Blog Archive

ಪಿಯು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

Tuesday, August 23rd, 2016
Shifan

ಮಂಗಳೂರು: ಪಿಯು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ತೊಕ್ಕೊಟ್ಟುವಿನ ಲಚ್ಚಿಲ್‌‌ನ ಮನೆಯೊಂದರಲ್ಲಿ ನಡೆದಿದೆ. ಶಿಫಾನ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ತೊಕ್ಕೊಟ್ಟು ಸಂತ ಸೆಬೆಸ್ಟಿಯನ್ ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ. ವಿದ್ಯಾರ್ಥಿ ಶಿಫಾನ್ ಲಚ್ಚಿಲ್‌‌ ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಗುಜರಿ ಸಂಗ್ರಹಣ ದಾಸ್ತಾನಿಗೆ ಬೆಂಕಿ ಭಾರಿ ನಸ್ಟ

Saturday, December 1st, 2012
Scrap shop Thokkottu

ಮಂಗಳೂರು :ಉಳ್ಳಾಲ ಪೋಲೀಸ್ ಠಾಣಾ ವ್ಯಾಪ್ತಿಯ, ತೊಕ್ಕೊಟ್ಟು ಜಂಕ್ಷನ್ ನಲ್ಲಿನ ಗುಜರಿ ಸಂಗ್ರಹಣ ದಾಸ್ತಾನಿಗೆ ನಿನ್ನೆ ಮಧ್ಯರಾತ್ರಿ 11.40ರ ಸುಮಾರಿಗೆ ಬೆಂಕಿ ತಗುಲಿದ ಪರಿಣಾಮ ಭಾರಿ ನಸ್ಟ ಸಂಭವಿಸಿದೆ. ಇದು ಮಹಮ್ಮದ್ ಆಶ್ರಫ್ ಎಂಬುವವರಿಗೆ ಸೇರಿದ್ದಾಗಿದ್ದು ಸುಮಾರು 5 ಲಕ್ಷದಸ್ಟು ನಸ್ಟ ಸಂಭವಿಸಿದೆ. ರಾತ್ರಿಯೇ ಎರಡು ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿದ್ದು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ಈ ಕಾರ್ಯಚರಣೆಯಲ್ಲಿ ಸ್ಥಳೀಯರು ಸಹಕರಿಸಿದರು. ಈ ಪ್ರದೇಶದ ಅಕ್ಕಪಕ್ಕದಲ್ಲಿ ಮನೆ ಹಾಗೂ ವಾಣಿಜ್ಯ ಸಂಕೀರ್ಣಗಳಿದ್ದು […]