ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 5 ರಿಂದ ರಾತ್ರಿ ನಿರ್ಬಂಧ ಸಡಿಲಿಕೆ
Thursday, August 4th, 2022
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧಿಸಲಾಗಿದ್ದ ರಾತ್ರಿ ನಿರ್ಬಂಧ ಕ್ರಮಗಳನ್ನು ಆ. 5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ. ಆ. 5 ರಿಂದ ಅಂಗಡಿ ಮುಂಗಟ್ಟುಗಳನ್ನು ರಾತ್ರಿ 9 ರವರೆಗೆ ತೆರೆಯಲು ಅವಕಾಶ ನೀಡಲಾಗಿದ್ದು , ಮದ್ಯದಂಗಡಿಗಳನ್ನು ನಾಳೆಯಿಂದ ಸಂಜೆ 6 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. 144 ಸೆಕ್ಷನ್ ಅಡಿಯಲ್ಲಿ ವಿಧಿಸಲಾದ ನಿಷೇಧಾಜ್ಞೆ ಹಾಗೂ ಇತರ ನಿರ್ಬಂಧಗಳು ಮೊದಲಿನಂತೆಯೇ ಮುಂದುವರಿಯಲಿದೆ.