ದ್ವಿತೀಯ ಪಿಯುಸಿ ಫಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ

Wednesday, April 10th, 2024
ದ್ವಿತೀಯ ಪಿಯುಸಿ ಫಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ 97.37 ಶೇಕಡ ದೊಂದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. 96.80 ಶೇಕಡದೊಂದಿಗೆ ಉಡುಪಿ ದ್ವಿತೀಯ ಸ್ಥಾನದಲ್ಲಿದ್ದರೆ, ಗದಗ ಜಿಲ್ಲೆ 72.86 ಶೇಕಡ ದೊಂದಿಗೆ ಕೊನೆಯ ಸ್ಥಾನದಲ್ಲಿದೆ. ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ […]

ನಿಫಾ ಸೋಂಕು ಹರಡದಂತೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಲ್ಲಿ ಮುನ್ನೆಚ್ಚರಿಕೆ

Wednesday, September 13th, 2023
ನಿಫಾ ಸೋಂಕು ಹರಡದಂತೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಲ್ಲಿ ಮುನ್ನೆಚ್ಚರಿಕೆ

ಕಾಸರಗೋಡು : ಹಕ್ಕಿಗಳು ಕಚ್ಚಿದ ಅಥವಾ ನೆಲದ ಮೇಲೆ ಬಿದ್ದ ಹಣ್ಣುಗಳನ್ನು ಬಳಸಬೇಡಿ. ಹಣ್ಣುಗಳನ್ನು ಚೆನ್ನಾಗಿ ತೊಳೆದ ನಂತರವೇ ತಿನ್ನಿ. ತೆರೆದ ಪಾತ್ರೆಗಳಲ್ಲಿ ಸಂಗ್ರಹಿಸಲಾದ ಶೀತಲ ಪಾನೀಯಗಳನ್ನು ತಪ್ಪಿಸಿ. ನಿಫಾ ಬಗ್ಗೆ ಸುಳ್ಳು ಸುದ್ದಿ ಮತ್ತು ಅಪಪ್ರಚಾರ ಗಳ ಬಗ್ಗೆ ಗಮನ ಹರಿಸಬೇಕು. ಸರಕಾರ, ಆರೋಗ್ಯ ಇಲಾಖೆಯ ಆದೇಶ ಗಳನ್ನು ಪಾಲಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ. ರಾಮದಾಸ್ ಮಾಹಿತಿ ನೀಡಿದ್ದಾರೆ. ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲೂ ವಿಶೇಷ ನಿಗಾವಹಿಸಬೇಕು ಯಾವುದೇ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭಗೊಂಡ 1ರಿಂದ 5ನೇ ತರಗತಿ ಪ್ರಾಥಮಿಕ ತರಗತಿಗಳು

Monday, October 25th, 2021
School Reopen

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ಒಂದೂವರೆ ವರ್ಷ ಮುಚ್ಚಿದ್ದ ಶಾಲೆಗಳು ಮತ್ತೆ ಆರಂಭಗೊಂಡಿದೆ.  1ರಿಂದ 5ನೇ ತರಗತಿ ಮಕ್ಕಳು ಮತ್ತೆ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಸೋಮವಾರ ಕಿರಿಯ ಪ್ರಾಥಮಿಕ ಶಾಲೆಗಳು ಪುನಾರಂಭ ಗೊಂಡಿದೆ. ಜಿಲ್ಲೆಯಲ್ಲಿ 1ರಿಂದ 5ನೇ ತರಗತಿ‌ ವರೆಗಿನ 1,57,563 ಮಕ್ಕಳಿದ್ದು, ಮೊದಲ ದಿನ ಶಾಲೆಗೆ ಆಗಮಿಸಿದ್ದಾರೆ. ಹಾಜರಾತಿ ಕಡ್ಡಾಯ ಇಲ್ಲದಿದ್ದರೂ ಮಕ್ಕಳು ಉತ್ಸುಕರಾಗಿಯೇ ತರಗತಿಗಳಿಗೆ ಹಾಜರಾದರು. ಶನಿವಾರವೇ ಶಾಲಾ ಕೊಠಡಿಗಳು ಆವರಣವನ್ನು ಸ್ಯಾನಿಟೈಸ್ ಮಾಡಿ ಇಡಲಾಗಿತ್ತು. ಸೋಮವಾರ ಮುಂಜಾನೆ ಎಂದಿಗಿಂತ ಬೇಗ ಆಗಮಿಸಿದ ಶಿಕ್ಷಕರು […]

ಆನಂದ ಪೂಜಾರಿ ಹಳೆಯಂಗಡಿ ನಿಧನ

Friday, August 27th, 2021
Ananda Poojary

ಮುಂಬಯಿ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಹಳೆಯಂಗಡಿ ಸಾಯಿಕೃಪಾ ನಿವಾಸಿ, ಕೊಡುಗೈದಾನಿ, ಸಾಮಾಜಿಕ ಚಿಂತಕ ಆನಂದ ಪೂಜಾರಿ (85.) ಇಂದು ಸಂಜೆ ಹಳೆಯಂಗಡಿ ಅಲ್ಲಿನ ನಿವಾಸದಲ್ಲಿ ನಿಧನರಾದರು. ಮುಂಬಯಿ ಅಲ್ಲಿನ ಹೆಸರಾಂತ ಸಾಯಿಕೇರ್ ಸಂಸ್ಥೆಯ ಆಡಳಿತ ನಿರ್ದೇಶಕ, ಮದರ್ ಇಂಡಿಯಾ ನೈಟ್ ಹೈಸ್ಕೂಲ್ ಫೋರ್ಟ್ (ಮುಂಬಯಿ) ಇದರ ಅಧ್ಯಕ್ಷ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟç ಸಲಹಾ ಸಮಿತಿ ಸದಸ್ಯ ಸುರೇಂದ್ರ ಎ.ಪೂಜಾರಿ ಸೇರಿದಂತೆ ಮೃತರು ಏಳು ಗಂಡು, ಒಂದು ಹೆಣ್ಣು ಹಾಗೂ ಅಪಾರ ಬಂಧು […]

ರಸ್ತೆ ಅಫಘಾತ : ಮೃತ ವ್ಯಕ್ತಿಯ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಹಸ್ತಾಂತರ

Sunday, August 8th, 2021
noor

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ವಾಹನ ಅಪಘಾತದಲ್ಲಿ ಮೃತರಾಗಿದ್ದರು. ಅವರ ಕುಟುಂಬಕ್ಕೆ ಇದೀಗ 25 ಲಕ್ಷ ರೂ. ಪರಿಹಾರ ಮೊತ್ತ ಬಿಡುಗಡೆಯಾಗಿದೆ. ಒಮಾನ್‌ ದೇಶದ ಮಬೇಲದಲ್ಲಿ 2 ವರ್ಷಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ತೀರಾ ಬಡಕುಟುಂಬದ ಯುವಕ ಬೆಳ್ತಂಗಡಿ ತಾಲೂಕಿನ ಸುನ್ನತ್‌ ಕೆರೆ ನಿವಾಸಿ ನೂರ್‌ ಮುಹಮ್ಮದ್‌ (25) ಅವರು “ಮಸ್ಕತ್‌ ವಾಟರ್‌’ ಬಾಟಲಿ ನೀರು ಕಂಪೆನಿಯಲ್ಲಿ ಸೇಲ್ಸ್‌ಮನ್‌ ಆಗಿ ಉದ್ಯೋಗಕ್ಕೆ ಸೇರಿಕೊಂಡಿದ್ದರು. 2019ರ ಮೇ 11ರಂದು ಸಂಭವಿಸಿದ ವಾಹನ ಅಪಘಾತದಲ್ಲಿ ಅವರು ಮತ್ತು ಚಾಲಕ […]

ರೈಲ್ವೆ ಬೇಡಿಕೆಗಳ ಈಡೇರಿಕೆಗಾಗಿ ರೈಲ್ವೆ ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ

Wednesday, August 4th, 2021
nalin-Kumar-Kateel

ಮಂಗಳೂರು  :  ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಶ್ಣವ್ ರವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ಈ ಕೆಳಕಂಡ ವಿಷಯಗಳ ಕುರಿತು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು. ಆಡಳಿತಾತ್ಮಕ ಬದಲಾವಣೆ. 1. ಮಂಗಳೂರು ತೋಕುರು ರೈಲ್ವೆ ಲೈನ್ ನ್ನು ಸೌತ್ ವೆಸ್ಟರ್ನ್ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವ ಬಗ್ಗೆ. 2. ಹಾಸನ ಮಂಗಳೂರು ರೈಲ್ವೆ ಅಭಿವೃದ್ಧಿ ಕಂಪೆನಿಯನ್ನು […]

ಕೊರೋನಾ ಹೆಚ್ಚಳ – ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳು ರದ್ದು

Tuesday, August 3rd, 2021
Mangalore University

  ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಸರ್ಕಾರವು ಉಲ್ಲೇಖದಂತೆ ಕಣ್ಗಾವಲು , ನಿಯಂತ್ರಣ ಮತ್ತು ಜಾಗೃತೆಗೆ ಸಂಬಂಧಿಸಿದಂತೆ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ಮಾಡಲು ನಿರ್ದೇಶಿಸಿರುತ್ತದೆ. ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಅಂತರ್ ಜಿಲ್ಲೆಯಾದ ಕೇರಳ ರಾಜ್ಯದ ಕಾಸರಗೋಡು […]

ರವಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಹೆಚ್ಚು 410 ಕೊರೊನಾ ಸೋಂಕು ಪತ್ತೆ, 6 ಮಂದಿ ಸಾವು, ಉಡುಪಿ ಜಿಲ್ಲೆ 162

Sunday, August 1st, 2021
corona virus

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ರವಿವಾರ ಪತ್ತೆಯಾದ ಕೇಸುಗಳ ಪಟ್ಟಿಯಲ್ಲಿ ದ.ಕ. ಜಿಲ್ಲೆಯಲ್ಲಿ ಅತಿಹೆಚ್ಚು (410) ಪಾಸಿಟಿವ್ ಪ್ರಕರಣ ವರದಿಯಾಗಿವೆ. ದ.ಕ. ಜಿಲ್ಲೆಯಲ್ಲಿ ರವಿವಾರ 410 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಇದೇ ವೇಳೆ 6 ಮಂದಿ ಸಾವನ್ನಪ್ಪಿದ್ದು, 264 ಮಂದಿ ಗುಣಮುಖರಾಗಿದ್ದಾರೆ. ಸದ್ಯ 2,943 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 1,00,780 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 1,430 ಮಂದಿ ಸಾವನ್ನಪ್ಪಿದ್ದಾರೆ. 96,407 ಮಂದಿ ಗುಣಮುಖ ರಾಗಿದ್ದಾರೆ. ಒಟ್ಟು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23 ರಿಂದ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ

Tuesday, June 22nd, 2021
Kota Srinivas Poojary

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಿಂದ ಬೆಳಗ್ಗೆಯಿಂದ 6 ರಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ ಕಾರಣ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ‌. ಪ್ರಸ್ತುತ ನಾವು ಕಠಿಣ ಪರಿಸ್ಥಿತಿಯಲ್ಲಿ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳಪೆ ನೆಟ್ ವರ್ಕ್ ಒದಗಿಸುವ ಮೊಬೈಲ್ ಕಂಪೆನಿಗಳು, ಕ್ರಮಕ್ಕೆ ಸೂಚನೆ

Tuesday, June 1st, 2021
mobile-network-issue

ಮಂಗಳೂರು : ಬೆಂಗಳೂರು ಅಥವಾ ಮುಂಬೈಗೆ ಹೋಲಿಸಿದರೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೊಬೈಲ್ ಕಂಪೆನಿಗಳು ಬಹುತೇಕ ಕಳಪೆ ನೆಟ್ ವರ್ಕ್ ಒದಗಿಸುತ್ತಿವೆ. ಪದೇ ಪದೇ ಫೋನ್ ಡಿಸ್ ಕನೆಕ್ಷನ್, ಇಂಟರ್ನೆಟ್ ವೇಗ ಕಡಿತ ದ ಸಮಸ್ಯೆ ಎದುರಾಗಿದೆ.  ಕಂಪೆನಿಗಳ ಗ್ರಾಹಕ ಸೇವಾ ಸಿಬ್ಬಂದಿಗಳನ್ನು ಸಂಪರ್ಕಿಸಲು ಹರಸಾಹಸ ಪಡುವ ಪರಿಸ್ಥಿತಿ ಎದುರಾಗಿದೆ. ದೂರು ನೀಡಲು ಕನಿಷ್ಠ ಹತ್ತು ನಿಮಿಷಗಳಾದರೂ ಕಾಯುವ ಪರಿಸ್ಥಿತಿ ಉಂಟಾಗಿದೆ. ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಮೊಬೈಲ್ ನೆಟ್‍ವರ್ಕ್ ಸೌಲಭ್ಯ ಒದಗಿಸುವುದರೊಂದಿಗೆ ಮೊಬೈಲ್ ಸೇವಾ ಪೂರೈಕೆದಾರರು ಉತ್ತಮ ಸೇವೆಯನ್ನು ಒದಗಿಸಬೇಕು […]