Blog Archive

ಮೂಡಬಿದ್ರೆಯಲ್ಲಿ ಹಳೆ ನಿಷ್ಠಾವಂತ ಅಮರನಾಥ್ ಶೆಟ್ಟಿಗೆ ಜೆಡಿಎಸ್ ಟಿಕೆಟ್

Saturday, April 21st, 2018
amaranath

ಮಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮೂಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಹಳೆ ನಿಷ್ಠಾವಂತ ಮುಖಂಡ ಅಮರನಾಥ್ ಶೆಟ್ಟಿ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದೆ. ಈ ಮೂಲಕ ಮುಲ್ಕಿ – ಮೂಡಬಿದ್ರೆ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಪ್ರಬಲ ಸ್ಪರ್ಧೆ ನೀಡಲು ತಂತ್ರ ರೂಪಿಸಿದೆ. ಈ ಹಿನ್ನೆಲೆಯಲ್ಲಿ ತ್ರಿಕೋನ ಸ್ಪರ್ಧೆಗೆ ವೇದಿಗೆ ಸಿದ್ದವಾಗಿದೆ. ಮೂಲ್ಕಿ ಮೂಡಬಿದ್ರೆ ಕ್ಷೇತ್ರ ದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮುಲ್ಕಿಯ ಉದ್ಯಮಿ ಜೀವನ್ ಶೆಟ್ಟಿ ಅವರನ್ನು ಕಣಕ್ಕಿಳಿಸಲು ನಿನ್ನೆ ಜೆಡಿಎಸ್ ವರಿಷ್ಠರು ತೀರ್ಮಾನಿಸಿದ್ದರು. ಆದರೆ […]

ಜೆಡಿಎಸ್‌ನಿಂದ ಸುಮತಿ ಹೆಗ್ಡೆ ನಾಮಪತ್ರ ಸಲ್ಲಿಕೆ

Saturday, April 21st, 2018
sumathi-hegde

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜಾತ್ಯಾತೀತ ಜನತಾದಳದಿಂದ ಅಭ್ಯರ್ಥಿಯಾಗಿ ಸುಮತಿ ಹೆಗ್ಡೆಯವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ಮುಖಂಡರು ಜತೆಗಿದ್ದರು.

ಮೂಡಬಿದ್ರೆಯಿಂದ ಉದ್ಯಮಿ ಜೀವನ್ ಶೆಟ್ಟಿ ಕಣಕ್ಕಿಳಿಸಲು ಜೆಡಿಎಸ್ ತೀರ್ಮಾನ

Friday, April 20th, 2018
jeeven-shetty

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿಯ ಹೋರಾಟಕ್ಕೆ ವೇದಿಕೆಯಾಗಲಿದೆ . ಜಿಲ್ಲೆಯ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಈ ನಡುವೆ ಮೂಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಆಭ್ಯರ್ಥಿ ಕಣಕ್ಕಿಳಿಸಲಿದ್ದು ಇಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಮೂಲ್ಕಿ ಮೂಡಬಿದ್ರೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಜೀವನ್ ಶೆಟ್ಟಿ ಆಯ್ಕೆಯಾಗಿದ್ದರೆ. ಈ ಹಿಂದೆ ಮುಲ್ಕಿ-ಮೂಡಬಿದ್ರೆ ಕ್ಷೇತ್ರದಿಂದ ಮಾಜಿ ಸಚಿವ ಅಮರನಾಥ್ ಶೆಟ್ಟಿ ಸ್ಪರ್ಧಿಸುತ್ತಿದ್ದರು. […]

ಜೆಡಿಎಸ್‌-ಬಿಜೆಪಿಯನ್ನು ಕಟುವಾಗಿ ಟೀಕಿಸಿದ ಮುಖ್ಯಮಂತ್ರಿ ಚಂದ್ರು

Friday, April 13th, 2018
mukyamantri-chandru

ಮೈಸೂರು: ಇನ್ನು ಮುಂದೆ ಮನೆಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಇದೆ ಅಂತ ಬೋರ್ಡ್ ಹಾಕಬೇಕಿದೆ ಎಂದು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಕಟುವಾಗಿ ಟೀಕಿಸಿದ್ದಾರೆ. ನಗರದ ಆಂದೋಲನ ವೃತ್ತದಲ್ಲಿ ರಾಮಕೃಷ್ಣ ಪರಮಹಂಸ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ, ಯತೀಂದ್ರ ಸಿದ್ದರಾಮಯ್ಯ ಪರ ಪ್ರಚಾರ ನಡೆಸುತ್ತಿರುವ ಪ್ರಗತಿಪರ ವೇದಿಕೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಜೆಡಿಎಸ್ ಹಾಗೂ ಬಿಜೆಪಿ ವಿರುದ್ಧ ಕಟುವಾಗಿ ಟೀಕಿಸಿದರು. ಜೆಡಿಎಸ್ ಹಾಗೂ ಬಿಜೆಪಿಯಿಂದ ರಾಜ್ಯಕ್ಕೆ ಏನು ಕೊಡುಗೆ ಇಲ್ಲ. ಪರಸ್ಪರ ಕಚ್ಚಾಟದಿಂದಲೇ ಕಾಲ ಕಳೆಯುವ ಇವರು ಜನರಿಗೆ […]

50ಕ್ಕೂ ಅಧಿಕ ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

Thursday, April 12th, 2018
congress

ಕಾಪು: ಬಿಜೆಪಿ ಮತ್ತು ಜೆಡಿಎಸ್‌ನ ಉಚ್ಚಿಲ ಭಾಗದ 50ಕ್ಕೂ ಅಧಿಕ ಜಿಲ್ಲಾ ಮತ್ತು ರಾಜ್ಯ ಮುಖಂಡರು ಇತ್ತೀಚೆಗೆ ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಬಿಜೆಪಿ ಮುಖಂಡರಾದ ದುಮಣಿ ಭಟ್, ನಾರಾಯಣ ಬೆಳ್ಚಡ ಹಾಗೂ ಜೆಡಿಎಸ್ ಮುಖಂಡರಾದ ಅಬ್ದುಲ್ಲತೀಫ್ ದಾವೂದ್ ನೇತೃತ್ವದಲ್ಲಿ ಶಾಬಾನ್ ಉಚ್ಚಿಲ, ಗುರುಪ್ರಸಾದ್ ಭಟ್ ಉಚ್ಚಿಲ, ಅಬ್ದುಲ್ ಹಮೀದ್ ಸಹಿತ ಅನೇಕ ಮುಖಂಡರನ್ನು ಶಾಸಕ ವಿನಯ ಕುಮಾರ್ ಸೊರಕೆ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ […]

ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿಯಾದ ಹೆಚ್‌ಡಿಡಿ… ಸರ್ಕಾರದ ವಿರುದ್ಧ ದೂರು

Thursday, April 5th, 2018
devegowda

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುವ ಬಗ್ಗೆ ನನಗೆ ಅನುಮಾನವಿದೆ. ರಾಜ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಕಡಿವಾಣ ಹಾಕಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಚುನಾವಣಾ ಆಯಕ್ತ ಓ.ಪಿ ರಾವತ್‌‌ಗೆ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮನವಿ ಮಾಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ ಮಾಡಿದರು. ರಾಜ್ಯದಲ್ಲಿನ ಪ್ರಸ್ತುತ ಪರಿಸ್ಥಿತಿ ಕುರಿತು, ಸರ್ಕಾರ ನಡೆಸುತ್ತಿರುವ ಚುನಾವಣಾ […]

ಕುತೂಹಲ ಮೂಡಿಸಿದೆ ಸಿಎಂ ಸಿದ್ದರಾಮಯ್ಯ-ನಟ ಸುದೀಪ್ ಭೇಟಿ

Thursday, April 5th, 2018
sudeep

ಬೆಂಗಳೂರು: ಚಿತ್ರನಟ ಸುದೀಪ್ ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿ ಸಂದರ್ಭ ಯಾವುದೇ ರಾಜಕೀಯ ಚರ್ಚೆ ಅಥವಾ ಪ್ರಚಾರ ಸಂಬಂಧ ಮಾತುಕತೆ ನಡೆದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಪಕ್ಷದ ಪರ ಪ್ರಚಾರ ಸಂಬಂಧ ಸಿಎಂ ಈ ಸಂದರ್ಭ ಪ್ರಸ್ತಾಪಿಸಿದ್ದು, ಸುದೀಪ್ ಅದಕ್ಕೆ ಯಾವ ಪ್ರತಿಕ್ರಿಯೆ ನೀಡಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಕಳೆದ ವಾರವಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದ […]

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಕೊಲೆ ಯತ್ನ: ಜೆಡಿಎಸ್ ಖಂಡನೆ

Friday, March 9th, 2018
vishwanath

ಮುಲ್ಕಿ: ಬೆಂಗಳೂರು ಲೋಕಾಯುಕ್ತ ಕಚೇರಿಯಲ್ಲಿಯೇ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರ ಮೇಲೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸಿ, ಕೊಲೆ ಯತ್ನ ನಡೆಸಿದ್ದನ್ನು ಜೆಡಿಎಸ್ ಪಕ್ಷ ಖಂಡಿಸುತ್ತದೆ ಎಂದು ಇಕ್ಬಾಲ್ ಅಹ್ಮದ್ ಮುಲ್ಕಿ ತಿಳಿಸಿದ್ದಾರೆ. ಸಾಂವಿಧಾನಿಕ ಉನ್ನತ ಹುದ್ದೆಯಾಗಿರುವ ಲೋಕಾಯುಕ್ತದ ನ್ಯಾಯಮೂರ್ತಿಗಳ ಮೇಲೆ ಕಚೇರಿಯೊಳಗೆಯೇ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಯತ್ನವು ರಾಜ್ಯದ ಕಾನೂನು ಸುವ್ಯವಸ್ಥೆ ಎಷ್ಟು ಭದ್ರವಾಗಿದೆಯೆಂದು ತಿಳಿಸುತ್ತೆ. ಉನ್ನತ ಅಧಿಕಾರಿಯೋರ್ವರ ಮೇಲೆಯೇ ಮಾರಕ ಆಯುಧದೊಂದಿಗೆ ಸುಲಲಿತವಾಗಿ ಹಾಡುಹಗಲೇ ಎಲ್ಲಾ ಭದ್ರತಾ ತಪಾಸಣಾ ಕೇಂದ್ರವನ್ನು ದಾಟಿ ಈ ರೀತಿಯಲ್ಲಿ […]

ಮಕ್ಕಳಿಗೆ ಆಕ್ಸಿಜನ್ ಪೂರೈಸಲಾಗದ ಆದಿತ್ಯನಾಥ್ : ಎಚ್ ಡಿಕೆ ವಾಗ್ದಾಳಿ

Wednesday, March 7th, 2018
kumarswamy

ಮಂಗಳೂರು: ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಲ್ಲಿನ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳಿಗೆ ಆಕ್ಸಿಜನ್ ಪೂರೈಸಲು ಆಗಲಿಲ್ಲ. ರಾಜ್ಯದಲ್ಲಿ ಸುರಕ್ಷತೆ ಸಂದೇಶ ಕೊಡಲು ಇಲ್ಲಿಯ ಬಿಜೆಪಿಯ ನಾಯಕರು ಅವರನ್ನು ಕರೆಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಆಯೋಜಿಸಿದ್ದ ಜೆಡಿಎಸ್ ವಿಕಾಸ ಪರ್ವ ಸಮಾವೇಶದಲ್ಲಿ ಅವರು ಮಾತನಾಡಿ, ರಾಜ್ಯದ ಬಿಜೆಪಿ ನಾಯಕರು ಭೋಗಿಗಳಾಗಿದ್ದಕ್ಕೆ, ಯೋಗಿ ಆದವರನ್ನು ರಾಜ್ಯಕ್ಕೆ ಕರೆಸಿದ್ದಾರೆ. ವಿಧಾನಸೌಧದಲ್ಲಿ ನೀಲಿ ಚಿತ್ರಗಳನ್ನು ನೋಡಿ ಬಿಜೆಪಿಯ ಕೆಲವರು ಭೋಗಿಗಳಾಗಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ […]

ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾನು ನೆಪಮಾತ್ರಕ್ಕೆ ಸಿಎಂ: ಹೆಚ್‌ಡಿಕೆ

Tuesday, March 6th, 2018
JDs-mangaluru

ಮಂಗಳೂರು: ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾನು ನೆಪಮಾತ್ರಕ್ಕೆ ಸಿಎಂ. ರಾಜ್ಯದ ಆರೂವರೆ ಕೋಟಿ ಜನರೇ ನಿಜವಾದ ಮುಖ್ಯಮಂತ್ರಿಗಳು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಗಳೂರಿನಲ್ಲಿ ಬಲ್ಲವರೊಡನೆ ಬೌದ್ಧಿಕ ಸಂವಾದ ನಡೆಸಿದ ಅವರು, ಕೇವಲ ಅಧಿಕಾರಿಗಳ ಸಲಹೆಯನ್ನು ಅನುಸರಿಸಿ ರಾಜ್ಯಾಡಳಿತ ಮಾಡುವುದಲ್ಲ. ಜನರ ಸಲಹೆಗೆ ಮನ್ನಣೆ ಕೊಡುವುದೇ ಜೆಡಿಎಸ್‌ನ ಕಲ್ಪನೆ ಎಂದರು. ಎತ್ತಿನಹೊಳೆ ಯೋಜನೆಯ ಬಗ್ಗೆ ತಮ್ಮ ನಿಲುವೇನು ಎಂದು ಪರಿಸರವಾದಿ ದಿನೇಶ್ ಹೊಳ್ಳ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು […]