Blog Archive

ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸಿಪಿಐ ರಾಜ್ಯ ಕಾರ್ಯದರ್ಶಿ ಪತ್ರಿಕಾಗೋಷ್ಠಿ!

Tuesday, May 8th, 2018
congress

ಮಂಗಳೂರು: ರಾಜಕೀಯ ಪಕ್ಷಗಳು ತಮ್ಮ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವುದು ಮಾಮೂಲಿ. ಆದರೆ ಮಂಗಳೂರಿನಲ್ಲಿ ಇಂದು ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಚ್ಚರಿ ಮೂಡಿಸಿದರು. ಸಿಪಿಐ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಮಂಗಳೂರಿಗೆ ಬಂದಿದ್ದ ಸಿಪಿಐ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಾಗೇಪಲ್ಲಿ ಮತ್ತು ಗುಲ್ಬರ್ಗಾದಲ್ಲಿ ಸಿಪಿಎಂ ಪಕ್ಷಕ್ಕೆ ಸಿಪಿಐ ಬೆಂಬಲ‌ ಸೂಚಿಸಿದೆ. ಸಿಪಿಐ […]

ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಇಳಿದ ನಟ ದರ್ಶನ್..!

Saturday, May 5th, 2018
Darshan

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರಕ್ಕೆ ಒಬ್ಬರಾದಂತೆ ಒಬ್ಬರು ಬಂದು ಸಿಎಂ ಪರ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಪ್ರಚಾರದ ಬಿಸಿ ದಿನದಿಂದ ದಿನಕ್ಕೆ ಏರತೊಡಗಿದ್ದು , ಸಿನೆಮಾ ಲೋಕದ ಕೆಲವರು ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಇಳಿದಿದ್ದಾರೆ. ಶನಿವಾರ ನಟ ದರ್ಶನ್ ‌ ಸಿಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಆಗಮಿಸಿದ್ದರು. ಆದರೆ ನಾಗನಹಳ್ಳಿಯಲ್ಲಿ ಜೆಡಿಎಸ್ ‌ ಕಾಯಕರ್ತರು ದರ್ಶನ್ ವಿರುದ್ಧ ಪ್ರತಿಭಟನೆ ನಡೆಸಿದರು. ದರ್ಶನ್ ಹಿರಿಯ ರಾಜಕಾರಣಿ ಅಂಬರೀಷ್ ‌ಅವರ ಸಚಿವ ಸ್ಥಾನ ಕಸಿದುಕೊಂಡಾಗ ಮಾತನಾಡಿರಲಿಲ್ಲ. ಕಾವೇರಿ […]

ಉಳ್ಳಾಲದಲ್ಲಿ ಜೆಡಿಎಸ್ ಅಶ್ರಫ್ ಪರ ಭರ್ಜರಿ ಪ್ರಚಾರ

Thursday, May 3rd, 2018
ashraf

ಮಂಗಳೂರು: ಆಹಾರ ಸಚಿವ ಯ.ಟಿ. ಖಾದರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಂಗಳೂರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಚುರುಕು ಪಡೆದುಕೊಂಡಿದೆ. ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಖಾದರ್ ನಾಲ್ಕನೇ ಬಾರಿ ಆಯ್ಕೆಯಾಗಲು ಮತದಾರರನ್ನು ಎದುರಿಸುತ್ತಿದ್ದಾರೆ. ಬಿಜೆಪಿಯಿಂದ ಯುವ ನಾಯಕ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬೋಳಿಯಾರ್ ಸಂತೋಷ್ ರೈ ಸ್ಪರ್ಧೆ ನಡೆಸುತ್ತಿದ್ದಾರೆ. ಕಳೆದ ಬಾರಿ 29 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಖಾದರ್ ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳಿಂದ ಕಠಿಣ […]

ಜೆಡಿಎಸ್ ಅಭ್ಯಥಿ೯ ಸಾ. ರಾ. ಮಹೇಶ್ ಪರವಾಗಿ ನಟ ಯಶ್ ಪ್ರಚಾರ

Wednesday, May 2nd, 2018
yash

ಮೈಸೂರು: ಚುನಾವಣಾ ಪ್ರಚಾರ ಅಖಾಡಕ್ಕೆ ಸ್ಯಾಂಡಲ್‌‌ವುಡ್‌ ರಾಂಕಿಂಗ್‌ ಸ್ಟಾರ್‌ ಯಶ್‌‌‌‌‌ ಎಂಟ್ರಿ ಕೊಟ್ಟಿದ್ದಾರೆ. ಕೆ.ಆರ್. ನಗರ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಅಭ್ಯಥಿ೯ ಸಾ. ರಾ. ಮಹೇಶ್ ಪರವಾಗಿ ನಟ ಯಶ್ ಪ್ರಚಾರಕ್ಕಿಳಿದ್ದಿದ್ದಾರೆ. ಕೆ.ಆರ್. ನಗರದಲ್ಲಿರುವ ಸಾ. ರಾ. ಮಹೇಶ್ ನಿವಾಸಕ್ಕೆ ಯಶ್‌ ಭೇಟಿ ನೀಡಿ ಮಾತುಕತೆ ನಡೆಸಿದರು. ನಂತರ ಅಬ್ಬರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಯಶ್ ಪ್ರಚಾರಕ್ಕಿಳಿಯುತ್ತಿದ್ದಂತೆ ಕಾಯ೯ಕತ೯ರು ಹಾಗೂ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗ್ಗಿಬಿದ್ದರು. ಅಭಿಮಾನಿಗಳನ್ನು ನಿಯಂತ್ರಿಸಿದ ಪೊಲೀಸರು ಪ್ರಚಾರದ ವಾಹನ ತೆರಳಲು ಅನುಕೂಲ ಮಾಡಿಕೊಟ್ಟರು. […]

ಮತದಾರರು 2013ರಂತೆ ಒಂದೇ ಪಕ್ಷ ಗೆಲ್ಲಿಸ್ತಾರೆ: ಸಿದ್ದು ಅಮಿತೋತ್ಸಾಹ

Saturday, April 28th, 2018
siddaramaih

ಬೆಂಗಳೂರು: ರಾಜ್ಯ ವಿಧಾನಸಭೆಗೆ ಮೇ 12ರಂದು ಮತದಾನ ನಡೆಯಲಿದ್ದು, ಈಗಾಗಲೇ ವಿವಿಧ ಪಕ್ಷಗಳು ಮತದಾರ ಪ್ರಭುಗಳ ಓಲೈಕೆಯಲ್ಲಿ ತೊಡಗಿದ್ದು, ಗೆಲುವಿನ ಲೆಕ್ಕಾಚಾರ ಮಾಡುತ್ತಿವೆ. ಚುನಾವಣೆ ಫಲಿತಾಂಶದ ಬಗ್ಗೆ ಟ್ವಿಟ್ಟರ್‌ನಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2013ರಲ್ಲಿ ಮತದಾರರು ನಿರ್ಣಯ ಮಾಡಿದಂತೆ ಈ ಬಾರಿಯೂ ರಾಜ್ಯದಲ್ಲಿ ಒಂದೇ ಪಕ್ಷ ಬಹುಮತ ಗಳಿಸಿ ಸರ್ಕಾರ ರಚಿಸುತ್ತದೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ. ಯಾವುದೇ ಒಂದು ಪಕ್ಷ ಕಿಂಗ್‌ ಮೇಕರ್‌ ಆಗಲು ಸಾಧ್ಯವೇ ಇಲ್ಲ ಎಂದು ಸಿದ್ದರಾಮಯ್ಯ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ […]

ತಂದೆಯ ಪರ ಮಗನ ಪ್ರಚಾರ… ರಾಮನಗರದಲ್ಲಿ ನಿಖಿಲ್ ರೋಡ್ ಶೋ

Friday, April 27th, 2018
nichil-kumar-2

ರಾಮನಗರ: ರಾಮನಗರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪರ ಅವರ ಮಗ ನಿಖಿಲ್ ಕುಮಾರಸ್ವಾಮಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಹಳ್ಳಿ ಹಳ್ಳಿಗಳಿಗೆ ತೆರಳಿ ನಿಖಿಲ್ ರೋಡ್ ಶೋ ನಡೆಸಿ ಮತಯಾಚಿಸಿದರು. ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿನ ಸಾಧನೆಗಳ ಬಗ್ಗೆ ತಿಳಿಸುವ ಮೂಲಕ ನಿಖಿಲ್ ಪ್ರಚಾರ ಮಾಡುತ್ತಿದ್ದಾರೆ. ಇದೇ ವೇಳೆ ಕಾರ್ಯಕರ್ತರು, ಅಭಿಮಾನಿಗಳಿಂದ ಬೈಕ್ ರ‍್ಯಾಲಿ ನಡೆಸಿದರು. ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಒಲವಿದೆ. ಈ ಬಾರಿ ಪಕ್ಷ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರ ಒತ್ತಡದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಹಾಗೂ ರಾಮನಗರದಿಂದ ತಂದೆ ಸ್ಪರ್ಧಿಸಿದ್ದಾರೆ. ತಂದೆಗೆ […]

ಮಂಗಳೂರು ಜೆಡಿಎಸ್ ಅಭ್ಯರ್ಥಿ ಅಶ್ರಫ್ ನಾಮಪತ್ರ ಸಲ್ಲಿಕೆ

Tuesday, April 24th, 2018
ashraf

ಮಂಗಳೂರು: ಮಂಗಳೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮೇಯರ್ ಕೆ.ಅಶ್ರಫ್ ಮಂಗಳವಾರ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮುನ್ನ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಪಕ್ಷದ ಚುನಾವಣಾ ಪ್ರಚಾರ ಸಭೆ ನಡೆಯಿತು. ಅಲ್ಲಿಂದ ರ್ಯಾಲಿ ಮೂಲಕ ನಗರಕ್ಕೆ ಆಗಮಿಸಿ ಮಿನಿ ವಿಧಾನಸೌಧದಲ್ಲಿರುವ ಚುನಾವಣಾಧಿಕಾರಿಯ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಾಮಪತ್ರದ ಠೇವಣಿಯನ್ನು ಜೆಡಿಎಸ್ ಅಭ್ಯರ್ಥಿ ಅಶ್ರಫ್‌ಗೆ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿ ಕೊಡಲಿದ್ದಾರೆ ಎಂದು ಈ ಹಿಂದೆ ಸಚಿವ ಯು.ಟಿ.ಖಾದರ್ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಜೆಡಿಎಸ್ ಕಾರ್ಯಕರ್ತರು ಹಣ ಸಂಗ್ರಹಿಸಿ […]

ಎ.24 ರಂದು ಜೆಡಿಎಸ್ ಅಭ್ಯರ್ಥಿ ಕೆ.ಅಶ್ರಫ್ ನಾಮಪತ್ರ ಸಲ್ಲಿಕೆ

Monday, April 23rd, 2018
ashraf

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಾಜಿ ಮೇಯರ್ ಕೆ. ಅಶ್ರಫ್ ಅವರಿಗೆ ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್ ಅವರು ನಗರದ ನಿವಾಸದಲ್ಲಿ ರವಿವಾರ ಬಿ.ಫಾರಂ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ, ಪಕ್ಷದ ಮುಖಂಡರಾದ ಅಝೀಝ್ ಮಲಾರ್, ಮೋಹನ್‌ದಾಸ್ ಶೆಟ್ಟಿ, ವಸಂತ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಕೆ.ಅಶ್ರಫ್ ಅವರು ಎ. 24ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅವರನ್ನು ಅಂದು ಬೆಳಗ್ಗೆ 11 ಗಂಟೆಗೆ ಉಳ್ಳಾಲ ಮಾಸ್ತಿಕಟ್ಟೆಯಿಂದ ಪಕ್ಷದ […]

ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿರ್ಮಾಪಕ ಮಂಜು ಕಣಕ್ಕೆ?

Monday, April 23rd, 2018
k-manju

ಬೆಂಗಳೂರು: ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಿಂದ ಕನ್ನಡ ಸಿನಿಮಾ ನಿರ್ಮಾಪಕ ಕೆ ಮಂಜು ಅವರು ಕಣಕ್ಕಿಳಿಯುವ ಸುದ್ದಿ ಬಂದಿದೆ. ಜೆಡಿಎಸ್ ನಿಂದ ಟಿಕೆಟ್ ಪಡೆದು ಸ್ಪರ್ಧಿಸಲು ಕೆ ಮಂಜು ಸಿದ್ಧರಾಗಿದ್ದಾರೆ. ಈ ಮುಂಚೆ ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಅದರೆ, ಈಗ ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡರನ್ನು ಭೇಟಿ ಮಾಡಿ, ಬಿ ಫಾರಂ ಪಡೆಯಲಿದ್ದು, ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿಯಿದೆ. ಬೊಮ್ಮನಹಳ್ಳಿ ಕ್ಷೇತ್ರದಿಂದ ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರಸ್ವಾಮೀಜಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈಗ […]

ಸ್ಯಾಂಡಲ್ ವುಡ್ ನಟಿ ಪೂಜಾಗಾಂಧಿ ಜೆಡಿಎಸ್ ಸೇರ್ಪಡೆ

Saturday, April 21st, 2018
pooja-gandhi

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಪೂಜಾಗಾಂಧಿ ಅವರು ಇಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಪೂಜಾಗಾಂಧಿ ಪಿಜಿಆರ್ ಸಿಂಧ್ಯಾ ನೇತೃತ್ವದಲ್ಲಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ನಟಿ ಪೂಜಾಗಾಂಧಿ ಕಳೆದ ಚುನಾವಣೆಯಲ್ಲಿ ರಾಯಚೂರಿನಿಂದ ಬಿಎಸ್ ಆರ್ ಪಕ್ಷದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಇದೀಗ ಮತ್ತೆ ರಾಜಕೀಯಕ್ಕೆ ರೀ ಎಂಟ್ರಿ ಕೊಟ್ಟಿರುವ ಪೂಜಾಗಾಂಧಿ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ. 2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದರು.