Blog Archive

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ಇಳಿಕೆ-ಸುಭೋದ್ ಯಾದವ್

Saturday, December 4th, 2010
ಶಿಶು ಮರಣ ಪ್ರಕರಣ ಪರಿಶೀಲನಾ ಪದ್ಧತಿ

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮರ್ಪಕ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಿಂದಾಗಿ ಒಂದು ಸಾವಿರ ಶಿಶುಗಳ ಜನನದಲ್ಲಿ ಶಿಶು ಮರಣ ಪ್ರಮಾಣ 10-11 ಕ್ಕೆ ಇಳಿದಿದೆಯೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ತಿಳಿಸಿದ್ದಾರೆ. ಅವರು ಇಂದು ನಗರದ ವೆನ್ ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಯುನಿಸೆಫ್ ವತಿಯಿಂದ ಆಯೋಜಿಸಿದ್ದ ಶಿಶು ಮರಣ ಪ್ರಕರಣ ಪರಿಶೀಲನಾ ಪದ್ಧತಿ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ದಕ್ಷಿಣಕನ್ನಡ ಜಿಲ್ಲೆ […]

ಸ್ಥಳೀಯ ಆದ್ಯತೆ ಗಮನದಲ್ಲಿರಿಸಿ ಕಾರ್ಯಕ್ರಮ ರೂಪಿಸಿ-ಸುಭೋದ್ ಯಾದವ್

Saturday, November 13th, 2010
DC Subhod Yadav

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಕಲೆ ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ಕರಾವಳಿ ಉತ್ಸವವನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಸ್ಥಳೀಯರ ಅಭಿರುಚಿಯನ್ನು ಗಮನದಲ್ಲಿರಿಸಿ ಉತ್ಸವ ಅಚರಿಸಿ ಎಂದು ಜಿಲ್ಲಾಧಿಕಾರಿಗಳು ಹೇಳಿದರು.  ಡಿಸೆಂಬರ್ 22 ರಿಂದ ಉತ್ಸವ ಆಚರಿಸಲು ಸಕಲ ಸಿದ್ಧತೆಗಳು ನಡೆಸಿರುವ ಬಗ್ಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಹಾಗೂ ಕರಾವಳಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಶ್ರೀ ಸುಭೋದ್ ಯಾದವ್ ಅವರು ಪರಿಶೀಲಿಸಿದರು. ಅವರು ಇಂದು ತಮ್ಮ ಕಚೇರಿಯಲ್ಲಿ ಈ ಸಂಬಂಧ ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಬಾರಿಯ ಕರಾವಳಿ […]

ವರ್ಗಾವಣೆಗೊಂಡ ಜಿಲ್ಲಾಧಿಕಾರಿ ವೇಲುಸಾಮಿ ಪೊನ್ನುರಾಜ್ ಅವರಿಗೆ ನಾಗರಿಕರ ಆತ್ಮೀಯ ವಿದಾಯ.

Tuesday, October 26th, 2010
ಜಿಲ್ಲಾಧಿಕಾರಿ ವೇಲುಸಾಮಿ ಪೊನ್ನುರಾಜ್ ಅವರಿಗೆ ನಾಗರಿಕರ ಆತ್ಮೀಯ ವಿದಾಯ

ಮಂಗಳೂರು: ಸುಮಾರು ಒಂದೂವರೆ ವರ್ಷಕಾಲ ಉಡುಪಿಯಿಂದ ಮಂಗಳೂರಿಗೆ ಬಂದು ಇಲ್ಲಿ ಆಡಳಿತ ನಡೆಸಿ, ಈಗ ಶಿವಮೊಗ್ಗಕ್ಕೆ ವರ್ಗಾವಣೆಗೊಂಡು ಹೋಗುತ್ತಿರುವ ದ.ಕ (ಮಾಜಿ) ಜಿಲ್ಲಾಧಿಕಾರಿ ವಿ. ಪೊನ್ನುರಾಜ್ ಅವರಿಗೆ ಇಂದು ಹಾರ್ಧಿಕ ವಿದಾಯ, ಹಾಗೂ ಹೊಸದಾಗಿ ದಿಲ್ಲಿಯಿಂದ ಬಂದು ಇಲ್ಲಿ ಜಿಲ್ಲಾಧಿಕಾರಿಯಾಗಿರುವ ಸುಭೋಧಯಾದವ (ಐಎಎಸ್) ಅವರಿಗೆ ಸಂತೋಷಪೂರ್ವಕ ಸ್ವಾಗತ ಬಯಸುವ ಸಮಾರಂಭವೊಂದನ್ನು ಜಿಲ್ಲಾ ಕಛೇರಿಯ ಸಭಾಂಗಣದಲ್ಲಿ ಇಂದು ಮಂಗಳವಾರ ಬೆಳಿಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಅವರು ನಡೆಸಿಕೊಟ್ಟರು. ಶರ್ಮರು ತಮ್ಮ ಹಿಂದಿನ ಅನುಭವಗಳನ್ನು ನೆನೆಪಿಗೆ ತಂದುಕೊಂಡು ವರ್ಗಾವಣೆಯಾಗಿ […]