Blog Archive

ದಕ್ಷಿಣ ಕನ್ನಡಕ್ಕೆ ಬಂದ ಮಿಡತೆಗಳ ಹಿಂಡು, ಕೃಷಿಕರಲ್ಲಿ ಆತಂಕ

Sunday, May 31st, 2020
grasshopper

ಕಡಬ  :  ಉತ್ತರ ಭಾರತದಲ್ಲಿ ರೈತರನ್ನು ಕಂಗೆಡಿಸಿದ ಮಿಡತೆಗಳ ಹಾವಳಿ ಇದೀಗ ಕರಾವಳಿಗೂ ಕಾಲಿಟ್ಟಿದ್ದು, ದ.ಕ ಜಿಲ್ಲೆಯ ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾ.ಪಂ ವ್ಯಾಪ್ತಿಯ ರೆಂಜಿಲಾಡಿ ಗ್ರಾಮ ಹಾಗೂ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಪರಿಸರದಲ್ಲಿ ಸಂಜೆ ವೇಳೆ ಮಿಡತೆಯ ಹಿಂಡು ದಿಢೀರನೆ ಕಂಡುಬಂದಿದೆ. ಮಿಡತೆಯು ಪ್ರೌಢಾವಸ್ಥೆ ಹಂತ ಮಾದರಿಯನ್ನು ಪರಿಶೀಲನೆಗಾಗಿ ಕೀಟತಜ್ಞರಿಗೆ ಕಳುಹಿಸಲಾಗಿದೆ ಹಾಗೂ ಕೀಟಶಾಸ್ತ್ರಜ್ಞರಿಂದ ಮಿಡತೆಯ ಗುರುತಿಸುವಿಕೆಯ ಹಂತದಲ್ಲಿದೆ. ಮಿಡತೆ ಹಾವಳಿಯ ಕುರಿತು ಯಾವುದೇ ಆತಂಕಕ್ಕೆ ಒಳಗಾಗಬಾರದೆಂದು ಕೃಷಿ ನಿರ್ದೇಶಕರು ಮನವಿ ಮಾಡಿದ್ದಾರೆ. […]

ಸರಕಾರಿ ಸಾಲಮನ್ನಾದ ಹೆಚ್ಚಿನ ಲಾಭ ಪಡೆದವರು ದಕ್ಷಿಣ ಕನ್ನಡ, ಉಡುಪಿ ಮೀನುಗಾರರು

Sunday, May 31st, 2020
fishing

ಭಟ್ಕಳ : ರಾಜ್ಯ ಸರಕಾರ ಘೋಷಣೆ ಮಾಡಿದ್ದ ಮೀನುಗಾರರ ಸಾಲಮನ್ನಾದ ಲಾಭವನ್ನು ದಕ್ಷಿಣ ಕನ್ನಡ ಮತ್ತು ಉಡುಪಿಯ ಮೀನುಗಾರರೇ ಹೆಚ್ಚಿನ ಪ್ರಮಾಣದಲ್ಲಿ ಪಡೆದಿದ್ದಾರೆ ಎಂದು ಇಲ್ಲಿಯ ಮೀನುಗಾರರ ಮುಖಂಡ ವಸಂತ ಖಾರ್ವಿ ಹೇಳಿದ್ದಾರೆ. ಅವರು ನಗರದ ಮಾವಿನಕುರ್ವೆ ಬಂದರಿನ ಬೋಟ್‌ ಯೂನಿಯನ್‌ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕೋವಿಡ್‌ ಹಿನ್ನೆಲೆಯಲ್ಲಿ ಸರಕಾರ ಎಲ್ಲ ಸಮುದಾಯದವರಿಗೂ ನೆರವು ನೀಡುತ್ತಿದೆ. ಆದರೆ ಮೀನುಗಾರರನ್ನು ಕಡೆಗಣಿಸಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ. ಮೀನು ಕ್ಷಾಮ ಕಳೆದೆರಡು ವರ್ಷಗಳಿಂದ ಮೀನುಗಾರರನ್ನು […]

ದಕ್ಷಿಣ ಕನ್ನಡದಲ್ಲಿ ಗುರುವಾರ 6 ಮಂದಿಯಲ್ಲಿ ಕೊರೊನಾ ದೃಢ

Thursday, May 28th, 2020
corona-virus

ಮಂಗಳೂರು : ದೇಶದಲ್ಲಿ ಹಂತ ಹಂತವಾಗಿ ಲಾಕ್ ಡೌನ್ ತೆರವು ಗೊಳ್ಳುತ್ತಿದ್ದಂತೆ ಕೊರೊನಾ ಸೋಂಕು ಜಿಲ್ಲೆಯಲ್ಲಿ ತೀವ್ರಗತಿಯಲ್ಲಿ ಏರಿದೆ. ಇಂದು ಮತ್ತೆ 6 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿಗೆ ಒಳಗಾದ ಬಹುತೇಕ ಮಂದಿ ಮಹಾರಾಷ್ಟ್ರದ ಮುಂಬಯಿಂದಲೇ ಬಂದವರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಗುರುವಾರ ಒಂದೇ ದಿನ 6 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು , 61, 18 ವರ್ಷದ ಮಹಿಳೆ, 62 , 50 , 24, 36 ವರ್ಷದ ಪುರುಷರಲ್ಲಿ ಕೊರೊನಾ ಪತ್ತೆಯಾಗಿದೆ. ಇವರೆಲ್ಲರೂ ಮಹಾರಾಷ್ಟ್ರದ ರಾಜ್ಯದಿಂದ […]

ಬಂಟ್ವಾಳದಲ್ಲಿ ಮತ್ತೆ ಮೂವರಿಗೆ ಕೋವಿಡ್ -19 ಸೋಂಕು, ಜಿಲ್ಲೆಯಲ್ಲಿ ಜನರಲ್ಲಿ ಮಡುಗಟ್ಟಿದ ಆತಂಕ

Saturday, May 9th, 2020
Bantwal Covid

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಒಂದೇ ಮನೆಯ ಮೂವರಿಗೆ ಇಂದು ಕೋವಿಡ್ -19 ಸೋಂಕು ದೃಢವಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಆತಂಕ ಮತ್ತಷ್ಟು ಹೆಚ್ಚಿದೆ. ಈ ಹಿಂದೆ ಸೋಂಕು ದೃಢವಾಗಿದ್ದ ಸೋಂಕಿತ ಸಂಖ್ಯೆ 578ರ ಸಂಪರ್ಕದಿಂದ ಈಗ ಮತ್ತೆ ಮೂವರಿಗೆ ಸೋಂಕು ತಾಗಿದೆ. 30 ವರ್ಷದ ಪುರುಷ, 60 ಮತ್ತು 70 ವರ್ಷದ ಇಬ್ಬರು ಮಹಿಳೆಯರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢಪಟ್ಟಿದೆ. ಇವರು ಮೊದಲು ಮೃತಪಟ್ಟಿದ್ದ ಬಂಟ್ವಾಳದ ಮಹಿಳೆಯ ಮಹಿಳೆಯ ದ್ವಿತೀಯ ಸಂಪರ್ಕದವರಾಗಿದ್ದಾರೆ. […]

ಕೊರೊನಾ ಮಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ಎರಡನೇ ಬಲಿ

Thursday, April 23rd, 2020
corona-death

ಮಂಗಳೂರು : ಬಂಟ್ವಾಳದ ಮಹಿಳೆಗೆ ಗುರುವಾರದಂದು ಪಾಸಿಟಿವ್ ದೃಢ ಪಟ್ಟ ಬೆನ್ನಲ್ಲೇ  ಕಸಬಾ ದ 75ರ  ವೃದ್ದೆ ಮೃತ ಪಟ್ಟಿರುವ ಅಘಾತಕಾರಿ ಸಂಗತಿಯೊಂದು  ಜಿಲ್ಲೆಯ ಜನತೆಗೆ ಆತಂಕ ಮೂಡಿಸಿದೆ. ಸೋಮವಾರದಂದು ಸೊಸೆ ಮೃತಪಟ್ಟಿದ್ದು, ಗುರುವಾರದಂದು ಅತ್ತೆ ಮೃತಪಟ್ಟಿದ್ದಾರೆ. ಬಂಟ್ವಾಳದ ಒಂದೇ ಕುಟುಂಬದವರು ಕೊರೊನಾದಿಂದ ಜಿಲ್ಲೆಯಲ್ಲಿ ಮೃತಪಟ್ಟಿರುವುದು ಆಘಾತಕಾರಿ ಸಂಗತಿ. ದ.ಕ. ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಎರಡನೇ ಬಲಿ ಪಡೆದುಕೊಂಡಿದೆ. ಬಂಟ್ವಾಳದಲ್ಲಿ ಈ ಹಿಂದೆ ಮೃತಪಟ್ಟಿದ್ದ ಮಹಿಳೆಯ ಅತ್ತೆಯಲ್ಲಿ ಗುರುವಾರದಂದು ಸೋಂಕು ದೃಢಪಟ್ಟಿತ್ತು. ಅದರಂತೆ ವೆನ್ಲಾಕ್ ಅಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ 75ರ ಹರೆಯದ ಮಹಿಳೆಗೆ […]

ದಕ್ಷಿಣ ಕನ್ನಡದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್, ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 16

Tuesday, April 21st, 2020
BC Road

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಒಂದು ಕೊರೊನಾ ಪಾಸಿಟಿವ್ ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ದಾಖಲಾದ ಪ್ರಕರಣಗಳ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಬಂಟ್ವಾಳದಲ್ಲಿ ಭಾನುವಾರ ಮೃತಪಟ್ಟ ಮಹಿಳೆ ಪಕ್ಕದ ಮನೆಯ 67 ವರ್ಷದ ಮಹಿಳೆಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಮಹಿಳೆಯ ಮನೆಯವರೂ ಸೇರಿದಂತೆ ಮಂಗಳವಾರ 9 ಮಂದಿಯನ್ನು ಕ್ವಾರಂಟೈನ್ನಲ್ಲಿರಿಸಿ, ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ. ಬಂಟ್ವಾಳ ರಸ್ತೆಗೆ ಮಣ್ಣು ಹಾಕಿ ಬಂದ್ ಮಾಡಲಾಗಿದೆ. ಸ್ಥಳಕ್ಕೆ ಸಹಾಯಕ ಕಮೀಷನರ್ ಮದನ್ ಮೋಹನ್ ಆಗಮಿಸಿ, ಸ್ಥಳ ಪರಿಶೀಲನೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಕೋವಿಡ್ 19 ಪ್ರಕರಣ ಪತ್ತೆ

Sunday, March 22nd, 2020
wenlock

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಮಾರ್ಚ್ 19ರಂದು ದುಬಾಯಿಯಿಂದ ಬಂದ ವಿಮಾನದಲ್ಲಿದ್ದ 22 ವರ್ಷದ ಯುವಕನಲ್ಲಿ ಕೋವಿಡ್ 19 ಪ್ರಕರಣ ದೃಢಪಟ್ಟ ವರದಿ ಲಭಿಸಿದೆ. ದುಬಾಯಿಯಿಂದ ಮಾರ್ಚ್ 19ರಂದು ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ 22 ವರ್ಷದ ಭಟ್ಕಳ ಮೂಲದ ಯುವಕನನ್ನು ಅಂದು ತಪಾಸಣೆ ನಡೆಸಿ ಆತನ ಗಂಟಲ ಸ್ರಾವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಮತ್ತು ಆ ದಿನವೇ ಈತನನ್ನು ನಗರದ ವೆನ್ಲಾಕ್ ಆಸ್ಪತ್ರೆಯ ಐಸೊಲೇಷನ್ ವಾರ್ಡ್ನಲ್ಲಿ ದಾಖಲಿಸಲಾಗಿತ್ತು. ಆ […]

ದಕ್ಷಿಣ ಕನ್ನಡ : 80 ಸ್ಥಳಗಳಲ್ಲಿ ಕೊರೊನಾ ತಪಾಸಣಾ ಕೇಂದ್ರ ಸ್ಥಾಪನೆ

Saturday, March 14th, 2020
corona

ಮಂಗಳೂರು: ರಾಜ್ಯದಲ್ಲಿ ಕೊರೊನಾ ಭೀತಿ ಆವರಿಸಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ, ಎನ್‌ಎಂಪಿಟಿ ಸೇರಿದಂತೆ 80 ಸ್ಥಳಗಳಲ್ಲಿಗಳಲ್ಲಿ ಕೊರೊನಾ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ವೆನ್ಲಾಕ್ ಮತ್ತು ಲೇಡಿಗೋಶನ್‌ ಜಿಲ್ಲಾಸ್ಪತ್ರೆಗಳಲ್ಲಿ ಮಾತ್ರವಲ್ಲದೆ, ಜಿಲ್ಲೆಯ 6 ಸಮುದಾಯ ಆರೋಗ್ಯ ಕೇಂದ್ರ, 66 ಪ್ರಾಥಮಿಕ ಆರೋಗ್ಯ ಕೇಂದ್ರ, 4 ತಾಲೂಕು ಆಸ್ಪತ್ರೆಗಳಲ್ಲಿ ಕೊರೊನಾ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಜನರು ಅಗತ್ಯ ಬಿದ್ದಲ್ಲಿ ಸನಿಹದ ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬಹುದು. ಎಲ್ಲ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು […]

ಬಕ್ರೀದ್ ನಿಮಿತ್ತ ಗೋಹತ್ಯೆ ತಡೆಯಲು ದಕ್ಷಿಣ ಕನ್ನಡ ಅಪರ ಆಯುಕ್ತರಿಗೆ ಮನವಿ

Tuesday, August 6th, 2019
bakrid cow

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಮತ್ತು ಗೋರಕ್ಷಕ ಸಂಘಟನೆಗಳಿಂದ ದಕ್ಷಿಣ ಕನ್ನಡ ಅಪರ ಆಯುಕ್ತರಾದ ಎಂ. ಜೆ. ರೂಪ ಇವರಿಗೆ ಬಕ್ರೀದ್ ನಿಮಿತ್ತ ಗೋಹತ್ಯೆ ತಡೆಯಲು ಅಗಷ್ಟ 6 , ಶುಕ್ರವಾರ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಂನವಯಕರಾದ ಶ್ರೀ ಚಂದ್ರ ಮೊಗೇರ್, ಶ್ರೀ ಯೋಗೀಶ್ ಅಶ್ವಥಪುರ, ಸೌ ಉಮಾ, ಶ್ರೀ ರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್, ವಿಭಾಗ ಪ್ರಧಾನ ಕಾರ್ಯದರ್ಶಿ ಹರೀಶ್ ಅಮ್ಟಾಡಿ,ಜಿಲ್ಲಾ ಅದ್ಯಕ್ಷ […]

ದಕ್ಷಿಣ ಕನ್ನಡ ಲೋಕಸಭೆಗೆ ಈ ಬಾರಿ ಬಿಜೆಪಿ ಅಭ್ಯರ್ಥಿ ಯಾರು ?

Saturday, March 2nd, 2019
Satyajith

ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಅಸಮಾಧಾನ ಗೊಂಡ ಇನ್ನೊಂದು ಬಣ ಆರ್ ಎಸ್ ಎಸ್ ನ ಕಟ್ಟಾಳು ಸತ್ಯಜಿತ್ ಸುರತ್ಕಲ್ ಅವರನ್ನು ಈ ಬಾರಿಯ ಲೋಕ ಸಭಾ ಅಭ್ಯಥಿಯನ್ನಾಗಿಸಲು ಸತ ಪ್ರಯತ್ನ ಮಾಡುತ್ತಿದೆ ಅದಕ್ಕಾಗಿ ಅಲ್ಲಲ್ಲಿ ಸತ್ಯಜಿತ್ ಸುರತ್ಕಲ್ ಅವರ ಫ್ಲೆಕ್ಸ್ ಹಾಕಿದ್ದಾರೆ. ಅಭಿಮಾನಿಗಳು ಜಿಲ್ಲೆಯಾದ್ಯಂತ ಹಾಕಿದ ಫ್ಲೆಕ್ಸ್ ಗಳು ಬಿಜೆಪಿ ಮುಂಖಡರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಅದರಲ್ಲೂ ಸತ್ಯಜಿತ್ ಅಭಿಮಾನಿಗಳ ಹೆಸರಿನಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸತ್ಯಜಿತ್‌ ನಮ್ಮ ಆಯ್ಕೆ ಎಂಬ […]