ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ..ಓರ್ವ ವ್ಯಕ್ತಿ ಬಂಧನ
Friday, June 8th, 2018ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಮಂಗಳೂರು ಡಿಆರ್ಐ ಅಧಿಕಾರಿಗಳು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿಲದ ಉಮರ್ ಫಾರೂಕ್ ಕನ್ನದಗುಳಿ ಎಂಬಾತ ಬಂಧಿತ ಆರೋಪಿ. ಬುಧವಾರದಂದು ಸಂಜೆ 6.15 ಕ್ಕೆ ದುಬೈನಿಂದ ಮಂಗಳೂರಿಗೆ ಉಮರ್ ಫಾರೂಕ್ ಬಂದಿದ್ದ. ಸ್ಪೈಸ್ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದಿದ್ದ ಆರೋಪಿ ಮಲ್ಟಿ ಮೀಡಿಯಾ ಸ್ಪೀಕರ್ ಸಿಸ್ಟಮ್ ಒಳಗಡೆ ಚಿನ್ನವನ್ನು ಅಡಗಿಸಿ ತಂದಿದ್ದ. ಈ ವೇಳೆ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದಾಗ […]