Blog Archive

ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ

Friday, May 24th, 2019
dharmasthala

  ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಶುಕ್ರವಾರ ದೇವಸ್ಥಾನದ ನೌಕರರು, ವಾಹನ ಚಾಲಕರು ಮತ್ತು ಮಾಲಕರು, ಊರಿನವರು, ಗ್ರಾಮ ಪಂಚಾಯಿತಿ, ಕೆ.ಎಸ್.ಆರ್.ಟಿ.ಸಿ. ಹಾಗೂ ವಿವಿಧ ಸಂಘಟನೆಗಳ ಜನರು ನೇತ್ರಾವತಿ ನದಿ ಮತ್ತು ಸ್ನಾನ ಘಟ್ಟದಲ್ಲಿ ಬೆಳಿಗ್ಗೆ ಗಂಟೆ 6.30 ರಿಂದ 9 ರ ವರೆಗೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. ನದಿಯಲ್ಲಿ ಪ್ರವಾಸಿಗರು ಬಿಸಾಡಿದ ಬಟ್ಟೆ, ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಸಂಗ್ರಹಿಸಿ ಲಾರಿಗಳಲ್ಲಿ […]

ಬೆಂಗಳೂರಿನ ಭಕ್ತಾದಿಗಳಿಂದ ಧರ್ಮಸ್ಥಳಕ್ಕೆ ಕುಡಿಯುವ ನೀರು ಸರಬರಾಜು

Wednesday, May 22nd, 2019
water

ಧರ್ಮಸ್ಥಳ : ನೀರಿನ ಕೊರತೆಯನ್ನು ಗಮನಿಸಿದ ಬೆಂಗಳೂರಿನ ಬಸವನಗುಡಿ ಸುಂಕೇನಹಳ್ಳಿಯ ಭಕ್ತಾದಿಗಳು ಸೋಮವಾರರಾತ್ರಿ 6,780 ಲೀಟರ್‌ಕುಡಿಯುವ ನೀರನ್ನುಕೊಡುಗೆಯಾಗಿ ನೀಡಿದರು. 339 ಕ್ಯಾನ್‌ಗಳಲ್ಲಿ ತಲಾ 20 ಲೀಟರ್‌ನಂತೆಒಟ್ಟು  6,780 ಲೀ ನೀರನ್ನುಅವರುತಮ್ಮ ವಾಹನಗಳಲ್ಲಿ ಸೋಮವಾರರಾತ್ರಿತಂದುಕೊಟ್ಟರು. ಅನ್ನಪೂರ್ಣಛತ್ರದಲ್ಲಿ ಅಕ್ಕಿ ಬೇಯಿಸಲು ಹಾಗೂ ಭಕ್ತಾದಿಗಳಿಗೆ ಕುಡಿಯಲು ಈ ನೀರನ್ನು ಬಳಸಲಾಗಿದೆ ಎಂದುಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ. ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

ಧರ್ಮಸ್ಥಳದಲ್ಲಿ ನಲ್ವತ್ತೆಂಟನೇ ವರ್ಷದ ಉಚಿತ ಸಾಮೂಹಿಕ ವಿವಾಹ ವೈಭವ

Friday, May 3rd, 2019
mass-marriage

ಉಜಿರೆ: ನಾಡಿವ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಮದುವೆಯ ಸಂಭ್ರಮ – ಸಡಗರ. ಸಂದರ್ಭ ನಲ್ವತ್ತೆಂಟನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ. ಸಂಜೆ ಗಂಟೆ 6.48 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ 102 ಜೋಡಿ ವಧು-ವರರು ಮಂಗಲಸೂತ್ರ ಧಾರಣೆಯೊಂದಿಗೆ ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ ಮಾಡಿದರು. ಬೆಳಿಗ್ಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬೀಡಿನಲ್ಲಿ (ತಮ್ಮ ನಿವಾಸದಲ್ಲಿ) ವಧುವಿಗೆ ಸೀರೆ, ರವಿಕೆ, ಹಾಗೂ ವರನಿಗೆ ಶಾಲು, ಧೋತಿ ನೀಡಿ ಹರಸಿದರು. ನೂತನ ವಧು-ವರರ ಜೋಡಿ ಹೆಗ್ಗಡೆಯವರಿಗೆ ಫಲ […]

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಧರ್ಮಸ್ಥಳಕ್ಕೆ ಭೇಟಿ

Monday, April 1st, 2019
sumalatha

ಮಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋಮವಾರ  ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿದರು. ಮಂಡ್ಯ  ಕ್ಷೇತ್ರದಲ್ಲಿ ಗೆಲುವಿಗಾಗಿ ರಾಜಕೀಯ ತಂತ್ರ ಮತ್ತು ಪ್ರತಿತಂತ್ರ ನಡೆಯುತ್ತಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಮತದಾರರ ಓಲೈಕೆಗೆ ಜೆಡಿಎಸ್ ನಾನಾ ಕಸರತ್ತು ಗಳನ್ನು ರಾಜಕೀಯ ಪಟ್ಟುಗಳನ್ನು ಅನುಸರಿಸುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಮಣಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಕೂಟ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿರುವ ಬೆನ್ನಲ್ಲೇ […]

ಧರ್ಮಸ್ಥಳ ಕೆಎಸ್ಆರ್​ಟಿಸಿ ಬಸ್ ಡಿಪೋದಲ್ಲಿ ಮೂರು ಸಿಬ್ಬಂದಿ ಸಾವು

Wednesday, March 20th, 2019
Ksrtc-Dharmasthala

ಧರ್ಮಸ್ಥಳ: ಕೆಎಸ್ಆರ್ಟಿಸಿ ಬಸ್ ಡಿಪೋದ ರೆಸ್ಟ್ ರೂಂನಲ್ಲಿ ಚಾಲಕ-ನಿರ್ವಾಹಕರೋರ್ವರು ಮಲಗಿದ್ದಲ್ಲೇ ಮೃತಪಟ್ಟ ಘಟನೆ  ಸೋಮವಾರ  ನಡೆದಿದೆ. ವಿಜಾಪುರದ ನಿವಾಸಿ ಸುರೇಶ್ ಬಡಿಗೇರ್(45) ಮೃತಪಟ್ಟವರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಜೆ ಕೇಳಿದರೂ, ಹೆಚ್ಚುವರಿಯಾಗಿ ದುಡಿಸಿಕೊಂಡ ಕಾರಣ ತೀವ್ರ ಕಾಯಿಲೆಗೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಧರ್ಮಸ್ಥಳ ಕೆಎಸ್ಆರ್ಟಿಸಿ ಬಸ್ ಡಿಪೋ ಹಲವಾರು ಹಗರಣ, ಅವ್ಯವಹಾರಗಳ ಆಗರವಾಗಿದೆ. ಒಂದೇ ವಾರದಲ್ಲಿ ಇಲ್ಲಿನ ಮೂವರು ಸಿಬ್ಬಂದಿ ಮೃತಪಟ್ಟಿದ್ದು, ಡಿಪೋದಲ್ಲಿರುವ ಅಧಿಕಾರಿಗಳು ನೀಡುವ ಮಾನಸಿಕ ಕಿರುಕುಳವೇ ಈ ಸಾವುಗಳಿಗೆ ಕಾರಣ ಎಂಬ […]

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ. ಶಿವ ಪಂಚಾಕ್ಷರಿ ಪಠಣ, ಭಜನೆ, ಅರ್ಚನೆ, ಜಾಗರಣೆ.

Wednesday, March 6th, 2019
Dharmasthala Shivaratri

ಧರ್ಮಸ್ಥಳ : ದೃಢ ಸಂಕಲ್ಪದೊಂದಿಗೆ ಏಕಾಗ್ರತೆಯಿಂದ ದೇವರ ಭಕ್ತಿ ಮಾಡಿದರೆ ನಮ್ಮ ಎಲ್ಲಾ ಸಂಕಷ್ಟಗಳ ಮುಕ್ತಿಯಾಗಿ ನಾವು ಭಗವಂತನ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಸೋಮವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಅಹೋರಾತ್ರಿ ನಡೆಯುವ ಶಿವಪಂಚಾಕ್ಷರಿ ಪಠಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶ್ರವಣ, ಕೀರ್ತನ, ಅರ್ಚನೆ, ವಂದನೆ, ಧ್ಯಾನ, ಆತ್ಮ ನಿವೇದನೆ ಮೊದಲಾದ ನವವಿಧ ಭಕ್ತಿಯಿಂದ ನಾವು ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು. ಶಿವರಾತ್ರಿಯ ಪವಿತ್ರ ಸಂದರ್ಭದಲ್ಲಿ ಭಕ್ತಾದಿಗಳು ಪುಣ್ಯ ಸಂಚಯನಕ್ಕಾಗಿ ಧರ್ಮಸ್ಥಳಕ್ಕೆ […]

ಧರ್ಮಸ್ಥಳದಲ್ಲಿ ಎಂ. ವೀರಪ್ಪ ಮೊಯಿಲಿ ರಚಿಸಿದ ಬಾಹುಬಲಿ ಅಹಿಂಸಾ ದಿಗ್ವಿಜಯಂ ಗ್ರಂಥ ಬಿಡುಗಡೆ 

Friday, February 15th, 2019
veerappa-moily

ಧರ್ಮಸ್ಥಳ : ಜೈನಧರ್ಮದ ಬಾಹುಬಲಿ ಅಹಿಂಸಾ ದಿಗ್ವಿಜಯಂ ಗದ್ಯಾನುವಾದದ ಗ್ರಂಥ ಬರೆಯುವಾಗ ನನ್ನನ್ನು ನಾನು ಪರಿವರ್ತನೆ ಮಾಡಿಕೊಳ್ಳಲು ಸಾಧ್ಯವಾಯಿತು. ಗ್ರಂಥದ ಗದ್ಯಾನುಸಾರ ಮಾಡಲು ಪ್ರಾರಂಭಿಸಿದ ಮೇಲೆ ನನಗೆ ಕೋಪ ಬರುವುದಿಲ್ಲ. ಯಾರಲ್ಲಿಯೂ ಸಿಟ್ಟು ಮಾಡುವುದಿಲ್ಲ. ಯಾವಾಗಲೂ ಶಾಂತಿ, ನೆಮ್ಮದಿಯಿಂದ ಇದ್ದೇನೆ ಎಂದು ತನ್ನ ಸ್ವಾನುಭವವನ್ನು ವಿವರಿಸಿದವರು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ವೇಯಿಲಿ ಅವರು. ಸಂದರ್ಭ: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಗುರುವಾರ ಅಮೃತವರ್ಷಿಣಿಯಲ್ಲಿ ಅವರ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಧನ್ಯತೆಯಿಂದ ಅವರು ಮಾತನಾಡಿದರು. ಮೂರು […]

ಧರ್ಮಸ್ಥಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Sunday, February 10th, 2019
Masthakabhisheka Culture

ಧರ್ಮಸ್ಥಳ : ಲೋಕ ಕಲ್ಯಾಣ ಮತ್ತು ವಿಶ್ವಶಾಂತಿಗಾಗಿ ಸರ್ಕಾರ ಮಾಡಬೇಕಾದ ಕೆಲಸವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸದಾ ಸಮರ್ಪಕವಾಗಿ ಮಾಡುತ್ತಿರುವ ಪುಣ್ಯ ಪುರುಷ ಎಂದು ಸಚಿವೆ ಜಯಮಾಲಾ ಹೇಳಿದರು. ಧರ್ಮಸ್ಥಳದಲ್ಲಿ ಶನಿವಾರ ಮಹಾ ಮಸ್ತಕಾಭಿಷೇಕ ಸಂದರ್ಭದಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ರತ್ನಗಿರಿಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ನಟರಾಜನ ಮೂರ್ತಿಯನ್ನು ಮೂಡಬಿದ್ರೆಯ ಡಾ. ಎಂ. ಮೋಹನ ಆಳ್ವ ಅವರಿಗೆ ನೀಡುವ ಮೂಲಕ ಅವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಕಳದಿಂದ ಧರ್ಮಸ್ಥಳಕ್ಕೆ ಬಾಹುಬಲಿ ಮೂರ್ತಿ ಸಾಗಾಣಿಕೆ ಮಾಡುವ […]

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ- ಸಂತ ಸಮ್ಮೇಳನ

Saturday, February 9th, 2019
Jaina-Muni

ಧರ್ಮಸ್ಥಳ : ಸಕಲ ಪಾಪಕರ್ಮಗಳ ಕ್ಷಯ ಮಾಡಿ ಮೋಕ್ಷ ಪ್ರಾಪ್ತಿಯೇ ಸಕಲ ಜೀವಿಗಳ ಗುರಿಯಾಗಿದೆ. ಆತ್ಮ ವೈಭವವೇ ಶ್ರೇಷ್ಠ ವೈಭವ ಎಂದು ಆಚಾರ್ಯ ಶ್ರೀ 108 ವರ್ಧಮಾನ ಸಾಗರ ಮುನಿಮಹಾರಾಜರು ಹೇಳಿದರು. ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವ ಸಂದರ್ಭದಲ್ಲಿ ಶುಕ್ರವಾರ ಆಯೋಜಿಸಿದ ಸಂತ ಸಮ್ಮೇಳನದಲ್ಲಿ ಆಶೀರ್ವಚನ ನೀಡಿಅವರು ಮಾತನಾಡಿದರು. ಲೌಕಿಕ ಸುಖ-ಭೋಗಗಳಿಂದ ಶಾಂತಿ, ನೆಮ್ಮದಿ ಸಿಗುವುದಿಲ್ಲ. ಅಹಿಂಸೆ, ತ್ಯಾಗ, ಮೈತ್ರಿ, ಮತ್ತುಧ್ಯಾನದಿಂದ ಶಾಶ್ವತ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಬಾಹುಬಲಿಯಜೀವನದಿಂದ ನಮಗೆ ಉತ್ತಮ ಸಂದೇಶದೊರಕುತ್ತದೆ.ಆತ್ಮ ವೈಭವವೇ ಶ್ರೇಷ್ಠ […]

ಆಚಾರ್ಯ ಶ್ರೀ ಪುಷ್ಪದಂತ ಸಾಗರ ಮುನಿ ಮಹಾರಾಜರು ಮತ್ತು ಮುನಿಸಂಘ ಧರ್ಮಸ್ಥಳ ಪುರಪ್ರವೇಶ

Saturday, February 2nd, 2019
jaina muni

ಧರ್ಮಸ್ಥಳ  : ಆಚಾರ್ಯ ಶ್ರೀ ಪುಷ್ಪದಂತ ಸಾಗರ ಮುನಿ ಮಹಾರಾಜರು ಮುನಿ ಸಂಘದೊಂದಿಗೆ ಶನಿವಾರ ಧರ್ಮಸ್ಥಳ ಪುರಪ್ರವೇಶ ಮಾಡಿದಾಗ ಭವ್ಯ ಸ್ವಾಗತ ನೀಡಲಾಯಿತು. ಮೆರವಣಿಗೆಯಲ್ಲಿ ಪೂಜ್ಯ ಮುನಿ ವೃಂದದವರನ್ನುಕರೆದುಕೊಂಡು ಹೋಗಿ ಬೀಡಿನಲ್ಲಿ ಭಗವಾನ್ ಶ್ರೀ ಆದಿನಾಥ ಸ್ವಾಮಿ ಹಾಗೂ ಬಸದಿಯಲ್ಲಿ ಭಗವಾನ್‌ಚಂದ್ರನಾಥ ಸ್ವಾಮಿಯದರ್ಶನ ಮಾಡಿದ ಬಳಿಕ ಪೂಜ್ಯರು ಮಂಗಲ ಪ್ರವಚನ ನೀಡಿದರು. ಪೂಜ್ಯ ಶ್ರೀ ಪುಷ್ಪದಂತ ಸಾಗರ ಮುನಿ ಮಹಾರಾಜರು ಮಾತನಾಡಿ ನಾವು ನಿತ್ಯವೂ ಅಹಿಂಸಾ ಧರ್ಮದ ಪಾಲನೆ ಮಾಡಬೇಕು. ಸಾಮಾಯಿಕ, ಪ್ರತಿಕ್ರಮಣದ ಮೂಲಕ ಜೀವನ ಪಾವನ […]