Blog Archive

ಕೊರೊನಾ ಮಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ಎರಡನೇ ಬಲಿ

Thursday, April 23rd, 2020
corona-death

ಮಂಗಳೂರು : ಬಂಟ್ವಾಳದ ಮಹಿಳೆಗೆ ಗುರುವಾರದಂದು ಪಾಸಿಟಿವ್ ದೃಢ ಪಟ್ಟ ಬೆನ್ನಲ್ಲೇ  ಕಸಬಾ ದ 75ರ  ವೃದ್ದೆ ಮೃತ ಪಟ್ಟಿರುವ ಅಘಾತಕಾರಿ ಸಂಗತಿಯೊಂದು  ಜಿಲ್ಲೆಯ ಜನತೆಗೆ ಆತಂಕ ಮೂಡಿಸಿದೆ. ಸೋಮವಾರದಂದು ಸೊಸೆ ಮೃತಪಟ್ಟಿದ್ದು, ಗುರುವಾರದಂದು ಅತ್ತೆ ಮೃತಪಟ್ಟಿದ್ದಾರೆ. ಬಂಟ್ವಾಳದ ಒಂದೇ ಕುಟುಂಬದವರು ಕೊರೊನಾದಿಂದ ಜಿಲ್ಲೆಯಲ್ಲಿ ಮೃತಪಟ್ಟಿರುವುದು ಆಘಾತಕಾರಿ ಸಂಗತಿ. ದ.ಕ. ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಎರಡನೇ ಬಲಿ ಪಡೆದುಕೊಂಡಿದೆ. ಬಂಟ್ವಾಳದಲ್ಲಿ ಈ ಹಿಂದೆ ಮೃತಪಟ್ಟಿದ್ದ ಮಹಿಳೆಯ ಅತ್ತೆಯಲ್ಲಿ ಗುರುವಾರದಂದು ಸೋಂಕು ದೃಢಪಟ್ಟಿತ್ತು. ಅದರಂತೆ ವೆನ್ಲಾಕ್ ಅಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ 75ರ ಹರೆಯದ ಮಹಿಳೆಗೆ […]

ದಕ್ಷಿಣ ಕನ್ನಡದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್, ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 16

Tuesday, April 21st, 2020
BC Road

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಒಂದು ಕೊರೊನಾ ಪಾಸಿಟಿವ್ ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ದಾಖಲಾದ ಪ್ರಕರಣಗಳ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಬಂಟ್ವಾಳದಲ್ಲಿ ಭಾನುವಾರ ಮೃತಪಟ್ಟ ಮಹಿಳೆ ಪಕ್ಕದ ಮನೆಯ 67 ವರ್ಷದ ಮಹಿಳೆಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಮಹಿಳೆಯ ಮನೆಯವರೂ ಸೇರಿದಂತೆ ಮಂಗಳವಾರ 9 ಮಂದಿಯನ್ನು ಕ್ವಾರಂಟೈನ್ನಲ್ಲಿರಿಸಿ, ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ. ಬಂಟ್ವಾಳ ರಸ್ತೆಗೆ ಮಣ್ಣು ಹಾಕಿ ಬಂದ್ ಮಾಡಲಾಗಿದೆ. ಸ್ಥಳಕ್ಕೆ ಸಹಾಯಕ ಕಮೀಷನರ್ ಮದನ್ ಮೋಹನ್ ಆಗಮಿಸಿ, ಸ್ಥಳ ಪರಿಶೀಲನೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಕೋವಿಡ್ 19 ಪ್ರಕರಣ ಪತ್ತೆ

Sunday, March 22nd, 2020
wenlock

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಮಾರ್ಚ್ 19ರಂದು ದುಬಾಯಿಯಿಂದ ಬಂದ ವಿಮಾನದಲ್ಲಿದ್ದ 22 ವರ್ಷದ ಯುವಕನಲ್ಲಿ ಕೋವಿಡ್ 19 ಪ್ರಕರಣ ದೃಢಪಟ್ಟ ವರದಿ ಲಭಿಸಿದೆ. ದುಬಾಯಿಯಿಂದ ಮಾರ್ಚ್ 19ರಂದು ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ 22 ವರ್ಷದ ಭಟ್ಕಳ ಮೂಲದ ಯುವಕನನ್ನು ಅಂದು ತಪಾಸಣೆ ನಡೆಸಿ ಆತನ ಗಂಟಲ ಸ್ರಾವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಮತ್ತು ಆ ದಿನವೇ ಈತನನ್ನು ನಗರದ ವೆನ್ಲಾಕ್ ಆಸ್ಪತ್ರೆಯ ಐಸೊಲೇಷನ್ ವಾರ್ಡ್ನಲ್ಲಿ ದಾಖಲಿಸಲಾಗಿತ್ತು. ಆ […]

ದಕ್ಷಿಣ ಕನ್ನಡ : 80 ಸ್ಥಳಗಳಲ್ಲಿ ಕೊರೊನಾ ತಪಾಸಣಾ ಕೇಂದ್ರ ಸ್ಥಾಪನೆ

Saturday, March 14th, 2020
corona

ಮಂಗಳೂರು: ರಾಜ್ಯದಲ್ಲಿ ಕೊರೊನಾ ಭೀತಿ ಆವರಿಸಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ, ಎನ್‌ಎಂಪಿಟಿ ಸೇರಿದಂತೆ 80 ಸ್ಥಳಗಳಲ್ಲಿಗಳಲ್ಲಿ ಕೊರೊನಾ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ವೆನ್ಲಾಕ್ ಮತ್ತು ಲೇಡಿಗೋಶನ್‌ ಜಿಲ್ಲಾಸ್ಪತ್ರೆಗಳಲ್ಲಿ ಮಾತ್ರವಲ್ಲದೆ, ಜಿಲ್ಲೆಯ 6 ಸಮುದಾಯ ಆರೋಗ್ಯ ಕೇಂದ್ರ, 66 ಪ್ರಾಥಮಿಕ ಆರೋಗ್ಯ ಕೇಂದ್ರ, 4 ತಾಲೂಕು ಆಸ್ಪತ್ರೆಗಳಲ್ಲಿ ಕೊರೊನಾ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಜನರು ಅಗತ್ಯ ಬಿದ್ದಲ್ಲಿ ಸನಿಹದ ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬಹುದು. ಎಲ್ಲ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು […]

ಬಕ್ರೀದ್ ನಿಮಿತ್ತ ಗೋಹತ್ಯೆ ತಡೆಯಲು ದಕ್ಷಿಣ ಕನ್ನಡ ಅಪರ ಆಯುಕ್ತರಿಗೆ ಮನವಿ

Tuesday, August 6th, 2019
bakrid cow

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಮತ್ತು ಗೋರಕ್ಷಕ ಸಂಘಟನೆಗಳಿಂದ ದಕ್ಷಿಣ ಕನ್ನಡ ಅಪರ ಆಯುಕ್ತರಾದ ಎಂ. ಜೆ. ರೂಪ ಇವರಿಗೆ ಬಕ್ರೀದ್ ನಿಮಿತ್ತ ಗೋಹತ್ಯೆ ತಡೆಯಲು ಅಗಷ್ಟ 6 , ಶುಕ್ರವಾರ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಂನವಯಕರಾದ ಶ್ರೀ ಚಂದ್ರ ಮೊಗೇರ್, ಶ್ರೀ ಯೋಗೀಶ್ ಅಶ್ವಥಪುರ, ಸೌ ಉಮಾ, ಶ್ರೀ ರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್, ವಿಭಾಗ ಪ್ರಧಾನ ಕಾರ್ಯದರ್ಶಿ ಹರೀಶ್ ಅಮ್ಟಾಡಿ,ಜಿಲ್ಲಾ ಅದ್ಯಕ್ಷ […]

ದಕ್ಷಿಣ ಕನ್ನಡ ಲೋಕಸಭೆಗೆ ಈ ಬಾರಿ ಬಿಜೆಪಿ ಅಭ್ಯರ್ಥಿ ಯಾರು ?

Saturday, March 2nd, 2019
Satyajith

ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಅಸಮಾಧಾನ ಗೊಂಡ ಇನ್ನೊಂದು ಬಣ ಆರ್ ಎಸ್ ಎಸ್ ನ ಕಟ್ಟಾಳು ಸತ್ಯಜಿತ್ ಸುರತ್ಕಲ್ ಅವರನ್ನು ಈ ಬಾರಿಯ ಲೋಕ ಸಭಾ ಅಭ್ಯಥಿಯನ್ನಾಗಿಸಲು ಸತ ಪ್ರಯತ್ನ ಮಾಡುತ್ತಿದೆ ಅದಕ್ಕಾಗಿ ಅಲ್ಲಲ್ಲಿ ಸತ್ಯಜಿತ್ ಸುರತ್ಕಲ್ ಅವರ ಫ್ಲೆಕ್ಸ್ ಹಾಕಿದ್ದಾರೆ. ಅಭಿಮಾನಿಗಳು ಜಿಲ್ಲೆಯಾದ್ಯಂತ ಹಾಕಿದ ಫ್ಲೆಕ್ಸ್ ಗಳು ಬಿಜೆಪಿ ಮುಂಖಡರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಅದರಲ್ಲೂ ಸತ್ಯಜಿತ್ ಅಭಿಮಾನಿಗಳ ಹೆಸರಿನಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸತ್ಯಜಿತ್‌ ನಮ್ಮ ಆಯ್ಕೆ ಎಂಬ […]

ಬೆಳ್ತಂಗಡಿಯಲ್ಲಿ ತೋಟಕ್ಕೆ‌ ಬಂದ ಕಾಡಾನೆ: ಭೀತಿಯಲ್ಲಿ ಗ್ರಾಮಸ್ಥರು

Friday, November 2nd, 2018
elephant

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟುವಿನಲ್ಲಿ ಕಾಡಾನೆಯೊಂದು ತೋಟಕ್ಕೆ ಬಂದು ಭೀತಿ ಹುಟ್ಟಿಸಿದ ಘಟನೆ ನಡೆದಿದೆ. ಭಾರಿ ಗಾತ್ರದ ಒಂಟಿ ಸಲಗವು ಇಂದಬೆಟ್ಟು ಚರ್ಚ್ನ ಹಿಂಬದಿ ಹನಿಬೆಟ್ಟು ಭರತ್ ಕುಮಾರ್ ಎಂಬುವವರ ತೋಟಕ್ಕೆ ನುಗ್ಗಿತ್ತು. ಇದರಿಂದ ಭಯಗೊಂಡ ಅಕ್ಕಪಕ್ಕದ ಮನೆಯ ನಾಯಿಗಳ ಬೊಗಳುವಿಕೆಯನ್ನು ಕೇಳಿದ ಸ್ಥಳೀಯರು ತೋಟಕ್ಕೆ ಬಂದು ನೋಡಿದಾಗ ಕಾಡಾನೆ ತೋಟದುದ್ದಕ್ಕೂ ನಡೆದುಕೊಂಡು ಹೋಗಿತ್ತು. ಆದರೆ ಆನೆಯು ತೋಟಕ್ಕೆ ಯಾವುದೇ ರೀತಿ ಹಾನಿ ಉಂಟು ಮಾಡದೆ ಕಾಡಿಗೆ ತೆರಳಿದೆ ಎಂದು ತಿಳಿದು ಬಂದಿದೆ. […]

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ

Wednesday, October 17th, 2018
arrest

ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಆರೋಪಿತನಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆ ಸಹಿತ ಹಲವು ಠಾಣಾ ವ್ಯಾಪ್ತಿಗಳಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ತಾಲೂಕಿನ ತೋಡಾರು ಗ್ರಾಮದ ಮಿಜಾರು ಹಿದಾಯತುಲ್ಲಾ ನಗರ ನಿವಾಸಿ ಮಹಮ್ಮದ್ ಫೈಝಲ್ ಅಲಿಯಾಸ್ ತೋಡಾರ್ ಫೈಝಲ್ ಅಲಿಯಾಸ್ ಕ್ಯಾಬರೆ ಫೈಝಲ್ (28) ಪೊಲೀಸರಿಗೆ ಬೇಕಾಗಿದ್ದು ಆತ ತಲೆಮರೆಸಿಕೊಂಡಿದ್ದ. ಆದರೆ, ಆರೋಪಿಯನ್ನು ಮಂಗಳೂರು ರೌಡಿ ನಿಗ್ರಹದಳದ ಪೊಲೀಸರು ಇದೀಗ ಬಂಧಿಸಿದ್ದಾರೆ. ಮಂಗಳೂರು ಗ್ರಾಮರಂತರ ಪೊಲೀಸ್ ಠರಣೆ ಸಹಿತ ವಿವಿಧ […]

ಕುದ್ರೋಳಿ ಕಸಾಯಿಖಾನೆ ವಿವಾದ: ಯು ಟಿ ಖಾದರ್ ಸ್ಪಷ್ಟನೆ‌

Monday, October 8th, 2018
u-t-kadher

ಮಂಗಳೂರು: ಕುದ್ರೋಳಿ ಕಸಾಯಿಖಾನೆ ವಿವಾದಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಸ್ಪಷ್ಟನೆ‌ ನೀಡಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಟಿಯಲ್ಲಿ, ಕುದ್ರೋಳಿ ಕಸಾಯಿಖಾನೆಗೆ 15 ಕೋಟಿ ರೂ. ಸ್ಮಾರ್ಟ್ ಯೋಜನೆಯ ಅನುದಾನ ನೀಡುವೆ ಎಂದು ಅವರು ಹೇಳಿದ್ದರು. ಇಂದು ಈ ವಿಚಾರ ವಿವಾದಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಚಿವ ಖಾದರ್ ಪ್ರತಿಕ್ರಿಯಿಸಿದ್ದಾರೆ. ನಾವು ತಿನ್ನುವ ಆಹಾರ ಸ್ವಚ್ಛವಾಗಿರಬೇಕು. ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಕಸಾಯಿಖಾನೆಗೆ ಜನರ ಆರೋಗ್ಯಕ್ಕೆ ಹಾನಿಯಾಗದ ಮಾಂಸ ಬರಬೇಕು. ಕಸಾಯಿಖಾನೆ ಪರಿಸರ […]

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ: ತೈಲಕ್ಕೆ ಕೇರಳಕ್ಕಿಂತ ಕಡಿಮೆ ದರ

Monday, September 24th, 2018
petrol

ಮಂಗಳೂರು: ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ಆಗಿರುವುದರಿಂದ ಕರ್ನಾಟಕ ಮತ್ತು ಕೇರಳದ ಗಡಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ತಲಪಾಡಿಯಲ್ಲಿ ಕೇರಳದ ವಾಹನ ಸವಾರರಿಗೆ ಸಂತಸ ತಂದಿದೆ. ಕೇರಳದಿಂದ ಉತ್ತರ ಭಾರತಕ್ಕೆ ಸಂಪರ್ಕಿಸುವ ಹೆದ್ದಾರಿಯಲ್ಲಿರುವ ತಲಪಾಡಿಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತವೆ. ತಲಪಾಡಿಯ 2 ಪೆಟ್ರೋಲ್ ಪಂಪ್ನಲ್ಲಿ 1 ಕರ್ನಾಟಕ ವ್ಯಾಪ್ತಿಯಲ್ಲಿದೆ. ಇನ್ನೊಂದು ಕೇರಳ ರಾಜ್ಯದಲ್ಲಿದೆ. ಅರ್ಧ ಕಿಲೋ ಮೀಟರ್ ಅಂತರದಲ್ಲಿರುವ ಈ ಎರಡು ಪೆಟ್ರೋಲ್ ಪಂಪ್ನಲ್ಲಿ ಇದೀಗ ಬೆಲೆ ವ್ಯತ್ಯಾಸವಾಗಿದ್ದು, 1 ಪೆಟ್ರೋಲ್ […]