Blog Archive

ಧರ್ಮಸ್ಥಳದಲ್ಲಿ ಹೆಗ್ಗಡೆಯವರ ಪಟ್ಟಾಭಿಷೇಕದ 53ನೇ ವರ್ಷದ ವರ್ಧಂತಿ ಆಚರಣೆ ನಾಳೆ

Friday, October 23rd, 2020
veerendra Heggade

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 53ನೆ ವರ್ಷದ ವರ್ಧಂತಿ ಸಮಾರಂಭ ಇದೇ ೨೪ ರಂದು ಶನಿವಾರ ಸರಳವಾಗಿ ನಡೆಯಲಿದೆ. 1948 ರ ನವೆಂಬರ್ 25 ರಂದು ಜನಿಸಿದ ಅಂದಿನ ವೀರೇಂದ್ರ ಕುಮಾರ್ ತನ್ನ ಇಪ್ಪತ್ತನೆ ವರ್ಷ ಪ್ರಾಯದಲ್ಲಿ ಧರ್ಮಸ್ಥಳದ ಇಪ್ಪತ್ತೊಂದನೆ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. 2017 ಅಕ್ಟೋಬರ್ 24ಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರು 50 ವರ್ಷಗಳ ಸೇವೆಯನ್ನು ಪೂರೈಸಿದ್ದು 2018 ರ ಅ. 24ರ ವರೆಗೆ ಒಂದು ವರ್ಷ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸುವರ್ಣ […]

ಮುಂದಿನ ವರ್ಷದಿಂದ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ

Sunday, October 4th, 2020
online Bajane

ಉಜಿರೆ: ಧರ್ಮಸ್ಥಳದ ವತಿಯಿಂದ ಮುಂದಿನ ವರ್ಷದಿಂದ ಆನ್ ಲೈನ್ ಮೂಲಕ ಜಾಗತಿಕ ಮಟ್ಟದಲ್ಲಿ ಭಜನಾ ತರಬೇತಿ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು. ಧರ್ಮಸ್ಥಳದಲ್ಲಿ ಶನಿವಾರ ಕರ್ನಾಟಕ ಭಜನಾ ಪರಿಷತ್ ನೇತೃತ್ವದಲ್ಲಿ ಆಯೋಜಿಸಿದ ಪ್ರಾರ್ಥನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭಜನಾ ತರಬೇತಿ ಕಮ್ಮಟ ದಿಂದಾಗಿ ಜನರಲ್ಲಿ ಭಜನೆ ಬಗ್ಗೆ ಗೌರವ, ಭಕ್ತಿ, ಶಿಸ್ತು, ಸಂಯಮ, ನಾಯಕತ್ವ ಗುಣ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಧಾರ್ಮಿಕ ಪ್ರಜ್ಞೆ ಮೂಡಿಬಂದಿದೆ ಎಂದು ಹೇಳಿದರು. ಧರ್ಮಸ್ಥಳದಲ್ಲಿ ದೇವರ ಅಪ್ಪಣೆ […]

ಧರ್ಮಸ್ಥಳದ ವಿರುದ್ಧ ಅಪಪ್ರಚಾರ, 25 ರೂ ಲಕ್ಷ ಪರಿಹಾರ ಪಾವತಿಸುವಂತೆ ಕೋರ್ಟ್ ಆದೇಶ

Sunday, August 9th, 2020
veerendraHeggade

ಮಂಗಳೂರು: ಧರ್ಮಸ್ಥಳದ ಆರ್ಥಿಕ ವ್ಯವಹಾರಗಳು, ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡಿದ್ದಕ್ಕೆ ಬೆಳ್ತಂಗಡಿಯ ಹಿರಿಯ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ ನ್ಯಾಯಾಲಯ  ಕ್ಷೇತ್ರಕ್ಕೆ ರೂ  25 ಲಕ್ಷ ಪರಿಹಾರ ಪಾವತಿಸುವಂತೆ ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ.ಸೋಮನಾಥ ನಾಯಕ್‌ ಅವರಿಗೆ ಆದೇಶಿಸಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆ ಅವರ ಕುರಿತು ಯಾವುದೇ ಹೇಳಿಕೆ, ಪ್ರಕಟಣೆ ನೀಡದಂತೆ ನ್ಯಾಯಾಲಯ ಸೋಮನಾಥ ನಾಯಕ್‌ ಅವರಿಗೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು. ಅದನ್ನು ಉಲ್ಲಂಘಿಸಿದ ಅಪರಾಧಕ್ಕಾಗಿ 2013ರಲ್ಲೇ ಮೂರು ತಿಂಗಳ […]

ಎಸ್​ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ

Sunday, July 19th, 2020
sdm dharwad

ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಪ್ರಯತ್ನಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ. ಲಾಕ್ಡೌನ್ಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿಯಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಸತ್ತೂರಿನ ಎಸ್ಡಿಎಂ ಆಸ್ಪತ್ರೆಯಲ್ಲಿ ಸಂಜೆ ಕೋವಿಡ್ ತಪಾಸಣೆ ವೈರಾಲಜಿ ಪ್ರಯೋಗಾಲಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿತರ ತ್ವರಿತ ಪತ್ತೆಗೆ ಮತ್ತೊಂದು ಪ್ರಯೋಗಾಲಯ ಪ್ರಾರಂಭವಾಗುತ್ತಿರುವುದು ನೆರವಾಗಲಿದೆ. ಕೊರೊನಾ ವಾರಿಯರ್ಗಳಾಗಿರುವ […]

ಇಂದಿನಿಂದ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಮುಕ್ತ ಅವಕಾಶ

Monday, June 8th, 2020
Dharmasthala

ಮಂಗಳೂರು  : ಸರಕಾರದ ಮಾರ್ಗ ಸೂಚಿಯಂತೆ ಹಾಗೂ ಕೊರೊನಾ ವೈರಸ್ ನಿಯಂತ್ರಿಸಲು ಮುಂಜಾಗರೂಕತೆಯನ್ನು ಅನುಸರಿಸಿ ಇಂದಿನಿಂದ ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ದರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ. ದೇವರ ದರ್ಶನ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ದೇವಸ್ಥಾನ ಅರ್ಚಕರು, ರಕ್ಷಣಾ ಸಿಬ್ಬಂದಿಗಳು ಹಾಗೂ ನೌಕರರು ನೀಡುವ ಸಲಹೆ ಸೂಚನೆಗಳನ್ನು ಗಮನಿಸಿ ಭಕ್ತರು ಸಹಕರಿಸಬೇಕು ಎಂದು ಕೋರಲಾಗಿದೆ. ಡಾ ಹೆಗ್ಗಡೆಯವರ ಬೇಟಿ ಸಮಯ. ಭಕ್ತರು […]

ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಹುಟ್ಟಿ ಧರ್ಮಸ್ಥಳದ ಮೂಲಕ ಸಾಗುವ ನೇತ್ರಾವತಿ ನದಿಗೆ ಕಾಯಕಲ್ಪ

Thursday, June 4th, 2020
netravathi

ಧರ್ಮಸ್ಥಳ : ನದಿಗಳು ನಿತ್ಯ ಚಲನಶೀಲವಾಗಿದ್ದು ಕ್ರಿಯಾಶೀಲ ವಾಗಿರುತ್ತವೆ. ನದಿಗಳ ಉಗಮ ಸ್ಥಾನದಿಂದ ಸಮುದ್ರ ಸೇರುವವರೆಗೂ ಹಲವು ನದಿ-ತೊರೆಗಳನ್ನು ಸೇರಿಸಿಕೊಂಡು ತಮ್ಮಉಭಯ ಮಗ್ಗುಲುಗಳಲ್ಲಿ ಜನರಿಗೆ ಉಪಯುಕ್ತ ವಾಗುತ್ತವೆ. ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ಎಂದೇ ಕರೆಯಲ್ಪಡುವ ನೇತ್ರಾವತಿ ನದಿಯ ಉಗಮಸ್ಥಾನ ಕುದುರೆಮುಖ ಪರ್ವತ ಶ್ರೇಣಿಯ ಎಳನೀರು ಘಾಟಿಯ ಬ೦ಗ್ರ ಬಲಿಗೆ ಕಣಿವೆ ಆಗಿದೆ. ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದ ಮೂಲಕ ಹರಿದು ಹೋಗುವ ನೇತ್ರಾವತಿ ನದಿ ಪುಣ್ಯನದಿ ಎಂದು ಮಾನ್ಯತೆ ಹೊಂದಿದ್ದು ಧರ್ಮಸ್ಥಳಕ್ಕೆ ಬರುವ ಭಕ್ತರು ನದಿಸ್ನಾನ ಮಾಡಿ ದೇವರ […]

ಕೊರೊನಾ ನಿರ್ಮೂಲನೆಗಾಗಿ ಧರ್ಮಸ್ಥಳದಲ್ಲಿ ಜ್ಯೋತಿ ಬೆಳಗಿಸಿ ವಿಶೇಷ ಪ್ರಾರ್ಥನೆ

Monday, April 6th, 2020
Dharmasthala Light

ಧರ್ಮಸ್ಥಳ : ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಿ ವಿಶ್ವದೆಲ್ಲೆಡೆ ಸುಖ-ಶಾಂತಿ, ನೆಮ್ಮದಿ ನೆಲೆಸಲಿ. ಎಲ್ಲರ ಭಯ-ಆತಂಕ ನಿವಾರಣೆಯಾಗಿ ಆರೋಗ್ಯ ಭಾಗ್ಯ ಸಿಗಲಿ ಎಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾನುವಾರ ರಾತ್ರಿ 9 ಗಂಟೆಗೆ ದೇವಸ್ಥಾನದಲ್ಲಿ ಜ್ಯೋತಿ ಬೆಳಗಿಸಿ ವಿಶೇಷ ಪ್ರಾರ್ಥನೆ ಮಾಡಿದರು. ಕೊರೊನಾ ನಿರ್ಮೂಲನೆಗಾಗಿ ನಾವೆಲ್ಲ ವಿಶ್ವದ ಎಲ್ಲಾ ಜನರೊಂದಿಗೆ ಏಕತೆ, ಸಂಘಟನೆ ಮತ್ತು ಪ್ರಜ್ಞೆಯೊಂದಿಗೆ ಹೋರಾಟ ನಡೆಸುತ್ತಿದ್ದೇವೆ. ಜ್ಯೋತಿ ಪ್ರತಿಯೊಬ್ಬರ ಮನದ ಹಾಗೂ ಮನೆಯ ಕತ್ತಲನ್ನು ಹೋಗಲಾಡಿಸಿ ವಿಶ್ವಶಾಂತಿಗೆ ಪ್ರೇರಕವಾಗಲಿ. ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಲಿ […]

ಭಾನುವಾರ ರಾತ್ರಿ 9 ಗಂಟೆಗೆ ಲೋಕಕಲ್ಯಾಣಕ್ಕಾಗಿ ಧರ್ಮಸ್ಥಳದಲ್ಲಿ ವಿಶೇಷ ಪ್ರಾರ್ಥನೆ

Sunday, April 5th, 2020
Heggade

ಧರ್ಮಸ್ಥಳ : ಕೊರೊನಾ ನಿರ್ಮೂಲನೆಯೊಂದಿಗೆ ವಿಶ್ವಶಾಂತಿ ಮತ್ತು ಲೋಕ ಕಲ್ಯಾಣಕ್ಕಾಗಿ ಇಂದು, ಭಾನುವಾರ ರಾತ್ರಿ 9 ಗಂಟೆಗೆ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಜ್ಯೋತಿ ಬೆಳಗಿಸಿ ವಿಶೇಷ ಪ್ರಾರ್ಥನೆ ಮಾಡುವುದಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ. ಕೊರೊನಾ ನಿರ್ಮೂಲನೆಗಾಗಿ ನಾವೆಲ್ಲ ವಿಶ್ವದ ಎಲ್ಲಾ ಜನರೊಂದಿಗೆ ಏಕತೆ, ಸಂಘಟನೆ ಮತ್ತು ಪ್ರಜ್ಞೆಯೊಂದಿಗೆ ಹೋರಾಟ ನಡೆಸುತ್ತಿದ್ದೇವೆ. ಪ್ರಧಾನಿಯವರ ಸಲಹೆಯಂತೆ ಎಲ್ಲರೂ ಭಾನುವಾರ ರಾತ್ರಿ 9 ಗಂಟೆಗೆ ತಮ್ಮ ಮನೆಯಲ್ಲಿ ಜ್ಯೋತಿ ಬೆಳಗಿಸಿ ಕೊರೊನಾ ನಿರ್ಮೂಲನೆಯೊಂದಿಗೆ ವಿಶ್ವದ ಎಲ್ಲಾ […]

ಧರ್ಮಸ್ಥಳದಲ್ಲಿ ಲೋಕಕಲ್ಯಾಣಾರ್ಥವಾಗಿ ವ್ಯಾದಿಹರ ಶಾಂತಿ ಹೋಮ

Tuesday, March 24th, 2020
Homa

ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲೋಕಕಲ್ಯಾಣಾರ್ಥವಾಗಿ ವ್ಯಾದಿಹರ ಶಾಂತಿ ಹೋಮವನ್ನು ಲೋಕದಾದ್ಯಂತ ಮಾನವ ಕುಲದ ಜೀವನಕ್ಕೆ ತೊಂದರೆ ಮಾಡುವಕೊರೋನ ಸಂಬಂಧಿತಕೆಟ್ಟ ಕ್ರಿಮಿಗಳನ್ನು ದೂರಮಾಡಲು ಭಗವಾನ್ ಮಹಾವಿಷ್ಣುವನ್ನು ಪ್ರಾರ್ಥಿಸಿ ನೆರವೇರಿಸಲಾಯಿತು. ಅಷ್ಟು ಋಷಿಗಳು ಹಿಂದೆ ಕ್ರಿಮಿ ರೂಪದ ಮಹಾಮಾರಿಯನ್ನು ತಮ್ಮ ತಪೋ ಮಹಿಮೆಯಿಂದ ದೂರ ಮಾಡಿ ನಾಶವಾಗುವ ಹಂತದಲ್ಲಿರುವ ಈ ಲೋಕದ ಜೀವರಾಶಿಯನ್ನು ರಕ್ಷಿಸಲು ಶಾಸ್ತ್ರದಲ್ಲಿಉಲ್ಲೇಖವಾಗಿದೆ. ನಮ್ಮನ್ನು ಅಂತಹ ಮಹಾಮಾರಿಯಿಂದ ರಕ್ಷಿಸಿರಿ ಎಂಬುದಾಗಿ ಪ್ರಾರ್ಥಿಸುತ್ತಿದ್ದರು. ಆ ಮಂತ್ರವನ್ನು ಸಹಸ್ರ ಬಾರಿ ಪಠಿಸಿ ತಿಲ ಮತ್ತು ತುಪ್ಪವನ್ನು ಸಮರ್ಪಿಸಿ ನೆರವೇರಿಸಲಾಯಿತು. […]

ಬ್ರಹ್ಮಯೋಗಾನಂದ ಸ್ವಾಮೀಜಿ ಧರ್ಮಸ್ಥಳ ಭೇಟಿ

Tuesday, March 17th, 2020
ಬ್ರಹ್ಮಯೋಗಾನಂದ ಸ್ವಾಮೀಜಿ ಧರ್ಮಸ್ಥಳ ಭೇಟಿ

ಧರ್ಮಸ್ಥಳ : ಚೆನ್ನೈನಲ್ಲಿ ಯೋಗ ಶಾಂತಿಗುರು ಕುಲದ ಸ್ಥಾಪಕರಾದ ಬ್ರಹ್ಮಯೋಗಾನಂದ ಸ್ವಾಮೀಜಿ ಸೋಮವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಿತ್ಯವೂಧರ್ಮದ ಅನುಷ್ಠಾನವೇ ನಮ್ಮಕರ್ತವ್ಯವಾಗಿದ್ದು, ಪ್ರಚಾರಕ್ಕಿಂತಆಚಾರ ಮತ್ತು ವಿಚಾರಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಅವರು ಹೇಳುತ್ತಾರೆ. ಸುಭ್ರದ್ರ ಭಾರತ ನಿರ್ಮಾಣಕ್ಕಾಗಿ ಶ್ರೀರಾಮ ಮತ್ತು ಲಕ್ಷ್ಮೀ ಮೂರ್ತಿಯೊಂದಿಗೆ ಸ್ವಾಮೀಜಿ ಈಗಾಗಲೆ ದೇಶದೆಲ್ಲೆಡೆ ಸಾವಿರಕ್ಕೂ ಮಿಕ್ಕಿ ತೀರ್ಥಕ್ಷೇತ್ರಗಳಿಗೆ ಹೋಗಿ ಪೂಜೆ ಸಲ್ಲಿಸಿದ್ದಾರೆ. ಶೃಂಗೇರಿ, ಮಂಗಳೂರು, ಕನ್ಯಾಕುಮಾರಿ ಮೂಲಕ ತಮ್ಮ ಕಾಂಚೀಪುರಂ ಆಶ್ರಮಕ್ಕೆ ಹೋಗುವುದಾಗಿ […]