Blog Archive

ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾದ ಮಂಗಳೂರು ಪೊಲೀಸ್‌ ಆಯುಕ್ತ

Thursday, January 25th, 2018
madel-police

ಮಂಗಳೂರು: ದಕ್ಷ ಸೇವೆ ಸಲ್ಲಿಸಿದವರಿಗೆ ನೀಡುವ ರಾಷ್ಟ್ರಪತಿ ಪದಕಕ್ಕೆ ಪೊಲೀಸ್ ಆಯುಕ್ತರಾದ ಟಿ.ಆರ್.ಸುರೇಶ್ ಆಯ್ಕೆಯಾಗಿದ್ದಾರೆ. ಗಣರಾಜ್ಯೋತ್ಸವ ದಿನದಂದು ಅವರು ಪದಕ ಸ್ವೀಕರಿಸಲಿದ್ದಾರೆ. ಕರ್ನಾಟಕದಿಂದ ಹಲವು ಸಾಧಕ ಪೊಲೀಸರಿಗೆ ಈ ಸನ್ಮಾನ ಲಭಿಸಿದ್ದು, ದಕ್ಷಿಣ ಕನ್ನಡದಿಂದ ಕೆಎಸ್‌ಆರ್‌ಪಿಯ ಹೆಡ್‌‌ ಕಾನ್ಸ್‌ಟೇಬಲ್‌ ಕಮಲಾಕ್ಷ ಅವರಿಗೂ ರಾಷ್ಟ್ರಪತಿ ಪದಕ ದೊರೆಯಲಿದೆ. ಇತ್ತೀಚೆಗೆ ನಡೆದ ದೀಪಕ್ ರಾವ್ ಹಾಗೂ ಬಶೀರ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನ, ಶೂಟೌಟ್ ಪ್ರಕರಣದ ಆರೋಪಿಗಳ ಬಂಧನ, ಗಾಂಜಾ ಮಾಫಿಯಾದ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆ ಸೇರಿದಂತೆ ಕರಾವಳಿಯಲ್ಲಿ ಶಾಂತಿ […]

ಮಂಗಳೂರಿನಲ್ಲಿ ಬಶೀರ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ನಾಲ್ವರ ಬಂಧನ

Saturday, January 6th, 2018
karavali

ಮಂಗಳೂರು: ದೀಪಕ್ ಹತ್ಯೆಯಾದ ದಿನವೇ ಕೊಟ್ಟಾರ ಚೌಕಿ ಬಳಿ ಬಶೀರ್ ಎಂಬುವವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರಲ್ಲಿ ಇಬ್ಬರು ಪಡೀಲ್ ನಿವಾಸಿಗಳಾಗಿದ್ದು, ಒಬ್ಬ ಮಂಜೇಶ್ವರ ಹಾಗೂ ಇನ್ನೊಬ್ಬ ಕಾಸರಗೋಡಿನವರು. ನಾಲ್ವರೂ ಕೂಡ ಕ್ರಿಮಿನಲ್ ಹಿನ್ನೆಲೆಯವರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊಟ್ಟಾರದಲ್ಲಿ ಫಾಸ್ಟ್‌ಫುಡ್ ವ್ಯಾಪಾರ ಮಾಡುತ್ತಿದ್ದ ಬಶೀರ್ (48) ಎಂಬುವವರು ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ವೇಳೆ, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ತಲವಾರಿನಿಂದ ಹೊಡೆದು ಪರಾರಿಯಾಗಿದ್ದರು. ಬಶೀರ್ ಎದೆಯ ಕೆಳಭಾಗ, ಗಂಟಲು […]