Blog Archive

ಜೆಡಿಎಸ್ ಅಧಿಕಾರಕ್ಕೆ ಬಂದರೆ ತಜ್ಞ ವೈದ್ಯರೇ ಆರೋಗ್ಯ ಮಂತ್ರಿ: ಕುಮಾರಸ್ವಾಮಿ

Tuesday, March 6th, 2018
kumarswamy

ಮಂಗಳೂರು: ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಮುಖ ಆದ್ಯತೆ ನೀಡಲಾಗುವುದು. ಜತೆಗೆ ವಿಧಾನಸಭೆಗೆ ಆಯ್ಕೆಯಾದ ಸದಸ್ಯರನ್ನು ಹೊರತುಪಡಿಸಿ, ಆರೋಗ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ತಜ್ಞ ವೈದ್ಯರನ್ನೇ ಆರೋಗ್ಯ ಸಚಿವರ ಸ್ಥಾನ ನೀಡಲಾಗುವುದು. ಈ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ. ಅವರು ಇಂದು ನಗರದ ಹೊಟೇಲ್‌ನಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಆಯೋಜಿಸಲಾದ ಬುದ್ಧಿಜೀವಿಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ನವಸಾಕ್ಷರ […]

ಬೆಂಗಳೂರನ್ನ ಮೊದಲು ಹಾಳು ಮಾಡಿದ್ದೇ ಬಿಜೆಪಿ: ಹೆಚ್‌ಡಿಕೆ ವಾಗ್ದಾಳಿ

Friday, March 2nd, 2018
kumarswamy

ಮೈಸೂರು: ಮೊದಲು ಬೆಂಗಳೂರನ್ನ ಹಾಳು‌ ಮಾಡಿದ್ದೇ ಬಿಜೆಪಿಯವರು ಎಂದು ಬೆಂಗಳೂರು ರಕ್ಷಿಸಿ ಪಾದಯಾತ್ರೆ ಬಗ್ಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ನಗರದ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಬಿಜೆಪಿಯವರು ಈಗ ಪಾದಯಾತ್ರೆಯನ್ನ ಏಕೆ ಮಾಡುತ್ತಿದ್ದಾರೆ ಗೊತ್ತಿಲ್ಲ. ಆದರೆ 5 ವರ್ಷದ ಆಡಳಿತದಲ್ಲಿ ಬೆಂಗಳೂರು ಅಭಿವೃದ್ಧಿಗೆ ಸಿದ್ದರಾಮಯ್ಯ ಏನನ್ನು ಕೊಟ್ಟಿಲ್ಲ‌. ಬೆಂಗಳೂರು ಮತ್ತು‌ ಮೈಸೂರನಲ್ಲಿ ಏನಾದರು‌ ಅಭಿವೃದ್ಧಿಯಾಗಿದೆ ಅಂದರೆ ಅದು‌ ನಮ್ಮ […]

ಯುಟಿ ಖಾದರ್ ವಿರುದ್ಧ ಜೆಡಿಎಸ್ ನಿಂದ ಮುಸ್ಲಿಂ ಮುಖಂಡ ಅಶ್ರಫ್ ಕಣಕ್ಕೆ?

Friday, February 16th, 2018
ashraf

ಮಂಗಳೂರು: ಕರಾವಳಿಯಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ ಮುಖಂಡ, ಮಾಜಿ ಮೇಯರ್ ಹಾಗೂ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅಶ್ರಫ್ ಜೆಡಿಎಸ್ ಸೇರುತ್ತಿರುವುದು ಖಚಿತವಾಗಿದೆ. ಈ ನಿಟ್ಟಿನಲ್ಲಿ ಆಶ್ರಫ್ ಈಗಾಗಲೇ ಕಾಂಗ್ರೆಸಿಗೆ ಗುಡ್ ಬೈ ಹೇಳಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಅಶ್ರಫ್ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಲಿದ್ದಾರೆ. ಈ ನಡುವೆ ಇನ್ನೊಂದು ಮಾಹಿತಿಯ ಪ್ರಕಾರ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಯು.ಟಿ.ಖಾದರ್ ಅವರ ಎದುರು ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ […]

ದ.ಕ, ಉಡುಪಿ ಜಿಲ್ಲೆ ಎಲ್ಲ ಕ್ಷೇತ್ರಗಳಲ್ಲಿ ಜೆಡಿಎಸ್‌ ಸ್ಪರ್ಧೆ

Saturday, February 10th, 2018
madhu-bangarappa

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷದ ವರಿಷ್ಠ ನಾಯಕರಾದ ಎಚ್‌.ಡಿ. ದೇವೇಗೌಡರು ಹಾಗೂ ಎಚ್‌.ಡಿ. ಕುಮಾರ ಸ್ವಾಮಿ ನಿರ್ಧರಿಸಿದ್ದಾರೆ ಎಂದು ರಾಜ್ಯ ಯುವಜನತಾದಳ ಅಧ್ಯಕ್ಷ, ಶಾಸಕ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಜೆಡಿಎಸ್‌ ಈಗಾಗಲೇ ರಾಜ್ಯದಲ್ಲಿ ಬಿಎಸ್‌ಪಿಯೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಂಡಿದೆ. ಇದಲ್ಲದೆ ಸಿಪಿಎಂ ಮತ್ತು ಸಿಪಿಐ ಪಕ್ಷಗಳ ಜತೆಗೂ ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಕ್ಕೆ ಒಲವು ವ್ಯಕ್ತವಾಗುತ್ತಿದೆ. ಕಾಂಗ್ರೆಸ್‌ ಹಾಗೂ […]

ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಸ್ಥಾನಕ್ಕೆ ಅಶ್ರಫ್‌ ಗುಡ್‌ ಬೈ

Friday, February 9th, 2018
ashraf

ಮಂಗಳೂರು: ಮಾಜಿ ಮೇಯರ್ ಕೆ. ಅಶ್ರಫ್ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಅಶ್ರಫ್‌ ಕಾಂಗ್ರೆಸ್‌ನ ಸಕ್ರಿಯ ಮುಖಂಡರಾಗಿದ್ದವರು. ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಬೆಂಬಗಲಿರಾಗಿದ್ದ ಅಶ್ರಫ್‌, ಬಳಿಕ ಪೂಜಾರಿ ವಿರುದ್ಧವೇ ತಮ್ಮ ಅಸಮಾಧಾನ ಹೊರಹಾಕಿದ್ದರು. ನಂತರ ಕಾಂಗ್ರೆಸ್‌ ಪಕ್ಷದ ಕಾರ್ಯ ಚಟುವಟಿಕೆಗಳಿಂದಲೇ ದೂರ ಉಳಿದಿದ್ದರು. ಇತ್ತೀಚೆಗೆ ಮತ್ತೆ ಪಕ್ಷದಲ್ಲಿ ಸಕ್ರಿಯರಾಗಿದ್ದ ಅಶ್ರಫ್ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರನ್ನಾಗಿ […]

‘ಕೆಟ್ಟ ಆಡಳಿತಗಾರ’ ಸಿದ್ದರಾಮಯ್ಯ ಜತೆ ವೇದಿಕೆ ಹಂಚಿಕೊಳ್ಳಲ್ಲ: ದೇವೇಗೌಡ

Wednesday, January 24th, 2018
siddaramaih

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಹಿನ್ನಲೆಯಲ್ಲಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿರುವ ದೇವೇಗೌಡರು, ಸಿದ್ದರಾಮಯ್ಯ ಸರಕಾರ ಅತ್ಯಂತ ಕೆಟ್ಟ ಸರಕಾರ ಎಂದು ಜರೆದಿದ್ದಾರೆ. ದೇವೇಗೌಡರ ಈ ನಡೆಯನ್ನು ಬಿಜೆಪಿಯೆಡೆಗಿನ ಜೆಡಿಎಸ್ ನ ಇನ್ನೊಂದು ಹೆಜ್ಜೆ ಎಂದು ನೋಡಲಾಗುತ್ತಿದೆ. ದೇವೇಗೌಡರು ಫೆಬ್ರವರಿ 7ರಂದು ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ವೇದಿಕೆ ಹಂಚಿಕೊಳ್ಳಬೇಕಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ […]

ರೈತ ಪರ ಯಾತ್ರೆ ಮಾಡಲು ಸಜ್ಜಾಗಿರುವ ಕುಮಾರಸ್ವಾಮಿ

Monday, January 22nd, 2018
kumaraswamy

ಶಿವಮೊಗ್ಗ: ಬಿಜೆಪಿಯ ಪರಿವರ್ತನಾ ಯಾತ್ರೆ ಮುಗಿದ ನಂತರ ರೈತರ ಪರವಾದ ಯಾತ್ರೆಯೊಂದನ್ನು ಆರಂಭಿಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಭದ್ರಾವತಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಯಡ್ಡಿಯೂರಪ್ಪ ಅವರಿಗೆ ರಾಜ್ಯದ ರೈತರ ಬಗ್ಗೆ ಕಾಳಜಿ ಪ್ರಾರಂಭವಾದಂತೆ ಕಾಣುತ್ತಿದೆ. ಪರಿವರ್ತನಾ ರ್ಯಾಲಿಯಲ್ಲಿ ರೈತರ ಆತ್ಮಹತ್ಯೆಗೆ ರಾಜ್ಯ ಸರ್ಕಾರ ಸ್ಪಂಧಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ ಇಷ್ಟುದಿನ ಅವರು ನಿದ್ದೆ ಮಾಡುತ್ತಿದ್ದರಾ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಕೀಳು ಮಟ್ಟದ ರಾಜಕೀಯ ಆರಂಭವಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ […]

ಎಡಪಕ್ಷಗಳ ಜತೆ ಸೀಟು ಹೊಂದಾಣಿಕೆ ಜೆಡಿಎಸ್ ಸಿದ್ಧ: ದೇವೇಗೌಡ

Monday, January 22nd, 2018
JDS-Devegowda

ಮಂಗಳೂರು: ಒಂದು ವೇಳೆ ಸಿಪಿಎಂ ಮತ್ತು ಸಿಪಿಐ ಪಕ್ಷಗಳು ಮೈತ್ರಿಗೆ ಮುಂದಾದರೆ ಅವರಿಗೆ ಕೆಲ ಸ್ಥಾನಗಳನ್ನು ಬಿಟ್ಟುಕೊಡಲು ಜೆಡಿಎಸ್ ಸಿದ್ಧವಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಫೆಬ್ರವರಿ ಮೂರನೇ ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಒಂದು ವೇಳೆ ವಿಧಾನಸಭೆಯ ಚುನಾವಣೆಯ ನಂತರ ಅತಂತ್ರ ಸ್ಥಿತಿ ನಿರ್ಮಾಣವಾದರೆ, ಯಾವುದೇ ಪಕ್ಷಗಳ ಜತೆ […]

ಬಿಪಿಎಲ್ ಕಾರ್ಡ್ ಸಮಸ್ಯೆ ಬಗೆಹರಿಸಿದ ಶ್ರೇಯಸ್ಸು ನಮ್ಮದು: ಖಾದರ್

Friday, January 19th, 2018
u-t-kader

ಮಂಗಳೂರು :ಹಿಂದಿನ ಬಿಜೆಪಿ ಸರ್ಕಾರ ಬಿಪಿಎಲ್ ಕಾರ್ಡ್ ಸರಿಯಾಗಿ ವಿತರಿಸಿಲ್ಲ ಹಾಗಾಗಿ ಸಾಕಷ್ಟು ಗೊಂದಲಗಳು ಉಂಟಾಗಿತ್ತು, ಆದರೆ ಕಾಂಗ್ರೆಸ್ ಸರ್ಕಾರ 33 ಲಕ್ಷ 70 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದೂವರೆ ಕೋಟಿ ಜನರು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ ಎಲ್ಲವನ್ನೂ ಪಾರದರ್ಶಕ ಅನ್ ಲೈನ್ ವ್ಯವಸ್ಥೆಯಡಿ ತಂದಿದ್ದೇವೆ ಲಕ್ಷಾಂತರ ಬೋಗಸ್ ಕಾರ್ಡ್ ಪತ್ತೆಹಚ್ಚಿದ್ದೇವೆ […]

ಚನ್ನಪಟ್ಟಣ: ಯೋಗೇಶ್ವರ್ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

Wednesday, January 10th, 2018
Yogishwar

ಬೆಂಗಳೂರು: ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಅವರ ಚುನಾವಣಾ ರಾಜಕೀಯಕ್ಕೆ ಅಂತ್ಯ ಹಾಡಲು ಜೆಡಿಎಸ್ ಹಾಗೂ ಕಾಂಗ್ರೆಸ್ ಪಣತೊಟ್ಟಂತೆ ಕಾಣುತ್ತಿದೆ. ಪ್ರಬಲ ಒಕ್ಕಲಿಗ ನಾಯಕ, ಹಾಲಿ ಶಾಸಕ ಯೋಗೇಶ್ವರ್ ಅವರನ್ನು ಮಣಿಸಲು ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗಲಿದ್ದು, ಕಳೆದ ಎರಡು ದಿನಗಳಿಂದ ಕುಮಾರಸ್ವಾಮಿ ಅವರ ಮನೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದು ಜೆಡಿಎಸ್ […]