Blog Archive

ಮೊದಲ ಹಂತದಲ್ಲಿ ಜೆಡಿಎಸ್‌ನ 9 ಶಾಸಕರಿಗೆ ಸಚಿವ ಸ್ಥಾನ: ಹೆಚ್.ಡಿ.ಕುಮಾರಸ್ವಾಮಿ

Tuesday, June 5th, 2018
kumarswamy-2

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮಂತ್ರಿಮಂಡಲ ರಚನೆಯ ಮೊದಲ ಹಂತದಲ್ಲಿ ಜಾತ್ಯತೀತ ಜನತಾ ದಳದ 9 ಮಂದಿ ಶಾಸಕರಿಗೆ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಥಮ ಹಂತದಲ್ಲಿ ತಮ್ಮ ಪಕ್ಷದ 8 ರಿಂದ 9 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ಚೀಕರಿಸಲಿದ್ದಾರೆ. ಇನ್ನು ಮೂರು ನಾಲ್ಕು ಸಚಿವ ಸ್ಥಾನಗಳ ಬಗ್ಗೆ ಆಯ್ಕೆ ನಡೆಯಲಿದೆ. ಸಂಪುಟದಲ್ಲಿ ಸ್ಥಾನ ಮತ್ತು ಖಾತೆಗಳ ಹಂಚಿಕೆ ಬಗ್ಗೆ ಜೆಡಿಎಸ್ ಶಾಸಕರಲ್ಲಿ […]

ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಕೊನೆಗೂ ಖಾತೆ ಹಂಚಿಕೆ… ಯಾವ ಪಕ್ಷಕ್ಕೆ ಯಾವ ಖಾತೆ?

Friday, June 1st, 2018
g-parameshwara

ಬೆಂಗಳೂರು: ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಕೊನೆಗೂ ಖಾತೆ ಹಂಚಿಕೆ ಮಾಡಿಕೊಂಡಿವೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಹಾಗೂ ಡಿಸಿಎಂ ಪರಮೇಶ್ವರ್‌ ಬೆಳಗ್ಗೆ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಇಬ್ಬರ ನಡುವೆ ಖಾತೆ ಹಂಚಿಕೆ ನಿರ್ಧಾರಕ್ಕೆ ಬರಲಾಯ್ತು. ಇದೀಗ ಒಪ್ಪಂದ ಪ್ರಕಾರ ಜೆಡಿಎಸ್‌ಗೆ 12 ಹಾಗೂ ಕಾಂಗ್ರೆಸ್‌ 22 ಖಾತೆಗಳನ್ನು ಹಂಚಿಕೊಳ್ಳಲಾಗಿದೆ. ಖಾತೆಗಳ ಹಂಚಿಕೆ ವಿವರ ಇಂತಿದೆ: ಜೆಡಿಎಸ್‌: 1. ಮಾಹಿತಿ, ಇಂಟೆಲಿಜೆನ್ಸ್‌‌, ಪ್ಲಾನಿಂಗ್‌ ಆ್ಯಂಡ್‌ ಸ್ಟ್ಯಾಟಿಟಿಕ್ಸ್‌‌, 2. ಹಣಕಾಸು ಮತ್ತು ಅಬಕಾರಿ […]

‘ಬಹುಮತ ಸಾಬೀತು ದಿನವೇ ಬಿದ್ದು ಹೋಗಲಿದೆ ಸಮ್ಮಿಶ್ರ ಸರ್ಕಾರ’

Wednesday, May 23rd, 2018
bjp-strike

ಬಳ್ಳಾರಿ: ಈಗಾಗಲೇ ಕಾಂಗ್ರೆಸ್‌‌ನ 20ಕ್ಕೂ ಹೆಚ್ಚು ಶಾಸಕರು ತೀವ್ರ ಅಸಮಾಧಾನಗೊಂಡಿದ್ದು, ಬಹುಮತ ಸಾಬೀತು ದಿನವೇ ಜೆಡಿಎಸ್‌‌‌-ಕಾಂಗ್ರೆಸ್‌‌ನ ಸರ್ಕಾರ ಬಿದ್ದು ಹೋಗಲಿದೆ ಎಂದು ಶಾಸಕ ಸೋಮಶೇಖರ ರೆಡ್ಡಿ ಹೇಳಿದರು. ಪಕ್ಷದ ಕಾರ್ಯಕರ್ತರೊಂದಿಗೆ ನಗರದ ಗಡಿಗಿ ಚೆನ್ನಪ್ಪ ವೃತ್ತದಲ್ಲಿ ರಾಜ್ಯದಲ್ಲಿ ಅಪವಿತ್ರ ಮೈತ್ರಿಯ ಸರ್ಕಾರ ರಚನೆ ಆಗುವುದನ್ನು ವಿರೋಧಿಸಿ ಕರಾಳ ದಿನಾಚರಣೆ ಹಿನ್ನೆಲೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರದ ಜಾಯಮಾನವೆಂದರೆ ಇನ್ನೊಬ್ಬರ ಕಾಲೆಳೆಯುವುದಾಗಿದೆ. ಈ ಹಿಂದೆ ದೇವೇಗೌಡರಿಗೆ ಬೆಂಬಲ ನೀಡಿ ಪ್ರಧಾನಿ ಮಾಡಿ ನಂತರ […]

ಬಹುಮತ ಸಾಬೀತುಪಡಿಸುವಲ್ಲಿ ಬಿಎಸ್‌ವೈ ವಿಫಲರಾಗ್ತಾರೆ: ರೇವಣ್ಣ

Friday, May 18th, 2018
revanna

ಬೆಂಗಳೂರು: ನನಗೆ ವಿಶ್ವಾಸವಿದೆ, ಬಹುಮತ ಸಾಬೀತುಪಡಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಫಲರಾಗುತ್ತಾರೆ ಎಂದು ಶಾಸಕ ಹೆಚ್.ಡಿ.ರೇವಣ್ಣ ಹೇಳಿದರು. ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಮತ ಸಾಬೀತು ಮಾಡಿ ನಾವು ಸರ್ಕಾರವನ್ನು ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾಳೆ ಬಹುಮತ ಸಾಬೀತು ಪಡಿಸಲು ನಮಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಯಾವುದೇ ಶಾಸಕರು ಅವರೊಂದಿಗೆ ಹೋಗುವುದಿಲ್ಲ ಎಂದು ಹೇಳಿದರು. ಕುಮಾರಸ್ವಾಮಿಯವರು ಆಗಮಿಸಿದ ವೇಳೆ ಅವರನ್ನು ಮಾತನಾಡಿಸಲು ಮುಂದಾದಾಗ, ಈಗಾಗಲೇ ಸುಪ್ರೀಂಕೋರ್ಟ್ ತೀರ್ಪಿನ […]

ದೇವೇಗೌಡರಿಗೆ 86ನೇ ಜನ್ಮದಿನದ ಸಂಭ್ರಮ, ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಜೆಡಿಎಸ್‌‌ ವರಿಷ್ಠ

Friday, May 18th, 2018
ದೇವೇಗೌಡರಿಗೆ 86ನೇ ಜನ್ಮದಿನದ ಸಂಭ್ರಮ, ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಜೆಡಿಎಸ್‌‌ ವರಿಷ್ಠ

ಹೈದರಾಬಾದ್: ಮಾಜಿ ಪ್ರಧಾನಿ, ಹಿರಿಯ ರಾಜಕಾರಣಿ, ಜೆಡಿಎಸ್‌‌ ವರಿಷ್ಠ ಹೆಚ್‌‌.ಡಿ.ದೇವೇಗೌಡ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಇಂದು 86ನೇ ವಸಂತಕ್ಕೆ ಕಾಲಿಟ್ಟಿರುವ ಗೌಡರು, ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. 1933ರ ಮೇ 18ರಂದು ಜನಿಸಿರುವ ದೇವೇಗೌಡರು, ದೇಶದ ಪ್ರಧಾನಿಯಾದ ಏಕೈಕ ಕನ್ನಡಿಗರು ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ರಾಜ್ಯ ಮಾತ್ರವಲ್ಲದೇ ದೇಶಾದ್ಯಂತ ತಮ್ಮದೇ ಆದ ವರ್ಚಸ್ಸನ್ನು ಗೌಡರು ಹೊಂದಿದ್ದಾರೆ. 7 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದ ಅವರು 1994ರಿಂದ 1996ರವರೆಗೂ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದಾದ ನಂತರ […]

‘ಮೋದಿಗೆ ಅಡ್ವಾಣಿಯವರ ಮೇಲೆ ಇಲ್ಲದ ಮಮಕಾರ ದೇವೇಗೌಡರ ಮೇಲೇಕೆ!: ಜೈವೀರ್ ಶೇರ್ಗಿಲ್ ವ್ಯಂಗ್ಯ

Wednesday, May 2nd, 2018
advaini

ಮಂಗಳೂರು: ಮೋದಿಯವರಿಗೆ ತನ್ನ ರಾಜಕೀಯ ಗುರು ಎಲ್.ಕೆ.ಅಡ್ವಾಣಿಯವರ ಮೇಲೆ ಇಲ್ಲದ ಮಮಕಾರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೇಲೆ ಹೇಗೆ ಉಕ್ಕಿ ಬಂತು ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜೈವೀರ್ ಶೇರ್ಗಿಲ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಪ್ರಧಾನಿಯವರೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮತದಾರರನ್ನು ದಾರಿ ತಪ್ಪಿಸುತ್ತಿವೆ. ಒಂದು ಕಡೆಯಿಂದ ದೇವೇಗೌಡರು ಬಿಜೆಪಿಯೊಂದಿಗೆ ಕೈಜೋಡಿಸಿದರೆ ನನ್ನ ಮಗನನ್ನು ಕುಟುಂಬದಿಂದ ಬಹಿಷ್ಕಾರ ಹಾಕುತ್ತೇನೆ ಎಂದು ಹೇಳುತ್ತಾರೆ. […]

ಕೋಮುವಾದಿ ಪಕ್ಷ ಬಿಜೆಪಿ ಹೆಚ್ಚು ಅಪಾಯಕಾರಿ: ನಟ ಪ್ರಕಾಶ್‌ ರೈ

Friday, April 20th, 2018
prakash-rai

ಬೆಂಗಳೂರು: ಕೋಮುವಾದಿ ಪಕ್ಷ ಬಿಜೆಪಿ ಹೆಚ್ಚು ಅಪಾಯಕಾರಿ. ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವನ್ನಾಗಿಸುವ ಬಗ್ಗೆ ಮಾತನಾಡುತ್ತಿದೆ. ದೇಶದಲ್ಲಿ ಕೋಮುವಾದಿ ವಿಷ ಬೀಜವನ್ನು ಬಿತ್ತುತ್ತಿದೆ ಎಂದು ಬಹು ಭಾಷಾ ನಟ ಪ್ರಕಾಶ್ ರೈ ಟೀಕಿಸಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ಮತ್ತು ಬೆಂಗಳೂರು ವರದಿಗಾರರ ಕೂಟ ಜಂಟಿಯಾಗಿ ಇಂದು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರಿಗೆ ಪ್ರಶ್ನೆ ಮಾಡುವ ಎದೆಗಾರಿಕೆ ಬರಬೇಕು. ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ಬೆಳಗಾವಿ ಶಾಸಕ ಸಂಜಯ ಪಾಟೀಲ್ ಅವರಿಗೆ ಈ ದೇಶ, ಈ […]

‘ಕೆಟ್ಟ ಆಡಳಿತಗಾರ’ ಸಿದ್ದರಾಮಯ್ಯ ಜತೆ ವೇದಿಕೆ ಹಂಚಿಕೊಳ್ಳಲ್ಲ: ದೇವೇಗೌಡ

Wednesday, January 24th, 2018
siddaramaih

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಹಿನ್ನಲೆಯಲ್ಲಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿರುವ ದೇವೇಗೌಡರು, ಸಿದ್ದರಾಮಯ್ಯ ಸರಕಾರ ಅತ್ಯಂತ ಕೆಟ್ಟ ಸರಕಾರ ಎಂದು ಜರೆದಿದ್ದಾರೆ. ದೇವೇಗೌಡರ ಈ ನಡೆಯನ್ನು ಬಿಜೆಪಿಯೆಡೆಗಿನ ಜೆಡಿಎಸ್ ನ ಇನ್ನೊಂದು ಹೆಜ್ಜೆ ಎಂದು ನೋಡಲಾಗುತ್ತಿದೆ. ದೇವೇಗೌಡರು ಫೆಬ್ರವರಿ 7ರಂದು ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ವೇದಿಕೆ ಹಂಚಿಕೊಳ್ಳಬೇಕಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ […]

ಸಿಂಧೂರಿ ವರ್ಗಾವಣೆ ವಿರೋಧಿಸಿ ದೇವೇಗೌಡರಿಂದ ರಾಷ್ಟ್ರಪತಿಗೆ ಪತ್ರ : ಸಿಎಂ

Tuesday, January 23rd, 2018
rohini

ಮೈಸೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗ ತಡೆಯಾಜ್ಞೆ ನೀಡಿರುವುದು ನನಗೆ ಗೊತ್ತಿಲ್ಲ. ಚುನಾವಣಾ ನೀತಿ ಸಂಹಿತೆ ಜಾರಿಯಾಗದೆ ವರ್ಗಾವಣೆಗೆ ತಡೆಯಾಜ್ಞೆ ನೀಡಲು ಹೇಗೆ ಸಾಧ್ಯ? ಇದು ಹಸ್ತಕ್ಷೇಪವಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಇಂದು ಎರಡು ದಿನಗಳ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ ಅವರು, ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾಸನ ಜಿಲ್ಲಾಧಿಕಾರಿಯನ್ನು ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೆ ಚುನಾವಣಾ ಆಯೋಗ ತಡೆಯಾಜ್ಞೆ ನೀಡಿರುವುದು ನನಗೆ […]

ಎಡಪಕ್ಷಗಳ ಜತೆ ಸೀಟು ಹೊಂದಾಣಿಕೆ ಜೆಡಿಎಸ್ ಸಿದ್ಧ: ದೇವೇಗೌಡ

Monday, January 22nd, 2018
JDS-Devegowda

ಮಂಗಳೂರು: ಒಂದು ವೇಳೆ ಸಿಪಿಎಂ ಮತ್ತು ಸಿಪಿಐ ಪಕ್ಷಗಳು ಮೈತ್ರಿಗೆ ಮುಂದಾದರೆ ಅವರಿಗೆ ಕೆಲ ಸ್ಥಾನಗಳನ್ನು ಬಿಟ್ಟುಕೊಡಲು ಜೆಡಿಎಸ್ ಸಿದ್ಧವಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಫೆಬ್ರವರಿ ಮೂರನೇ ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಒಂದು ವೇಳೆ ವಿಧಾನಸಭೆಯ ಚುನಾವಣೆಯ ನಂತರ ಅತಂತ್ರ ಸ್ಥಿತಿ ನಿರ್ಮಾಣವಾದರೆ, ಯಾವುದೇ ಪಕ್ಷಗಳ ಜತೆ […]