Blog Archive

ಪಡೀಲಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇರುವ ಅಡೆತಡೆಯನ್ನು ನಿವಾರಿಸಲು ತ್ವರಿತ ಕ್ರಮ: ರಮಾನಾಥ ರೈ

Saturday, October 15th, 2016
stadium-in-benjanapadavu

ಮಂಗಳೂರು: ನಗರ ಹೊರವಲಯದ ಪಡೀಲಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇರುವ ಅಡೆತಡೆಯನ್ನು ನಿವಾರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ನೂತನ ಯೋಜನೆಗಳ ಅನುಷ್ಠಾನ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ ಕಚೇರಿಗೆ ಪಡೀಲಿನಲ್ಲಿ ಅರಣ್ಯ ಇಲಾಖೆಯ ಜಾಗವನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ಇದಕ್ಕೆ ಬೇಕಾದ 40 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಚೆನ್ನೈನ ಹಸಿರು ಪೀಠಕ್ಕೆ ಪರಿಸರದ ಹೆಸರಿನಲ್ಲಿ ಕೆಲವರು ದೂರು […]

ಭಾಷಾ ಮಸೂದೆ ವಿರುದ್ಧ ಆಕ್ರೋಷ : ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ

Wednesday, February 3rd, 2016
Kerala Language Bill

ಕಾಸರಗೋಡು: ಮಣ್ಣಿನ ಮಕ್ಕಳಾದ ಕನ್ನಡಿಗರ ಮೇಲೆ ಕಡ್ಡಾಯವಾಗಿ ಮಲಯಾಳ ಹೇರಿಕೆಯ ಮುಖಾಂತರ ಸಂವಿಧಾನಬದ್ಧವಾಗಿ ನೀಡಲಾದ ಹಕ್ಕು, ಸವಲತ್ತುಗಳನ್ನು ಕಸಿದುಕೊಳ್ಳಲು ಭಾಷಾ ಮಸೂದೆಯ ಅಸ್ತ್ರವನ್ನು ಛೂಬಿಟ್ಟ ಕೇರಳ ಸರಕಾರದ ನೀತಿಯ ವಿರುದ್ಧ ವಿವಿಧ ಕನ್ನಡ ಪರ ಸಂಘ ಸಂಸ್ಥೆಗಳ ಸಂಯುಕ್ತ ಕನ್ನಡ ಹೋರಾಟ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಫೆ.2 ರಂದು ಜಿಲ್ಲಾಧಿಕಾರಿ ಕಚೇರಿಗೆ ಸಾವಿರಾರು ಮಂದಿ ಕನ್ನಡಿಗರು ಜಾಥಾ ನಡೆಸಿ, ಧರಣಿ ಮುಷ್ಕರ ಹೂಡಿದರು. ಭಾಷಾ ಮಸೂದೆಯ ವಿರುದ್ಧ ಕನ್ನಡಿಗರ ಆಕ್ರೋಷ, ಘೋಷಣೆ ಮುಗಿಲುಮುಟ್ಟಿತು. ಕನ್ನಡಿಗರ ಧ್ವನಿ ತಿರುವನಂತಪುರಕ್ಕೆ […]

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಿರಾಕರಿಸಿದ ಜಿಲ್ಲಾಧಿಕಾರಿ

Friday, January 22nd, 2016
DC Ibrahim

ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಅವಕಾಶ ನಿರಾಕರಿಸಿದ ಜಿಲ್ಲಾಧಿಕಾರಿ ಎ. ಬಿ. ಇಬ್ರಾಹಿಂ, ಪ್ರತಿಭಟನೆ ಮಾಡಲೆಂದೇ ನಾಲ್ಕು ಸ್ಥಳಗಳನ್ನು ಗೊತ್ತುಮಾಡಿ ವಾರದೊಳಗೆ ಸೂಚನೆ ಹೊರಡಿಸುವುದಾಗಿ ಮಾಹಿತಿ ನೀಡಿದ್ದಾರೆ. ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿ ಸಂಘಟನೆಗಳು, ಸಾರ್ವಜನಿಕರು ಒಂದು ನಿರ್ದಿಷ್ಟ ಜಾಗದಲ್ಲಿ ಪ್ರತಿಭಟನೆ ನಡೆಸಲು ಸಹಕಾರಿಯಾಗುವಂತೆ ನಗರದ ಕೇಂದ್ರ ಸ್ಥಾನದಲ್ಲಿ ನಾಲ್ಕು ಪ್ರದೇಶಗಳನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು. ನೆಹರೂ ಮೈದಾನದ ಕ್ರಿಕೆಟ್ ಪೆವಿಲಿಯನ್‌ ಬಳಿ ಸಣ್ಣದಾದ ಪ್ರದೇಶ, ನೆಹರೂ ಮೈದಾನದ (ಫುಟ್ಬಾಲ್‌) ಹಿಂಬದಿಯ ಟೆಂಪೋ ನಿಲುಗಡೆ ಸ್ಥಳ, […]

ಹಿಂದೂ ದೇವಸ್ಥಾನಗಳಲ್ಲಿನ ಭಕ್ತರ ಬಂಗಾರ ಸರಕಾರ ಮುಟ್ಟಬಾರದು

Monday, May 11th, 2015
Sanatana

ಮಂಗಳೂರು: ಹಿಂದೂ ದೇವಸ್ಥಾನಗಳಲ್ಲಿನ ಬಂಗಾರ ಬ್ಯಾಂಕ್‌ಗಳಲ್ಲಿಡುವ ಹಾಗೂ ಯೋಗದಿಂದ ಓಂ ತೆಗೆಯುವ ಸರಕಾರದ ಪ್ರಸ್ತಾಪ ವಿರೋಧಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಷ್ಟ್ರೀಯ ಹಿಂದೂ ಆಂದೋಲನ ನಡೆಯಿತು. ಸನಾತನ ಸಂಸ್ಥೆಯ ಸಂಗೀತಾ ಪ್ರಭು ಮಾತನಾಡಿ, ಸರಕಾರ ದೇವಸ್ಥಾನಗಳ ಬಂಗಾರವನ್ನು ಬ್ಯಾಂಕ್‌ಗಳಲ್ಲಿಡುವ ಪ್ರಸ್ತಾವ ಕೈಬಿಡಬೇಕು ಎಂದರು. ರಾಷ್ಟ್ರೀಯ ಹಿಂದೂ ಆಂದೋಲನದ ವಿವೇಕ ಪೈ ಮಾತನಾಡಿ, ದೇವಸ್ಥಾನಗಳಲ್ಲಿನ ಧನವನ್ನು ಭಕ್ತರು ಧರ್ಮಕಾರ್ಯಕ್ಕಾಗಿ ನೀಡಿರುತ್ತಾರೆ. ಇದರ ಬಳಕೆ ಅಭಿವೃದ್ಧಿಗೆ ಅಲ್ಲ, ಹಿಂದೂ ಧರ್ಮದ ಪ್ರಸಾರಕ್ಕೆ. ಸರಕಾರ ದೇವಸ್ಥಾನಗಳಲ್ಲಿನ ಬಂಗಾರ ತೆಗೆದುಕೊಳ್ಳಲು ನಿರ್ಧರಿಸಿದಲ್ಲಿ […]

ಮಡೆ ಸ್ನಾನವನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ : ಶಿವರಾಮು

Thursday, December 5th, 2013
K-S-Shivaram

ಮಂಗಳೂರು : ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಡೆ ಸ್ನಾನವನ್ನು ವಿರೋಧಿಸಿ ಮತ್ತು ಈ ಕೂಡಲೇ ರಾಜ್ಯ ಸರ್ಕಾರ ಈ ಸಂಪ್ರದಾಯಕ್ಕೆ ತಡೆ ನೀಡ ಬೇಕೆಂದು ಒತ್ತಾಯಿಸಿ ಬರುವ ಡಿಸೆಂಬರ್ 7ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ  ಬುಧವಾರ ನಗರದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದ್ದಾರೆ. ಶಿವರಾಮು ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಸಂಪ್ರದಾಯ, ನಂಬಿಕೆಯ ಹೆಸರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಇತರೆ ದೇವಸ್ಥಾನಗಳಲ್ಲಿ ನಡೆಯುತ್ತಿರುವ ಮಡೆ ಸ್ನಾನ ಅಮಾನವೀಯವಾಗಿದೆ. […]

ಮುಖ್ಯಮಂತ್ರಿಯವರು ರಾಜೀನಾಮೆ ನೀಡಬೇಕು : ದ.ಕ ಜಿಲ್ಲಾ ಯುವ ಮೋರ್ಚಾ

Tuesday, November 26th, 2013
BJP-Y.M

ಮಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪ ಸಂಖ್ಯಾತರ ತುಷ್ಟೀಕರಣ ನೀತಿ ಅನುಸರಿಸುತ್ತಿದ್ದಾರೆ  ಹಾಗಾಗಿ ಮುಖ್ಯಮಂತ್ರಿಯವರು ರಾಜೀನಾಮೆ ನೀಡಬೇಕು ಎಂದು ಅಗ್ರಹಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ವತಿಯಿಂದ ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಯುವಮೋರ್ಚಾದ ರಾಜ್ಯಾಧ್ಯಕ್ಷ ಪಿ.ಮುನಿರಾಜು, ಇಂಡಿಯನ್ ಮುಜಾಹಿದ್ದೀನ್ ಎಂಬ ಭಯೋತ್ಪಾದನಾ ಸಂಘಟನೆಯನ್ನು ಹುಟ್ಟು ಹಾಕಿ ಭಯೋತ್ಪಾದನಾ ಕೃತ್ಯಗಳನ್ನು ನಡೆಸುತ್ತಿರುವ ಕರ್ನಾಟಕದವನೇ ಆಗಿರುವ ಯಾಸಿನ್ ಭಟ್ಕಳ್ ಯಾರೆಂಬುದು ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ರಾಜ್ಯದ […]

ಧರ್ಮಸ್ಥಳ ಸುತ್ತಮುತ್ತ ನಡೆದ ಎಲ್ಲಾ ಅಸಹಜ ಸಾವುಗಳನ್ನು ಸಿಬಿಐಗೆ ಒಪ್ಪಿಸಲು ಮನವಿ: ಎಸ್‍ಎಫ್‍ಐ

Friday, November 8th, 2013
SFI

ಮಂಗಳೂರು : ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐಗೆ ವಹಿಸಲು ಮತ್ತು ಧರ್ಮಸ್ಥಳ ಸುತ್ತಮುತ್ತ ನಡೆದ ಅಸಹಜ ಸಾವು ಗಳನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸಿ ನ. 7 ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ  ಪ್ರತಿಭಟನೆ ನಡೆಯಿತು. ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‍ಎಫ್‍ಐ)ನ ಕಾರ್ಯದರ್ಶಿ ಜೀವನ್‍ರಾಜ್ ಕುತ್ತಾರ್  ಮಾತನಾಡಿ , ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಈವರೆಗೆ ನಡೆದ ಬಹುತೇಕ ಕೊಲೆ ಮತ್ತು ಅತ್ಯಾಚಾರಗಳು ದ್ವೇಷದಿಂದ ನಡೆದದ್ದು. ಇಲ್ಲಿ ಜನರ ಆಸ್ತಿ ಲಪಟಾಯಿಸುವ ಉದ್ದೇಶ ಪ್ರಮುಖವಾಗಿತ್ತು ಎಂದು ಹೇಳಿದರು. […]

ದ.ಕ ಜಿಲ್ಲೆಯಲ್ಲಾದ ಮಹಿಳೆಯರ ಅಸಹಜ ಸಾವುಗಳ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

Thursday, October 10th, 2013
Protest

ಮಂಗಳೂರು : ದ.ಕ ಜಿಲ್ಲೆಯಲ್ಲಾದ ಮಹಿಳೆಯರ ಅಸಹಜ ಸಾವುಗಳ ಸಮಗ್ರ ತನಿಖೆಗೆ ಆಗ್ರಹಿಸಿ ಹಾಗೂ ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿ‌ಐ ತನಿಖೆಗೆ ಒತ್ತಾಯಿಸುವಂತೆ ವಿವಿಧ ಸಂಘಟನೆಗಳ ವತಿಯಿಂದ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಯಿತು. ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಟಿ.ಎನ್.ಸೀಮಾ ಅವರು ಪ್ರತಿಭಟನೆಯನ್ನುದ್ದೇಶಿಸಿ ,  ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿಯಾದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೊಳಗಾಗಿ ಒಂದು ವರ್ಷವಾಗಿದೆ. ಇಲ್ಲಿಯವರೆಗೂ ನಿಜವಾದ ಅಪರಾಧಿಗಳನ್ನು ಬಂಧಿಸಲು […]

ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ದಿ ಕಾರ್ಯಕ್ರಮಗಳ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

Monday, September 30th, 2013
yettina-hole

ಮಂಗಳೂರು : ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ದಿ ಕಾರ್ಯಕ್ರಮಗಳ ಪರಿಶೀಲನಾ ಸಭೆಯಲ್ಲಿ, ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಆಡಳಿತಕ್ಕೆ ಬಂದಮೇಲೆ ಕಣ್ಣಿಗೆ ಕಾಣುವ ರೀತಿಯಲ್ಲಿ ಬಲಾವಣೆ ನಡೆಯಬೇಕಾಗಿದೆ. ಕಾನೂನು ಸುವ್ಯವಸ್ಥೆ, ಜನರಿಗೆ ನ್ಯಾಯ ಒದಗಿಸುವಂತಹದು ಹಾಗೂ ಇಂತಹ ಹಲವಾರು ಜನಪರ ಕಾರ್ಯಗಳ ಫಲಿತಾಂಶವನ್ನು ಜನಸಾಮಾನ್ಯರಿಗೆ ನೀಡುವಲ್ಲಿ ಡಿಸಿ, ಸಿ‌ಒ, ಹಾಗೂ ಪೊಲೀಸ್ ಅಧಿಕಾರಿಗಳು ಪ್ರಾಮಾಣಿಕವಾಗಿ, ಪರಿಣಾಮಕಾರಿಯಾಗಿ ಕೆಲಸ ಮಾಡಿದರೆ ಜನರ ಸಮಸ್ಯೆ ಪರಿಹಾರ ಮಾಡಲು ಸಾಧ್ಯ ತಿಳಿಸಿದರು. […]

ಅಕ್ಷತಾ ಸಾವಿನ ನಿಜಾಂಶ ಬಯಲಾಗಲಿ – ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹ.

Saturday, September 28th, 2013
mass protest

ಮಂಗಳೂರು  : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಬಾಗದಲ್ಲಿ ರಥಬೀದಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕು.ಅಕ್ಷತಾ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ಸಾವಿನ ಕುರಿತ್ತಂತೆ ಪೊಲೀಸ್ ಇಲಾಖೆಯು ನಿಷ್ಪಕ್ಷಪಾತ ತನಿಖೆ ನಡೆಸಿಬೇಕು ಎಂದು ಅಗ್ರಹಿಸಿ ಶುಕ್ರವಾರ ಪ್ರತಿಭಟನೆ ನಡೆಯಿತು. ಸಿ‌ಎಫ್‌ಐ ಜಿಲ್ಲಾಧ್ಯಕ್ಷ ಸನಾವುಲ್ಲಾ,  ಪ್ರತಿಭಟನಾಕಾರರನ್ನು ಉದ್ದೇಶಿಸಿ ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ಮಹಿಳೆಯರ ಹಾಗೂ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯವು ಯಥೇಚ್ಚವಾಗಿ ನಡೆಯುತ್ತಿದೆ. ಇಂತಹ ದೌರ್ಜನ್ಯದ ವಿರುದ್ದ ನಾವು ಜಾತಿ, […]