Blog Archive

ಅಡಿಕೆ ವ್ಯಾಪಾರಿಯೊಬ್ಬರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು: 5ಲಕ್ಷ ರೂ ಹಾಗೂ ಮೊಬೈಲ್‌ ದೋಚಿ ಪರಾರಿ

Tuesday, January 24th, 2017
Sulya1

ಸುಳ್ಯ: ಅಡಿಕೆ ವ್ಯಾಪಾರಿಯೊಬ್ಬರು ತಮ್ಮ ಕಾರಿನಲ್ಲಿ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಪಿಸ್ತೂಲ್‌ ಮತ್ತು ತಲವಾರ್‌ ತೋರಿಸಿ ಕಾರಲ್ಲಿದ್ದ 5ಲಕ್ಷ ರೂ ಹಾಗೂ ಮೊಬೈಲ್‌ಗಳನ್ನು ದೋಚಿ ಪರಾರಿಯಾಗಿರುವ ಘಟನೆ ಐವರ್ನಾಡಿ ಬಳಿ ನಡೆದಿದೆ. ಅಡಿಕೆ ವ್ಯಾಪಾರಿ ಅಬ್ದುಲ್ ಖಾದರ್ ಎಂಬುವರು ತನ್ನ ಮಿತ್ರ ಶಫೀಕ್ ಮತ್ತು ಕೆಲಸದವರೊಂದಿಗೆ ಇಂದು ಬೆಳಗ್ಗೆ ಬೆಳ್ಳಾರೆಯಿಂದ ಗುತ್ತಿಗಾರಿಗೆ ತನ್ನ ಕಾರಲ್ಲಿ ಹೊರಟಿದ್ದರು. ಈ ವೇಳೆ ಕಾರು ಐವರ್ನಾಡು ತಲುಪುತ್ತಿದ್ದಂತೆ ಹಿಂದಿನಿಂದ ಹಿಂಬಾಲಿಸಿಕೊಂಡು ಬಂದ ಕಾರೊಂದು ಇವರ ಕಾರಿನ ಮುಂದೆ ಬಂದು ಅಡ್ಡ […]

ಇಬ್ಬರು ಯುವಕರಿಗೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿ

Tuesday, December 20th, 2016
two-youth-

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಪನೆ ಎಂಬಲ್ಲಿ ದುಷ್ಕರ್ಮಿಗಳು ಇಬ್ಬರು ಯುವಕರಿಗೆ ಚೂರಿ ಇರಿದು ಇಬ್ಬರು ಯುವಕರಿಗೆ ಚೂರಿ ಇರಿದು ಪರಾರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಕೇಂದ್ರ ಸ್ಥಾನವಾದ ಬಿ.ಸಿ. ರೋಡ್‌‌‌ನಿಂದ ಪೊಳಲಿ ದೇವಸ್ಥಾನಕ್ಕೆ ತೆರಳುವ ಮಾರ್ಗಮಧ್ಯದಲ್ಲಿ ಇರುವ ಕಲ್ಪನೆ ಎಂಬಲ್ಲಿ ಬೈಕ್‌‌‌ನಲ್ಲಿ ಸಾಗುತ್ತಿದ್ದ ಮಲ್ಲೂರಿನ ಜುನೈದ್ ಮತ್ತು ಶಾಂತಿಯಂಗಡಿ ನಿವಾಸಿ ಸಿನಾನ್ ಎಂಬುವರ ಮೇಲೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕಿನಲ್ಲಿ ಬಂದ ಮೂವರು ಇರಿದು ಪರಾರಿಯಾಗಿದ್ದು, […]

ತಲಪಾಡಿಯ ತಚ್ಚಣಿಯಲ್ಲಿ ಮಹಿಳೆಗೆ ಪಿಸ್ತೂಲು ತೋರಿಸಿ ಹಲ್ಲೆ

Wednesday, July 10th, 2013
Talapady shotout

ಮಂಗಳೂರು: ಕೇರಳ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಕೇಶವ್.ಬಿ ಅವರ ಮನೆಯೊಳಗೆ ಮಂಗಳವಾರ ಬೆಳಿಗ್ಗೆ 8.00 ಗಂಟೆ ಸುಮಾರಿಗೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಗೆ ಪಿಸ್ತೂಲು ತೋರಿಸಿ ಬೆದರಿಸಿ ಅವರಿಗೆ ಹಲ್ಲೆ ನಡೆಸಿದ ಘಟನೆ ತಲಪಾಡಿಯ ತಚ್ಚಣಿ ಸಮೀಪದ ಮಂಡಿ ಕಟ್ಟೆಯಲ್ಲಿ ನಡೆದಿದೆ. ದುಷ್ಕರ್ಮಿಗಳಿಬ್ಬರ ಪೈಕಿ ಓರ್ವ ಏಕಾಏಕಿ ಮನೆಯೊಳಗೆ ನುಗ್ಗಿ ಅಡುಗೆ ಕೋಣೆಯಲ್ಲಿದ್ದ  ಸಾಧನಾ ಕೇಶವ್ ಅವರಿಗೆ ಪಿಸ್ತೂಲು ತೋರಿಸಿ ಬೆದರಿಸಿದ್ದನು. ಮನೆಯೊಳಗೆ `ಯಾರಿದ್ದಾರೆಂದು’ ಪ್ರಶ್ನಿಸಿದ ಬಳಿಕ ಅವರ ಮೊಬೈಲಿನಿಂದ ತಾನು […]

ಕಾಸರಗೋಡು ಯುವಕನ ಕೊಲೆ, 7ಮಂದಿಯ ವಿರುದ್ಧ ದೂರು ದಾಖಲು ; ಒಂದು ವಾರ ನಿಷೇಧಾಜ್ಞೆ ಜಾರಿ

Monday, July 8th, 2013
Kasaragod youth Murder

ಕಾಸರಗೋಡು : ಕಾಸರಗೋಡು ಸಮೀಪದ ವಿದ್ಯಾನಗರ, ನುಳ್ಳಿಪಾಡಿಯ ಜೆಪಿ ನಗರ ನಿವಾಸಿ ಟಿ.ಎ. ಸಾಬೀದ್(18) ತನ್ನ ಸ್ನೇಹಿತನ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಇರಿದು  ಕೊಲೆ ಮಾಡಿದ  ಘಟನೆ ಭಾನುವಾರ ನಡೆದಿದೆ. ಟಿ.ಎ. ಸಾಬೀದ್ ಕಾಸರಗೋಡು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಭಾನುವಾರ ಬೆಳಗ್ಗೆ ಗೆಳೆಯ ರಶೀದ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಇನ್ನೊಂದು ಬೈಕ್‌ನಲ್ಲಿ ಬಂದ ತಂಡವೊಂದು ಇರಿದು ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡ ಸಾಬೀದ್ ನನ್ನು ಸ್ಥಳೀಯರು ಕೂಡಲೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ […]