ಆಳ್ವಾಸ್ ವಿರಾಸತ್ ಗೆ ಅದ್ದೂರಿಯ ಚಾಲನೆ: ದೀಪ ಬೆಳಗಿದ ರಾಜ್ಯಪಾಲರು

Thursday, December 14th, 2023
ಆಳ್ವಾಸ್ ವಿರಾಸತ್ ಗೆ ಅದ್ದೂರಿಯ ಚಾಲನೆ: ದೀಪ ಬೆಳಗಿದ ರಾಜ್ಯಪಾಲರು

ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ 29ನೇ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಚಾಲನೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ದೇಶ, ಧರ್ಮ, ಸಂಸ್ಕೃತಿಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಶ್ಲಾಘಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವಿರಾಸತ್ ಅನ್ನು ಗುರುವಾರ ಸಂಜೆ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮAದಿರದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. […]

ʼ ಆಸಕ್ತಿ, ಕನಸು, ದೂರದೃಷ್ಟಿ, ಹಾಸ್ಯಪ್ರಜ್ಞೆಯ ಸಂಗಮ ಯಶೋವರ್ಮ ʼ

Tuesday, December 5th, 2023
ʼ ಆಸಕ್ತಿ, ಕನಸು, ದೂರದೃಷ್ಟಿ, ಹಾಸ್ಯಪ್ರಜ್ಞೆಯ ಸಂಗಮ ಯಶೋವರ್ಮ ʼ

ಮಂಗಳೂರು: ಹೊಗಳಿಕೆಗೆ ಹಿಗ್ಗದೆ ಟೀಕೆಗೆ ಜಗ್ಗದೆ ಮೌಲ್ಯಾಧಾರಿತ ಶಿಸ್ತಿನ ಜೀವನ ನಡೆಸಿದ ಸಹೋದರನಂತಿದ್ದ ಡಾ. ಬಿ ಯಶೋವರ್ಮ ಅವರು ನಮಗೆ ಶ್ರೇಷ್ಠ ಜೀವನ ಮಾದರಿಯನ್ನು ಬಿಟ್ಟು ಹೋಗಿದ್ದಾರೆ, ಎಂದು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿಪ್ರಾಯಪಟ್ಟರು. ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಕನ್ನಡ ಸಂಘ ಇವರ ಜಂಟಿ […]

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಎನ್‌ಬಿಎ ಮಾನ್ಯತೆ

Tuesday, February 18th, 2020
alvas-collage

ಮೂಡುಬಿದಿರೆ : ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್ ಹಾಗೂ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನೀಕೆಷನ್ ಇಂಜಿನಿಯರಿಂಗ್ ವಿಭಾಗಕ್ಕೆ ರಾಷ್ಟ್ರೀಯ ಮಾನ್ಯತಾ ಮಂಡಳಿಯ (ಎನ್‌ಬಿಎ) ಮಾನ್ಯತೆ ಲಭಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಶೈಕ್ಷಣಿಕ ಸಂಸ್ಥೆಯು ನಿರ್ದಿಷ್ಟಗುಣ ಮಟ್ಟವನ್ನು ಹೊಂದಿದೆಯೇ ಅಥವಾ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುತ್ತದೆಯೇ ಎನ್ನುವುದನ್ನು ವೃತ್ತಿಪರ ಪರಿಶೀಲನೆಯ ಆಧಾರದ ಮೇಲೆ ಮೌಲ್ಯಮಾಪನ ಮಾಡಿ ದೃಢೀಕರಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಮಾನ್ಯತೆಯ ಪರಿಣಾಮವಾಗಿ ಸಂಸ್ಥೆಗಳಿಂದ […]

ಆಳ್ವಾಸ್ ಬ್ಲಂಡ್ ಬ್ಯಾಂಕ್ ಕಾರ್ಯಾಗಾರ

Saturday, November 23rd, 2019
Alvas

ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್‌ನ ಭಾಗವಾಗಿರುವ ಆಳ್ವಾಸ್ ರೋಟರಿ ಬ್ಲಡ್ ಬ್ಯಾಂಕ್‌ನಿಂದ ಒಂದು ದಿನದ ಕಾರ್ಯಾಗಾರವನ್ನು ಆಳ್ವಾಸ್ ಕಾಲೇಜು ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಾಗಾರವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿದ್ದ ಭಾರತೀಯ ವಾಯು ಸೇನೆಯ ಅಧಿಕಾರಿ ರಾಹುಲ್ ಶಿಂಧೆ ರಕ್ತದಾನ ಒಂದು ಉತ್ತಮ ಸಾಮಾಜಿಕ ಸೇವಾ ಕೈಂಕರ್ಯ ಎಂದರು. ಭಾರತದ ಅಂಗಾಂಗ ದಾನ ಸಂಸ್ಥೆ(ಆರ್ಗನ್ ಡೊನೇಶನ್ ಇಂಡಿಯಾ ಫೌಂಡೇಶನ್)ಯ ಅಧ್ಯಕ್ಷ ಲಾಲ್ ಗೊಯೆಲ್ ಮಾತನಾಡಿ, ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದ ಹಂತದಲ್ಲಿಯೇ […]

ತಂದೆ ತಾಯಿಯವರನ್ನು ಕಳೆದುಕೊಂಡ ಮಕ್ಕಳ ದತ್ತು ಸ್ವೀಕಾರಕ್ಕೆ ಆಳ್ವಾಸ್ ನಿರ್ಧಾರ

Monday, December 17th, 2018
alwas-college

ಮೂಡುಬಿದಿರೆ: ಮೈಸೂರಿನ ಸುಳ್ವಾಡಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶಣ ಸೇವಿಸಿ ಕೃಷ್ಣ ನಾಯ್ಕ್-ಮೈಲಿಬಾಯಿ ದಂಪತಿ ಸಾವನ್ನಪ್ಪಿದ್ದು, ಅವರ ಮೂವರು ಮಕ್ಕಳನ್ನು ದತ್ತು ಸ್ವೀಕರಿಸಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಿರ್ಧರಿಸಿದೆ. ಮಕ್ಕಳ ಅಭಿಪ್ರಾಯ ಪಡೆದು ಮುಂದಿನ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ. ಮಂಗಳವಾರ ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮೂವರು ಮಕ್ಕಳು ಹಾಗೂ ಅವರ ಸಂಬಂಧಿಕರನ್ನು ಭೇಟಿ ಮಾಡಿ, ಅವರಿಗೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು, […]

ಆಳ್ವಾಸ್ ಚಿತ್ರಸಿರಿ ವ್ಯಂಗ್ಯಚಿತ್ರಸಿರಿ, ಛಾಯಾಚಿತ್ರಸಿರಿ ಪ್ರಶಸ್ತಿ ಪ್ರದಾನ

Wednesday, November 14th, 2018
alwas

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಆಳ್ವಾಸ್ ನುಡಿಸಿರಿ 2018 ಅಂಗವಾಗಿ ನಡೆದ 2018ರ ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ ಹಾಗೂ ವ್ಯಂಗ್ಯಚಿತ್ರಸಿರಿ ರಾಜ್ಯಮಟ್ಟದ ಕಲಾಶಿಬಿರದ ಸಮಾರೋಪ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ವಿದ್ಯಾಗಿರಿ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಹಿರಿಯ ಚಿತ್ರಕಲಾವಿದ ಗಣೇಶ್ ಸೋಮಯಾಜಿ ಅವರಿಗೆ ಆಳ್ವಾಸ್ ಚಿತ್ರಸಿರಿ ಪ್ರಶಸ್ತಿ, ಹಿರಿಯ ಛಾಯಾಚಿತ್ರ ಕಲಾವಿದ ಎಸ್.ತಿಪ್ಪೇಸ್ವಾಮಿ ಮೈಸೂರು ಅವರಿಗೆ ಆಳ್ವಾಸ್ ಛಾಯಾಚಿತ್ರಸಿರಿ 2018 ಪ್ರಶಸ್ತಿ ಹಾಗೂ ಹಿರಿಯ ವ್ಯಂಗ್ಯಚಿತ್ರಕಾರ ಕೆ.ಆರ್ ಸ್ವಾಮಿ ಅವರಿಗೆ ಅಳ್ವಾಸ್ ವ್ಯಂಗ್ಯಚಿತ್ರಸಿರಿ […]

ಜಿಲ್ಲಾಮಟ್ಟದ ಕ್ರೀಡಾಕೂಟ: ಆಳ್ವಾಸ್ ಶಾಲೆಗೆ 70 ಪದಕ

Friday, October 26th, 2018
alwas-clg

ಮೂಡುಬಿದಿರೆ: ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಆಳ್ವಾಸ್ ಶಾಲೆ ಮೂಡುಬಿದಿರೆ 32 ಚಿನ್ನ, 26 ಬೆಳ್ಳಿ ಪದಕಗಳನ್ನು, 12 ಕಂಚಿನ ಪದಕ ಒಟ್ಟು 70 ಪದಕಗಳನ್ನು ಪಡೆದು 8 ನೂತನ ಕೂಟ ದಾಖಲೆಯೊಂದಿಗೆ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ವೈಯಕ್ತಿಕ ಪ್ರಶಸ್ತಿ: 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ರಿನ್ಸ್ ಜೋಸೆಫ್, 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದೀಪಶ್ರೀ ಪ್ರಶಸ್ತಿ, ಪ್ರೌಢಶಾಲಾ 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ರಿಯೋನ್, […]

ನವೆಂಬರ್ 16ರಿಂದ ಆಳ್ವಾಸ್ ನುಡಿಸಿರಿ 2018

Monday, August 27th, 2018
Mohan-Alva

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಕನ್ನಡ ನಾಡು-ನುಡಿ-ಸಂಸ್ಕೃತಿಯ  ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ಹದಿನ್ಯೆದನೇ ವರ್ಷದ ಸಮ್ಮೇಳನವನ್ನು ನವೆಂಬರ ತಿಂಗಳ 16, 17 ಮತ್ತು 18ನೇ ಮೂರು ದಿನಗಳ ಕಾಲ ನಡೆಯಲಿದೆ. ನವೆಂಬರ 16 ಬೆಳಗ್ಗೆ ಸಮ್ಮೇಳನವು ಉದ್ಘಾಟನೆಗೊಳ್ಳಲಿದ್ದು, ನವೆಂಬರ 18ನೇ ತಾರೀಕು ಮಧ್ಯಾಹ್ನ ಸಮ್ಮೇಳನವು ಸಂಪನ್ನಗೊಳ್ಳಲಿದೆ. ಸಮ್ಮೇಳನದ ರೂಪುರೇಖೆಗಳ ಕುರಿತು ಚರ್ಚೆಗಳು ನಡೆಯುತ್ತಿದ್ದು ಶೀಘ್ರವಾಗಿ ಅಂತಿಮ ಸ್ಪರ್ಷ ನೀಡಲಾಗುವುದು. ಅರ್ಥವತ್ತಾಗುವಂತೆ ಹಾಗೂ ಆಕರ್ಷಕವಾಗುವಂತೆ ಸಮ್ಮೇಳನವನ್ನು ಆಯೋಜಿಸಲು ಪೂರ್ವತಯಾರಿಗಳು ನಡೆಯುತ್ತಿವೆ. ಎಂದಿನಂತೆ ಈ ವರ್ಷವೂರತ್ನಾಕರವರ್ಣಿ […]

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಇಫ್ತಾರ್ ಕೂಟ

Thursday, June 14th, 2018
iftar-kuta

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಇಫ್ತಾರ್ ಕೂಟ ನಡೆಯಿತು. ಎಷ್ಟೇ ಶ್ರೀಮಂತ ಇರಲಿ, ಬಡವನಿರಲಿ ಪ್ರತಿಯೊಬ್ಬರಿಗೂ ಹಸಿವಿನ ಮಹತ್ವ ಅರಿಯಲು, ದೀನರ ನೋವುಗಳು ತಿಳಿಯಲು ಪವಿತ್ರ ರಂಝಾನ್ ತಿಂಗಳಲ್ಲಿ ಉಪವಾಸ ಆಚರಿಸುತ್ತೇವೆ. ಇಸ್ಲಾಂನ ಪ್ರತಿಯೊಂದು ಆಚರಣೆಗಳು ಸಾಮಾಜಿಕ, ಮಾನವೀಯ ಹಿನ್ನೆಲೆಯಲ್ಲಿರುವಂತದ್ದು. ವಿಶ್ವದಲ್ಲಿ ಇಸ್ಲಾಂ ಧರ್ಮದ ಬಗ್ಗೆ ತಪ್ಪು ಗ್ರಹಿಕೆಗಳಿವೆ. ಇಸ್ಲಾಂ ಆಗಲಿ ಯಾವುದೇ ಧರ್ಮವಾಗಲಿ ಕೋಮುವಾದಕ್ಕೆ ಮಣೆ ನೀಡುವುದಿಲ್ಲ. ಎಲ್ಲ ಧರ್ಮಗಳಲ್ಲಿರುವಂತೆ ಇಸ್ಲಾಂ ಕೂಡ ಮಾನವೀಯ ಆದರ್ಶಗಳನ್ನು ಪ್ರತಿಪಾಧಿಸುತ್ತದೆ. ಕೋಮುವಾದ, ಉಗ್ರವಾದಗಳನ್ನು ಎಂದಿಗೂ ಇಸ್ಲಾಂ ಧರ್ಮ […]

ಆಳ್ವಾಸ್ ಸಂಸ್ಥೆಗೆ ಕ್ರೀಡಾಪೋಷಕ್, ಏಕಲವ್ಯ, ಕ್ರೀಡಾರತ್ನ ಪ್ರಶಸ್ತಿ

Thursday, March 8th, 2018
moodbidre

ಮೂಡುಬಿದಿರೆ: ಕರ್ನಾಟಕ ರಾಜ್ಯ ಸರ್ಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಸಾಧಕರಿಗೆ ಪುರಸ್ಕಾರ ಸಮಾರಂಭದಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಕ್ರೀಡಾಪೋಪಕ ಪ್ರಶಸ್ತಿ ಲಭಿಸಿದ್ದು, ಸಂಸ್ಥೆಯ ಎರಡು ಕ್ರೀಡಾಪಟುಗಳು ಏಕಲವ್ಯ ಹಾಗೂ ಮೂರು ಕ್ರೀಡಾಪಟುಗಳು ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಭಾಜನರಾಗಿರುವುದು ನಮ್ಮ ಸಂಸ್ಥೆಯ ಹೆಮ್ಮೆ ಉಂಟುಮಾಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರರಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 1984ರಲ್ಲಿ ಏಕಲವ್ಯ ಕ್ರೀಡಾಸಂಸ್ಥೆಯನ್ನು ಸ್ಥಾಪಿಸಿ, ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳಿಗೆ […]