ಈ ಸಮ್ಮಿಶ್ರ ಸರ್ಕಾರ ನೀರಿನ ಮೇಲಿನ ಗುಳ್ಳೆಯಂತೆ: ಜಗದೀಶ್ ಶೆಟ್ಟರ್
Monday, September 17th, 2018ಹುಬ್ಬಳ್ಳಿ: ಈ ಸಮ್ಮಿಶ್ರ ಸರ್ಕಾರ ನೀರಿನ ಮೇಲಿನ ಗುಳ್ಳೆಯಂತೆ. ಹಾಗಾಗಿ ಇದು ಯಾವಾಗ ಬೇಕಾದರೂ ಒಡೆಯಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಜನಾದೇಶದ ವಿರುದ್ಧ ಇರುವ ಸರ್ಕಾರ. ಅಧಿಕಾರದ ಹಪಾಹಪಿಯಿಂದ ಸಮ್ಮಿಶ್ರ ಸರ್ಕಾರ ಬಂದಿದೆ. ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಗುದ್ದಾಟ ನಡೆಸಿದ್ದಾರೆ. ಅವರ ನಡುವೆ ಒಳಬೇಗುದಿ ಇದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಟೀಕಿಸಿದರು. ಸಿಎಂ ಕಿಂಗ್ ಪಿನ್ […]