Blog Archive

ಕೃಷಿ ತೋಟದಲ್ಲಿ ಪರ್ಯಾಯ ಬೆಳೆಗೆ ಪ್ರೊತ್ಸಾಹ ಧನ : ಡಿ.ವಿ. ಸದಾನಂದ ಗೌಡ

Wednesday, April 11th, 2012
ಕೃಷಿ ತೋಟದಲ್ಲಿ ಪರ್ಯಾಯ ಬೆಳೆಗೆ ಪ್ರೊತ್ಸಾಹ ಧನ : ಡಿ.ವಿ. ಸದಾನಂದ ಗೌಡ

ಪುತ್ತೂರು : ತಮ್ಮ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು 2 ದಿನಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಪುತ್ತೂರಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತೋಟಗಾರಿಕೆಯಲ್ಲಿ ಪರ್ಯಾಯ ಬೆಳೆಗೆ ಪ್ರೊತ್ಸಾಹ ನೀಡುವ ಸಲುವಾಗಿ ಅಡಿಕೆ ಬೆಳೆಗಾರರಿಗೆ ತಮ್ಮ ಕೃಷಿ ತೋಟದಲ್ಲಿ ಅಡಿಕೆ ಹೊರತಾಗಿ ಇತರ ಆಹಾರ ಮತ್ತು ತೋಟಗಾರಿಕಾ ಬೆಳೆಗಳನ್ನು ಬೆಳೆಸಲು ಕೇರಳ ಮಾದರಿಯಲ್ಲಿ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ […]

ಉಸ್ತುವಾರಿ ಸಚಿವರಿಂದ ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ

Thursday, August 18th, 2011
Krishna J. Palemar raids Taluk Office

ಮಂಗಳೂರು : ದ.ಕ ಜಿಲ್ಲಾ ಉಸ್ತುವಾರಿ ಸಚಿವ ಜೆ.ಕೃಷ್ಣ ಪಾಲೆಮಾರ್ ಅವರು ಮಂಗಳೂರು ತಾಲೂಕು ಕಚೇರಿಗೆ ಹಾಗೂ ವಿವಿಧ ಇಲಾಖೆಗಳಿಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಡತಗಳು ವಿಲೇವಾರಿಯಾಗದೇ ಬಾಕಿ ಇರುವುದನ್ನು ಪರಿಶೀಲಿಸಿದ ಅವರು ಸಿಬ್ಬಂದಿಗಳನ್ನು ತರಾಟೆಗೆ ತೆಗೆದು ಕೊಂಡರು, ಯಾವುದೇ ಕಡತಗಳನ್ನು ಹೆಚ್ಚು ದಿನ ಕಚೇರಿಯಲ್ಲಿ ಉಳಿಸದೇ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು. ಡಿ.ವಿ. ಸದಾನಂದ ಗೌಡರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿ ಮಂಗಳೂರಿನ ಮೊದಲ ಭೇಟಿಯಲ್ಲಿ ಸರಕಾರಿ ಕಚೇರಿಗಳಲ್ಲಿ ಯಾವುದೇ […]

ರಾಜ್ಯ ಸರಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ : ಮಂಜುನಾಥ್

Wednesday, August 17th, 2011
Congress SC ST Meet/ಪ. ಜಾತಿ ವಿಭಾಗದ ಸಭೆ

ಮಂಗಳೂರು : ಕಾಂಗ್ರೆಸ್‌ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಪ. ಜಾತಿ ವಿಭಾಗದ ಸಭೆ ಪ. ಜಾತಿ ಘಟಕದ ರಾಜ್ಯಾಧ್ಯಕ್ಷ ಎನ್‌. ಮಂಜುನಾಥ್‌ ನೇತೃತ್ವದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಮಂಜುನಾಥ್‌ ರಾಜ್ಯ ಸರಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ. ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ನೇತೃತ್ವದಲ್ಲಿ ಒಂದೇ ಒಂದು ಎಸ್‌ಸಿ/ಎಸ್‌ಟಿ ಜಾಗೃತಿ ಉಸ್ತುವಾರಿ ಸಮಿತಿಯ ಸಭೆ ನಡೆದಿಲ್ಲ ಎಂದು ಆರೋಪಿಸಿದರು. ಈಗಾಗಲೇ ಪರಿಶಿಷ್ಟ ಜಾತಿ ಹೆಸರಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದು 4,500 ಮಂದಿ ಸರಕಾರಿ […]

ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿ : ಮಂಗಳೂರಿನಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ

Thursday, August 4th, 2011
BJP Victory/ಮಂಗಳೂರಿನಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ

ಮಂಗಳೂರು : ಡಿ.ವಿ. ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಂಬ್ರಮವನ್ನು ಕೊಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷ ಕಾರ್ಯಕರ್ತರು ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು. ಮುಖ್ಯಮಂತ್ರಿ ಆಯ್ಕೆಯ ಘೋಷಣೆ ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಶೈಲಜಾ ಭಟ್‌, ಶ್ರೀಕರ ಪ್ರಭು ಮೊದಲಾದವರು ಪರಸ್ಪರ ಸಿಹಿ ಹಂಚಿಕೊಂಡರು. ಬಳಿಕ ಕಚೇರಿಂದ ಹೊರಗೆ ಬಂದು ಸುರಿಯುವ ಮಳೆಯನ್ನೂ ಲೆಕ್ಕಿಸದೆ ಪಟಾಕಿ ಸಿಡಿಸಿದರು. ಡಿ.ವಿ. ಸದಾನಂದ ಗೌಡರ ಭಾವಚಿತ್ರವನ್ನು ಹಿಡಿದು ಜೈಕಾರ ಕೂಗಿದರು. […]

ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿಯಾಗಲು ಸುಬ್ರಹ್ಮಣ್ಯದಲ್ಲಿ ಉರುಳುಸೇವೆ

Wednesday, August 3rd, 2011
DV Sadananda Gowda/ಡಿ.ವಿ. ಸದಾನಂದ ಗೌಡ

ಸುಬ್ರಹ್ಮಣ್ಯ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಸುಳ್ಯ ತಾಲೂಕಿನ ದೇವರಗುಂಡ ವೆಂಕಪ್ಪ ಸದಾನಂದ ಅವರನ್ನು ಸೂಚಿಸಿರುವ ಬೆನ್ನಿಗೆ ಡಿ.ವಿ. ಸದಾನಂದ ಗೌಡ ಬೆಂಬಲಿಗರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉರುಳುಸೇವೆ ಸಲ್ಲಿಸಿದರು. ಡಿ.ವಿ.ಹೆಸರು ಮುಂಚೂಣಿಯಲ್ಲಿರುವುದರಿಂದ ಸಂತಸಗೊಂಡಿರುವ ಸುಬ್ರಹ್ಮಣ್ಯದ ನಾಗರಿಕರು ಪಕ್ಷಬೇಧ ಮರೆತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾರ್ಥನೆ, ದೇವಳದ ಹೊರಾಂಗಣದಲ್ಲಿ ಮಧ್ಯಾಹ್ನದ ವೇಳೆ ಉರುಳುಸೇವೆ ನಡೆಸಿದರು. ಸುಬ್ರಹ್ಮಣ್ಯದ ನಾಗರಿಕರು, ವಾಹನ ಮಾಲಕರು-ಚಾಲಕರು ಸೇರಿ ಕಾಶಿಕಟ್ಟೆಯಿಂದ ದೇವಳದ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ದರ್ಪಣತೀರ್ಥ ನದಿಯಲ್ಲಿ […]