Blog Archive

ಆಕ್ಸಿಜನ್ ಕೊರತೆಯನ್ನು ನೀಗಿಸಲು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್

Monday, April 26th, 2021
Mangalore DC

ಮಂಗಳೂರು : ಆಕ್ಸಿಜನ್ ಕೊರತೆಯನ್ನು ನೀಗಿಸಲು  ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಹಾಗೂ ಸಕಾಲದಲ್ಲಿ ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ದೊಡ್ಡ ಪ್ರಮಾಣದಲ್ಲಿ ಆಕ್ಸಿಜನ್ ಉತ್ಪಾದಿಸಲು ವೆನ್ಲಾಕ್ ಆಸ್ಪತ್ರೆಯಲ್ಲಿ ಹೊಸದಾಗಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಬಗ್ಗೆ ಯೋಜನೆ ರೂಪಿಸಲಾಗಿದೆ. ಮುಂದಿನ 50 […]

ಕೇವಲ ಫೋಟೋಕ್ಕಾಗಿ ಮಾತ್ರ ಮಾಸ್ಕನ್ನು ತೆಗೆದು ಹಾಕಿಕೊಂಡಿದ್ದೆ : ಜಿಲ್ಲಾಧಿಕಾರಿ ಜಿ ಜಗದೀಶ್ ಸ್ಪಷ್ಟನೆ

Saturday, April 24th, 2021
G Jagadeesha

ಉಡುಪಿ : ಜಿಲ್ಲಾಧಿಕಾರಿ ಜಿ ಜಗದೀಶ್ ಮಾಸ್ಕ್ ಧರಿಸಿದೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಕುರಿತು ಸ್ಪಷ್ಟನೆ ನೀಡಿದ್ದು. ಕೇವಲ ಫೋಟೋಕ್ಕಾಗಿ ಮಾತ್ರ ಮಾಸ್ಕನ್ನು ತೆಗೆದು ಹಾಕಿಕೊಂಡಿದ್ದೇನೆ ಎಂದಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಮಾಸ್ಕ್ ಹಾಕಬೇಕಿಲ್ಲ. ನನ್ನ ಮನೆಯ ಪಕ್ಕದಲ್ಲೇ ಕಾರ್ಯಕ್ರಮಿದ್ದದ್ದು. ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕಾರಿಯವರ ಮಗಳ ಕಾರ್ಯಕ್ರಮವಾಗಿತ್ತು.  ನಾಲ್ಕು ಮನೆಯ ಕುಟುಂಬಸ್ಥರು ಹೆಚ್ಚು ಕಮ್ಮಿ 20 ಮಂದಿ ಅದರಲ್ಲಿ ಭಾಗಿಯಾಗಿದ್ದರು. ನಾನು ಊಟಕ್ಕೂ ನಿಲ್ಲದೆ, ಐದಾರು ನಿಮಿಷವಷ್ಟೇ ಇದ್ದು ಹೊರಟೆ . ಕೇವಲ ಫೋಟೋಕ್ಕಾಗಿ ಮಾತ್ರ ಮಾಸ್ಕನ್ನು ತೆಗೆದು ಹಾಕಿಕೊಂಡಿದ್ದೇನೆ. ಸೀಮಿತ […]

ಕೊರೋನ 2ನೇ ಅಲೆ : ಮಂಗಳೂರಿನಲ್ಲಿ 144 (3) ಸೆಕ್ಷನ್ ಜಾರಿ

Tuesday, March 30th, 2021
KV Rajendra

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ. ಮಾರ್ಚ್‌ 29ರಿಂದಲೇ  ದ.ಕ. ಜಿಲ್ಲೆಯಲ್ಲಿ 144(3) ಸೆಕ್ಷನ್‌ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಶಬೇ ಬರಾಅತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ […]

ಕೇರಳದಲ್ಲಿ ಕೊರೋನ ಉಲ್ಬಣ ಜಿಲ್ಲೆಗೆ ಆಗಮಿಸುವ ಜನರಿಗೆ ತಪಾಸಣೆಗೊಳಪಡಸಲು ಕ್ರಮ

Monday, February 8th, 2021
KV Rajendra

ಮಂಗಳೂರು : ಪಕ್ಕದ ರಾಜ್ಯ ಕೇರಳದಲ್ಲಿ ಕೊರೋನ ಉಲ್ಬಣ ವಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಗೆ ಆಗಮಿಸುವ ಅಲ್ಲಿನವರನ್ನು ಸೂಕ್ತ ತಪಾಸಣೆಗೊಳಪಡಿಸಿ ಜಿಲ್ಲೆಯಲ್ಲಿ ಕೊರೋನ ಹರಡದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆಯುಷ್ ಕಚೇರಿಯಲ್ಲಿ ಇಂದು ಪೊಲೀಸ್ ಆಯುಕ್ತರು, ಡಿಎಚ್‌ಒ ಜತೆ ನಡೆಸಲಾದ ತುರ್ತು ಸಭೆಯ ಬಳಿಕ ಸುದ್ದಿಗಾರರ ಪ್ರಶ್ನೆಗೆ ಡಾ. ರಾಜೇಂದ್ರ ಈ ಪ್ರತಿಕ್ರಿಯೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ದಿನನಿತ್ಯ ಕೆಲಸ ಕಾರ್ಯ, ಕಾಲೇಜುಗಳಿಗಾಗಿ ಕೇರಳದಿಂದ ಕರ್ನಾಟಕಕ್ಕೆ ಬರುವುದರಿಂದ ಕೋವಿಡ್ ಅನ್‌ಲಾಕ್ ಮಾರ್ಗಸೂಚಿಗಳನ್ನು […]

ಏಕಾಏಕಿ ಸಾಲಗಾರರ ಆಸ್ತಿ ಜಪ್ತಿ ಮಾಡಲು ಆದೇಶಿಸುವುದು ಕಾನೂನಿಗೆ ವಿರೋಧವಾಗಿದೆ

Sunday, January 10th, 2021
pucl

ಮಂಗಳೂರು  : ಆರ್.ಬಿ. ಐ ವರದಿ ಪ್ರಕಾರ ಕಳೆದ ಹಣ ಕಾಸು ವರ್ಷದಲ್ಲಿ ದೇಶದಲ್ಲಿ 1.80 ಲಕ್ಷ ಕೋಟಿ ರೂಪಾಯಿ ವಂಚನೆ ಸೃಷ್ಟಿಯಾಗಿದ್ದು,ಸರ್ಫೆಸಿಯ ಕಾನೂನು ಪ್ರಕಾರ ಬ್ಯಾಂಕ್ ವಸೂಲಾತಿ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿಗಳು ಸಮರ್ಪಕ ಪ್ರೊಸೀಡಿಂಗ್ಸ್ ನಡೆಸದೆ ಏಕಾಏಕಿ ಸಾಲಗಾರರ ಆಸ್ತಿ ಜಪ್ತಿ ಮಾಡಲು ಆದೇಶಿಸುವುದು ಕಾನೂನಿಗೆ ವಿರೋಧವಾಗಿದೆ. ಮುಂದೆ ಜಿಲ್ಲಾಧಿಕಾರಿಗಳು ಇಂತಹ ಪ್ರಕರಣಗಳಲ್ಲಿ, ಬ್ಯಾಂಕ್ ಗಳ ವಸೂಲಾತಿ ಅರ್ಜಿ ಆದೇಷಗಳಲ್ಲಿ,ಬ್ಯಾಂಕ್ ಸಲ್ಲಿಸುವ ದಾಖಲೆಗಳು ಸಮರ್ಪಕ ವಾಗಿದೆಯೆ ಎಂದು ಕೂಲಂಕಷ ತನಿಖೆ ನಡೆಸಿ ಮತ್ತು ಸಾಲಗಾರರಿಗೆ ನಿರ್ಧಿಷ್ಟ ವಿಧದ […]

ವಸ್ತು ನಿಷ್ಠ, ಮೌಲ್ಯಯುತ ವರದಿಗೆ ಆದ್ಯತೆ ಅಗತ್ಯ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

Saturday, January 2nd, 2021
PaGo Award

ಮಂಗಳೂರು: ಕಟ್ ಆ್ಯಂಡ್ ಫೇಸ್ಟ್ ಸುದ್ದಿಯ ಬದಲು ವಸ್ತು ನಿಷ್ಠ ಮೌಲ್ಯಯುತ ಜತೆಗೆ ವಿಮರ್ಶೆಯಿಂದ ಕೂಡಿದ ಪತ್ರಿಕಾ ವರದಿಗಳು ಜನಪರ ಆಡಳಿತ ನಡೆಸಲು ಪೂರಕವಾಗುತ್ತವೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದರು. ಗುರುವಾರ ನಗರದ ಪತ್ರಿಕಾಭವನದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜರುಗಿದ 2019ನೇ ಸಾಲಿನ ಪ.ಗೋ.(ಪದ್ಯಾಣ ಗೋಪಾಲಕೃಷ್ಣ) ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಇಲಾಖೆಯಲ್ಲಿ ವರ್ಷಕ್ಕೆ ಒಂದು ಬಾರಿ ಅಡಿಟ್ ನಡೆಯುವ ಮೂಲಕ ಪಾರದರ್ಶಕತೆಯನ್ನು ಹೆಚ್ಚು ಮಾಡುವಂತೆ […]

ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ : ಜಿಲ್ಲಾಧಿಕಾರಿ

Tuesday, December 29th, 2020
KV Rajendra

ಮಂಗಳೂರು :  ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ-2020 ರ ಸಂಬಂಧ ಎಲ್ಲಾ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 30 ರ ಮಧ್ಯರಾತ್ರಿ 12 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ […]

ಕ್ರಿಸ್ಮಸ್ ಹಾಗೂ ಹೊಸ ವರ್ಷ ಸರಳ ಸಂಭ್ರಮಾಚರಣೆ – ಜಿಲ್ಲಾಧಿಕಾರಿ ಆದೇಶ

Tuesday, December 22nd, 2020
chritsmas

ಮಂಗಳೂರು : ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ಸರಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಕೋವಿಡ್-19 ಸೋಂಕಿನ ಎರಡನೇ ಅಲೆ ಹರಡುವಿಕೆಯನ್ನು ನಿಯಂತ್ರಿಸಲು ಇನ್ನೂ ಹೆಚ್ಚು ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುವ ಹಿನ್ನೆಲೆ ಕ್ರಿಸ್ಮಸ್ ಹಾಗೂ 2021ರ ಹೊಸ ವರ್ಷ ಸಂಭ್ರಮಾಚರಣೆಯನ್ನು ಸರಳವಾಗಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಆಚರಿಸಬೇಕು. ಅದರಂತೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ […]

ಗ್ರಾಪಂ ಚುನಾವಣೆ : ಬುಧವಾರ ದ.ಕ. ಜಿಲ್ಲೆಯಲ್ಲಿ 513 ನಾಮಪತ್ರಗಳು ಸಲ್ಲಿಕೆ

Thursday, December 10th, 2020
Rajendra

ಮಂಗಳೂರು : ಮೊದಲ ಸುತ್ತಿನ ಗ್ರಾಪಂ ಚುನಾವಣೆಗೆ ಮೂರನೇ ದಿನವಾದ ಬುಧವಾರ ದ.ಕ. ಜಿಲ್ಲೆಯಲ್ಲಿ 513 ನಾಮಪತ್ರಗಳು ಸಲ್ಲಿಕೆಯಾಗಿವೆ. ಮಂಗಳೂರು ತಾಲೂಕಿನಲ್ಲಿ 141, ಮೂಡುಬಿದಿರೆಯಲ್ಲಿ 52 ಮತ್ತು ಬಂಟ್ವಾಳ ತಾಲೂಕಿನಲ್ಲಿ 320 ನಾಮಪತ್ರಗಳು ಸಲ್ಲಿಕೆಯಾಗಿವೆ. ಮೊದಲ ದಿನವಾದ ಸೋಮವಾರ 30, ಎರಡನೇ ದಿನವಾದ ಮಂಗಳವಾರ 38 ನಾಮಪತ್ರ ಸಲ್ಲಿಕೆಯಾಗಿದ್ದವು. ಒಟ್ಟಾರೆ ಮೂರು ದಿನಗಳಲ್ಲಿ 581 ನಾಮಪತ್ರಗಳು ಸಲ್ಲಿಕೆಯಾದಂತಾಗಿವೆ. ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿದೆ. ಮರುದಿನ (ಶನಿವಾರ) ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 3,222 ಸ್ಥಾನಗಳಿಗೆ […]

ಗ್ರಾಮ ಪಂಚಾಯತ್ ಚುನಾವಣೆ ನಾಮ ಪತ್ರ ಸಲ್ಲಿಕೆ ಆರಂಭ

Monday, December 7th, 2020
GP election

ಮಂಗಳೂರು : ಗ್ರಾಮ ಪಂಚಾಯತ್ ಚುನಾವಣೆಯ ನಾಮ ಪತ್ರ ಸಲ್ಲಿಕೆ ಸೋಮವಾರದಿಂದ ಆರಂಭ ಗೊಡಿದ್ದು ಡಿಸೆಂಬರ್ 11 ರಂದು ಕೊನೆಗೊಳ್ಳಲಿದೆ. ಡಿಸೆಂಬರ್ 12 ಪರಿಶೀಲನೆ. ಡಿಸೆಂಬರ್ 14 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ.  ದ.ಕ.ಜಿಲ್ಲೆಯ 220 ಗ್ರಾಪಂಗಳ‌ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ನಡೆಯುವ ಚುನಾವಣೆಗೆ ಸಿದ್ಧತೆ ನಡೆದಿದ್ದು,  ಇವಿಎಂ ಬಳಕೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ‌ ತಿಳಿಸಿದ್ದಾರೆ. ತನ್ನ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ 106 ಮತ್ತು ಎರಡನೆ ಹಂತದಲ್ಲಿ 114 ಗ್ರಾಪಂಗಳಿಗೆ ಚುನಾವಣೆ […]