Blog Archive

ನಗರದ ಎನ್.ಜಿ.ಒ. ಹಾಲ್ ನಲ್ಲಿ ಜೆ.ಆರ್.ಲೋಬೋರವರಿಂದ ಫಲಾನುಭಾವಿಗಳಿಗೆ ಪರಿಹಾರಧನ ವಿತರಣೆ

Wednesday, August 14th, 2013
ನಗರದ ಎನ್.ಜಿ.ಒ. ಹಾಲ್ ನಲ್ಲಿ ಜೆ.ಆರ್.ಲೋಬೋರವರಿಂದ ಫಲಾನುಭಾವಿಗಳಿಗೆ ಪರಿಹಾರಧನ ವಿತರಣೆ

ಮಂಗಳೂರು ; ರಾಷ್ಟೀಯ ಕುಟುಂಬ ಸಹಾಯಧನ ಯೋಜನೆಯ ಅಡಿಯಲ್ಲಿ 61 ಫಲಾನುಭಾವಿ ಕುಟುಂಬಗಳಿಗೆ ನಗರದ ಎನ್.ಜಿ.ಒ. ಹಾಲ್ ನಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಜೆ.ಆರ್.ಲೋಬೊರವರಿಂದ ಪರಿಹಾರಧನ ವಿತರಣಾ ಕಾರ್ಯಕ್ರಮ ಜರುಗಿತು.ಕಂದಾಯ ಇಲಾಖೆಯ ಅಧಿಕಾರಿಗಳು ಫಲಾನುಭಾವಿಗಳಿಗೆ ಬೇಗನೆ ಪರಿಹಾರ ದೊರಕುವಂತೆ ಅನುಕೂಲ ಮಾಡಿದಕ್ಕಾಗಿ ಕಂದಾಯ ಇಲಾಖೆಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ಸಂತ್ರಸ್ತರಿಗೆ ಪರಿಹಾರ ಚಟುವಟಿಕೆಗಳು ಶೀಘ್ರದಲ್ಲಿ ನಡೆದು ಸಂತ್ರಸ್ತರಿಗೆ ನೆರವಾಗಲಿ ಎಂದು ಆಸಿಸುತ್ತೇನೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ 61 ಫಲಾನುಭಾವಿಗಳಿಗೆ ತಲಾ 10,000ದಂತೆ ಮತ್ತು ಅತ್ತಾವರದಲ್ಲಿ ನೀರಲ್ಲಿ ಮುಳುಗಿ […]

ಜೆ.ಆರ್ ಲೋಬೊ ರಿಂದ ಮತದಾರರಿಗೆ ಕೃತಜ್ಗ್ಯತೆ ಸಲ್ಲಿಸುವ ವಿಜಯೋತ್ಸವ ಮೆರವಣಿಗೆ

Wednesday, May 22nd, 2013
J R Lobo Vijayotsava rally

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ತಮ್ಮ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ನತೆ ಸಲ್ಲಿಸುವ ಹಿನ್ನಲೆಯಲ್ಲಿ ವಿಜಯೋತ್ಸವ ಮೆರವಣಿಗೆಯನ್ನು ನಗರದ ನೆಹರೂ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.  ಮೆರವಣಿಗೆಯು ಸಿಗ್ನಲ್ ವೃತ್ತದ ಮೂಲಕ ಬಲ್ಮಠ ಮಾರ್ಗವಾಗಿ ಕದ್ರಿ, ನಂತೂರು ಮೂಲಕ ಸಾಗಿ ಕುಲಶೇಖರ ಕೋರ್ಡಲ್ ಚರ್ಚ್ ಹಾಲ್ ನಲ್ಲಿ ಸಮಾಪನಗೊಂಡಿತು. ಮೆರವಣಿಗೆಯಲ್ಲಿ ಸುಮಾರು 500 ಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದರು. ಗೊಂಬೆ ಕುಣಿತ, ವೈವಿಧ್ಯ ವೇಷಧಾರಿಗಳು ಮೆರವಣಿಗೆಗೆ ಮೆರುಗು ನೀಡಿದವು. ಕಾಂಗ್ರೆಸ್ ಮುಖಂಡರಾದ […]

ವಿಧಾನ ಸಭಾ ಚುನಾವಣೆ ಜೆ.ಆರ್ ಲೋಬೊರನ್ನು ಬೆಂಬಲಿಸುವಂತೆ ಮನವಿ

Thursday, April 25th, 2013
Seetaram Shetty

ಮಂಗಳೂರು : ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ  ಜೆ.ಆರ್ ಲೋಬೊ ರವರನ್ನು  ಬೆಂಬಲಿಸುವಂತೆ ಬುಧವಾರ ಜಿಲ್ಲಾ ಕಾಂಗ್ರೆಸ್ ನ ಕಾನೂನು ಮತ್ತು ಮಾನವ ಹಕ್ಕು ವಿಭಾಗದ ಆಶ್ರಯದಲ್ಲಿ ಬುಧವಾರ ನಡೆದ ವಕೀಲರ ಸಭೆಯಲ್ಲಿ ಮನವಿ ಮಾಡಿಕೊಳ್ಳಲಾಯಿತು. ಸಭೆಯಲ್ಲಿ ಹಿರಿಯ ವಕೀಲರಾದ ಸೀತಾರಾಮ ಶೆಟ್ಟಿ, ಪುರುಷೋತ್ತಮ ಪೂಜಾರಿ, ವೆಲೆಂಟೈನ್‌ ಡಿ’ಸಿಲ್ವಾ, ನಾರಾಯಣ ಪೂಜಾರಿ, ಬಿ. ಇಬ್ರಾಹಿಂ, ಕಳ್ಳಿಗೆ ತಾರಾನಾಥ ಶೆಟ್ಟಿ, ಎಂ.ಪಿ. ಶೆಣೈ, ರಾಜೇಂದ್ರ ಕುಮಾರ್‌, ಎಂ.ಪಿ. ನೊರೋನ್ಹಾ ಉಪಸ್ಥಿತರಿದ್ದು, ಜೆ.ಆರ್‌. ಲೋಬೊ ಅವರಿಗೆ ಬೆಂಬಲ […]

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ರಿಂದ ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣಪತ್ರ ಎನ್.ಯೋಗೀಶ್ ಭಟ್ ಆರೋಪ

Thursday, April 18th, 2013
Yogish Bhat

ಮಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎನ್.ಯೋಗೀಶ್ ಭಟ್ ಆರೋಪಿಸಿದ್ದಾರೆ. ಅವರು ಇಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಈ ಕುರಿತು ಪ್ರಸ್ತಾಪಿಸಿದರು. ಜೆ.ಆರ್.ಲೋಬೊ ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಆಗಿದ್ದ ಸಂದರ್ಭದಲ್ಲಿ ನಿಯಮಗಳ ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಬೆಂಗಳೂರಿನ ಎನ್.ಆರ್.ರೈ ಎಂಬುವವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಈ ದೂರು ಈಗಲೂ ವಿಚಾರಣೆಯ ಹಂತದಲ್ಲಿದ್ದು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಲೋಬೊ ಈ ಬಗ್ಗೆ ಯಾವುದೇ […]

ಐವನ್ ಡಿಸೋಜ ಬೆಂಬಲಿಗರಿಂದ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ವಿರೋಧ, ಪ್ರತಿಭಟನೆ

Saturday, April 6th, 2013
Ivan D Souza's supporters

ಮಂಗಳೂರು : ಕಾಂಗ್ರೆಸ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಐವನ್ ಡಿಸೋಜ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಬೆನ್ನಲ್ಲೆ ಇಂದು ಅವರ ಬೆಂಬಲಿಗರು ಕಾಂಗ್ರೆಸ್ ಜಿಲ್ಲಾ ಕಚೇರಿಯ ಎದುರು ಪಕ್ಷದ ಈ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮೈಕಲ್ ಲೋಬೊ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಐವನ್ ಡಿಸೋಜ ರಿಗೆ ಟಿಕೆಟ್ ನೀಡದೆ ಕೆಲವು ತಿಂಗಳ ಹಿಂದೆ ಪಕ್ಷಕ್ಕೆ ಸೇರ್ಪಡೆಗೊಂಡ  ಜೆ.ಆರ್ ಲೋಬೊಗೆ ನೀಡಲಾಗಿದೆ. ಇದು […]

ಕಾಂಗ್ರೆಸ್ : ರಾಜ್ಯ ವಿಧಾನ ಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಜೆ.ಆರ್.ಲೋಬೊ ಕಣಕ್ಕೆ

Saturday, April 6th, 2013
JR Lobo & Ivan D Souza

ಮಂಗಳೂರು : ಕಾಂಗ್ರೆಸ್ ಪಕ್ಷದಿಂದ ರಾಜ್ಯ ವಿಧಾನ ಸಭೆಯ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು, ಈಗ ಸಿದ್ಧವಾಗಿರುವ ಪಟ್ಟಿಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ದಿಂದ ಜೆ.ಆರ್.ಲೋಬೊ ರಿಗೆ ಟಿಕೆಟ್ ನೀಡಲಾಗಿದೆ. ಕೆಲ ತಿಂಗಳ ಹಿಂದೆ ಸರ್ಕಾರಿ ಹುದ್ದೆಯಿಂದ ಸ್ವಯಂ ನಿವೃತ್ತಿಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರಿದ  ಜೆ.ಆರ್.ಲೋಬೊ ಪಕ್ಷಕ್ಕೆ ಸೇರಿ ಸಾಮಾನ್ಯ ಕಾರ್ಯಕರ್ತನಂತೆ ತೆರೆ ಮರೆಯಲ್ಲೇ  ತನ್ನ ಪಾಲಿನ ಕೆಲಸ ಮಾಡಿಕೊಂಡಿದ್ದರು. ಒಂದೆಡೆ ಈ ಬಾರಿ ದಕ್ಷಿಣ ವಿಧಾನಸಭಾ ಕ್ಷೇತ್ರ ಸ್ಪರ್ಧಿಸುವ ಅವಕಾಶ ಒದಗಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು […]

ಎಂಡೋಸಲ್ಫಾನ್ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಒಂದು ದಿನದ ಉಪವಾಸ ಸತ್ಯಾಗ್ರಹ

Wednesday, December 12th, 2012
Endo Protest

ಮಂಗಳೂರು :ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಎಐಸಿಸಿ ಸದಸ್ಯ ಪಿವಿ ಮೋಹನ್ ನೇತೃತ್ವದಲ್ಲಿ ಎಂಡೋ ಸಲ್ಫಾನ್ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು. ಉಪವಾಸ ಸತ್ಯಾಗ್ರಹವನ್ನು ಕಾಂಗ್ರೆಸ್ ನಾಯಕ ಜೆ.ಆರ್. ಲೋಬೊ ಉದ್ಘಾಟಿಸಿ ಎಂಡೋಸಲ್ಫಾನ್ ಸಿಂಪಡನೆಯಿಂದ ಹಲವಾರು ಮಂದಿ ತೊಂದರೆಯನ್ನು ಅನುಭವಿಸುತ್ತಿದ್ದು ಇವರು ಸೂಕ್ತ ರೀತಿಯ ಪರಿಹಾರ ಸಿಗದೆ ನರಳುತ್ತಿದ್ದರೂ ಸರಕಾರ ಮಾತ್ರ ಈ ವಿಷಯದಲ್ಲಿ ತನ್ನ ಜಾಣ ಕುರುಡನ್ನು ಪ್ರದರ್ಶಿಸುತ್ತಿದೆ. ಎಂಡೋ ಸಲ್ಫಾನ್ ಅಥವಾ ಇನ್ನಾವುದೇ ರಾಸಾಯನಿಕಗಳನ್ನು […]