Blog Archive

ಇಂದು ಮಹಿಳಾ ದಿನಾಚರಣೆಗೆ ಮೋದಿ ಜತೆ ಚಾಯ್ ಪೆ ಚರ್ಚಾ

Saturday, March 8th, 2014
Narendra-Modi

ಮಂಗಳೂರು: ವಿಶ್ವ ಮಹಿಳಾ ದಿನಾಚರಣೆ ಸಂದರ್ಭ ಮಾ.8ರಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಜತೆ 2ನೇ ಸುತ್ತಿನ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮ ಏರ್ಪಡಲಿದೆ. ಸಂಜೆ 4ರಿಂದ 6.30ರ ವರೆಗೆ ಏಕಕಾಲದಲ್ಲಿ ಚಹಾದೊಂದಿಗೆ ಚರ್ಚೆ ನಡೆಯಲಿದೆ. ರಾಜ್ಯದ 110 ಕೇಂದ್ರಗಳಲ್ಲಿ, ದೇಶಾದ್ಯಂತ ಒಟ್ಟು 1500 ಸ್ಥಳಗಳಲ್ಲಿ ಈ ಸಂವಾದ ನಡೆಯಲಿದೆ. ಶೇ.50 ಚರ್ಚೆ ಗ್ರಾಮೀಣ ಪ್ರದೇಶದಲ್ಲಿ ನಡೆಯುವುದು ಈ ಬಾರಿಯ ವಿಶೇಷ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಪುಲಸ್ತ್ಯ ರೈ ಗುರುವಾರ ಸುದ್ದಿಗೋಷ್ಠಿಯಲ್ಲಿ […]

ಗುಜರಾತ್ ಅಭಿವೃದ್ಧಿ ಬಗ್ಗೆ ಮೋದಿ ಹೇಳುತ್ತಿರುವುದೆಲ್ಲ ಸುಳ್ಳು: ಕೇಜ್ರಿವಾಲ್

Friday, March 7th, 2014
Arvind-Kejriwal

ಅಹಮದಾಬಾದ್: ಪದೇಪದೆ ಗುಜರಾತ್ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ ಎಂದು ಹೇಳಿಕೊಳ್ಳುತ್ತಿರುವ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಗುಜರಾತ್ ಅಭಿವೃದ್ಧಿಯಾಗಿದೆ ಎಂದು ಮೋದಿ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ವಾಸ್ಥವದಲ್ಲಿ ಗುಜರಾತ್‌ನಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಅವರು ಹೇಳುತ್ತಿರುವುದೆಲ್ಲ ಸುಳ್ಳು ಎಂದು ಹೇಳಿರುವ ಆಮ್ ಆದ್ಮಿ ಪಕ್ಷದ ನಾಯಕ, ಗುಜರಾತ್ ಅಭಿವೃದ್ಧಿಗೆ ಸಂಬಂಧಿಸಿದ 16 ಪ್ರಶ್ನೆಗಳ ಪಟ್ಟಿಯೊಂದಿಗೆ ಗುಜರಾತ್ ಮುಖ್ಯಮಂತ್ರಿಯ ನಿವಾಸಕ್ಕೆ ಭೇಟಿ […]

ನಾಳೆ ಮಹಿಳಾ ದಿನಾಚರಣೆಗೆ ಮೋದಿ ಜತೆ ‘ಚಾಯ್ ಪೆ ಚರ್ಚಾ’

Friday, March 7th, 2014
Narendra-Modi

ಮಂಗಳೂರು: ವಿಶ್ವ ಮಹಿಳಾ ದಿನಾಚರಣೆಯಂಗವಾಗಿ ಮಾ.8 ರಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಜತೆ 2ನೇ ಸುತ್ತಿನ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಜೆ 4ರಿಂದ 6.30ರ ವರೆಗೆ ಏಕಕಾಲದಲ್ಲಿ ಚಹಾದೊಂದಿಗೆ ಚರ್ಚೆ ನಡೆಯಲಿದೆ. ರಾಜ್ಯದ 110 ಕೇಂದ್ರಗಳಲ್ಲಿ, ದೇಶಾದ್ಯಂತ ಒಟ್ಟು 1500 ಸ್ಥಳಗಳಲ್ಲಿ ಈ ಸಂವಾದ ನಡೆಯಲಿದೆ. ಶೇ.50 ಚರ್ಚೆ ಗ್ರಾಮೀಣ ಪ್ರದೇಶದಲ್ಲಿ ನಡೆಯುವುದು ಈ ಬಾರಿಯ ವಿಶೇಷ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಪುಲಸ್ತ್ಯ ರೈ ಗುರುವಾರ ಸುದ್ದಿಗೋಷ್ಠಿಯಲ್ಲಿ […]

ಲೋಕ ಸಮೀಕ್ಷೆಯಲ್ಲಿ ಮೋದಿ ಮುಂದು ರಾಗಾ ಹಿಂದೆ, ಎನ್‌ಡಿಎನತ್ತ ಮತದಾರ, ಯುಪಿಎ ಕಥೆ ಹರೋಹರ

Friday, March 7th, 2014
Narendra-Modi

ನವದೆಹಲಿ: ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದ ರುಚಿ ಅನುಭವಿಸುತ್ತಿರುವ ಕಾಂಗ್ರೆಸ್ ಈ ಬಾರಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅಬ್ಬರಕ್ಕೆ ಧೂಳೀಪಟವಾಗಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಗದ್ದುಗೆಯ ಸನಿಹ ಬಂದು ನಿಲ್ಲಲಿದೆ. ಎನ್‌ಡಿಎ 212- 232 ಸ್ಥಾನಗಳನ್ನು ಗೆದ್ದರೆ, ಯುಪಿಎ 119ರಿಂದ 139 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಸಿಎನ್‌ಎನ್‌ಐಬಿನ್- ಲೋಕನೀತಿ- ಸಿಎಸ್‌ಡಿಎಸ್ ಚುನಾವಣಾ ಪೂರ್ವ ಸಮೀಕ್ಷೆ ಭವಿಷ್ಯ ನುಡಿದಿದೆ. ಬಿಜೆಪಿ ಅತಿದೊಡ್ಡ ಪಕ್ಷ: ಒಂದು ವೇಳೆ ತಕ್ಷಣಕ್ಕೆ ಚುನಾವಣೆ ನಡೆದರೆ ಬಿಜೆಪಿ […]

ಪ್ರಧಾನಿ ಹುದ್ದೆಗೆ ನಾನೇ ಸಮರ್ಥ: ನಿತೀಶ್ ಕುಮಾರ್

Thursday, March 6th, 2014
Nitish-kumar

ನವದೆಹಲಿ: ಇನ್ನಿತರ ಪ್ರಧಾನಿ ಆಕಾಂಕ್ಷಿಗಳಿಗಿಂತ ನಾನೇ ಆ ಹುದ್ದೆಗೆ ಹೆಚ್ಚು ಸಮರ್ಥ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಪ್ರಧಾನಿ ಹುದ್ದೆಯನ್ನಲಂಕರಿಸಲು ತಾನು ಯೋಗ್ಯ ಹೇಗೆ ಎಂಬುದನ್ನು ವಿವರಿಸಿದ ನಿತೀಶ್, ಪ್ರಧಾನಿ ಹುದ್ದೆಯ ಆಕಾಂಕ್ಷಿಗಳಿಗಿಂತ ನನಗೆ ಹೆಚ್ಚಿನ ಅರ್ಹತೆಯಿದೆ ಎಂದು ಹೇಳಿದ್ದಾರೆ. ಬಿಹಾರಕ್ಕೆ ವಿಶೇಷ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿ ಕೈಗೊಂಡಿರುವ ಸಂಕಲ್ಪಯಾತ್ರೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅಥವಾ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಬ್ಬರಲ್ಲಿ ಯಾರ ಹೆಸರನ್ನೂ ಉಲ್ಲೇಖಿಸದೇ ಮಾತನಾಡಿದ ನಿತೀಶ್, ಒಬ್ಬರಿಗೆ ಸಂಸತ್‌ನ […]

ಅರವಿಂದ ಕೇಜ್ರಿವಾಲ್ ಬಂಧನ

Thursday, March 6th, 2014
Arvind-kejriwa

ಹಮದಾಬಾದ್: ಬುಧವಾರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಉತ್ತರ ಗುಜರಾತ್‌ನಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಆಪ್ ನಾಯಕ ಅರವಿಂದ ಕೇಜ್ರಿವಾಲ್‌ರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಈ ಘಟನೆ ದೆಹಲಿ ಹಾಗೂ ಲಖನೌನಲ್ಲಿ ನಾಟಕೀಯ ಬೆಳವಣಿಗೆಗಳಿಗೆ ಕಾರಣವಾಯಿತು. ಕೇಜ್ರಿ ವಶಕ್ಕೆ ತೆಗೆದುಕೊಂಡ ಸುದ್ದಿ ತಿಳಿಯುತ್ತಿದ್ದಂತೆಯೇ ಆಪ್ ಕಾರ್ಯಕರ್ತರು ನವದೆಹಲಿಯಲ್ಲಿನ ಬಿಜೆಪಿ ಪ್ರಧಾನ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಆಪ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು. ಇದಲ್ಲದೇ ಗುಜರಾತ್‌ನ ಹಲವೆಡೆಯೂ ಬಿಜೆಪಿ-ಆಪ್ […]

ಗುಜರಾತ್‌ನಲ್ಲಿನ ರಾಮರಾಜ್ಯವನ್ನು ನೋಡಲು ಬಂದಿದ್ದೇನೆ: ಕೇಜ್ರಿವಾಲ್

Wednesday, March 5th, 2014
Arvind-Kejriwal

ಅಹ್ಮದಾಬಾದ್: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸುವುದಾಗಿ ಸುದ್ದಿ ಕೇಳಿಬರುತ್ತಿದ್ದಂತೆ, ಕೇಜ್ರಿವಾಲ್ ಇಂದಿನಿಂದ ಗುಜರಾತ್‌ನಲ್ಲಿ 4 ದಿನಗಳ ಪ್ರವಾಸ ಆರಂಭಿಸಿದ್ದಾರೆ. ಪ್ರಧಾನಿ ಅಭ್ಯರ್ಥಿಯಾಗಿರುವ ನರೇಂದ್ರ ಮೋದಿಯವರು ಗುಜರಾತ್‌ನಲ್ಲಿ ಏನೆಲ್ಲಾ ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸುವುದಕ್ಕಾಗಿಯೇ ತಾನು ಗುಜರಾತ್ ಪ್ರವಾಸ ಕೈಗೊಡಿರುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ. ಗುಜರಾತ್ ಸರ್ಕಾರ ಮತ್ತು ಮಾಧ್ಯಮಗಳು ಗುಜರಾತ್‌ನಲ್ಲಿ ರಾಮರಾಜ್ಯ ನಿರ್ಮಾಣವಾಗಿದೆ ಎಂದು ಹೇಳುತ್ತಿದ್ದಾರೆ. ಅವರು ಹೇಳುವಂತೆ ಇಲ್ಲಿ ವಿದ್ಯಾಭ್ಯಾಸದಲ್ಲಿ ಪ್ರಗತಿಯಾಗಿದೆ, ಆರೋಗ್ಯ ಸಮಸ್ಯೆಗಳು ನಿರ್ಮೂಲನೆಯಾಗಿವೆ, ಭ್ರಷ್ಟಾಚಾರ ಇಲ್ಲಿಲ್ಲ…ಆದ್ದರಿಂದ […]

ಎಫ್‌ಡಿಐ, ಜಿಎಸ್‌ಟಿ ಇರಲಿ ಮಾರಕ ಕಾನೂನು ತೊಲಗಲಿ

Friday, February 28th, 2014
Narendra-Modi

ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಪಕ್ಷದ ಆರ್ಥಿಕ ನೀತಿಯನ್ನು ಬಹಿರಂಗಪಡಿಸಿದ್ದಾರೆ. ವಿದೇಶಿ ನೇರ ಬಂಡವಾಳ ಹೂಡಿಕೆ ಮತ್ತು ಸರಕು ಹಾಗೂ ಸೇವೆಗಳ ತೆರಿಗೆ(ಜಿಎಸ್‌ಟಿ) ಪಕ್ಷದ ವಿರೋಧವಿಲ್ಲ ಎಂದಿದ್ದಾರೆ. ಜಿಎಸ್‌ಟಿ ಜಾರಿಗೆ ಸಂಬಂಧಿಸಿ ನಮ್ಮ ಅಭ್ಯಂತರವೇನೂ ಇಲ್ಲ. ಆದರೆ, ಇದರ ಅನುಷ್ಠಾನಕ್ಕೆ ಬೇಕಾದ ಪೂರ್ವ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಜಿಎಸ್‌ಟಿ ಜಾರಿಗೂ ಮುನ್ನ ಮಾಹಿತಿ ತಂತ್ರಜ್ಞಾನ ಎಲ್ಲೆಡೆ ಲಭ್ಯವಾಗಬೇಕಿದೆ. ಜತೆಗೆ, ರಾಜ್ಯ ಸರ್ಕಾರಗಳಿಗೆ ಹಣಕಾಸಿಗೆ ಸಂಬಂಧಿಸಿ ಒಂದಷ್ಟು ಕಳವಳಗಳಿವೆ. […]

ಮೋದಿ ಬಗ್ಗೆ ಖುರ್ಷಿದ್ ಹೇಳಿಕೆಗೆ ರಾಹುಲ್ ಅಸಮಾಧಾನ

Thursday, February 27th, 2014
Rahul-Gandhi

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಸಲ್ಮಾನ್ ಖುರ್ಷಿದ್ ನೀಡಿದ್ದ ‘ನಪುಂಸಕ’ ಹೇಳಿಕೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಬಳಿಕ ಖುರ್ಷಿದ್ ಹೇಳಿಕೆ ಬಗ್ಗೆ ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿರುವ ರಾಹುಲ್, ‘ಇಂತಹ ಭಾಷೆ ಬಳಸುವುದನ್ನು ನಾನು ಒಪ್ಪಿಕೊಳ್ಳುವುದಿಲ್ಲ’ ಎಂದಿದ್ದಾರೆ. 2002ರ ಗುಜರಾತ್ ಗಲಭೆ ನಿಯಂತ್ರಿಸಲು ಸಾಧ್ಯವಾಗದ ಮೋದಿ ಒಬ್ಬ ‘ನಪುಂಸಕ’ ಎಂದು ಸಲ್ಮಾನ್ ಖರ್ಷಿದ್ ಹೇಳಿದ್ದರು. ಈ […]

Brand ಮೋದಿ ಹಿಂದೆ 5 ಮಹಿಳೆಯರು

Monday, February 24th, 2014
Narendra-Modi

ಬೆಂಗಳೂರುಃ ರಾಜಕೀಯ ನನಗೆ ಒಂಚೂರೂ ಗೊತ್ತಿಲ್ಲ ಎಂದು ಹೇಳುವವರಿಗೂ ಇಂದು ನರೇಂದ್ರ ಮೋದಿ ಹೆಸರು ಗೊತ್ತು. ದೇಶದ ಯಾವುದೇ ರಾಜಕಾರಣಿಗಿಂತ ಮೋದಿ ಇಂದು ಪ್ರಸಿದ್ಧ. ಅವರನ್ನು ದ್ವೇಷಿಸುವವರು ಕೋಟ್ಯಂತರ ಮಂದಿ ಇರಬಹುದು, ಆದರೆ ಅವರ ಬಗ್ಗೆ ಸದಾ ಒಂದಲ್ಲಾ ಒಂದು ವೇದಿಕೆಯಲ್ಲಿ ಚರ್ಚೆಯಂತೂ ನಡೆಯುತ್ತಿರುತ್ತದೆ. ಮೋದಿಗೆ ಬೇಕಿರುವುದೂ ಇದೇ. ರಾಹುಲ್ ಗಾಂಧಿಯೂ ಸೇರಿದಂತೆ ದೇಶದ ಯಾವುದೇ ರಾಜಕಾರಣಿಗೆ ಈ ಭಾಗ್ಯವಿಲ್ಲ. ಹಾಗಾದರೆ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಬಳಿ ಪ್ರಚಾರದಮಂತ್ರದಂಡವಿದೆಯೇ? ಇಲ್ಲ. ಅವರಿಗೆ ಪ್ರಚಾರ ನೀಡುತ್ತಿದ್ದೇವೆ ಎಂಬುದು […]