Blog Archive

ದ.ಕ ಜೆಡಿಎಸ್​​​ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮೊಹಮ್ಮದ್ ಕುಂಞಿ ರಾಜೀನಾಮೆ

Tuesday, October 8th, 2019
mohhamad

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಹಮ್ಮದ್ ಕುಂಞಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಹಮ್ಮದ್ ಕುಂಞಿ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದರು. ಕಳೆದ ನಾಲ್ಕು ವರ್ಷದಿಂದ ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೇನೆ, ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಿಗೆ ನೀಡಲಾಗಿದೆ. ಅನಾರೋಗ್ಯದ ಕಾರಣ ಮತ್ತು ವೈಯಕ್ತಿಕ ಕಾರಣಗಳಿಂದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು. ಇನ್ನು ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರ […]

ವಿಧಾನಪರಿಷತ್‌ ಸದಸ್ಯ ಬಿ.ಎಂ. ಫಾರೂಕ್‌ಗೆ ಸಚಿವ ಸ್ಥಾನ

Monday, June 10th, 2019
BM Farooq

ಮಂಗಳೂರು: ಜೂ. 12ರಂದು ನಡೆಯುವ  ರಾಜ್ಯ ಸಂಪುಟ ವಿಸ್ತರಣೆಯಲ್ಲಿ ಜೆಡಿಎಸ್‌ ಕೋಟಾದಲ್ಲಿ ವಿಧಾನಪರಿಷತ್‌ ಸದಸ್ಯ ಹಾಗೂ ಜೆಡಿಎಸ್‌ ಮಹಾಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್‌ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಲಾಗಿದೆ. ಇದರಿಂದಾಗಿ ಕರಾವಳಿಗೆ ಇನ್ನೊಂದು ಸಚಿವ ಸ್ಥಾನ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್‌ನಿಂದ ಮಂಗಳೂರು ಶಾಸಕ ಯು.ಟಿ. ಖಾದರ್‌ ಅವರು ಈಗಾಗಲೇ ಸಚಿವರಾಗಿದ್ದಾರೆ. ಜೆಡಿಎಸ್‌ ಕೋಟಾದಲ್ಲಿ ಎರಡು ಸಚಿವರ ಸೇರ್ಪಡೆಗೆ ಅವಕಾಶವಿರುವುದರಿಂದ ಒಂದು ಸ್ಥಾನ ಪಕ್ಷೇತರರಿಗೆ ನೀಡಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದು ಇನ್ನೊಂದು ಸ್ಥಾನವನ್ನು ಅಲ್ಪಸಂಖ್ಯಾಕ ಸಮುದಾಯಕ್ಕೆ […]

ವಿಪಕ್ಷೀಯರು ಭ್ರಷ್ಟಾಚಾರದ ಮೂಲಕ ದೇಶದ ಸಂಪತ್ತನ್ನು ಕೊಳ್ಳೆ ಹೊಡೆದರು

Monday, April 15th, 2019
Vijayasankalpa

ಮಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮತ್ತಿತರ ಪಕ್ಷಗಳು ವಂಶೋದಯದ ಬಗ್ಗೆಯೇ ಗಮನವನ್ನು ಕೇಂದ್ರೀಕರಿಸಿವೆ. ಆದರೆ ಬಿಜೆಪಿಯು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾ ನತೆಯ ಲಾಭ ದೊರೆಯಬೇಕೆಂಬ ಅಂತ್ಯೋದಯದ ತಣ್ತೀವನ್ನು ಹೊಂದಿದೆ. ವಂಶೋ ದಯದವರು ಅವರ ಕುಟುಂಬದ ಹಿತಾಸಕ್ತಿ ಯನ್ನೇ ನೋಡಿಕೊಳ್ಳುವರು. ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳೂರಿನ ಕೇಂದ್ರ ಮೈದಾನದಲ್ಲಿ ಶನಿವಾರ ಬಿಜೆಪಿ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌-ಜೆಡಿಎಸ್‌ ಅವರ ಕುಟುಂಬಿಕರನ್ನು ಮಾತ್ರ ಅಧಿಕಾರಕ್ಕೆ ತರಲು ಯತ್ನಿಸುವರು ಎಂದರು. ವಿಪಕ್ಷೀಯರು ಭ್ರಷ್ಟಾಚಾರದ ಮೂಲಕ ದೇಶದ ಸಂಪತ್ತನ್ನು ಕೊಳ್ಳೆ […]

ಸರ್ಕಾರದಲ್ಲಿ ಯಾರ ಮೇಲೆಯೂ ಒತ್ತಡವಿಲ್ಲ: ಸಚಿವ ದೇಶಪಾಂಡೆ

Monday, December 17th, 2018
deshpande

ಬೆಳಗಾವಿ: ಯಾರ ಮೇಲೆ ಯಾರ ಒತ್ತಡವೂ ಇಲ್ಲ. ಎಲ್ಲರೂ ಪರಸ್ಪರ ವಿಶ್ವಾಸದಿಂದ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದರು. ಜೆಡಿಎಸ್ನವರಿಂದ ಕೈಶಾಸಕರಿಗೆ ಒತ್ತಡ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದೆಲ್ಲಾ ಸತ್ಯಕ್ಕೆ ದೂರವಾದ ಮಾತು. ಹಾಗೇನಾದರೂ ಅಸಮಾಧಾನಗಳಿದ್ದರೆ ಕಾಂಗ್ರೆಸ್ ಶಾಸಕಾಂಗ‌ ಪಕ್ಷದ ನಾಯಕ ಸಿದ್ದರಾಮಯ್ಯ ಅದನ್ನು ಬಗೆಹರಿಸುತ್ತಾರೆ. ಸಮ್ಮಿಶ್ರ ಸರ್ಕಾರದ ಶಾಸಕರಿಗೆ ಯಾವುದೇ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದರು. ಸಚಿವ ಸಂಪುಟ ವಿಸ್ತರಣೆ ವೇಳೆ ಯಾರು ಇರಬೇಕು, ಯಾರು ಇರಬಾರದು ಎಂದು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಕೆಲವರನ್ನು […]

ಹಾಸನದ ಜೆಡಿಎಸ್ ಮಾಜಿ ಶಾಸಕ ಎಚ್‌ಎಸ್ ಪ್ರಕಾಶ್ ನಿಧನ

Tuesday, November 27th, 2018
prakash

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದ ಎಚ್‌.ಎಸ್. ಪ್ರಕಾಶ್(67) ಮಂಗಳವಾರ ಹೃದಯಾಘಾತದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾರೆ. ಮೃತರು, ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ, 67 ವರ್ಷದ ಎಚ್‌ಎಸ್ ಪ್ರಕಾಶ್ ಅವರ ಪೂರ್ಣ ಹೆಸರು ಹಾಸನ ಸಣ್ಣಯ್ಯ ಪ್ರಕಾಶ್, 1994ರಲ್ಲಿ ಮೊದಲ ಬಾರಿಗೆ ಜನತಾದಳದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಪ್ರಕಾಶ್ 1999ರಲ್ಲಿ ಸೋಲು ಅನುಭವಿಸಿದ್ದರು. ನಂತರ 2004,2008,2013ರಲ್ಲಿ ಸತತ ಹ್ಯಾಟ್ರಿಕ್ ಬಾರಿಸಿದ್ದ ಪ್ರಕಾಶ್, ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರೀತಂ […]

ಸೋತ ಮಾತ್ರಕ್ಕೆ ಕೈ ಕಟ್ಟಿ ಕೂರಲ್ಲ, ನಾವೇನು ಎಂದು ತೋರಿಸಲಿದ್ದೇವೆ: ಬಿ.ಎಸ್.ಯಡಿಯೂರಪ್ಪ

Tuesday, November 6th, 2018
yedyurappa

ಬೆಂಗಳೂರು: ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಸೋತಿದೆ ಎಂದು ಕೈಕಟ್ಟಿ ಕೂರುವುದಿಲ್ಲ. ನಾವು ಸೋತದ್ದು ಬಳ್ಳಾರಿ ಮಾತ್ರ. ನಮ್ಮ ಸೋಲನ್ನು ಆತ್ಮಾವಲೋಕನ ಮಾಡಿಕೊಂಡು ಮುಂದಿನ 2019ರ ಚುನಾವಣೆಯನ್ನು ಗೆಲ್ಲುವತ್ತ ನಮ್ಮ ದೃಷ್ಟಿಯನ್ನು ಹರಿಸುತ್ತೇವೆ. ನಾವೇನು ಎಂದು ಮುಂದೆ ತೋರಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 5 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತ ಚಲಾಯಿಸಿದ ಎಲ್ಲಾ ಮತದಾರರಿಗೂ ನನ್ನ ಅಭಿನಂದನೆ ಮತ್ತು ವಂದನೆಗಳು. 5 ಕ್ಷೇತ್ರಗಳ ಮತದಾರರ ತೀರ್ಪನ್ನು ನಾನು ಮತ್ತು ನಮ್ಮ ಪಕ್ಷ ಸ್ವೀಕರಿಸುತ್ತದೆ. ಸತ್ಯಸಂಗತಿ […]

ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಡಮ್ಮಿ ಕ್ಯಾಂಡಿಡೇಟ್: ಕುಮಾರ್ ಬಂಗಾರಪ್ಪ

Tuesday, October 23rd, 2018
kumar-bangarappa

ಶಿವಮೊಗ್ಗ: ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಡಮ್ಮಿ ಕ್ಯಾಂಡಿಡೇಟ್ ಎಂದು ಕುಮಾರ್ ಬಂಗಾರಪ್ಪ ಸಹೋದರನ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಈಗಾಗಲೇ ಪಕ್ಷದ ಕಟ್ಟಕಡೆಯ ಕಾರ್ಯಕರ್ತರನ್ನು ಮುಟ್ಟುವ ಕೆಲಸವನ್ನು ಎರಡು ಬಾರಿ ಮಾಡಿದೆ. ಸಮ್ಮಿಶ್ರ ಸರ್ಕಾರ ಮಧು ಬಂಗಾರಪ್ಪರನ್ನು ಅಭ್ಯರ್ಥಿಯನ್ನಾಗಿ ಮ‌ಾಡಲು ಕಾಗೋಡು ತಿಮ್ಮಪ್ಪ ಹಾಗೂ ಡಿ.ಕೆ.ಶಿವಕುಮಾರ್ ಕಾರಣ ಎಂದು ಹೇಳುವ ಮೂಲಕ ಆಂತರಿಕವಾಗಿ ಪಕ್ಷದ ತೀರ್ಮಾನವಲ್ಲ ಎಂದು ಮಧು ಅವರೇ ಹೇಳಿದ್ದಾರೆ ಎಂದರು. ಕಳೆದ ಬಾರಿಯ […]

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್​​ಗೆ ಶರಣಾಗಿದೆ: ಯಡಿಯೂರಪ್ಪ

Friday, October 19th, 2018
yedyurappa

ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮಾಡಿರುವುದು ಮೈತ್ರಿಯಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ಗೆ ಶರಣಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಶಿವಮೊಗ್ಗ, ಬಳ್ಳಾರಿಯಲ್ಲಿ ಬಿಜೆಪಿಗೆ ಯಾವುದೇ ಪ್ರಾಬ್ಲಂ ಇಲ್ಲ. ರಾಮನಗರ ಮತ್ತು ಮಂಡ್ಯದಲ್ಲಿ ಫೈಟ್ ಇದೆ ಎಂದು ಹೇಳಿದರು. ಸಿದ್ದರಾಮಯ್ಯ ಅವರ ಚುನಾವಣಾ ರಾಜಕೀಯ ನಿವೃತ್ತಿಯು ಅವರ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಬಿಎಸ್ವೈ ತಿಳಿಸಿದರು.

ಸಾಲಬಾಧೆ ತಾಳಲಾರದೆ ಜೆಡಿಎಸ್ ಮುಖಂಡ ಆತ್ಮಹತ್ಯೆ

Tuesday, October 16th, 2018
sucide

ಮಂಡ್ಯ: ಸಾಲಬಾಧೆ ತಾಳಲಾರದೆ ಜೆಡಿಎಸ್ ಮುಖಂಡ ಹಾಗೂ ಉದ್ಯಮಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸ್ವರ್ಣಸಂದ್ರ ಫ್ಯಾಕ್ಟರಿ ವೃತ್ತದಲ್ಲಿ ನಡೆದಿದೆ. ಚಿಕ್ಕೇಗೌಡನದೊಡ್ಡಿಯ ನಿವಾಸಿ ಲೋಕೇಶ್ (35) ಆತ್ಮಹತ್ಯೆಗೆ ಶರಣಾಗಿರುವ ಉದ್ಯಮಿ. ಲೋಕೇಶ್ ಮಹಿಂದ್ರಾ ಟ್ರ್ಯಾಕ್ಟರ್ ಶೋರೂಂ ನಡೆಸುತ್ತಿದ್ದರು. ಕಳೆದ ನಗರಸಭೆ ಚುನಾವಣೆಯಲ್ಲಿ 34 ನೇ ವಾರ್ಡ್ ನಿಂದ ಜೆಡಿಎಸ್ ಅಭ್ಯರ್ಥಿಯಗಿ ಸ್ಪರ್ಧಿಸಿ ಸೋಲನುಭವಿಸಿದ್ದರು. ಲೋಕೇಶ್ ವ್ಯವಹಾರದ ಸಲುವಾಗಿ 5 ಕೋಟಿ ರೂಪಾಯಿ ಸಾಲ ಮಾಡಿಕೊಂಡಿದ್ದು, ಆದ್ರೆ ವ್ಯವಹಾರದಲ್ಲಿ ನಷ್ಟ ಉಂಟಾಗಿ ಸಾವಿನ ಹಾದಿ ಹಿಡಿದಿದ್ದಾರೆ. ಸಾಲದ ಒತ್ತಡ‌ […]

ಉಪ ಚುನಾವಣೆ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್​​ನಿಂದ ಮ್ಯಾರಥಾನ್​ ಸಭೆ

Tuesday, October 9th, 2018
congress

ಬೆಂಗಳೂರು: ರಾಜ್ಯದ ಐದು ಉಪ ಚುನಾವಣೆಗಳಿಗೆ ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್ ಪಕ್ಷ ಇಂದು ಮ್ಯಾರಥಾನ್ ಸಭೆ ನಡೆಸಲಿದೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ಮೈತ್ರಿ, ಎಲ್ಲೆಲ್ಲಿ ಕೈ ಅಭ್ಯರ್ಥಿಗಳನ್ನು […]