Blog Archive

ನಮ್ಮ ಲೆಕ್ಕ ಕೇಳಲು ಅಮಿತ್‌ ಶಾ ಯಾರು? ಸಿಎಂ ಕಿಡಿ

Thursday, January 11th, 2018
siddaramaih

ಮೈಸೂರು: ಕೇಂದ್ರ ಸರಕಾರ ನೀಡಿದ ಅನುದಾನವನ್ನು ರಾಜ್ಯ ಸರ್ಕಾರ ಭ್ರಷ್ಟಾಚಾರಕ್ಕೆ ಬಳಸಿಕೊಂಡಿದೆ ಎಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಿರುಗೇಟು ನೀಡಿದ್ದು ‘ನಮ್ಮ ಲೆಕ್ಕ ಕೇಳಲು ಶಾ ಯಾರು’ ಎಂದು ಪ್ರಶ್ನಿಸಿದ್ದಾರೆ. ಎಚ್‌ಡಿ ಕೋಟೆಯ ಸರಗೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಕೇಂದ್ರ ಸರಕಾರ ಕಾನೂನಾತ್ಮಕವಾಗಿ ನಮಗೆ ನೀಡಬೇಕಾಗಿದ್ದ ನಮ್ಮ ತೆರಿಗೆ ಪಾಲನ್ನು ಕೊಟ್ಟಿದ್ದಾರೆ. ನಾವು ಖರ್ಚು ಮಾಡಿದ ಲೆಕ್ಕವನ್ನು ರಾಜ್ಯದಜನರಿಗೆ ನೀಡಬೇಕೆ ಹೊರತು ಶಾಗೆ ಅಲ್ಲ. ಅದನ್ನು ಕೇಳಲು ಅವರು ಯಾರು’ ಎಂದರು. […]

ರಸ್ತೆ ಸ್ವಚ್ಛತೆ ಮಾಡುತ್ತಿರುವ ಮಂಗಳೂರಿನ ಈ ತಾಯಿ ಈಗ ದೇಶವಿಖ್ಯಾತ

Wednesday, December 27th, 2017
swach-bharat

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಸ್ವಚ್ಛ ಭಾರತ್ ಅಭಿಯಾನಕ್ಕೆ ದೇಶದೆಲ್ಲೆಡೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಈ ಸ್ವಚ್ಛ ಭಾರತ್ ಅಭಿಯಾನದಡಿ ದೇಶದ ಹಲವು ನಗರಗಳಲ್ಲಿ ಪ್ರತಿವಾರ ಜನರು ತಮ್ಮನ್ನು ತೊಡಗಿಸಿಕೊಂಡು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಸ್ವಚ್ಛ ಭಾರತ ಅಭಿಯಾನಕ್ಕೆ ಒಂದೆಡೆ ದೇಶವೇ ಸಾಥ್ ನೀಡುತ್ತಿದ್ದರೆ ಇನ್ನೊಂದೆಡೆ ವಿವಿಧ ಸಂಘ ಸಂಸ್ಥೆಗಳು ಸ್ವಚ್ಛತಾ ಅಭಿಯಾನ ನಡೆಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ . ಮಂಗಳೂರಿನಲ್ಲಿ ಪ್ರತಿ ವಾರ ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ […]

ಮಂಗಳೂರಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ… ಅಭಿಮಾನಿಗಳ ಕಂಡು ಗೆಲುವಿನ ನಗೆ ಬೀರಿದ ಪ್ರಧಾನಿ

Tuesday, December 19th, 2017
narendra-modi

ಮಂಗಳೂರು: ಓಖಿ ಚಂಡಮಾರುತದಿಂದ ಹಾನಿಗೊಳಗಾದ ಲಕ್ಷದ್ವೀಪದ ಪ್ರದೇಶಗಳನ್ನು ಪರಿಶೀಲಿಸುವ ಸಲುವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕೇಂದ್ರ ವಿಮಾನಯಾನ ರಾಜ್ಯ ಸಚಿವ ಪಿ. ರಾಧಾಕೃಷ್ಣನ್, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಶಾಸಕ ಎಸ್. ಅಂಗಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಮೋದಿ ಅವರನ್ನು ಸ್ವಾಗತಿಸಿದರು. ಬಂಟ್ವಾಳ ಚಿಲಿಪಿಲಿ ತಂಡದಿಂದ ಚೆಂಡೆ, ಕೊಂಬು, […]

ಸೋಮವಾರ ರಾತ್ರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿನಲ್ಲಿ ವಾಸ್ತವ್ಯ

Monday, December 18th, 2017
modi

ಮಂಗಳೂರು: ಓಖಿ ಚಂಡಮಾರುತದಲ್ಲಿ ಸಂತ್ರಸ್ತರಾದವರು ಹಾಗೂ ಹಾನಿಗೊಳಗಾದ ಪ್ರದೇಶ ವೀಕ್ಷಿಸಲಿರುವ  ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಮಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಇಲ್ಲಿಯೇ ತಂಗಲಿದ್ದಾರೆ ಎನ್ನಲಾಗಿದೆ. ಲಕ್ಷದ್ವೀಪಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ರಾತ್ರಿ 11.30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣ ತಲುಪಲಿರುವ ಅವರು, ನಗರದ ಸರ್ಕ್ಯೂಟ್‌‌‌ ಹೌಸ್‌‌‌ನಲ್ಲಿ ತಂಗುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ವಾಸ್ತವ್ಯ ಹೂಡುವ ದೇಶದ ಮೊದಲ ಪ್ರಧಾನಿ ನರೇಂದ್ರ ಮೋದಿಯವರಾಗಲಿದ್ದಾರೆ. ಡಿ. 19ರಂದು (ಮಂಗಳವಾರ) ಬೆಳಿಗ್ಗೆ 7.30ಕ್ಕೆ ಮಂಗಳೂರಿನಿಂದ ಸೇನಾ ಹೆಲಿಕಾಪ್ಟರ್‌‌ನಲ್ಲಿ […]

ಗುಜರಾತ್‌ ಚುನಾವಣೆ: ತಮ್ಮ ಹಕ್ಕು ಚಲಾಯಿಸಿದ ತಾಯಿ-ಮಗ

Thursday, December 14th, 2017
narendra-modi

ಅಹಮದಾಬಾದ್: ಗುಜರಾತ್‌ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತವರ ತಾಯಿ ಹೀರಾಬೆನ್‌ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಸೇರಿದಂತೆ ಹಲವು ಗಣ್ಯರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಜರಾತ್‌ ವಿಧಾನಸಭಾ 182 ಸದಸ್ಯ ಬಲವನ್ನು ಹೊಂದಿದೆ. ಮೊದಲ ಹಂತದ ಚುನಾವಣೆ ಡಿ.9 ರಂದು ಮುಗಿದಿದ್ದು, ಇಂದು 2ನೇ ಹಾಗೂ ಕೊನೆಯ ಹಂತದ ಮತದಾನ ನಡೆಯುತ್ತಿದೆ. 2ನೇ ಹಂತದಲ್ಲಿ ರಾಜಧಾನಿ ಅಹಮದಾಬಾದ್ ಸೇರಿ ಒಟ್ಟು 14 ಜಿಲ್ಲೆಗಳ 93 ಕ್ಷೇತ್ರಗಳಲ್ಲಿದ್ದು, 2.22 […]

ರಾಘವೇಂದ್ರ ರಾವ್‌ ಅವರಿಗೆ ಸಮ್ಮಾನ

Thursday, December 14th, 2017
raghavendra

ಮಂಗಳೂರು : ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಂದ ಕಾಂಗ್ರೆಸ್‌ ಮುಕ್ತ ಭಾರತವನ್ನು ಮಾಡಲು ಸಾಧ್ಯ ವಿಲ್ಲ. ನಾವು ನಿಮ್ಮೊಂದಿಗಿದ್ದೇವೆ ಎಂಬುದನ್ನು ಮತದಾರರು ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ತೋರಿಸಿದ್ದಾರೆ. ಬಲಿಷ್ಠ ಕಾರ್ಯಕರ್ತರ ಪಕ್ಷ ನಮ್ಮದಾಗಿದೆ ಎಂದು ಶಾಸಕ ಮೊಯಿದಿನ್‌ ಬಾವಾ ಹೇಳಿದರು. ಜಿಲ್ಲಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎಪಿಎಂಪಿಸಿಯ ಮಾಜಿ ಸದಸ್ಯ ವೈ.ರಾಘವೇಂದ್ರ ರಾವ್‌ ಅವರನ್ನು ಸಮ್ಮಾನಿಸಿ ಅವರು ಮಾತನಾಡಿದರು.ಮುಂದಿನ ದಿನಗಳಲ್ಲಿ ಮೋದಿ ಹಾಗೂ ಕರ್ನಾಟಕದಲ್ಲಿ ಯಡಿಯೂರಪ್ಪ ಮುಕ್ತ ಭಾರತ ಹಾಗೂ ಆಡಳಿತವನ್ನು ಹೊಂದುವುದು ಕಾಂಗ್ರೆಸ್‌ […]

ಆರೋಪ-ಪ್ರತ್ಯಾರೋಪಗಳ ನಂತ್ರ ಕೈಕುಲುಕಿದ ಹಾಲಿ-ಮಾಜಿ ಪ್ರಧಾನಿಗಳು!

Wednesday, December 13th, 2017
Narendra-modi

ನವದೆಹಲಿ: ಗುಜರಾತ್ ಚುನಾವಣಾ ಪ್ರಚಾರದ ವೇಳೆ ಆರೋಪ-ಪ್ರತ್ಯಾರೋಪಗಳನ್ನು ನಡೆಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿಯಾಗಿ ಕೈಕುಲುಕಿ ಮಾತನಾಡಿದರು. 2001ರ ಸಂಸತ್ ದಾಳಿಯ ವರ್ಷಾಚರಣೆ ಹಿನ್ನೆಲೆಯಲ್ಲಿ ಮೃತಪಟ್ಟವರಿಗೆ ಗೌರವ ನಮನ ಸಲ್ಲಿಸಲು ಆಗಮಿಸಿದ್ದ ವೇಳೆ ಹಾಲಿ ಹಾಗೂ ಮಾಜಿ ಪ್ರಧಾನಿಗಳ ಸಮಾಗಮ ಆಗಿದೆ. ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ನಮನ ಸಲ್ಲಿಸಲು ಸಂಸತ್‌ ಕಟ್ಟಡ ಪ್ರವೇಶಿಸುವ ಮುನ್ನ ಉಭಯ ನಾಯಕರು ಪರಸ್ಪರ ಭೇಟಿಯಾಗಿ ಕೈಕುಲುಕಿ ಕುಶಲೋಪರಿ ವಿಚಾರಿಸಿದರು. ಗುಜರಾತ್ ಚುನಾವಣಾ […]

ನರೇಂದ್ರ ಮೋದಿ ಹಿಂಸಾಚಾರವನ್ನು ವಿರೋಧಿಸಿದರೆ, ಶಿಷ್ಯರು ಹಿಂಸಾಚಾರ ನಡೆಸುತ್ತಿದ್ದಾರೆ

Thursday, December 7th, 2017
Rai

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಧರ್ಮದ ಹಿಂಸಾಚಾರವನ್ನು ವಿರೋಧಿಸುವುದಾಗಿ ಹೇಳಿದರೆ, ಅವರ ಶಿಷ್ಯರು ಧರ್ಮದ ಹೆಸರಿನಲ್ಲಿ ಹಿಂಸೆಗೆ ಪ್ರಚೋದಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ರಾಜ್ಯ ಬಿಜೆಪಿ ಮುಖಂಡರನ್ನು ಟೀಕಿಸಿದ್ದಾರೆ. ಮೋದಿಯವರ ಶಿಷ್ಯರು ಧರ್ಮ, ದೇವರು, ದೇಶಪ್ರೇಮದ ಹೆಸರಿನಲ್ಲಿ ಹಿಂಸಾಚಾರ ನಡೆಸುತ್ತಿದ್ದಾರೆ. ಇಂತಹ ಶಿಷ್ಯರಿಗೆ ಎಂದಿಗೂ ಜನಸಾಮಾನ್ಯರು ಮಣೆ ಹಾಕಬಾರದು ಎಂದರು. ಈ ನಿಟ್ಟಿನಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಕಾನೂನಿಗಿಂತ ಮೇಲೆ ಹೋಗಿದ್ದಾರೆ. ಸಂಸದರಿಗೆ ಕಾನೂನು ಎಂಬುದು ತಿಳಿಯದಿದ್ದರೆ ಸಾಮಾನ್ಯರ ಕಥೆ ಏನು ಎಂದು […]

ಜಂಟಿ ಕ್ರಿಯಾ ಸಮಿತಿ ಮತ್ತು ನಾಗರಿಕ ಸೇವಾ ಟ್ರಸ್ಟ್‌ನ ನಿಯೋಗದಿಂದ ಮನವಿ

Tuesday, November 7th, 2017
ಜಂಟಿ ಕ್ರಿಯಾ ಸಮಿತಿ ಮತ್ತು ನಾಗರಿಕ ಸೇವಾ ಟ್ರಸ್ಟ್‌ನ ನಿಯೋಗದಿಂದ ಮನವಿ

ಮಂಗಳೂರು: ಜಂಟಿ ಕ್ರಿಯಾ ಸಮಿತಿ ಮತ್ತು ನಾಗರಿಕ ಸೇವಾ ಟ್ರಸ್ಟ್‌ನ ನಿಯೋಗ ಸಂಸದ ನಳಿನ್ ಕುಮಾರ್ ಕಟೀಲ್ ಇವರನ್ನು ತಾ.6-7-2017  ರಂದು ಮಂಗಳೂರು ಸರ್ಕ್ಯುಟ್ ಹೌಸ್‌ನಲ್ಲಿ ಭೇಟಿಯಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತಾ.29-10-2017 ರಂದು ಉಜಿರೆಯಲ್ಲಿ, ಹಲವು ಭೂ ಹಗರಣ ಮತ್ತಿತರ ಕಾನೂನು ಉಲ್ಲಂಘನೆಗಳ ಕ್ರಿಮಿನಲ್ ಕೇಸ್‌ಗಳ ತನಿಖೆ ಎದುರಿಸುತ್ತಿರುವ ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಮಾತ್ರವಲ್ಲದೆ ಭಾರೀ ಹೊಗಳಿಕೆ ಮಾಡಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಮನವಿ ಸಲ್ಲಿಸಿತು. ಸಂಸದರು ಪ್ರಧಾನಿಯವರಿಗೆ ನಾವು […]

ಸ್ವಸಹಾಯ ಸಂಘಗಳಲ್ಲಿ ತೊಡಗಿಸಿಕೊಂಡರೆ ಆರ್ಥಿಕ ಅಭಿವೃದ್ಧಿ ಸಾಧ್ಯ:ನರೇಂದ್ರ ಮೋದಿ

Monday, October 30th, 2017
rupay card

ಮಂಗಳೂರು: ಮೀನುಗಾರಿಕೆಗೆ ರಜಾ ಇರುವ 45 ದಿನಗಳ ಅವಧಿಯಲ್ಲಿ ಬೆಳೆಯಬಹುದಾದ ಔಷಧಿ ಮಹತ್ವದ ಜಲ ಸಸ್ಯ ಕೃಷಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳು ತೊಡಗಿಸಿಕೊಂಡರೆ ಮೀನುಗಾರರೂ ಸೇರಿದಂತೆ ತಳ ಸಮುದಾಯದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉಜಿರೆಯ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಇಂದು ನಡೆದ ಬೃಹತ್ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 12 ಲಕ್ಷ ಸ್ವಸಹಾಯ ಸಂಘದ ಸದಸ್ಯರಿಗೆ ರುಪೇ ಕಾರ್ಡ್ ವಿತರಣೆ, ತಂತ್ರಾಂಶ ಆಧಾರಿತ […]