Blog Archive

ತೊಕ್ಕೊಟ್ಟು : ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ

Wednesday, November 6th, 2019
tokkottu

ಮಂಗಳೂರು : ಮಂಗಳೂರು ನಗರದ ತೊಕ್ಕೊಟ್ಟು ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಮಿಷನರ್ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಸರಗೋಡು ಕೊಡ್ಲಮೊಗರು ನಿವಾಸಿ ಅಬೂಬಕರ್ ಸಮದ್ (24), ಕಾಸರಗೋಡು ಕಡಂಬಾರು ನಿವಾಸಿಗಳಾದ ಮುಹಮ್ಮದ್ ಅಶ್ರಫ್ (30), ಮುಹಮ್ಮದ್ ಅಫ್ರಿದ್ (22) ಹಾಗೂ ಮುಹಮ್ಮದ್ ಅರ್ಷದ್ (18) ಬಂಧಿತ ಆರೋಪಿಗಳು. ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಕೋದಂಡರಾಮ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ವಿವರಿಸಿದರು. ಬಂಧಿತ ಆರೋಪಿಗಳಿಂದ ಎರಡು […]

ತೊಕ್ಕೊಟ್ಟು : ವಿದ್ಯುತ್ ಆಘಾತಕ್ಕೆ ಯುವಕ ಮೃತ್ಯು

Friday, October 25th, 2019
Wilson-Fernandes

ಮಂಗಳೂರು : ವಿದ್ಯುತ್ ಆಘಾತಕ್ಕೆ ಯುವಕನೋರ್ವ ಮೃತಪಟ್ಟ ಘಟನೆ ತೊಕ್ಕೊಟ್ಟವಿನ ಕಲ್ಲಾಪು ಬಳಿ ಅ. 25 ರ ಶುಕ್ರವಾರ ಬೆಳಗ್ಗೆ ನಡೆದಿದೆ. ಮೃತ ಯುವಕನನ್ನು ಅಬ್ರಹಾಂ ಅವರ ಪುತ್ರ ವಿಲ್ಸನ್ ಫೆರ್ನಾಂಡಿಸ್ (26) ಎಂದು ಗುರುತಿಸಲಾಗಿದೆ. ಸಹೋದರ ನೆಲ್ಸನ್ ಫೆರ್ನಾಂಡಿಸ್ ನೊಂದಿಗೆ ವಿಲ್ಸನ್ ಅವರು ಕಲ್ಲಾಪು ಬಳಿ ನೆಲ್ಸನ್ ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಎನ್ನುವ ಅಂಗಡಿ ನಡೆಸುತ್ತಿದ್ದು, ಇಂದು ಕೆಲಸಗಾರನೊಂದಿಗೆ ಮಹಡಿ ಏರಿ ಅಂಗಡಿಯ ಬೋರ್ಡ್ ದುರಸ್ತಿಗೆ ಮುಂದಾದಾಗ ಇಬ್ಬರಿಗೂ ಶಾಕ್ ತಗುಲಿದೆ. ತಕ್ಷಣ ಇಬ್ಬರನ್ನು ಸ್ಥಳೀಯ […]

ಉಳ್ಳಾಲ : ಸಿಡಿಲು, ಮಿಂಚಿಗೆ ಹೆದರಿ ಓಡಿದಾಗ ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು

Friday, October 18th, 2019
Accident

ಉಳ್ಳಾಲ : ಸಿಡಿಲು, ಮಿಂಚಿಗೆ ಹೆದರಿದ ಯುವಕರಿಬ್ಬರು ತರಾತುರಿಯಲ್ಲಿ ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲು ಹಳಿ ದಾಟುತ್ತಿದ್ದ ಸಂದರ್ಭ ರೈಲು ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿದರೆ, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ಆನೇಕಲ್ಲು ಹುಣಸಿ ಗ್ರಾಮದ ನಿವಾಸಿ ಸುಭಾಷ್(24) ಸಾವನ್ನಪ್ಪಿದ್ದು, ಆತನ ಜತೆಯಲ್ಲಿದ್ದ ಮಂಜುನಾಥ್(26) ಕಾಲು ತುಂಡಾಗಿದೆ. ಗುರುವಾರ ಸಾಯಂಕಾಲ ಕೆಲಸ ಮುಗಿಸಿ ಬರುತ್ತಿದ್ದ ಯುವಕರು ತೊಕ್ಕೊಟ್ಟು ಒಳಪೇಟೆ ರೈಲು ಹಳಿಬಳಿ ತಲುಪಿದಾಗ ಜೋರಾದ ಮಳೆ, ಸಿಡಿಲು, ಮಿಂಚು ಬಂದಿದೆ. ಇದರಿಂದ ಗಾಬರಿಗೊಂಡ ಯುವಕರು ಬೇಗನೆ ಮನೆ […]

ತೊಕ್ಕೊಟ್ಟು : ಅಳುತ್ತಾ ನೇತ್ರಾವತಿ ನದಿಗೆ ಹಾರಿದ ಯುವತಿ

Thursday, January 17th, 2019
Netravathi River

ತೊಕ್ಕೊಟ್ಟು : ಮೊಬೈಲಿನಲ್ಲಿ ಮಾತನಾಡುತ್ತಾ ಬಂದು ಅಳುತ್ತಾ ಯುವತಿ ಯೋರ್ವಳು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ನೇತ್ರಾವತಿ ಸೇತುವೆಯಲ್ಲಿ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್‌ ಸವಾರರಿಬ್ಬರು ನೇತ್ರಾವತಿ ಸೇತುವೆಯಲ್ಲಿ ಒಂಟಿ ಯುವತಿ ಅಳುತ್ತಾ ಇರುವುದನ್ನು ಗಮನಿಸಿ ಬೈಕನ್ನು ನಿಲ್ಲಿಸಿದ್ದರು.”ಏನಾದ್ರೂ ಸಹಾಯ ಮಾಡಬೇಕಾ’ ಎಂದು ಕೇಳುವಷ್ಟರಲ್ಲಿ ಆಕೆ ಏಕಾಏಕಿ ನದಿಗೆ ಹಾರಿದ್ದಾಳೆ. ಕತ್ತಲು ಆವರಿಸಿದ್ದರಿಂದಾಗಿ ನದಿಗೆ ಹಾರುವ ಧೈರ್ಯ ಆಗಲಿಲ್ಲ ಎಂದು ಬೈಕ್‌ ಸವಾರರು ತಿಳಿಸಿದ್ದಾರೆ. ಆಕೆ ಸುಮಾರು 22ರ ಹರೆಯದ […]

ಅಮಾಯಕ ಪಾದಚಾರಿಯನ್ನು ಬಲಿ ಪಡೆದ ಖಾಸಗಿ ಬಸ್ಸು

Sunday, July 15th, 2018
mookambika bus

ಉಳ್ಳಾಲ : ಅಮಾಯಕ  ಪಾದಚಾರಿಯೋರ್ವರ  ಮೇಲೆ ಬಸ್ ಹರಿದ ಪರಿಣಾಮ ಆತ  ಸ್ಥಳದಲ್ಲೇ ಮೃತಪಟ್ಟ ಘಟನೆ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಶನಿವಾರ ಸಂಜೆ ನಡೆದಿದೆ. ಉಳ್ಳಾಲ ಕಡೆಗೆ ಹೋಗುತಿದ್ದ KA 19 C 8549  ನಂಬರಿನ ಮೂಕಾಂಬಿಕಾ ಖಾಸಗಿ ಬಸ್ಸು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ  ಗಂಭೀರವಾಗಿ ಗಾಯಗೊಂಡ ಅಪರಿಚಿತ ಪಾದಚಾರಿ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ವಿಳಂಬ ತು.ರ.ವೇ. ವತಿಯಿಂದ ಪ್ರತಿಭಟನೆ!

Saturday, July 7th, 2018
tulunadu

ಮಂಗಳೂರು: ರಾ.ಹೆ.66ರ ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ವಿಳಂಬ ಹಾಗೂ ಅಕ್ರಮ ಟೋಲ್ ಸಂಗ್ರಹದ ವಿರುದ್ಧ ತುಳುನಾಡ ರಕ್ಷಣಾ ವೇದಿಕೆಯ ವತಿಯಿಂದ ಶನಿವಾರ ನಗರದ ಪಂಪ್‌ವೆಲ್ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು. ತುರವೇ ಸ್ಥಾಪಕಾಧ್ಯಕ್ಷ ಯೋಗಿಶ್ ಶೆಟ್ಟಿ ಜೆಪ್ಪು ಮಾತನಾಡಿ ನವಯುಗ ಕಂಪೆನಿಯು 2010ರಲ್ಲಿ ರಾ.ಹೆ.66ರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿತ್ತು. ಆದರೆ 8 ವರ್ಷವಾದರೂ ಕೂಡ ಇದರ ಕಾಮಗಾರಿ ಪೂರ್ಣಗೊಂಡಿಲ್ಲ. ಎರಡೂ ಪ್ರಮುಖ ಜಂಕ್ಷನ್‌ನ ಫ್ಲೈ ಓವರ್ ಕಾಮಗಾರಿ ವಿಳಂಬದಿಂದ ಸಾವಿರಾರು ಮಂದಿಗೆ ತೊಂದರೆಯಾಗುತ್ತಿದ್ದು, […]

ತೊಕ್ಕೊಟ್ಟು ಬಳಿ ಕಾರು ಅಪಘಾತ..ಇಬ್ಬರಿಗೆ ಗಾಯ!

Thursday, July 5th, 2018
accident

ಮಂಗಳೂರು: ತೊಕ್ಕೊಟ್ಟು ಬಳಿ ಕಾರು ಅಪಘಾತಕ್ಕೀಡಾಗಿ ಇಬ್ಬರು ಗಾಯಗೊಂಡಿರುವ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ಬಳ್ಳಾಲ್ ಬಾಗ್ ನಿವಾಸಿ ಜಾಯಲ್, ಮಿನಿಷಾ ಗಾಯಗೊಂಡಿದ್ದಾರೆ. ಅದೇ ಕಾರಿನಲ್ಲಿದ್ದ ವಿನೀತ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೆಹಂದಿ ಕಾರ್ಯಕ್ರಮ ಮುಗಿಸಿ ಮಂಗಳೂರು ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭಂವಿಸಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆ ತೊಕ್ಕೊಟ್ಟು ಫ್ಲೈಓವರ್ ಬಳಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಉರುಳಿ ಬಿದ್ದಿದೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅನ್ಯಧರ್ಮಿಯ ಪತ್ನಿಯ ಮನೆಗೆ ಬಂದ ಯುವಕನಿಗೆ ಆತನ ಪತ್ನಿಯಿಂದ ಹಲ್ಲೆ..!

Wednesday, June 13th, 2018
assulted

ಮಂಗಳೂರು: ಅನ್ಯಧರ್ಮಿಯ ಪತ್ನಿಯ ಮನೆಗೆ ಬಂದ ಯುವಕನಿಗೆ ಆತನ ಪತ್ನಿ ಮತ್ತು ಮನೆಯವರಿಂದ ಹಲ್ಲೆ ನಡೆದ ಘಟನೆ ಮಂಗಳೂರಿನ ತೊಕ್ಕೊಟ್ಟುವಿನ ಕುಂಪಲದ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಸುಳ್ಯದ ಸಯ್ಯದ್ ಎಂಬಾತನ ಮೇಲೆ ಹಲ್ಲೆ ನಡೆದಿದ್ದು, ಈತ ಆರು ತಿಂಗಳ ಹಿಂದೆ ಹಿಂದು ಧರ್ಮಿಯ ಯುವತಿಯನ್ನು ಯುವಕ ಮದುವೆಯಾಗಿದ್ದ. ನಂತರ ಮನೆಯವರ ವಿರೋಧದಿಂದ ದೂರವಾಗಿದ್ದರು. ಮತ್ತೆ ಈತ ತನ್ನ ಪತ್ನಿಯ ಮನೆಗೆ ಹೋದಾಗ, ಆತನ ಮೇಲೆ ಹಲ್ಲೆ ನಡೆದಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ತೊಕ್ಕೊಟ್ಟಿನಲ್ಲಿ ರಸ್ತೆ ಅಪಘಾತ: ಕುಂಪಲದ ಯುವಕ ಮೃತ್ಯು

Friday, April 27th, 2018
accident

ಮಂಗಳೂರು: ಬೈಕಿಗೆ ಮರಳು ಸಾಗಾಟದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕುಂಪಲ ಆಶ್ರಯ ಕಾಲನಿ ನಿವಾಸಿ ವಿನೀತ್ ರಾಜ್(25) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟುವಿನಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಹೆಚ್ಚಿನ ಘನ ವಾಹನಗಳು ಇಲ್ಲಿನ ಬಸ್ ನಿಲ್ದಾಣದ ರಸ್ತೆಯಲ್ಲೇ ಸಂಚರಿಸುತ್ತಿವೆ. ಇದು ಅಪಾಯಕಾರಿಯಾಗಿ ಮಾರ್ಪಟ್ಟಿದೆ. ಇಂದು ನಡೆದ ಈ ಅಪಘಾತಕ್ಕೂ ಟಿಪ್ಪರ್ ಬಸ್ ನಿಲ್ದಾಣದ ರಸ್ತೆಯಲ್ಲಿ ಸಂಚರಿಸಿದ್ದೇ ಕಾರಣ ಎಂದು […]

ಕಸಾಯಿಖಾನೆಗೆ ಕೋಣಗಳನ್ನು ಸಾಗಿಸುತ್ತಿದ್ದ ಇಬ್ಬರ ಬಂಧನ

Friday, January 26th, 2018
arrested

ಮಂಗಳೂರು: ಮೂಡಿಗೆರೆಯಿಂದ ಕೇರಳದ ಕಡೆಗೆ ಕೋಣಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ತೊಕ್ಕೊಟ್ಟು ಬಳಿ ವಶಪಡಿಸಿಕೊಂಡ ಉಳ್ಳಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಚೆರ್ಕಳ ಮೂಲದ ದಿವಾಕರ ನಾಯರ್(47), ಇನ್ನೋರ್ವ ಕೇರಳ ಮೂಲದ ಸ್ವಹಿಬ್ ಹಬೀಬ್(33) ಎಂದು ಗುರುತಿಸಲಾಗಿದೆ. ಆರೋಪಿಗಳು ಮೂಡಿಗರೆಯಿಂದ 20 ಕೋಣಗಳನ್ನು ಲಾರಿಯಲ್ಲಿ ತುಂಬಿಸಿ ಕಸಾಯಿಖಾನೆಗೆಂದು ಕೇರಳಕ್ಕೆ ಸಾಗಿಸುತ್ತಿದ್ದರೆನ್ನಲಾಗಿದೆ. ಡಿಸಿಪಿಯವರ ನಿರ್ದೇಶನದ ಮೇರೆಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಇನ್ಸ್‌ಪೆಕ್ಟರ್ ಗೋಪಿಕೃಷ್ಣ ಮತ್ತು ಎಸ್‌ಐ ವಿನಾಯಕ್ ಅವರ ತಂಡ ದಾಳಿ ನಡೆಸಿ […]