Blog Archive

ವಿಟ್ಲ : ದ್ವಿಚಕ್ರ ವಾಹನ ಜೊತೆ ಸೇತುವೆಯಿಂದ ನದಿಗೆ ಬಿದ್ದು ಯುವಕ ಮೃತ್ಯು

Wednesday, November 6th, 2019
Vitla

ವಿಟ್ಲ : ಯುವಕನೋರ್ವ ದ್ವಿಚಕ್ರ ವಾಹನ ಜೊತೆ ಸೇತುವೆಯಿಂದ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಸಬಾ ಗ್ರಾಮದ ನೆಲ್ಲಿಗುಡ್ಡೆಯಲ್ಲಿ ನಡೆದಿದೆ. ಮಡಿಕೇರಿ ನಿವಾಸಿಯಾಗಿರುವ ಸುನಿಲ್ ಮೃತ ದುರ್ದೈವಿ. ವಿಟ್ಲ ಕಸಬಾ ಗ್ರಾಮದ ನೆಲ್ಲಿಗುಡ್ಡೆಯ ಬಂಧುಗಳ ಮನೆಗೆ ಬಂದಿದ್ದ ಯುವಕ ಸುನಿಲ್, ದ್ವಿಚಕ್ರ ವಾಹನದಲ್ಲಿ ಸೇತುವೆಯ ಮೇಲೆ ಸಂಚರಿಸುವಾಗ ಆಕಸ್ಮಿಕವಾಗಿ ನದಿಗೆ ಬಿದ್ದಿರಬೇಕೆಂದು ಊಹಿಸಲಾಗಿದೆ. ಸೇತುವೆ ನಿರ್ಮಾಣ ಹಂತದಲ್ಲಿದ್ದು, ಇನ್ನೂ ತಡೆಗೋಡೆ ಕಾಮಗಾರಿ ಬಾಕಿಯಿದೆ. ರಾತ್ರಿ ಹೊತ್ತಿನಲ್ಲಿ ಸೇತುವೆ ಗಮನಕ್ಕೆ ಬರದೆ ಈ ಅಪಘಾತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಈತ […]

ದ್ವಿಚಕ್ರ ವಾಹನಕ್ಕೆ ಜೀಪ್‌‌ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವು!

Wednesday, June 20th, 2018
accident

ಮಂಗಳೂರು: ದ್ವಿಚಕ್ರ ವಾಹನಕ್ಕೆ ಜೀಪ್‌‌ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೊಡಂಗಾಯಿ ಬಳಿ ಸಂಭವಿಸಿದೆ. ಪಳಿಕೆ ನಿವಾಸಿ ಮಹಮ್ಮದ್ ಸಫ್ವಾನ್(18) ಮೃತ ವಾಹನ ಸವಾರ. ಸಫ್ವಾನ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಜೀಪ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಕಳ್ಳತನ ಮಾಡಿ ದ್ವಿಚಕ್ರ ವಾಹನವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

Saturday, February 4th, 2017
Barke

ಮಂಗಳೂರು: ಕಳ್ಳತನ ಮಾಡಿ ದ್ವಿಚಕ್ರ ವಾಹನವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನ ಗದಗ ತಾಲೂಕು ಶಿರಹಟ್ಟಿಯ ಸುರೇಶ ಭಜಂತ್ರಿ (21) ಮತ್ತು ಫಕಿರೇಶ ಈಳಿಗೇರ (23) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಹೀರೋ ಫ್ಯಾಶನ್ ಪ್ರೋ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಶುಕ್ರವಾರ ಬೆಳಗ್ಗೆ ಬಿಜೈನ ಕೆಎಸ್‌‌‌ಆರ್‌‌ಟಿಸಿ ಬಸ್ ಸ್ಟಾಂಡ್ ಸಮೀಪ ವಾಹನ ಮಾರಾಟಕ್ಕೆ ಯತ್ನಿಸುತ್ತಿದ್ದ ಖಚಿತ ಸುಳಿವಿನ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಲೆತ್ನಿಸಿದರು. ಈ ಸಂದರ್ಭ ಇವರನ್ನು ವಶಕ್ಕೆ […]

ಹೈಬ್ರಿಡ್ ಬೈಕ್ ವಿದ್ ಟು ವೀಲ್ ಡ್ರೈವ್ ಕರಾವಳಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಅಪೂರ್ವ ಸಾಧನೆ

Friday, June 13th, 2014
Karavali College

ಮಂಗಳೂರು : ನಗರದ ನೀರುಮಾರ್ಗದಲ್ಲಿರುವ ಪ್ರತಿಷ್ಠಿತ ಕರಾವಳಿ ಇನ್ಸ್ಪಿಟ್ಯೂಟ್ ಆಫ್ ಟೆಕ್ನಾಲಜಿಯ ಅಂತಿಮ ವರ್ಷ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಸುಬಿನ್ ಡಿ ತಂಬಿ ಹಾಗೂ ಅನಜು ಐಸಾಕ್ ಇವರು, ಪ್ರೋ. ಪಿ. ರಮೇಶ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ವಿಶಿಷ್ಟ ರೀತಿಯ ಆಧುನಿಕ ದ್ವಿಚಕ್ರ ವಾಹನ ‘ಹೈಬ್ರಿಡ್ ಬೈಕ್ ವಿದ್ ಟು ವೀಲ್ ಡ್ರೈವ್’ವನ್ನು ನಿರ್ಮಿಸುವ ಮೂಲಕ ದ್ವಿಚಕ್ರ ವಾಹನಗಳ ಯುಗದಲ್ಲಿ ಹೊಸ ಆಯಾಮವನ್ನು ಸೃಷ್ಟಿಸಿದ್ದಾರೆ. ಈ ದ್ವಿಚಕ್ರ ವಾಹನದಲ್ಲಿ ಗ್ರಾಹಕರಿಗೆ ಎರಡು ಆಯ್ಕೆಗಳಿದ್ದು, ಇದು ಪೆಟ್ರೋಲ್ […]

ಆ್ಯಕ್ಟಿವಾ ನಿಯಂತ್ರಣ ತಪ್ಪಿ ಬಸ್ಸಿನ ಹಿಂಬದಿಗೆ ಡಿಕ್ಕಿ ಮಹಿಳೆ ಸಾವು

Wednesday, November 6th, 2013
hoige-bazar

ಮಂಗಳೂರು: ಬಸ್‍ನ ಹಿಂಬದಿಗೆ ಆ್ಯಕ್ಟಿವಾ ಹೊಂಡಾ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಸವಾರೆ ಮೃತಪಟ್ಟ ಘಟನೆ ನಿನ್ನೆ ಬೆಳಿಗ್ಗೆ ಹೊೈಗೆಬಜಾರ್‍ನಲ್ಲಿ ನಡೆದಿದೆ. ಮೃತರನ್ನು ಹೊೈಗೆ  ಬಜಾರ್ ನಿವಾಸಿ ವಿಜಯಲಕ್ಷ್ಮಿ(55) ಎಂದು ಗುರುತಿಸಲಾಗಿದೆ. ಇವರು ನಿನ್ನೆ ಬೆಳಿಗ್ಗೆ ತನ್ನ ಪತಿಯೊಂದಿಗೆ ಆ್ಯಕ್ಟಿವಾದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಆ್ಯಕ್ಟಿವಾ ನಿಯಂತ್ರಣ ತಪ್ಪಿ ಬಸ್ಸೊಂದರ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಆಗ ವಿಜಯಲಕ್ಷ್ಮಿ ಬಸ್ಸಿನ ಹಿಂಬದಿ ಚಕ್ರದ ಅಡಿಗೆ ಬಿದ್ದಿದ್ದು, ಇದರಿಂದಾಗಿ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು […]

ಮಂಗಳೂರಿನಲ್ಲಿ ಹೆಲ್ಮೆಟ್ ಗಳಿಗೆ ದಂಡಂ ದಶಗುಣಂ !

Tuesday, February 12th, 2013
sub standard helmets in Mangalore

ಮಂಗಳೂರು : ಕಳಪೆ ಹೆಲ್ಮೆಟ್ ಧರಿಸಿಕೊಂಡು ದ್ವಿಚಕ್ರ ವಾಹನ ಚಲಾಯಿಸುವವರ ವಿರುದ್ಧ ಮಂಗಳೂರು ನಗರ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ. ತಲೆಯನ್ನು ಪೂರ್ತಿಯಾಗಿ ಮುಚ್ಚುವಂತಹ ಹಾಗೂ ಗಟ್ಟಿಮುಟ್ಟಾದ ಹೆಲ್ಮೆಟ್ ಧರಿಸಬೇಕು ಎಂಬ ನಿರ್ದೇಶನ ವಿದ್ದರೂ, ದ್ವಿಚಕ್ರವಾಹನ ಸವಾರರು ಧರಿಸಿದ್ದ ಸುರಕ್ಷಿತವಲ್ಲದ ಹೆಲ್ಮೆಟ್ ಗಳನ್ನು ಪೊಲೀಸರು ಇನ್ನೂ ಮುಂದೆ ಹಿಡಿದು ದಂಡ ಹಾಕುವ ಕೆಲಸಕ್ಕೆ ಕೈ ಹಾಕಲಿದ್ದಾರೆ. ಮಂಗಳೂರು ನಗರ ಸಂಚಾರಿ ಪೊಲೀಸರು ಈ ಸಂಬಂಧ ‘ಸ್ಪೆಷಲ್ ಡ್ರೈವ್’ ಎಂಬ ವಿಶೇಷ ಕಾರ್ಯಾಚರಣೆ ಪ್ರಾರಂಭಿಸಿದೆ. ಬಹುತೇಕ ದ್ವಿಚಕ್ರ […]