ಸಲ್ಲಿಸಿದರು. ಎರಡು ನಿಮಿಷ ಮೌನಾಚರಣೆಯ ಮೂಲಕ ಸಮಾರಂಭದಲ್ಲಿ ಭಾಗವಹಿಸಿದ್ದ ಎಲ್ಲರೂ ಹುತಾತ್ಮ ಪೊಲೀಸರಿಗೆ ಶ್ರದ್ಧಾಂಜಲಿ […]

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಸೇವಾ ಕೌಂಟರ್‌ ಪುನರಾರಂಭ

Monday, October 3rd, 2011
Auto Pre Paid counter

ಮಂಗಳೂರು: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ ಮತ್ತು ಬಿಜೈ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣಗಳಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಕೌಂಟರ್‌ಗಳನ್ನು ರವಿವಾರ ಆರಂಭಿಸಲಾಯಿತು. ದ.ಕ. ಜಿಲ್ಲಾಡಳಿತ, ಸಾರಿಗೆ ಇಲಾಖೆ ಮತ್ತು ಪೊಲೀಸ್‌ ಇಲಾಖೆಯ ಸಹಕಾರದಲ್ಲಿ ಎಸೋಸಿಯೇಶನ್‌ ಆಫ್‌ ಟ್ರಾವಲ್‌ ಏಜಂಟ್ಸ್‌ ಈ ಕೌಂಟರ್‌ಗಳನ್ನು ನಿರ್ವಹಣೆ ಮಾಡಲಿದೆ. ರೈಲು ನಿಲ್ದಾಣದಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಕೌಂಟರ್‌ನ್ನು ಜಿಲ್ಲಾಧಿಕಾರಿ ಡಾ| ಎನ್‌. ಎಸ್‌. ಚನ್ನಪ್ಪ ಗೌಡ ಅವರು ಉದ್ಘಾಟಿಸಿದರು. ಬಳಿಕ ಮಾತನಾದಿದ ಅವರು ಪ್ರೀಪೇಯ್ಡ ಕೌಂಟರ್‌ನಲ್ಲಿ ಕೌಂಟರ್‌ ನಿರ್ವಹಣೆಗಾಗಿ 1 ರೂ.ವನ್ನು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಆಡಳಿತ ಅನುಭವ ತಂದಿದೆ- ರೋಹಿಣಿ ಸಿಂಧೂರಿ

Wednesday, April 27th, 2011
ರೋಹಿಣಿ ಸಿಂಧೂರಿ

ಮಂಗಳೂರು : ಭಾರತ ಆಡಳಿತ ಸೇವೆ ಖಾಯಂ ಪೂರ್ವ ಅವಧಿ (ಪ್ರೊಬೇಷನರಿ)ಸೇವೆಗೆ ದಕ್ಷಿಣಕನ್ನಡ ಜಿಲ್ಲೆಗೆ ನಿಯೋಜಿಸಿದ ತಮಗೆ ಜಿಲ್ಲೆಯಲ್ಲಿ ವಿಶಿಷ್ಟವಾದ ಉತ್ತಮ ಆಡಳಿತ ಅನುಭವ ಆಗಿದೆ. ಇದರಿಂದ ನನ್ನ ಮುಂದಿನ ಸರ್ಕಾರಿ ಸೇವೆಗೆ ಬಹಳಷ್ಟು ನೆರವಾಗಲಿದೆ ಎಂದು ಐಎಎಸ್ ಪ್ರೊಬೇಷನರಿ ಜಿಲ್ಲಾಧಿಕಾರಿ ಶ್ರೀಮತಿ ರೋಹಿಣಿ ಸಿಂಧೂರಿ ಅವರು ಜಿಲ್ಲೆಯ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತ ಪಡಿಸಿದರು. ಅವರು ಇಂದು ಪ್ರೋಬೆಷನರಿ ಅವಧಿ ಮುಗಿಸಿದ ಬಗ್ಗೆ  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದರು. ಇಲ್ಲಿಯ […]

‘ಅಡಿಕೆಯಿಂದ ಆಹಾರ ಬೆಳೆಯತ್ತ ಮುಖ ಮಾಡುವ ರೈತರಿಗೆ ಪೈಲಟ್ ಯೋಜನೆ ರೂಪಿಸಿ’

Thursday, April 21st, 2011
ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈತರ ಸಭೆ

ಮಂಗಳೂರು : ಅಡಿಕೆ ಕೃಷಿಯಿಂದ ಆಹಾರ ಬೆಳೆಯನ್ನು ಬೆಳೆಯಲು ಉತ್ಸುಕರಾಗಿರುವ ರೈತರಿಗೆ ಪ್ರೋತ್ಸಾಹ ನೀಡಲು ಸರ್ಕಾರ ರೈತರಿಗಾಗಿ ಪೈಲಟ್ ಯೋಜನೆಯನ್ನು ರೂಪಿಸಬೇಕು ಎಂದು ರೈತ ಮುಖಂಡರಲ್ಲೊಬ್ಬರಾದ ಶ್ರೀ ರವಿಕಿರಣ ಪುಣಚ ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅವರ ಕಚೇರಿಯಲ್ಲಿ ಆಯೋಜಿಸಿದ್ದ ರೈತರ ಸಭೆಯಲ್ಲಿ ಮಾತನಾಡುತ್ತಿದ್ದರು. ಸಾಲಮನ್ನಾ ಯೋಜನೆ, ಅಡಿಕೆ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ, ಹಳದಿರೋಗ, ಕೊಳೆ ರೋಗ ತಡೆಗೆ ಕ್ರಮ, ಕುಮ್ಕಿ ಜಮೀನು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ರೈತರು ಜಿಲ್ಲಾಡಳಿತದ ಗಮನ ಸೆಳೆದರು. ರೈತರ […]

ಪುನರ್ವಸತಿ ಯೋಜನೆ ಅನುಷ್ಠಾನ: ಸ್ಥಳೀಯರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

Friday, March 4th, 2011
ಪುನರ್ವಸತಿ ಯೋಜನೆ ಅನುಷ್ಠಾನ

ಮಂಗಳೂರು : ಕುದುರೆಮುಖ ರಾಷ್ಟ್ರೀಯ ಪುನರ್ವಸತಿ ಯೋಜನೆಯನ್ವಯ ಅರಣ್ಯದೊಳಗಿಂದ ಹೊರಬಂದು ವಾಸಿಸಲು ಒಪ್ಪುವ ಕುಟುಂಬಗಳಿಗೆ ಪರಿಹಾರ  ಹಾಗೂ ಪೂರಕ ವ್ಯವಸ್ಥೆಗಳನ್ನು ನೀಡಲು ಪ್ರತೀ ಬುಧವಾರ ಸಂಬಂಧಪಟ್ಟ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ವಾರಕ್ಕೊಂದರಂತೆ ಒಂದು ಪ್ರಕರಣವನ್ನು ಇತ್ಯರ್ಥ ಪಡಿಸುವಂತೆ ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು ಬೆಳ್ತಂಗಡಿಯ ನಾರಾವಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ಬಳಿಕ ಕುತ್ಲೂರಿನ ಅಳಂಬ, ನೆಲ್ಲಿಪಡ್ಕದ ಮನೆಗಳಿಗೆ ಭೇಟಿ ನೀಡಿ ಅವರ ಅಭಿಪ್ರಾಯಗಳನ್ನು […]

ಕರ್ತವ್ಯಲೋಪ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳ ಎಚ್ಚರಿಕೆ

Monday, December 27th, 2010
ಸುಬೋಧ್ ಯಾದವ್

ಮಂಗಳೂರು : ಲೋಕಾಯುಕ್ತರು ಜಿಲ್ಲಾಧಿಕಾರಿಗಳಿಗೆ ಬರೆದಿರುವ ಪತ್ರಗಳನ್ನು ಜಿಲ್ಲಾಧಿಕಾರಿಗಳ  ಗಮನಕ್ಕೆ ತರದೆ ಲೋಕಾಯುಕ್ತರಿಗೆ ವರದಿ ಸಲ್ಲಿಸಲು ವಿಳಂಬ ಮಾಡಿ ಕರ್ತವ್ಯ ಲೋಪವೆಸಗಿರುವ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಸುಬೋಧ್ ಯಾದವ್ ಅವರು ತೀವ್ರ ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ತಾಲೂಕಿನ ಕದ್ರಿ ಗ್ರಾಮದ ಸರ್ವೇ ನಂಬರ್ 266/3ಎಪಿ1 ರಲ್ಲಿ 0.10 ಎಕ್ರೆ ಜಮೀನನ್ನು ಶ್ರೀಮತಿ ದುಲ್ಸಿನ್ ಡಿಸೋಜ ಅವರಿಗೆ ಪೆಟ್ರೋಲ್ ಬಂಕ್ ಗೆ ಲೀಸ್ ಗೆ ನೀಡಲಾಗಿತ್ತು. ಅವರು ಲೀಸ್ ಗೆ ನೀಡಲಾದ ಜಮೀನನ್ನು ಹೊರತುಪಡಿಸಿ ಸರಕಾರಿ ಜಮೀನನ್ನು […]