Blog Archive

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.28 ರವರೆಗೆ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

Saturday, June 19th, 2021
KV Rajendra

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಲಾಕ್‌ ಡೌನ್ ಜೂ.21 ರಿಂದ ಜೂ.28 ರವರೆಗೆ ಸೆಮಿ ಲಾಕ್‌ಡೌನ್ ಮಾದರಿಯಲ್ಲಿ   ಮುಂದುವರಿಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಮಾಧ್ಯಮದವರೊಂದಿಗೆ  ಮಾತನಾಡಿದ ಅವರು ಲಾಕ್‌ ಡೌನ್ ತೆರವು ಕುರಿತಂತೆ ರಾಜ್ಯ ಸರಕಾರ ಶನಿವಾರ  ಹೊರಡಿಸಿದೆ ಆದೇಶದಂತೆ   ಜೂ.11ರಂದು ಹೊರಡಿಸಿದ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಲಾಗಿದೆ. ಹಾಗಾಗಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದೆ. ಆದಾಗ್ಯೂ ಜಿಲ್ಲೆಯಲ್ಲಿ ಸೆಮಿ ಲಾಕ್‌ಡೌನ್ ಮೂಲಕ […]

ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆಯಾಗಿ ನೈಜ ಫಲಾನುಭವಿಗಳಿಗೆ ಅನ್ಯಾಯ : ಡಾ.ವೈ ಭರತ್ ಶೆಟ್ಟಿ

Monday, June 14th, 2021
bharath-shetty

ಮಂಗಳೂರು  : ದಕ್ಷಿಣ ಕನ್ನಡ  ಜಿಲ್ಲೆಯಾದ್ಯಂತ ನೈಜ ಬಿಪಿಎಲ್ ಫಲಾನುಭವಿಗಳ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆಯಾಗಿರುವುದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ಗಮನಕ್ಕೆ ಬಂದಿತ್ತು. ಈ ವಿಷಯದ ಬಗ್ಗೆ ಅವರು ಜಿಲ್ಲಾಧಿಕಾರಿ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಜೊತೆ ಮಾತುಕತೆ ನಡೆಸಿರುತ್ತಾರೆ. ಈ ವಿಷಯದ ಕುರಿತು ಆಹಾರ ಇಲಾಖೆಯ ರಾಜ್ಯದ ಆಯುಕ್ತರೊಂದಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರು ಪ್ರಸ್ತಾಪಿಸಿದಾಗ ಆಯುಕ್ತರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆ ಬಳಿಕ ಆಹಾರ ಇಲಾಖೆಯ ಜಿಲ್ಲೆಯ ಅಧಿಕಾರಿಗಳಿಗೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17 ಗ್ರಾಮ ಪಂಚಾಯತ್ ಗಳು ಸೀಲ್ ಡೌನ್

Sunday, June 13th, 2021
KV Rajendra Kumar

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ  ಪ್ರಮಾಣ ಹೆಚ್ಚಳವಾಗಿರುವ ಹದಿನೇಳು ಗ್ರಾಮಗಳನ್ನು ಸಂಪೂರ್ಣ ಸೀಲ್ ಡೌನ್ ಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ, ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಮಣ್ಯ ಹಾಗೂ ಸವಣೂರು ಸೀಲ್ ಡೌನ್ ಆಗಲಿದೆ. ದ.ಕ. ಜಿಲ್ಲೆಯ 17 ಗ್ರಾಪಂ.ಗಳು  […]

ಉಡುಪಿ ಜಿಲ್ಲೆ ಸೋಮವಾರ ಅನ್‌ಲಾಕ್, ಮಾರ್ಗಸೂಚಿಗಳ ವಿವರ ಇಲ್ಲಿದೆ ನೋಡಿ

Saturday, June 12th, 2021
Udupi DC

ಉಡುಪಿ  :  ರಾಜ್ಯದ ಆನ್ ಲಾಕ್ ಜಿಲ್ಲೆಗಳಲ್ಲಿ ಉಡುಪಿ ಜಿಲ್ಲೆಯೂ ಒಂದಾಗಿದೆ.  ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹತೋಟಿಗೆ ಬಂದಿದ್ದು ಜೂನ್ 14ರಿಂದ ಅನ್‌ಲಾಕ್ ಅವಧಿಯಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಚಟುವಟಿಕೆಗಳು ಮಾತ್ರ ನಡೆಯಲು ಅನುಮತಿ ನೀಡಿ, ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳು ವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ. ಶನಿವಾರ ಜಿಲ್ಲೆಯ ತಹಶೀಲ್ದಾರ್ ಹಾಗೂ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ […]

ಉಡುಪಿ ಜಿಲ್ಲೆಯಲ್ಲಿ 16 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ

Tuesday, June 8th, 2021
udupi Lock Down

ಉಡುಪಿ : ಜಿಲ್ಲೆಯಲ್ಲಿ ಮತ್ತೆ 16 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಕಾರ್ಕಳ ತಾಲೂಕಿನ ಬೆಳ್ಮಣ್, ಮಿಯಾರ್, ಪಳ್ಳಿ, ಕುಕ್ಕುಂದೂರ್, ನಲ್ಲೂರು, ಮರ್ಣೆ ಬೈಂದೂರು ತಾಲ್ಲೂಕಿನ ಶಿರೂರ್, ಜಡ್ಕಲ್, ನಾಡಾ, ಕುಂದಾಪುರ ತಾಲೂಕಿನ ಗಂಗೊಳ್ಳಿ, ಆಲೂರು ಕಾಪು ತಾಲೂಕಿನ ಬೆಳ್ವೆ, ಶಿರ್ವ ಗ್ರಾಮ ಪಂಚಾಯತಿ ಬ್ರಹ್ಮಾವರ ತಾಲ್ಲೂಕಿನ ಕೊಕ್ಕರ್ಣೆ‌, ಅವರ್ಸೆ ಮತ್ತು ಹೆಬ್ರಿ ತಾಲೂಕಿನ ವರಂಗ ಗ್ರಾಮ ಪಂಚಾಯತಿ ಜೂನ್ 10ರ ಗುರುವಾರದಿಂದ ಜೂನ್ […]

ಜೂನ್ 14ರ ವರೆಗೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಜಾರಿ

Sunday, June 6th, 2021
Sundaresh Babu

ಗದಗ : ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಪ್ರಕಟಿಸಿದ ಮಾರ್ಗಸೂಚಿಗಳು ಜೂನ್ 7ರ ಬೆಳಗ್ಗೆ 6 ಗಂಟೆಯಿಂದ ಜೂನ್ 14 ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ. ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡಂತಿದೆ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಗದಗ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ. ಅವಕಾಶ ಕಲ್ಪಿಸಲಾಗಿದೆ: ಬೆ. 6 ರಿಂದ ಬೆ […]

ಜಿಲ್ಲೆಯಲ್ಲಿ ಲಸಿಕಾಕರಣ ತೀವ್ರಗತಿಯಲ್ಲಿ ನಡೆಸಿ

Friday, June 4th, 2021
gadaga dc

ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾದ್ಯಂತ ವಿಧಿಸಲಾದ ಕಠಿಣ ಮಾರ್ಗಸೂಚಿಗಳ ಅನುಷ್ಟಾನದಲ್ಲಿ ಅಧಿಕಾರಿಗಳ ನಿಷ್ಕಾಳಜಿ ಸಹಿಸಲಾಗದು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ( ಶುಕ್ರವಾರ) ಜರುಗಿದ ಕೋವಿಡ್ ಸೋಂಕು ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. ಸೋಂಕು ನಿಯಂತ್ರಣ ಕಾರ್ಯದಲ್ಲಿ ನಿಯೋಜಿತ ಅಧಿಕಾರಿಗಳು ಶಿಸ್ತು ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಸೋಂಕು ನಿಯಂತ್ರಣ ಹಾಗೂ ಸೋಂಕಿನ ಸರಪಳಿ ತುಂಡರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. ಸೋಂಕು ನಿಯಂತ್ರಣ ಕಾರ್ಯದಲ್ಲಿ […]

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಸಜ್ಜಾದ ಭೂಮಾಫಿಯಾ

Wednesday, June 2nd, 2021
Rohini-Sindhoori

ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಬೇಕೆನ್ನುವ ರಾಜಕೀಯ ನಾಯಕರ ಪ್ರಯತ್ನ ತೆರೆಮರೆಯಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿದ್ದು, ಇದರ ಹಿಂದೆ ಭೂಮಾಫಿಯಾ ಕೈವಾಡ ಶಂಕೆ ಕೇಳಿಬಂದಿದೆ. ಕರೊನಾ ನಡುವೆಯೂ ಭೂ ಅಕ್ರಮದ ದೂರುಗಳಿಗೆ ಸಂಬಂಧಿಸಿದ ಫೈಲ್ಗಳನ್ನು ವಿಲೇವಾರಿ ಮಾಡುವ ಪ್ರಯತ್ನಕ್ಕೆ ರೋಹಿಣಿ ಸಿಂಧೂರಿ ಕೈಹಾಕಿ ಭೂಗಳ್ಳರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ರಿಯಲ್ ಎಸ್ಟೇಟ್ ಉದ್ಯಮಿಗಳ ಹಿಂದೆಯೂ ರೋಹಿಣಿ ಬಿದ್ದಿದ್ದಾರೆ. ಹೀಗಾಗಿ ಅಕ್ರಮದಲ್ಲಿ ಭಾಗಿಯಾಗಿರುವವರ ಎದೆಯಲ್ಲಿ ನಡುಕು ಶುರುವಾಗಿದ್ದು, ಕ್ರಮಕ್ಕೂ ಮುನ್ನವೇ ಅವರನ್ನು ವರ್ಗಾವಣೆ ಮಾಡಿಸುವ ಪ್ರಯತ್ನ […]

ಸ್ಥಳೀಯ ಮಾರುಕಟ್ಟೆಗಳಲ್ಲಿ ದಿನಸಿ ಸಾಮಾಗ್ರಿಗಳು, ತರಕಾರಿಗೆ ಗ್ರಾಹಕರಿಂದ ಹೆಚ್ಚು ಹಣ ವಸೂಲಿ, ದೂರು

Monday, May 31st, 2021
vegetable

ಮಂಗಳೂರು : ಲಾಕ್ ಡೌನ್ ಸಂದರ್ಭದಲ್ಲಿ ಗ್ರಾಹಕ ರಿಂದ ಕೆಲವೊಂದು ದಿನಸಿ ಸಾಮಾಗ್ರಿಗಳು, ತರಕಾರಿ, ಹಣ್ಣು ಹಂಪಲುಗಳ ವರ್ತಕರು ಸಿಕ್ಕಿದ್ದೇ ಲಾಭ ಎಂಬಂತೆ ಮನ ಬಂದಂತೆ ಹಣ ವಸೂಲಿ ಮಾಡುತ್ತಿರುವ  ಹಿನ್ನಲೆಯಲ್ಲಿ ಸಾರ್ವಜನಿಕರು  ಜಿಲ್ಲಾಧಿಕಾರಿಗಳಿಗೆ ದೂರು ನೀಡಿರುವುದರಿಂದ,  ಅಂತಹ ವರ್ತಕರನ್ನು ಪತ್ತೆ ಹಚ್ಚಲು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಕಾಲಕಾಲಕ್ಕೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಲಾಕ್‍ಡೌನ್‍ನ […]

ಧಾರವಾಡ: ಜಿಲ್ಲೆಯಲ್ಲಿ ಮದ್ಯ ಮಾರಾಟ, ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಗ್ರೀನ್ ಸಿಗ್ನಲ್

Sunday, May 30th, 2021
Nithish Pateel

ಧಾರವಾಡ: ಕೊರೊನಾ ಹತೋಟಿಗೆ ತರುವ ದೃಷ್ಟಿಯಿಂದ ಧಾರವಾಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೆಲವೊಂದಿಷ್ಟು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿ ಲಾಕ್‌ಡೌನ್ ಜಾರಿ ಮಾಡಿದ್ದಾರೆ. ಆದರೆ ಈಗ ಅದರಲ್ಲಿ ಕೆಲವೊಂದಿಷ್ಟು ಬದಲಾವಣೆಗಳನ್ನು ತಂದಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಯನ್ನೂ ರದ್ದುಗೊಳಿಸಿದ್ದ ಜಿಲ್ಲಾಧಿಕಾರಿಗಳು, ಜೂ.1ರಿಂದ 6 ರವರೆಗೆ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಗೆ ಅನುಮತಿ ನೀಡಿದ್ದಾರೆ. ಜೂ.1ರಿಂದ 6 ರವರೆಗೆ ಬೆಳಿಗ್ಗೆ 6 ರಿಂದ ಬೆಳಿಗ್ಗೆ 8 ಗಂಟೆಯ ಅವಧಿಯಲ್ಲಿ […]