ಗಣ್ಯರಿಂದ ಹೆಗ್ಗಡೆಯವರಿಗೆ ಅಭಿನಂದನೆಗಳ ಮಹಾಪೂರ

Monday, July 11th, 2022
Veerendra Hegde

ಉಜಿರೆ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸೋಮವಾರ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರುಗಳಾದ ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಧರ್ಮಸ್ಥಳಕ್ಕೆ ಬಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಅಭಿನಂದನೆ ಸಲ್ಲಿಸಿದರು. ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ […]

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಭವ್ಯ ಸ್ವಾಗತ

Sunday, July 10th, 2022
Hegde

ಉಜಿರೆ: ರಾಜ್ಯಸಭೆ ಅಂದರೆ ಹಿರಿಯರ ಸಭೆ. ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಅನುಗ್ರಹದಿಂದ ತನಗೆ ರಾಷ್ಟ್ರಮಟ್ಟದಲ್ಲಿ ಪಕ್ಷಾತೀತವಾಗಿ ಸೇವೆ ಮಾಡುವ ಸುವರ್ಣಾವಕಾಶ ದೊರಕಿದೆ. ಇದು ಧರ್ಮಸ್ಥಳಕ್ಕೆ, ತನಗೆ, ಹಾಗೂ ತಮ್ಮ ಪೂರ್ವಜರಿಗೆ ಸಂದ ಗೌರವವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಬಳಿಕ ಪ್ರಥಮವಾಗಿ ಶನಿವಾರ ಧರ್ಮಸ್ಥಳಕ್ಕೆ ಬಂದ ಅವರನ್ನು ಚಾರ್ಮಾಡಿಯಲ್ಲಿ ತಾಲ್ಲೂಕಿನ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ಭಕ್ತಿಪೂರ್ವಕ ಸ್ವಾಗತ ಕೋರಿದರು. ಬಳಿಕ ವಾಹನ ಜಾಥಾದಲ್ಲಿ ಭವ್ಯ ಮೆರವಣಿಗೆಯಲ್ಲಿ […]

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ, ಸಾಹಿತ್ಯ ಸಮ್ಮೇಳನದ 89 ನೆ ಅಧಿವೇಶನ

Friday, December 3rd, 2021
Dharmasthala-Deepothsava

ಉಜಿರೆ: ದೀಪ ಬೆಳಕಿನ ಸಂಕೇತ. ಲಕ್ಷದೀಪೋತ್ಸವ ಕೇವಲ ಉತ್ಸವ ಅಲ್ಲ. ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 89ನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ದೇವರಿಗೆ ದೀಪ ಹಚ್ಚುವುದು ಭಾರತೀಯ ಸಂಸ್ಕೃತಿಯ ಲಕ್ಷಣವಾಗಿದೆ. ಲಕ್ಷದೀಪೋತ್ಸವ ಸಂಸ್ಕೃತಿ ಉಳಿಸುವ, ಅಜ್ಞಾನದ […]

ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ

Monday, November 29th, 2021
Dharmasthala-Deepothsava1

ಉಜಿರೆ: ತ್ಯಾಗ ಮತ್ತು ಸೇವೆಯ ಮೂಲಕ ಮಾಡುವ ಸತ್ಕಾರ್ಯಗಳಿಂದ ಪುಣ್ಯ ಸಂಚಯದೊಂದಿಗೆ ಶಾಂತಿ, ಸಂತೋಷ ಹಾಗೂ ನೆಮ್ಮದಿ ಸಿಗುತ್ತದೆ. ಜನರ ಪ್ರೀತಿ-ವಿಶ್ವಾಸವೇ ಧರ್ಮಸ್ಥಳದ ಅಮೂಲ್ಯ ಆಸ್ತಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಲಕ್ಷದೀಪೋತ್ಸವದ ಪ್ರಥಮ ದಿನವಾದ ಕಾರ್ತಿಕ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಬಂದ ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಪಾದಯಾತ್ರಿಗಳನ್ನು ಅಮೃತವರ್ಷಿಣಿ ಸಭಾ ಭವನದಲ್ಲಿ ಉದ್ದೇಶಿಸಿ ಅವರು ಮಾತನಾಡಿದರು. ಬದುಕಿನಲ್ಲಿ ಸಿಗುವ ಅನುಭವದಿಂದ ಪ್ರಗತಿ ಸಾಧ್ಯವಾಗುತ್ತದೆ. ತಾನು ಧರ್ಮಸ್ಥಳದ ವತಿಯಿಂದ ಸದಾ ಲೋಕ […]

ಡಿ. ವೀರೇಂದ್ರ ಹೆಗ್ಗಡೆ : ದೃಷ್ಟಿ – ಸೃಷ್ಟಿ ಗ್ರಂಥ ಲೋಕಾರ್ಪಣೆ

Sunday, November 28th, 2021
Dristi

ಉಜಿರೆ: ನಾನು ಯಾವುದೇ ರೀತಿಯ ಕೃತಕ ಮುಖವಾಡವಿಲ್ಲದೆ ಸ್ವಾಭಾವಿಕವಾಗಿ, ಸಹಜವಾಗಿ ಬದುಕುತ್ತಿದ್ದೇನೆ. ಇಂದಿನ ಪುಸ್ತಕ ಬಿಡುಗಡೆ ಸಮಾರಂಭವು ಕನ್ನಡಿಯ ಎದುರು ನಿಂತು ನನ್ನನ್ನು ನಾನು ಅವಲೋಕನ ಮಾಡುವಂತೆ ಮಾಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಭಾನುವಾರ ಧರ್ಮಸ್ಥಳದಲ್ಲಿ ಹೆಗ್ಗಡೆಯವರ ನಿವಾಸದಲ್ಲಿ ಡಾ. ಎಮ್. ಪ್ರಭಾಕರ ಜೋಶಿ ಬರೆದ ಲೇಖನಗಳ ಸಂಕಲನ ಡಿ. ವೀರೇಂದ್ರ ಹೆಗ್ಗಡೆ : ದೃಷ್ಟಿ – ಸೃಷ್ಟಿ ಗ್ರಂಥ ಎಂಬ ಗ್ರಂಥದ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ನಾವು ನಿತ್ಯವೂ […]

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ, ಹೊಸ ಯೋಜನೆಗಳ ಪ್ರಕಟ

Sunday, October 24th, 2021
Veerendra Heggade

ಉಜಿರೆ: ಧಾರವಾಡದಲ್ಲಿ ಎಸ್.ಡಿ.ಎಂ. ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ. ಎರಡು ವರ್ಷದೊಳಗೆ ಪ್ರಾರಂಭ, ಆರು ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಆಸ್ಪತ್ರೆಗಳಿಗೆ ಸಿ.ಟಿ. ಸ್ಕ್ಯಾನ್  ಕೊಡುಗೆ, ಮಂಗಳೂರಿನಲ್ಲಿ ವೆನ್‌ಲಾಕ್ ಆಸ್ಪತ್ರೆಯಲ್ಲಿ ಎರಡು ಡಯಾಲಿಸಿಸ್ ಘಟಕ ಹಾಗೂ ಉಜಿರೆಯಲ್ಲಿರುವ ಎಸ್.ಡಿ.ಎಮ್. ಆಸ್ಪತ್ರೆಯಲ್ಲಿ ಹನ್ನೊಂದು ಡಯಾಲಿಸಿಸ್ ಘಟಕಗಳÀನ್ನು ಸದ್ಯದಲ್ಲಿಯೇ ಪ್ರಾರಂಭಿಸಿಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಭಾನುವಾರ ಧರ್ಮಸ್ಥಳದಲ್ಲಿ ಪಟ್ಟಾಭಿಷೇಕದ 54ನೇ ವರ್ಷದ ವರ್ಧಂತಿ ಆಚರಣೆ ಸಂದರ್ಭ ಅವರು ಹೊಸ ಯೋಜನೆಗಳನ್ನು ಪ್ರಕಟಿಸಿದರು. ಗ್ರಾಮಾಭಿವೃದ್ಧಿ […]

ವಿಶ್ವಹಿಂದೂ ಪರಿಷತ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಧರ್ಮಸ್ಥಳ ಭೇಟಿ

Saturday, October 23rd, 2021
Dharmasthala

ಉಜಿರೆ: ವಿಶ್ವಹಿಂದೂ ಪರಿಷದ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಶನಿವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬಹುಮುಖಿ ಸಮಾಜ ಸೇವೆಗಾಗಿ ಅಭಿನಂದಿಸಿ, ಗೌರವಿಸಿದರು. ಬಳಿಕ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನುಸೂಚಿತ ಜಾತಿಗಳ ಮೇಲೆ ಮತಾಂತರ ಪಿಡುಗು ವ್ಯಾಪಿಸಿದೆ. ಜೊತೆಗೆ ಲವ್ ಜಿಹಾದ್, ಬೆದರಿಕೆ ಹಾಗೂ ಭಯದ ವಾತಾವರಣ ಸೃಷ್ಟಿಸಿ ಮತಾಂತರ ಮಾಡಲಾಗುತ್ತಿದೆ. ಇದನ್ನು ತಡೆಗಟ್ಟಲು ವಿಶ್ವ ಹಿಂದೂ ಪರಿಷದ್ ಗಂಭೀರ ಚಿಂತನೆ ನಡೆಸಿದೆ. ದೀಪಾವಳಿ ನಂತರ ಈ […]

ಧರ್ಮಸ್ಥಳದಲ್ಲಿ ಗಾಂಧಿ ಸ್ಮೃತಿ ಮತ್ತು ವ್ಯಸನ ಮುಕ್ತ ಸಾಧಕರ ಸಮಾವೇಶ

Saturday, October 2nd, 2021
Dharmasthala

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಮನ ಪರಿವರ್ತನೆ ಮೂಲಕ ಮದ್ಯ ವ್ಯಸನ ಮುಕ್ತ ಸಮಾಜ ರೂಪಿಸುವಲ್ಲಿ ಮಾಡಿದ ಸೇವೆ, ಸಾಧನೆ ಶ್ಲಾಘನೀಯವಾಗಿದೆ. ದೃಢ ಸಂಕಲ್ಪದಿಂದ ಮಾತ್ರ ವ್ಯವಸನ ಮುಕ್ತವಾದ ಆರೋಗ್ಯಪೂರ್ಣ ಸಮಾಜ ರೂಪಿಸಲು ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಗಾಂಧಿ ಸ್ಮೃತಿ ಹಾಗೂ ವ್ಯಸನ ಮುಕ್ತ ಸಾಧಕರನ್ನು ಅಭಿನಂದಿಸಿ […]

ಕೇಂದ್ರ ಸರ್ಕಾರದ ಸಚಿವ ಸರ್ಬಾನಂದ ಸೋನೊವಾಲ್ ಧರ್ಮಸ್ಥಳಕ್ಕೆ ಭೇಟಿ

Sunday, September 26th, 2021
Sonowal

ಧರ್ಮಸ್ಥಳ : ಕೇಂದ್ರ ಸರ್ಕಾರದ ಆಯುಷ್ ಇಲಾಖಾ ಸಚಿವ ಸರ್ಬಾನಂದ ಸೋನೊವಾಲ್ ಶನಿವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾನ್ಯ ಸಚಿವರನ್ನು ಗೌರವಿಸಿದರು. ಉಡುಪಿಯಲ್ಲಿ ಎಸ್.ಡಿ.ಎಂ. ಆಯುರ್ವೇದ ಆಸ್ಪತ್ರೆಯಲ್ಲಿ ರತ್ನಶ್ರೀ ಆರೋಗ್ಯಧಾಮವನ್ನು ಉದ್ಘಾಟಿಸಿದ ಬಳಿಕ ಸಚಿವರು ಧರ್ಮಸ್ಥಳಕ್ಕೆ ಭೇಟಿ ನೀಡಿ, ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗೂ ಭೇಟಿ ನೀಡಿದ ಸಚಿವರು ಆಸ್ಪತ್ರೆಯಲ್ಲಿರುವ ವಿಶೇಷ ಸೌಲಭ್ಯಗಳು, ಶಿಸ್ತು, ಸ್ವಚ್ಛತೆ ಮತ್ತು ಸೌಜನ್ಯಪೂರ್ಣ ಸೇವೆ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು. […]

ನಾರಾವಿ ಬಸದಿಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಭೇಟಿ

Wednesday, September 22nd, 2021
Veerendra Hegde

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬುಧವಾರ ನಾರಾವಿಯಲ್ಲಿರುವ ಭಗವಾನ್ ಶ್ರೀ ಧರ್ಮನಾಥ ಸ್ವಾಮಿಗೆ ಬಸದಿಗೆ ಹೋಗಿ ದೇವರ ದರ್ಶನ ಮಾಡಿದರು. ಬಳಿಕ ಬಸದಿಯಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಆರ್ಯಿಕಾ ಚಿಂತನಮತಿ ಮಾತಾಜಿ ಮತ್ತು ಕ್ಷಲ್ಲಿಕ ಸುಶ್ರೇಯಾಮತಿ ಮಾತಾಜಿ ಅವರ ದರ್ಶನ ಮಾಡಿ ಆಶೀರ್ವಾದ ಪಡೆದರು. ಚಾತುರ್ಮಾಸ್ಯ ಸಮಿತಿಯ ಎನ್. ಪ್ರೇಮ್ ಕುಮಾರ್, ಹೊಸ್ಮಾರು, ಶಿಶುಪಾಲ ಜೈನ್, ಪ್ರಕಾಶ್ ಕುಮಾರ್, ಶಶಿಕಾಂತ ಜೈನ್, ಸನ್ಮತ್ ಕುಮಾರ್, ನಾಗಕುಮಾರ ಶೆಟ್ಟಿ, ಜಯವರ್ಮ ಬುನ್ನು, ಅಶೋಕ ಕುಮಾರ್, ಒರಿಮಾರು, ರಾಜೇಂದ್ರ […]