Blog Archive

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಗೆ 117 ಕೋಟಿ ರೂ. ವಂಚಿಸಲು ಪ್ಲಾನ್, ದಕ್ಷಿಣ ಕನ್ನಡದ ಆರು ಮಂದಿ ವಶ

Tuesday, October 6th, 2020
Andra police

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿಯನ್ನು ಆಂಧ್ರ ಪ್ರದೇಶದ ಪೊಲೀಸರು ಅಲ್ಲಿನ  ಮುಖ್ಯಮಂತ್ರಿ ಪರಿಹಾರ ನಿಧಿಗೆ ವಂಚಿಸಲು ಯೋಜನೆ ರೂಪಿಸಿದ ಹಿನ್ನಲೆಯಲ್ಲಿ ಬಂಧಿಸಿದ್ದಾರೆ. ಮೂಡಬಿದ್ರೆ ನಿವಾಸಿಗಳಾದ ಯೋಗೀಶ್ ಆಚಾರ್ಯ (40), ಉದಯ ಶೆಟ್ಟಿ ಕಾಂತಾವರ( 35), ಮಂಗಳೂರಿನ ಬ್ರಿಜೆಶ್ ರೈ(35) ಬೆಳ್ತಂಗಡಿಯ ಗಂಗಾಧರ ಸುವರ್ಣ (45) ಸೇರಿದಂತೆ ಆರು ಮಂದಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಆಂಧ್ರದ ಕಂದಾಯ ಇಲಾಖೆಯ ಸಹಾಯಕ ಕಾರ್ಯದರ್ಶಿ ಪಿ.ಮುರಳೀಕೃಷ್ಣ ರಾವ್ ನೀಡಿದ ದೂರಿನ ಆಧಾರ ಮೇರೆಗೆ ಸೆ. 21ರಂದು ಆಂಧ್ರ ಪ್ರದೇಶದ ತುಲ್ಲೂರು ಪೊಲೀಸ್ ಠಾಣೆಯಲ್ಲಿ […]

ಕೊರೋನ ಸೋಂಕು : ದಕ್ಷಿಣ ಕನ್ನಡ – 322, ಸಾವು 12, ಕಾಸರಗೋಡು – 476

Saturday, October 3rd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಶುಕ್ರವಾರ ಹೊಸದಾಗಿ 322 ಮಂದಿಗೆ ಕೊರೋನ ಸೋಂಕು ತಗುಲಿದೆ. ಸೋಂಕಿನಿಂದಾಗಿ ಮತ್ತೆ 12 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ 23,761ಕ್ಕೆ ಏರಿಕೆ ಕಂಡಿದೆ. ಮೃತಪಟ್ಟವರ ಸಂಖ್ಯೆ ಇದೀಗ 557ಕ್ಕೆ ತಲುಪಿದ್ದು ಜಿಲ್ಲೆಯ ವಿವಿಧ ಆಸ್ಪತ್ರೆಗಳು, ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 277 ಮಂದಿಗೆ ಕೊರೋನ ಮುಕ್ತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕು ಮುಕ್ತರಾದವರ ಸಂಖ್ಯೆ 17,365ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 5,839 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 1,66,456 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 1,42,695 ಮಂದಿಯ […]

ಕೊರೋನ ಸೋಂಕು ಸೆ. 29 : ದಕ್ಷಿಣ ಕನ್ನಡ -362, ಒಂಬತ್ತು ಸಾವು, ಉಡುಪಿ – 319, ಎರಡು ಸಾವು

Tuesday, September 29th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 362 ಮಂದಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೋನ ಸೋಂಕಿನಿಂದಾಗಿ ಮತ್ತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 232 ಮಂದಿ ಗುಣಮುಖರಾಗಿದ್ದಾರೆ.  ಕೊರೋನದಿಂದ 9 ಮಂದಿ ಮೃತಪಟ್ಟಿದ್ದು, 190 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಸಿಬ್ಬಂದಿಯು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಈಗಾಗಲೇ ಒಂದು ವಾರ ಪೂರೈಸಿದೆ. ಇದರಿಂದ ಮಂಗಳವಾರವೂ ದ.ಕ. ಜಿಲ್ಲೆಯ ಕೋವಿಡ್ ಬುಲೆಟಿನ್ ಪ್ರಕಟವಾಗಿಲ್ಲ. ಉಡುಪಿ ಜಿಲ್ಲೆಯಲ್ಲಿ […]

ಕೊರೋನಾ ಸೋಂಕು : ದಕ್ಷಿಣ ಕನ್ನಡ – 380, ಉಡುಪಿ – 293, ಕಾಸರಗೋಡು – 208

Sunday, September 20th, 2020
Corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ರವಿವಾರದಂದು 380 ಏರಿಕೆಯಾಗಿದೆ . ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 20 ಸಾವಿರ ದಾಟಿದೆ. ರವಿವಾರದಂದು ದ.ಕ. ಜಿಲ್ಲೆಯಲ್ಲಿ 127 ಮಂದಿಯಲ್ಲಿ ಪ್ರಾಥಮಿಕ  ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 139 ಮಂದಿಯಲ್ಲಿ ಐಎಲ್ ಐ ಕೇಸ್ ದೃಢಪಟ್ಟಿದೆ. 8 ಮಂದಿಯಲ್ಲಿ ಸಾರಿ ಕೇಸ್ ಪತ್ತೆಯಾಗಿದ್ದು, 106 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ರವಿವಾರ ಉಡುಪಿ ಜಿಲ್ಲೆಯಲ್ಲಿ ಒಟ್ಟು 293 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ […]

ಕೊರೊನಾ ಸೋಂಕು : ದಕ್ಷಿಣ ಕನ್ನಡ – 456, ಸಾವು 1, ಉಡುಪಿ ನಾಲ್ಕು ದಿನಗಳಲ್ಲಿ 845

Friday, September 18th, 2020
corona

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾ ಸೋಂಕಿತರ ಸಂಖ್ಯೆ 456 ಕ್ಕೆ ಏರಿಕೆಯಾಗಿದೆ. 11 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಕೊರೊನಾದಿಂದ ಸಾವನ್ನಪ್ಪಿದ 11 ಮಂದಿಯಲ್ಲಿ 6 ಮಂದಿ ಮಂಗಳೂರು ತಾಲೂಕಿನವರಾದರೆ, ತಲಾ ಒಬ್ಬರು ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಮತ್ತು ಇಬ್ಬರು ಹೊರಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 472 ಕ್ಕೆ ಏರಿಕೆಯಾಗಿದೆ. 456 ಮಂದಿ ಕೊರೊನಾ ಸೋಂಕಿತರಲ್ಲಿ 242 ಮಂದಿ ಮಂಗಳೂರು ತಾಲೂಕು, 86 ಬಂಟ್ವಾಳ ತಾಲೂಕು, 27 ಪುತ್ತೂರು ತಾಲೂಕು, 26 ಸುಳ್ಯ ತಾಲೂಕು, 40 ಬೆಳ್ತಂಗಡಿ ತಾಲೂಕು […]

ಕೊರೋನ ಸೋಂಕು : ದಕ್ಷಿಣ ಕನ್ನಡ 316, ಐವರು ಮೃತ, ಕಾಸರಗೋಡು 172

Tuesday, September 15th, 2020
DK-corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 316 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.  ಮಂಗಳವಾರ ಮತ್ತೆ ಐವರು ಕೊರೋನ ಸೋಂಕಿಗೆ ಮೃತಪಟ್ಟಿದ್ದಾರೆ. ಮೃತರಲ್ಲಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳ ಹಾಗೂ ಪುತ್ತೂರು ತಾಲೂಕಿನ ತಲಾ ಓರ್ವರು ಇದ್ದಾರೆ. ಮೃತರು ವಿವಿಧ ರೋಗಗಳಿಂದ ಬಳಲುತ್ತಿದ್ದರು. ಜೊತೆಗೆ ಕೊರೋನ ಸೋಂಕೂ ತಗುಲಿತ್ತು. ಜಿಲ್ಲೆಯಲ್ಲಿ ಮೃತರ ಸಂಖ್ಯೆ 452ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. 316 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಕೊರೋನ ಸೋಂಕು ಹಿಡಿತಕ್ಕೆ ಬಾರದೇ ಜಿಲ್ಲಾಡಳಿತಕ್ಕೆ ತಲೆನೋವಾಗಿ […]

ಕೊರೊನಾ ಸೋಂಕು : ದಕ್ಷಿಣ ಕನ್ನಡ 310, ಉಡುಪಿ 258, ಕಾಸರಗೋಡು 270

Wednesday, September 9th, 2020
CORONA

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 310 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,762 ಕ್ಕೆ ಏರಿಕೆಯಾಗಿದೆ. ಇಂದಿನ ಪ್ರಕರಣಗಳ ಪೈಕಿ  ಮಂಗಳೂರಿನಲ್ಲಿ 188, ಬಂಟ್ವಾಳದಲ್ಲಿ 27, ಪುತ್ತೂರಿನಲ್ಲಿ 25, ಸುಳ್ಯದಲ್ಲಿ 25, ಬೆಳ್ತಂಗಡಿಯಲ್ಲಿ 26 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 19 ಮಂದಿಗೆ ಪಾಸಿಟಿವ್‌ ಆಗಿದೆ. ಬುಧವಾರ ಜಿಲ್ಲೆಯಲ್ಲಿ ಆರು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಐವರು ಮಂಗಳೂರಿನವರಾದರೆ ಒಬ್ಬರು ಇತರೆ ಜಿಲ್ಲೆಯವರಾಗಿದ್ದಾರೆ. ಈವರೆಗೆ […]

ಕೊರೋನಾ ಪಾಸಿಟಿವ್ : ದಕ್ಷಿಣ ಕನ್ನಡ 326, ಉಡುಪಿ 216, ಕಾಸರಗೋಡು 218

Sunday, September 6th, 2020
corona virus

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 326 ಮಂದಿಯಲ್ಲಿ ಕೊರೋನಾ  ಪಾಸಿಟಿವ್ ದೃಢಪಟ್ಟಿದೆ. ಓರ್ವ ಸೋಂಕಿತ ಮೃತಪಟ್ಟಿದ್ದು, 202 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 118 ಪುರುಷರು ಹಾಗೂ 74 ಮಹಿಳೆಯರು ಸೇರಿದಂತೆ 192 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿವೆ. 81 ಪುರುಷರು ಹಾಗೂ 53 ಮಹಿಳೆಯರು ಸಹಿತ 134 ಮಂದಿಯಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಓರ್ವ ಸೋಂಕಿತ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 168 ಮಂದಿಯಲ್ಲಿ ಸಾಮಾನ್ಯ ಶೀತ ಲಕ್ಷಣ […]

ಕೊರೊನಾ ಸೋಂಕು : ದಕ್ಷಿಣ ಕನ್ನಡ 428, ಉಡುಪಿ 186 , ಕಾಸರಗೋಡು 236

Saturday, September 5th, 2020
corona

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ  428 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾಗೆ 7 ಮಂದಿ ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಮೃತಪಟ್ಟ 7 ಮಂದಿಯಲ್ಲಿ 4 ಮಂದಿ ಮಂಗಳೂರು ತಾಲೂಕು, ಒಬ್ಬರು ಪುತ್ತೂರು ತಾಲೂಕು ಮತ್ತು ಇಬ್ಬರು ಹೊರಜಿಲ್ಲೆಯವ ರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 391ಕ್ಕೆ ಏರಿಕೆಯಾಗಿದೆ. ಮಂಗಳೂರು ತಾಲೂಕಿನ 222 ಮಂದಿ, ಬಂಟ್ವಾಳ ತಾಲೂಕಿನ 61, ಪುತ್ತೂರು ತಾಲೂಕಿನ 54 , ಸುಳ್ಯ ತಾಲೂಕಿನ 45, ಬೆಳ್ತಂಗಡಿ ತಾಲೂಕಿನ 28 ಮತ್ತು ಹೊರಜಿಲ್ಲೆಯ 18 […]

ಕೊರೋನ ಸೋಂಕು ಸೆ .3 : ದಕ್ಷಿಣ ಕನ್ನಡ 316, ಸಾವು 3, ಉಡುಪಿ, 226, ಸಾವು 3, ಕಾಸರಗೋಡು 133

Thursday, September 3rd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 316 ಮಂದಿಯಲ್ಲಿ ಕೊರೋನ ಸೋಂಕಿನ ಪಾಟಿಸಿವ್ ಪತ್ತೆಯಾಗಿದ್ದು, 3 ಮಂದಿ ಬಲಿಯಾಗಿದ್ದಾರೆ. ಗುರುವಾರ ವರದಿಯಾದ 316 ಮಂದಿಯ ಸಹಿತ ಈವರೆಗೆ ಜಿಲ್ಲೆಯಲ್ಲಿ ಒಟ್ಟು 13,795 ಮಂದಿಗೆ ಕೊರೋನ ಸೋಂಕು ತಗುಲಿದೆ. ಗುರುವಾರ ಪಾಸಿಟಿವ್‌ಗೊಳಗಾದ 316 ಮಂದಿಯಲ್ಲಿ ಮಂಗಳೂರಿನ 190, ಬಂಟ್ವಾಳದ 40, ಪುತ್ತೂರಿನ 21, ಸುಳ್ಯದ 16, ಬೆಳ್ತಂಗಡಿಯ 16 ಮತ್ತು ಇತರ ಜಿಲ್ಲೆಯ 33 ಮಂದಿ ಸೇರಿದ್ದಾರೆ. ಮಂಗಳೂರು ತಾಲೂಕಿನ 2 ಮತ್ತು ಹೊರಜಿಲ್ಲೆಯ ಒಬ್ಬರು ಸಹಿತ ಜಿಲ್ಲೆಯಲ್ಲಿ ಗುರುವಾರ […]