Blog Archive

ಕಾಂಗ್ರೆಸ್‌ ಅನ್ನು ಕರ್ನಾಟಕದ ಜನತೆ ತಿರಸ್ಕರಿಸುವುದು ನಿಶ್ಚಿತ : ನರೇಂದ್ರ ಮೋದಿ

Sunday, May 6th, 2018
modi mangaluru

ಮಂಗಳೂರು : ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ದೋಷಿಗಳಿಗೆ ಮರಣ ದಂಡನೆ ವಿಧಿಸುವ ಸುಗ್ರೀವಾಜ್ಞೆಗೆ ನಾವು ಅನುಮೋದನೆ ನೀಡಿದ್ದೇವೆ. ನಮ್ಮ ಸರ್ಕಾರ ಬಡವರು ಮತ್ತು ನಿರ್ಲಕ್ಷಿತರ ಸೇವೆಗೆ ಸಮರ್ಪಿತವಾಗಿದೆ. ಅವರ ಬ್ಯಾಂಕ್‌ ಖಾತೆಗಳನ್ನು ತೆರೆಯುವ ಮೂಲಕ ಅವರನ್ನು ಸಬಲೀಕರಣಗೊಳಿಸುವಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶನಿವಾರ  ಮಂಗಳೂರಿನ ನೆಹರೂ ಮೈದಾನಿನಲ್ಲಿ  ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನೋಟು ಅಮಾನ್ಯೀಕರಣದ ಆಘಾತದಿಂದ ಕಾಂಗ್ರೆಸ್‌ ಇನ್ನೂ ಹೊರ ಬಂದಿಲ್ಲ. ಕಾಂಗ್ರೆಸ್‌ ಸುಳ್ಳನ್ನೇ ಹಬ್ಬಿಸುತ್ತದೆ. ಯಾರಾದರೂ ಸತ್ಯ […]

ಮಂಗಳೂರಿನಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸುವ ನಮೋ ಪಕ್ಷ ಕಾರ್ಯಕರ್ತರಲ್ಲಿ ಹೊಸ ಹುರುಪು

Saturday, May 5th, 2018
narendra-modi

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಮೇ 1ರಂದು ಉಡುಪಿಗೆ ಆಗಮಿಸಿದ್ದ ಮೋದಿ ಕಮಲ ಪಾಳಯದಲ್ಲಿ ಸಂಚಲನ ಉಂಟು ಮಾಡಿದ್ದರು. ಇದೀಗ ಮಂಗಳೂರಿನಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸುವ ನಮೋ ಪಕ್ಷ ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಲಿದ್ದಾರೆ. ಮಂಗಳೂರಿನ ಕೇಂದ್ರ(ನೆಹರೂ) ಮೈದಾನದಲ್ಲಿ ಸಂಜೆ ಆರು ಗಂಟೆಗೆ ಮೋದಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಕರಾವಳಿಯಲ್ಲಿ ಇದು ಅವರ ಏಕೈಕ ಕಾರ್ಯಕ್ರಮವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯ ಸ್ವಾಗತಕ್ಕೆ ಬಿಜೆಪಿ ವತಿಯಿಂದ ಭರ್ಜರಿ ತಯಾರಿಯನ್ನು ಮಾಡಲಾಗಿದೆ. ಈಗಾಗಲೇ […]

ಬಿಜೆಪಿ ಪರ ಪ್ರಚಾರ, ಶನಿವಾರ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ..!

Friday, May 4th, 2018
narendra-modi

ಮಂಗಳೂರು: ಬಿಜೆಪಿ ಪರ ಪ್ರಚಾರ ಕೈಗೊಳ್ಳಲು ಶನಿವಾರ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಮಂಗಳೂರಿನ ನೆಹರೂ ಮೈದಾನಕ್ಕೆ ಆಗಮಿಸಿ ವಾಪಸ್ ವಿಮಾನ ನಿಲ್ದಾಣಕ್ಕೆ ಸಂಚರಿಸುವ ಸಮಯದಲ್ಲಿ ವಿವಿಐಪಿ ಭದ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಸಂಚಾರ ವ್ಯವಸ್ಥೆಯನ್ನು ಬದಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ […]

ಚೀಟಿ ಇಲ್ಲದೇ 15 ನಿಮಿಷ ಮಾತನಾಡುವ ಚಾಲೆಂಜ್‌‌ ಸ್ವೀಕರಿಸಿ: ರಾಹುಲ್‌ಗೆ ಉಮರ್‌ ಅಬ್ದುಲ್ಲಾ ಸಲಹೆ

Wednesday, May 2nd, 2018
rahul-gandhi

ಶ್ರೀನಗರ: ರಾಹುಲ್ ಗಾಂಧಿ ಚೀಟಿ ಇಲ್ಲದೇ ಕರ್ನಾಟಕ ಸರ್ಕಾರದ ಸಾಧನೆಯನ್ನು 15 ನಿಮಿಷ ಭಾಷಣ ಮಾಡಲಿಕ್ಕೆ ಆಗುತ್ತಾ? ವಿಶ್ವೇಶ್ವರಯ್ಯ ಹೆಸರನ್ನು 5 ಬಾರಿ ಸ್ಪಷ್ಟವಾಗಿ ಹೇಳಲು ಸಾಧ್ಯವೇ ಎಂದು ಮೋದಿ ಹಾಕಿರುವ ಬಹಿರಂಗ ಸವಾಲು ಸ್ವೀಕರಿಸಿ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್‌ ಅಬ್ದುಲ್ಲಾ ರಾಹುಲ್‌ ಗಾಂಧಿಗೆ ಸಲಹೆ ನೀಡಿದ್ದಾರೆ. ಕೈಯಲ್ಲಿ ಚೀಟಿ ಹಿಡಿದುಕೊಳ್ಳದೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಮಾಡಿರುವ ಸಾಧನೆಯ ಬಗ್ಗೆ ನಿಮಗೆ ತಿಳಿದಿರುವ ಹಿಂದಿ, ಇಂಗ್ಲಿಷ್‌ ಅಥವಾ ಯಾವುದೇ ಭಾಷೆಯಲ್ಲಿ ಹದಿನೈದು ನಿಮಿಷಗಳ ಮಾತನಾಡಿ […]

ಮಂಗಳೂರಿನಲ್ಲಿ ಮೇ 5ರಂದು ಮೋದಿ ಪ್ರಚಾರ

Wednesday, May 2nd, 2018
mangaluru

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮೇ 5 ರಂದು ಸಂಜೆ 5.30ಕ್ಕೆ ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು. ಆರಂಭದಲ್ಲಿ ಮೇ 8 ರಂದು ನರೇಂದ್ರ ಮೋದಿ ಮಂಗಳೂರಿಗೆ ಬರುವ ಬಗ್ಗೆ ಮಾಹಿತಿ ಇತ್ತು. […]

ಬಿಜೆಪಿ ಯುವ ಜನತೆಯ ಭವಿಷ್ಯ ರೂಪಿಸಲು ಪಣ ತೊಟ್ಟಿದೆ : ನರೇಂದ್ರ ಮೋದಿ

Tuesday, May 1st, 2018
modi Udupi

ಉಡುಪಿ : ದಕ್ಷಿಣ ಕನ್ನಡ , ಉಡುಪಿ ದೇವಭೂಮಿ ಎಂದು ಖ್ಯಾತಿಯಾಗಿದ್ದು, ಜನಸಂಘಕ್ಕಾಗಿ ಉಡುಪಿಯ ಕೊಡುಗೆ ಅಪಾರವಾಗಿದೆ. ಟಿಎಂಪಿ ಪೈ ಹಾಜೇ ಸಾಹೇಬ್ ಎ. ಬಿ, ಶೆಟ್ಟಿ ಅವರು ಈ ನೆಲದ ಕೊಡುಗೆಗಳಾಗಿದ್ದಾರೆ. ಇಲ್ಲಿನ ಮಗ ಗುರುರಾಜ್ ವೇಟ್ ಲಿಪ್ಟಿಂಗ್ ಲ್ಲಿ ಪದಕ ತಂದಿರುವುದು ಹೆಮ್ಮೆಯ ಸಂಗತಿ ಎಂದು ನರೇಂದ್ರ ಮೋದಿ ಹೇಳಿದರು , ಉಡುಪಿಯ ಎಂಜಿಎಂ ಕ್ರೀಡಾಂಗಣದಲ್ಲಿ ಮಂಗಳವಾರ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತುಳು ಭಾಷೆಯಲ್ಲಿ ಮಾತು ಪ್ರಾರಂಭಿಸಿ, ಮೊದಲಿಗೆ ನೆನೆದದ್ದು ಶ್ರೀಕೃಷ್ಣನನ್ನು, ಅದರ […]

ಮತದಾನಕ್ಕೆ ಕೆಲವೇ ದಿನ ಮೊದಲು ಮಂಗಳೂರಿನಲ್ಲಿ ಮೋದಿ ಅಬ್ಬರದ ಪ್ರಚಾರ

Wednesday, April 18th, 2018
narendra-modi

ಮಂಗಳೂರು: ರಾಜ್ಯದಲ್ಲಿ ಚುನಾವಣಾ ಕಣ ರಂಗೇರತೊಡಗಿದೆ .ಈಗಾಗಲೇ ರಾಜಕೀಯ ಪಕ್ಷಗಳು ತಮ್ಮ ಕದನ ಕಲಿಗಳನ್ನು ಅಖಾಡಕ್ಕೆ ಇಳಿಸಿವೆ.ರಾಜ್ಯದಾದ್ಯಂತ ಚುನಾವಣಾ ಪ್ರಚಾರ ಭರದಿಂದ ಸಾಗಿದ್ದು ಮುಂಬರುವ ದಿನಗಳಲ್ಲಿ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಕಲರವ ಮುಗಿಲು ಮುಟ್ಟಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆಗೂ ಮೊದಲೇ ಜನಾಶೀರ್ವಾದ ಯಾತ್ರೆ ಹೆಸರಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಚುನಾವಣಾ ಪ್ರಚಾರ ನಡೆಸಿ ತೆರಳಿದ್ದಾರೆ. ಅಂತೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದೆಲ್ಲೆಡೆ ಪ್ರವಾಸ ಕೈಗೊಂಡು ಚುನಾವಣಾ ಪ್ರಚಾರ […]

ರಾಜ್ಯದಿಂದ ಲೆಕ್ಕ ಕೇಳಲು ನರೇಂದ್ರ ಮೋದಿ ಚಕ್ರವರ್ತಿಯಲ್ಲ: ರಮಾನಾಥ ರೈ

Monday, March 26th, 2018
ramanath-rai

ಮಂಗಳೂರು: ರಾಜ್ಯ ಸರಕಾರದಿಂದ ಲೆಕ್ಕ ಕೇಳಲು ನರೇಂದ್ರ ಮೋದಿ ಚಕ್ರವರ್ತಿಯಲ್ಲ. ಲೆಕ್ಕ ಕೊಡೋಕೆ ನಾವೇನು ಸಾಮಂತ ರಾಜರುಗಳಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಂಗಳೂರಿನಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಲೆಕ್ಕ ಕೊಡುವ ಪದ್ಧತಿ ಇಲ್ಲ ಎಂದು ತಿಳಿಸಿದರು. ರೈ ಚಕ್ರವರ್ತಿಗೆ ಸಾಮಂತರಸರು ಮಾತ್ರ ಲೆಕ್ಕ ಕೊಡಬೇಕಷ್ಟೆ. ಪ್ರಧಾನಿ ನರೇಂದ್ರ ಮೋದಿ ದೇಶದ ಚಕ್ರವರ್ತಿಯಂತೆ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಮಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜನಾಶೀರ್ವಾದ […]

ಟ್ಟಿಟ್ಟರ್‌ನಲ್ಲಿ ಸ್ವತಃ ಮೋದಿ ಅವರೇ ಫಾಲೋ ಮಾಡುತ್ತಿರುವ ಯುವಕ ಅರೆಸ್ಟ್‌!

Thursday, March 15th, 2018
narendra-modi

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಬಗ್ಗೆ ಫೇಸ್‌ಬುಕ್‌‌ನಲ್ಲಿ ಪೋಸ್ಟ್‌ ಮಾಡಿದ ಯುವಕನೋರ್ವನನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಅನುಪಮ್‌ ಪಾಂಡೆ ಎಂಬಾತನೇ ಬಂಧಿತ ಯುವಕ. ಸಂಸದೀಯ ಕ್ಷೇತ್ರ ವಾರಣಾಸಿಗೆ ತೆರಳಿದಾಗ ಪ್ರಧಾನಿ ಮೋದಿ ಅವರ ‘minute-to-minute programme’ ಬಗ್ಗೆ ಅನುಪಮ್‌ ಪಾಂಡೆ ಫೇಸ್‌ಬುಕ್‌‌ನಲ್ಲಿ ಪೋಸ್ಟ್‌ ಮಾಡಿದ್ದ ಎನ್ನಲಾಗಿದೆ. ಇದನ್ನು ಖಂಡಿಸಿ ಪ್ರಧಾನಿ ಮೋದಿ ಅವರಿಗೆ ಭದ್ರತೆ ಒದಗಿಸುವ ಎಸ್‌‌ಪಿಜಿ (Special Protection Group) ಉತ್ತರ ಪ್ರದೇಶ ಸರ್ಕಾರಕ್ಕೆ ದೂರು ನೀಡಿತ್ತು. ಎಸ್‌‌ಪಿಜಿಯ ದೂರಿನ ಮೇರೆಗೆ […]

ಸುರಕ್ಷಾ ಯಾತ್ರೆ ಬಳಿಕ ಟಿಕೆಟ್‌ ಆಕಾಂಕ್ಷಿಗಳ ಮನವೊಲಿಕೆ

Saturday, March 3rd, 2018
bjp-rally

ಮಂಗಳೂರು: ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಪ್ರತಿಯೊಂದು ಕ್ಷೇತ್ರದಲ್ಲೂ ನಮ್ಮ ಪಕ್ಷದ ಬಹಳಷ್ಟು ಟಿಕೆಟ್‌ ಆಕಾಂಕ್ಷಿಗಳಿರುವ ಕಾರಣ “ಸುರಕ್ಷಾ ಯಾತ್ರೆ’ ಮುಗಿದ ಕೂಡಲೇ ಎಲ್ಲ ಆಕಾಂಕ್ಷಿಗಳನ್ನು ಕರೆದು ಮನವೊಲಿಸುವ ಕಾರ್ಯ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ನಿರೀಕ್ಷೆಯಿರುವ ಕಾರಣ ಪಕ್ಷದೊಳಗೆ ಈಗ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್‌ ಆಕಾಂಕ್ಷಿಗಳಿರುವುದು ಸಹಜ. ಇದನ್ನು ನಾವು ಸ್ವಾಗತಿಸುತ್ತೇವೆ. ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಒಬ್ಬರನ್ನಷ್ಟೇ ಅಧಿಕೃತ ಅಭ್ಯರ್ಥಿಯನ್ನಾಗಿ […]