Blog Archive

ಧರ್ಮಸ್ಥಳದಲ್ಲಿ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Wednesday, November 10th, 2021
dharmasthala

ಧರ್ಮಸ್ಥಳ : ಕರಾವಳಿ ಮೂಲಕ ನಮ್ಮ ದೇಶಕ್ಕೆ ವಿದೇಶೀಯರ ಅಕ್ರಮ ಪ್ರವೇಶ ತಡೆಗಟ್ಟಲು ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡಲು ಸದೃಢ ಕರಾವಳಿ ಕಾವಲು ಪಡೆ ಮೂಲಕ ಬಿಗಿ ಬಂದೋಬಸ್ತ್ ಮಾಡಲಾಗುವುದು. ಈ ಬಗ್ಯೆ ಈಗಾಗಲೆ 30 ಬೋಟ್‌ಗಳನ್ನು ಖರೀದಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಎರಡು ಕೋಟಿ ಮೂವತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಸೆಟಲೈಟ್ ಫೋನ್ ಬಳಕೆ ಹಾಗೂ […]

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ, ಹೊಸ ಯೋಜನೆಗಳ ಪ್ರಕಟ

Sunday, October 24th, 2021
Veerendra Heggade

ಉಜಿರೆ: ಧಾರವಾಡದಲ್ಲಿ ಎಸ್.ಡಿ.ಎಂ. ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ. ಎರಡು ವರ್ಷದೊಳಗೆ ಪ್ರಾರಂಭ, ಆರು ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಆಸ್ಪತ್ರೆಗಳಿಗೆ ಸಿ.ಟಿ. ಸ್ಕ್ಯಾನ್  ಕೊಡುಗೆ, ಮಂಗಳೂರಿನಲ್ಲಿ ವೆನ್‌ಲಾಕ್ ಆಸ್ಪತ್ರೆಯಲ್ಲಿ ಎರಡು ಡಯಾಲಿಸಿಸ್ ಘಟಕ ಹಾಗೂ ಉಜಿರೆಯಲ್ಲಿರುವ ಎಸ್.ಡಿ.ಎಮ್. ಆಸ್ಪತ್ರೆಯಲ್ಲಿ ಹನ್ನೊಂದು ಡಯಾಲಿಸಿಸ್ ಘಟಕಗಳÀನ್ನು ಸದ್ಯದಲ್ಲಿಯೇ ಪ್ರಾರಂಭಿಸಿಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಭಾನುವಾರ ಧರ್ಮಸ್ಥಳದಲ್ಲಿ ಪಟ್ಟಾಭಿಷೇಕದ 54ನೇ ವರ್ಷದ ವರ್ಧಂತಿ ಆಚರಣೆ ಸಂದರ್ಭ ಅವರು ಹೊಸ ಯೋಜನೆಗಳನ್ನು ಪ್ರಕಟಿಸಿದರು. ಗ್ರಾಮಾಭಿವೃದ್ಧಿ […]

ವಿಶ್ವಹಿಂದೂ ಪರಿಷತ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಧರ್ಮಸ್ಥಳ ಭೇಟಿ

Saturday, October 23rd, 2021
Dharmasthala

ಉಜಿರೆ: ವಿಶ್ವಹಿಂದೂ ಪರಿಷದ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಶನಿವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬಹುಮುಖಿ ಸಮಾಜ ಸೇವೆಗಾಗಿ ಅಭಿನಂದಿಸಿ, ಗೌರವಿಸಿದರು. ಬಳಿಕ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನುಸೂಚಿತ ಜಾತಿಗಳ ಮೇಲೆ ಮತಾಂತರ ಪಿಡುಗು ವ್ಯಾಪಿಸಿದೆ. ಜೊತೆಗೆ ಲವ್ ಜಿಹಾದ್, ಬೆದರಿಕೆ ಹಾಗೂ ಭಯದ ವಾತಾವರಣ ಸೃಷ್ಟಿಸಿ ಮತಾಂತರ ಮಾಡಲಾಗುತ್ತಿದೆ. ಇದನ್ನು ತಡೆಗಟ್ಟಲು ವಿಶ್ವ ಹಿಂದೂ ಪರಿಷದ್ ಗಂಭೀರ ಚಿಂತನೆ ನಡೆಸಿದೆ. ದೀಪಾವಳಿ ನಂತರ ಈ […]

ಧರ್ಮಸ್ಥಳದಲ್ಲಿ ಗಾಂಧಿ ಸ್ಮೃತಿ ಮತ್ತು ವ್ಯಸನ ಮುಕ್ತ ಸಾಧಕರ ಸಮಾವೇಶ

Saturday, October 2nd, 2021
Dharmasthala

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಮನ ಪರಿವರ್ತನೆ ಮೂಲಕ ಮದ್ಯ ವ್ಯಸನ ಮುಕ್ತ ಸಮಾಜ ರೂಪಿಸುವಲ್ಲಿ ಮಾಡಿದ ಸೇವೆ, ಸಾಧನೆ ಶ್ಲಾಘನೀಯವಾಗಿದೆ. ದೃಢ ಸಂಕಲ್ಪದಿಂದ ಮಾತ್ರ ವ್ಯವಸನ ಮುಕ್ತವಾದ ಆರೋಗ್ಯಪೂರ್ಣ ಸಮಾಜ ರೂಪಿಸಲು ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಗಾಂಧಿ ಸ್ಮೃತಿ ಹಾಗೂ ವ್ಯಸನ ಮುಕ್ತ ಸಾಧಕರನ್ನು ಅಭಿನಂದಿಸಿ […]

ನಾರಾವಿ ಬಸದಿಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಭೇಟಿ

Wednesday, September 22nd, 2021
Veerendra Hegde

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬುಧವಾರ ನಾರಾವಿಯಲ್ಲಿರುವ ಭಗವಾನ್ ಶ್ರೀ ಧರ್ಮನಾಥ ಸ್ವಾಮಿಗೆ ಬಸದಿಗೆ ಹೋಗಿ ದೇವರ ದರ್ಶನ ಮಾಡಿದರು. ಬಳಿಕ ಬಸದಿಯಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಆರ್ಯಿಕಾ ಚಿಂತನಮತಿ ಮಾತಾಜಿ ಮತ್ತು ಕ್ಷಲ್ಲಿಕ ಸುಶ್ರೇಯಾಮತಿ ಮಾತಾಜಿ ಅವರ ದರ್ಶನ ಮಾಡಿ ಆಶೀರ್ವಾದ ಪಡೆದರು. ಚಾತುರ್ಮಾಸ್ಯ ಸಮಿತಿಯ ಎನ್. ಪ್ರೇಮ್ ಕುಮಾರ್, ಹೊಸ್ಮಾರು, ಶಿಶುಪಾಲ ಜೈನ್, ಪ್ರಕಾಶ್ ಕುಮಾರ್, ಶಶಿಕಾಂತ ಜೈನ್, ಸನ್ಮತ್ ಕುಮಾರ್, ನಾಗಕುಮಾರ ಶೆಟ್ಟಿ, ಜಯವರ್ಮ ಬುನ್ನು, ಅಶೋಕ ಕುಮಾರ್, ಒರಿಮಾರು, ರಾಜೇಂದ್ರ […]

ದೇವಸ್ಥಾನಗಳ ನಿರ್ಬಂಧ ತೆರವು : ನೆಗೆಟಿವ್ ವರದಿ ಹೊಂದಿದ್ದಲ್ಲಿ ಸೇವೆಗೆ ಅವಕಾಶ

Saturday, September 18th, 2021
Kateel Kukke Dharmasthala

ಮಂಗಳೂರು :  ಕೋವಿಡ್ ಸೋಂಕಿನ ಪಾಸಿಟಿವಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಈ ಹಿಂದೆ ವಿಧಿಸಲಾಗಿದ್ದ ನಿರ್ಬಂಧ ಗಳನ್ನು ಹಿಂಪಡೆದು ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಹಾಗೂ ಸೇವೆಗಳನ್ನು ನಡೆಸಲು ಷರತ್ತುಗಳನ್ನು ಪಾಲಿಸುವ ನಿಬಂಧನೆಗಳಿಗೊಳಪಟ್ಟು ಜಿಲ್ಲಾಡಳಿತ ಅನುಮತಿ ನೀಡಿದೆ. ಷರತ್ತುಗಳಿಂತಿವೆ: 1, ದೇವಾಲಯಗಳಲ್ಲಿ ಕೋವಿಡ್ ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ದೇವಳದ ಆಡಳಿತ ವರ್ಗವು ಇದನ್ನು ಕಟ್ಟುನಿಟಟಾಗಿ ಅನುಷ್ಠಾನಿಸುವ  ಜವಾಬ್ದಾರಿಯನ್ನು ಹೊಂದಿದೆ. 2. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ […]

ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ದರ್ಶನಕ್ಕೆ ಅವಕಾಶ, ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ

Tuesday, September 7th, 2021
Kateel Kukke Dharmasthala

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರದೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ, ಕೋವಿಡ್ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗಿದ್ದರೂ, ಸಂಭಾವ್ಯ 3ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾ ದಂಡಾಧಿಕಾರಿಗಳೂ, ಜಿಲ್ಲಾ […]

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರಶಸ್ತಿ ಪ್ರದಾನ

Saturday, August 28th, 2021
Asia One

ಉಜಿರೆ: “ಏಷ್ಯಾ ವನ್” ಜಾಗತಿಕ ಪತ್ರಿಕೆಯು ಏಷ್ಯಾ ಖಂಡದ ಸಾಮಾಜಿಕ ನಾಯಕರನ್ನು ಗುರುತಿಸುವುದರೊಂದಿಗೆ ತನ್ನ 14ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ: 27-08-2021 ಶುಕ್ರವಾರದಂದು ಆನ್‌ಲೈನ್ ಮೂಲಕ ಆಯೋಜಿಸಲಾಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರತಿಷ್ಠಿತ “ಏಷ್ಯಾ ಖಂಡದ ಶ್ರೇಷ್ಠ ನಾಯಕರು” ಎಂಬ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಬಿಗ್ ಬಾಸ್ ವಿಜೇತ ಪಾವಗಡ ಮಂಜು ಧರ್ಮಸ್ಥಳದಲ್ಲಿ

Tuesday, August 24th, 2021
pavagada-Manju

ಉಜಿರೆ : ಬಿಗ್ ಬಾಸ್ ವಿಜೇತ ಪಾವಗಡ ಮಂಜು ಮಂಗಳವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಅವರನ್ನು ಗೌರವಿಸಿ ಉಜ್ವಲ ಭವಿಷ್ಯವನ್ನು ಹಾರೈಸಿದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಅವರ ತಂದೆ ಹನುಮಂತರಾಯಪ್ಪ, ತಾಯಿ ಲಕ್ಷ್ಮಮ್ಮ, ತಮ್ಮ ರಾಘವ ಮತ್ತು ತಂಗಿ ಮಾನಸ ಉಪಸ್ಥಿತರಿದ್ದರು. ಪಾವಗಡ ಮಂಜು ಕಲರ್ಸ್ ಕನ್ನಡದ ಮಜಾ ಭಾರತದಲ್ಲಿ ಕಲಾವಿದರಾಗಿ ಕಳೆದ ನಾಲ್ಕು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ತಮ್ಮ ಕುಟುಂಬದವರೊಂದಿಗೆ […]

ಜನಜಾಗೃತಿ ವೇದಿಕೆ: ವಾರ್ಷಿಕ ವರದಿ ಬಿಡುಗಡೆ

Saturday, July 31st, 2021
dharmasthala

ಉಜಿರೆ: ಜನಜಾಗೃತಿ ವೇದಿಕೆಯ ಬೆಳ್ತಂಗಡಿ ಪ್ರಾದೇಶಿಕ ವಿಭಾಗದ ವಾರ್ಷಿಕ ವರದಿ ಮತ್ತು ಪ್ರಾಕೃತಿಕ ದುರಂತಗಳು ಹಾಗೂ ನಿರ್ವಹಣೆ ಬಗ್ಯೆ ಮಾಹಿತಿ ಕೈಪಿಡಿಯನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮದ್ಯವರ್ಜನ ಶಿಬಿರಗಳ ಮೂಲಕ ವ್ಯಸನಮುಕ್ತ ಆರೋಗ್ಯಪೂರ್ಣ ಸಮಾಜ ರೂಪಿಸುವಲ್ಲಿ ಜನಜಾಗೃತಿ ವೇದಿಕೆಯ ಸೇವೆಯನ್ನು ಹೆಗ್ಗಡೆಯವರು ಶ್ಲಾಘಿಸಿ ಅಭಿನಂದಿಸಿದರು. ವಿಪತ್ತು ನಿರ್ವಹಣಾ ಸ್ವಯಂ ಸೇವಕರ ಸೇವಾ ಕಾರ್ಯ, ಪರಿಸರ ಸಂರಕ್ಷಣಾ ಕಾರ್ಯಕ್ರಮಗಳು ಕೂಡಾ ಸ್ಥಳೀಯರ ಸಹಕಾರದೊಂದಿಗೆ ಉತ್ತಮವಾಗಿ ಮೂಡಿ ಬರುತ್ತಿವೆ. ಕೊರೊನಾದಿಂದಾಗಿ ಮದ್ಯವರ್ಜನ ಶಿಬಿರಗಳು […]