Blog Archive

ಶಕ್ತಿನಗರದ ರಾಜೀವನಗರ ವಾಸಿಗಳಿಗೆ ಹಕ್ಕುಪತ್ರ: ಶಾಸಕ ಜೆ.ಆರ್.ಲೋಬೊ ಭರವಸೆ

Wednesday, October 25th, 2017
JR lobo

ಮಂಗಳೂರು: ರಾಜೀವನಗರದ ನಿವಾಸಿಗಳಿಗೆ ಹಕ್ಕುಪತ್ರ ಕೊಡಲು ಇಲಾಖೆ ಅಧಿಕಾರಿಗಳು ಸ್ಥಳ ತನಿಖೆ ಮಾಡಲಿದ್ದಾರೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ಶಕ್ತಿನಗರ ರಾಜೀವ ನಗರ ನಿವಾಸಿಗಳ ಸಭೆ ನಡೆಸಿ ಅಹವಾಲು ಸ್ವೀಕರಿಸಿ ಮಾತನಾಡುತ್ತಿದ್ದರು. ರಾಜೀವ ನಗರದ ನಿವಾಸಿಗಳು 25 ವರ್ಷಗಳಿಂದ ವಾಸಿಸುತ್ತಿದ್ದು ಹಕ್ಕುಪತ್ರ ನೀಡಿಲ್ಲ. ಕೆಲವರು ಮಾರಿಕೊಂಡಿದ್ದಾರೆ. ಇನ್ನೂ ಕೆಲವರು ಖಾಲಿ ಸ್ಥಳದಲ್ಲಿ ವಾಸವಾಗಿದ್ದಾರೆ ಎಂದು ಸ್ಥಳೀಯ ಸಮಸ್ಯೆಗಳನ್ನು ಮಾಜಿ ಮೇಯರ್ ಅಬ್ದುಲ್ ಅಜೀಜ್ ಹೇಳಿದಾಗ ಶಾಸಕರಾದ ಜೆ.ಆರ್.ಲೋಬೊ ಅವರು ಯಾರು ವಾಸವಾಗಿದ್ದಾರೆ ಎಂಬುದನ್ನು […]

ಶಕ್ತಿನಗರ ಕಾರ್ಮಿಕ ಕಾಲೋನಿಯಲ್ಲಿ ಜನಸಂಪರ್ಕ ಸಭೆ

Monday, October 23rd, 2017
JR lobo

ಮಂಗಳೂರು: ಹಕ್ಕು ಪತ್ರ ಸಿಗದಿರುವ ಶಕ್ತಿನಗರ ಕಾರ್ಮಿಕ ಕಾಲೋನಿಯ ಜನರಿಗೆ ಹಕ್ಕುಪತ್ರ ಕೊಡಿಸಲು ಶೀಘ್ರದಲ್ಲೇ ಪ್ರಯತ್ನಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಶಕ್ತಿನಗರ ಕಾರ್ಮಿಕ ಕಾಲೋನಿಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಕಾಲೋನಿಯಲ್ಲಿ ಹಲವು ವರ್ಷಗಳಿಂದ ಕಾರ್ಮಿಕರಾಗಿರುವ ಜನರಿಗೆ ಹಕ್ಕುಪತ್ರ, 94 ಸಿಸಿ, ಪಹಣಿಪತ್ರ ಮುಂತಾದ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಇಲ್ಲಿ ಇಷ್ಟು ವರ್ಷಗಳಿಂದ ಜನ ವಾಸವಿದ್ದರೂ ಹಕ್ಕುಪತ್ರ ಕೊಡಲಾಗದಿರುವ ಬಗ್ಗೆ, ಅಲ್ಲಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿದ್ದ ಅಧಿಕಾರಿಗಳು ಮಾಹಿತಿ ನೀಡಿದರು. ಶಾಸಕ ಜೆ.ಆರ್.ಲೋಬೊ […]

ಪದವು ವಾರ್ಡ್ ನಲ್ಲಿ ಮನೆ ಮನೆಗೆ ಭೇಟಿಗೆ ಶಾಸಕ ಜೆ.ಆರ್.ಲೋಬೊ

Monday, October 23rd, 2017
JR lobo

ಮಂಗಳೂರು: ವಾರ್ಡ್ 35 ಪದವು ಸೆಂಟ್ರಲ್ ನ ರಾಜೀವ್ ನಗರ ಕಾಲೋನಿಯಲ್ಲಿ ಮನೆ ಮನೆಗೆ ಕಾಂಗ್ರೆಸ್ ಭೇಟಿಗೆ ಶಾಸಕ ಜೆ.ಆರ್.ಲೋಬೊ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಪೊರೇಟರ್ ಜುಬೇದ್ ಅಜೀಜ್ , ಮಾಜಿ ಮೇಯರ್ ಅಬ್ದುಲ್ ಅಜೀಜ್. ವಾರ್ಡ್ ಅಧ್ಯಕ್ಷ ಕುಮಾರ್, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುನಿತ್ ಡೇಸಾ, ಮ್ಯಾಕ್ಸಿಮ್ , ಕೃಷ್ಣ ಕುಮಾರ್, ಮಹಿಳಾ ಕಾಂಗ್ರೆಸ್ ಕಾರ್ಯಕರ್ತರಾದ ಪ್ರಭಾ, ಸೆಲೆಟ್ಸಿನ್ , ಮಿನಾ ಟಿಲ್ಲೀಸ್,

ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ದೀಪಾವಳಿ ಸಂಭ್ರಮಾಚರಣೆ

Saturday, October 21st, 2017
Diwali celebration

ಮಂಗಳೂರು: ಜೆಪ್ಪುನಲ್ಲಿರುವ ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ದೀಪಾವಳಿ ಸಂಭ್ರಮಾಚರಣೆ ಕಾರ್ಯಕ್ರಮ ಜರಗಿತು. ಭಗಿನಿ ಸಮಾಜದ ಮಕ್ಕಳೊಂದಿಗೆ ಶಾಸಕ ಜೆ.ಆರ್.ಲೋಬೊ ಅವರು ದೀಪಾವಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ ಅವರು ಈ ಹಬ್ಬವು ಎಲ್ಲರಿಗೆ ಸುಖ, ಸಮೃದ್ಧಿಯನ್ನು ನೀಡಲಿ ಎಂದು ಹಾರೈಸಿದರು. ದೀಪಾವಳಿ ಹಬ್ಬ ಪ್ರತಿಯೊಬ್ಬರ ಜೀವನದಲ್ಲಿ ಚೈತನ್ಯದ ಬೆಳಕು ನೀಡಲಿ ಎಂದು ಹಾರೈಸಿದ ಅವರು ಹೊಸ ಉತ್ಸಾಹವನ್ನು ತರಲಿ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸಲೀಂ, […]

ಮನೆ ಮನೆಗೆ ಭೇಟಿ ಕಾರ್ಯಕ್ರಮ ಚೈತನ್ಯ ನೀಡುತ್ತಿದೆ: ಶಾಸಕ ಜೆ.ಆರ್.ಲೋಬೊ

Thursday, October 19th, 2017
JR lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಕೋರ್ಟ್ ವಾರ್ಡ್ ನ ಸನ್ಯಾಸಿಗುಡ್ಡೆಯಲ್ಲಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಹುತೇಕ ಬೂತ್ ನಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು ಕಾಂಗ್ರೆಸ್ ಕಾರ್ಯಕ್ರಮದ ಮೂಲಕ ಹಲವಾರು ಮನೆಗಳಿಗೆ ಭೇಟಿ ನೀಡಿದ್ದೇನೆ ಎಂದರು. ಈ ಸಂದರ್ಭದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಸನ್ಮಾನ್ಯ ಮುಖ್ಯ ಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಾಧನೆಯ ಬಗ್ಗೆ ಜನರು ಒಲವು ತೋರುತ್ತಿದ್ದಾರೆ ಎಂದರು. ಜನರಿಗೆ […]

ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರು ಸಹಕರಿಸಬೇಕು: ಶಾಸಕ ಜೆ.ಆರ್.ಲೋಬೊ

Tuesday, October 17th, 2017
JR Lobo

ಮಂಗಳೂರು: ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಕುಡುಪಾಡಿ ಮಸೀದಿ ಬಳಿ ರಸ್ತೆ ವಿಸ್ತರಣೆ ಬಗ್ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡುತ್ತಿದ್ದರು. ಸಾರ್ವಜನಿಕರ ಕೋರಿಕೆಯ ಮೇರೆಗೆ ಈ ರಸ್ತೆಯನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ರಸ್ತೆ ಅಗಲೀಕರಣ 20 ಫೀಟ್ ಗೆ ಇಳಿಸುವಂತೆ ಸಾರ್ವಜನಿಕರು ಮನವಿ ಮಾಡಿದಾಗ ಶಾಸಕರು ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು. ಅಧಿಕಾರಿಗಳೊಂದಿಗೆ ಸ್ಥಳೀಯರು ಸಹಕರಿಸುವಂತೆ ಮನವಿ ಮಾಡಿದ ಶಾಸಕ ಜೆ.ಆರ್.ಲೋಬೊ […]

ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ : ಶಾಸಕ ಜೆ.ಆರ್.ಲೋಬೊ

Tuesday, October 17th, 2017
lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು 37 ನೇ ಮರೋಳಿ ವಾರ್ಡ್ ನ 47 ನೇ ಬೂತ್ ವತಿಯಿಂದ ನಡೆದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಕ್ಷದ ಸಾಧನೆಯ ಬಗ್ಗೆ ಕಾರ್ಯಕರ್ತರು ಶ್ರದ್ಧಯಿಂದ ಕೆಲಸ ಮಾಡುವಂತೆ ಕರೆ ನೀಡಿದರು. ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯತೆಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವಂತೆ ತಿಳಿಸಿದರಲ್ಲದೇ ಮನೆ ಮನೆ ಭೇಟಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಕರೆ ನೀಡಿದರು

ಜಪ್ಪಿನಮೊಗರು ಬ್ಲಾಕ್ ಯುವ ಕಾಂಗ್ರೆಸ್ ಪದಗ್ರಹಣ : ಶಾಸಕ ಜೆ.ಆರ್.ಲೋಬೊ

Saturday, October 14th, 2017
J R lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಜಪ್ಪಿನಮೊಗರು ವಾರ್ಡ್ ಯುವ ಕಾಂಗ್ರೆಸ್ ವಾರ್ಡ್ ಸಮಿತಿಯ ಉದ್ಘಾಟನೆಯನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಯುವ ಶಕ್ತಿ ದೇಶದ ಶಕ್ತಿ. ಈ ಶಕ್ತಿ ಒಗ್ಗೂಡಿಸುವ ಪ್ರಯತ್ನವನ್ನು ನಾವು ಮಾಡಬೇಕಾಗಿದೆ ಎಂದು ಅವರು ಕರೆ ನೀಡಿದರು. ಯುವ ಶಕ್ತಿಯನ್ನು ಒಗ್ಗೂಡಿಸುವ ಪ್ರಯ್ನದಲ್ಲಿ ನಾವು ಮುನ್ನಡೆಯುವ ಒಟ್ಟಾಗಿ ಮುಂಬರುವ ಚುನಾವಣೆಯಲ್ಲಿ ನಾವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ಮಾಡಬೇಕು ಎಂದು ಜೆ.ಆರ್.ಲೋಬೊ ಅವರು ಕರೆ ನೀಡಿದರು. ಮುಂದಿನ ದಿನಗಳಲ್ಲಿ ಮಂಗಳೂರು ನಗರವನ್ನು ಮಾದರಿ […]

ಅಲ್ಪಸಂಖ್ಯಾತರು ಸೌಲಭ್ಯ ಪಡೆಯಲು ವಿಳಂಭ ಮಾಡಬಾರದು :ಶಾಸಕ ಜೆ.ಆರ್.ಲೋಬೊ

Wednesday, October 11th, 2017
jr lobo

ಮಂಗಳೂರು: ಸರ್ಕಾರವು ಅಲ್ಪಸಂಖ್ಯಾತರ ಸೌಲಭ್ಯಗಳನ್ನು ಪಡೆಯುವಲ್ಲಿ ವಿಳಂಭ ಮಾಡಬಾರದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಬಲ್ಮಠ ಶಾಂತಿ ಕೆಥೋಡ್ರಲ್ ನಲ್ಲಿ ದ.ಕ.ಜಿಲ್ಲಾ ಅಲ್ಪಸಂಖ್ಯಾತರಿಗಾಗಿ ಸರ್ಕಾರಿ ಯೋಜನೆ ಹಾಗೂ ಸೌಲಭ್ಯಗಳ ಕುರಿತಾದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಸರ್ಕಾರ ಅಲ್ಪಸಂಖ್ಯಾತರಿಗಾಗಿ ವಿವಿಧ ಸೇವಾ ಸೌಭ್ಯಗಳನ್ನು ಜಾರಿಗೆ ತಂದಿದೆ. ಅಧಿಕಾರಿಗಳು ಈ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿ ವಿಳಂಭ ಮಾಡಬಾರದು ಎಂದು ಹೇಳಿದ ಅವರು ಸರ್ಕಾರ ಕೊಡಮಾಡಿದ ಈ ಯೋಜನೆಗಳನ್ನು ಪಡೆದು ಜೀವನವನ್ನು ಹದಗೊಳಿಸಿಕೊಳ್ಳಬೇಕು ಎಂದರು. ಶಾಸಕ ಜೆ.ಆರ್.ಲೋಬೊ ಅವರು […]

ಜನರಿಗೆ ವಿರುದ್ಧವಾದ ನಿರ್ಣಯ ತೆಗೆದುಕೊಳ್ಳಬೇಡಿ: ಶಾಸಕ ಜೆ.ಆರ್. ಲೋಬೊ

Wednesday, October 11th, 2017
jr lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಕುಲಶೇಖರದಿಂದ ಬೈತುರ್ಲಿಯವರೆಗೆ ಹೆದ್ದಾರಿಯ ಬಗ್ಗೆ ಸ್ಥಳೀಯರು ಆಕ್ಷೇಪಗಳ ಬಗ್ಗೆ ಸ್ಥಳ ಪರಿಶೀಲಿಸಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಗ್ಗೆ ಹೆದ್ದಾರಿಯ ಕುರಿತು ಸ್ಥಳೀಯ ಜನರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಶಾಸಕ ಜೆ.ಆರ್.ಲೋಬೊ ಅವರು ಖುದ್ದು ಸ್ಥಳ ವೀಕ್ಷಣೆ ಮಾಡಿದರು. ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಶಾಸಕರು ರಸ್ತೆ ಅಲ್ಮೈನ್ ಮೆಂಟ್ ಬಗ್ಗೆ ಸ್ಥಳೀಯರು ವ್ಯಕ್ತಪಡಿಸಿದ ಆಕ್ಷೇಪಗಳ ಬಗ್ಗೆ ವಿವರಿಸಿದರು. ಈ ಎಲ್ಲಾ ಆಕ್ಷೇಪಗಳನ್ನು ಪರಿಶೀಲಿಸಿ ಜನರಿಗೆ ವಿರುದ್ಧವಾಗಿ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು […]