Blog Archive

ವೀಕೆಂಡ್ ಕರ್ಫ್ಯೂನಲ್ಲಿ ಏನೆಲ್ಲಾ ಇದೆ ಎಂಬ ಮಾಹಿತಿ ಇಲ್ಲಿದೆ

Wednesday, January 5th, 2022
weekend-curfew

ಮಂಗಳೂರು : ಐಟಿ ಕೈಗಾರಿಕೆಗಳು, ಇತರ ಕೈಗಾರಿಕೆಗಳು, ಬೀದಿಬದಿ ವ್ಯಾಪಾರ, ಆಹಾರ ದಿನಸಿ, ಹಣ್ಣುಹಂಪಲುಗಳು, ಡೈರಿ, ಹಾಲಿನ ಬೂತ್ ಗಳು, ಪಡಿತರ, ಆಹಾರ ಪೂರೈಕೆ ಮಾಡುವ ಸಂಸ್ಥೆಗಳು ವೀಕೆಂಡ್ ಕರ್ಫ್ಯೂನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು  ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್‌ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ (ಒಳಾಂಗಣ 100) ಸೀಮಿತಗೊಳಿಸಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರಲಿದೆ ಎಂದರು. ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ […]

7 ಅಭ್ಯರ್ಥಿಗಳ 13 ನಾಮಪತ್ರಗಳು ಕ್ರಮಬದ್ಧ, ಹಿಂಪಡೆಯಲು ನ.26 ರ ವರೆಗೆ ಅವಕಾಶ

Wednesday, November 24th, 2021
nomination Fie

ಮಂಗಳೂರು  :  ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಒಟ್ಟು 8 ಮಂದಿ ಅಭ್ಯರ್ಥಿಗಳು 14 ನಾಮಪತ್ರ ಸಲ್ಲಿಸಿದ್ದರು. ಅವುಗಳ ಪರಿಶೀಲನೆ ನ.24ರ ಬುಧವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಅವುಗಳಲ್ಲಿ 13 ನಾಮಪತ್ರಗಳು ಕ್ರಮಬದ್ಧವಾಗಿದ್ದು, ಒಬ್ಬರು ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕತಗೊಂಡಿದೆ. 13 ನಾಮಪತ್ರಗಳು ಕ್ರಮಬದ್ಧ: ಸಲ್ಲಿಕೆಯಾಗಿದ್ದ ಒಟ್ಟು 14 ನಾಮಪತ್ರಗಳಲ್ಲಿ 7 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಅದರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ […]

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳಿಂದ ಸನ್ಮಾನ

Tuesday, November 9th, 2021
Harekala Hajabba

ಮಂಗಳೂರು :  ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಇಂದು ಬೆಳಿಗ್ಗೆ ಮಂಗಳೂರಿಗೆ ಆಗಮಿಸಿದ  ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನ.9ರ ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಅಧಿಕಾರಿಗಳು ಉಪಸ್ಥಿತರಿದ್ದರು.

ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

Monday, October 18th, 2021
kannada Rajyotsava

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಸೋಂಕು ತಹಬದಿಗೆ ಬಂದಿದೆ, ಆದರೆ, ಸಂಪೂರ್ಣವಾಗಿ ಹೋಗಿಲ್ಲ. ಈ ಅಂಶವನ್ನು ಪರಿಗಣನೆಗೆ ತೆಗೆದುಕೊಂಡು ಮುಂಬರುವ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವವನ್ನು ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನೊಳಗೊಂಡಂತೆ ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅವರು ಅ.18ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ […]

ಉಲ್ಲಾಳ ಉರೂಸ್ : ಕೋವಿಡ್ ಸ್ಥಿತಿ-ಗತಿ ಪರಿಶೀಲಿಸಿ, ಸರಕಾರದ ಅನುಮತಿ ಪಡೆದು ಕ್ರಮ-ಜಿಲ್ಲಾಧಿಕಾರಿ

Tuesday, October 12th, 2021
Uroos

ಮಂಗಳೂರು : ಕೋವಿಡ್-19 ಸೋಂಕಿನ ಮುಂಬರುವ ಸ್ಥಿತಿ ಗತಿಗಳನ್ನು ಪರಾಮರ್ಶಿಸಿ, ಸರಕಾರದ ಪೂರ್ವಾನುಮತಿ ತೆಗೆದುಕೊಂಡು ಈ ಬಾರಿ ಡಿಸೆಂಬರ್ 23 ರಿಂದ ಜನವರಿ 19 ರ ವರೆಗೆ ಉಲ್ಲಾಳ ಉರುಸ್ ನಡೆಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ಅ.12ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಉಲ್ಲಾಳ ಉರುಸ್ ಆಚರಣೆ ಸಂಬಂಧ ಪೂರ್ವಭಾವಿಯಾಗಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉರುಸ್ ಆಚರಣೆಗೆ ಸಂಬಂಧ ಇನ್ನೂ ಎರಡು ತಿಂಗಳ ಕಾಲಾವಕಾಶವಿದೆ, ಒಂದು ತಿಂಗಳ […]

ಅಕ್ಟೋಬರ್ 1ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ಥಿಯೇಟರ್, ರಂಗಮಂದಿರಗಳು ಓಪನ್

Wednesday, September 29th, 2021
Theater

ಮಂಗಳೂರು :  ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಕೋವಿಡ್-19 ಪ್ರಕರಣಗಳ ಸಂಭಾವ್ಯ ಏರಿಕೆಯನ್ನು ತಡೆಯಲು ಈವರೆಗೆ ಹೊರಡಿಸಿರುವ ಮಾರ್ಗಸೂಚಿ ಮತ್ತು ಅದೇಶಗಳಿಗೆ ಕೆಲವೊಂದು ಸೇರ್ಪಡೆಗಳು ಮತ್ತು ಮಾರ್ಪಾಡುಗಳನ್ನು ಮಾಡಿ ಸರಕಾರ ಆದೇಶಿಸಿರುತ್ತದೆ. ಈ ಆದೇಶಗಳು ಹಾಗೂ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 141 (1) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ […]

ದ.ಕ.: ವಾರಾಂತ್ಯ ರಸ್ತೆಬದಿ ಉತ್ಸವಕ್ಕೆ ಜಿಲ್ಲಾಡಳಿತ ಯೋಜನೆ

Friday, September 24th, 2021
DC Rajendra

ಮಂಗಳೂರು  : ಕೊರೋನ 2 ನೆ ಅಲೆ ತಗ್ಗುತ್ತಿರುವಂತೆಯೇ ಜಿಲ್ಲೆಯಲ್ಲಿ ಸ್ಥಳೀಯ ಕಲಾವಿದರು ಹಾಗೂ ವ್ಯಾಪಾರಿಗಳಿಗೆ ವೇದಿಕೆಯ ಜತೆಗೆ ಜಿಲ್ಲೆಯ ಜನರಿಗೆ ವೀಕೆಂಡ್ ಮನರಂಜನೆಗೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ. ನಗರದ ಪ್ರಮುಖ ರಸ್ತೆಗಳಾದ ಕದ್ರಿ ಪಾರ್ಕ್ ಎದುರು ಹಾಗೂ ಕ್ಲಾಕ್‌ ಟವರ್ ನಿಂದ ಎಬಿಶೆಟ್ಟಿ ಸರ್ಕಲ್ ರಸ್ತೆಯಲ್ಲಿ ವಾರಾಂತ್ಯ ರಸ್ತೆಬದಿ ಉತ್ಸವ(ವೀಕೆಂಡ್ ಸ್ಟ್ರೀಟ್  ಫೆಸ್ಟಿವಲ್)ಕ್ಕೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಉತ್ಸುಕತೆ ತೋರಿದ್ದಾರೆ. ದ.ಕ. ಜಿಲ್ಲಾ ಕಾರ್ಯಕರ್ತರ  ಪತ್ರಕರ್ತರ ಸಂಘದ ವತಿಯಿಂದ ಇಂದು ಆಯೋಜಿಸಲಾದ ಜಿಲ್ಲಾಧಿಕಾರಿ ಜತೆಗಿನ ಸಂವಾದ […]

ರಫ್ತುದಾರರ ಸಮಾವೇಶಕ್ಕೆ ಚಾಲನೆ

Thursday, September 23rd, 2021
Exporters

ಮಂಗಳೂರು :  ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶಕ್ಕೆ ನಗರದ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೆ.23ರ ಗುರುವಾರ ಚಾಲನೆ ನೀಡಿದರು. ಬೆಂಗಳೂರು ವಿ.ಟಿ.ಪಿ.ಸಿ ಯ ವ್ಯವಸ್ಥಾಪಕ ನಿರ್ದೇಶಕ ಸತೀಶ್.ಎಸ್.ಆರ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಸೀಮಾ ಸುಂಕದ ಆಯುಕ್ತ ಇಮಾಮುದ್ದೀನ್ ಅಹಮ್ಮದ್, ಎಂ.ಆರ್.ಪಿಲ್.ಎಲ್‍ನ ಗ್ರೂಪ್ ಜನರಲ್ ವಿಭಾಗದ ಯೋಗೀಶ್ ನಾಯಕ್, ಲೀಡ್ ಬ್ಯಾಂಕ್‍ನ […]

ಬರುವ ದಿನಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಸೂಕ್ತ ತೀರ್ಮಾನ: ಸಚಿವ ಆರ್ ಅಶೋಕ

Thursday, September 16th, 2021
R Ashoka

ಬೆಂಗಳೂರು  : “ಸುಪ್ರೀಂ ಕೋರ್ಟ್‍ನ ತೀರ್ಪನ್ನು ಯಥಾವತ್ತಾಗಿ ಪಾಲನೆ ಮಾಡುವುದು ಕರ್ತವ್ಯ. ಆದರೆ ಆ ಧಾವಂತದಲ್ಲಿ ಅಧಿಕಾರಿಗಳು ಈ ರೀತಿಯ ಅವಸರದ ತೀರ್ಮಾನ ತೆಗೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಜಿಲ್ಲಾಡಳಿತದಿಂದ ಜನರ ಭಾವನೆಗಳಿಗೆ ಧಕ್ಕೆಯಾಗದಂತಹ ತೀರ್ಮಾನ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ನಂಜನಗೂಡು ಮತ್ತು ಮೈಸೂರಿನಲ್ಲಿನ ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವರು,”ಅಧಿಕಾರಿಗಳು ಹೀಗೆ ಏಕಾಏಕಿ ನಿರ್ಧಾರ ತೆಗೆದುಕೊಂಡಿದ್ದು ತಪ್ಪು. ಸುಪ್ರೀಂ ಕೋರ್ಟ್ ಕೂಡಾ ರಸ್ತೆ ಮಧ್ಯದಲ್ಲಿರುವ […]

ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವವರೆಗೆ ಹೆಚ್ಚಿನ ತಪಾಸಣೆಗೆ ನಿರ್ದೇಶನ

Saturday, September 4th, 2021
Rajendra Kumar

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವವರೆಗೂ ಹೆಚ್ಚಿನ ತಪಾಸಣೆಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಿರ್ದೇಶನ ನೀಡಿದರು. ಅವರು ಸೆಪ್ಟೆಂಬರ್ 4ರ ಶನಿವಾರ ಕೋವಿಡ್-19 ಸೋಂಕಿನ ನಿಯಂತ್ರಣ ಕುರಿತು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ಬೆಂಗಳೂರಿನಿಂದ ವಿಡಿಯೋ ಸಂವಾದ ನಡೆಸಿ […]