Blog Archive

ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣು

Monday, December 19th, 2016
Tulasi

ಮಂಗಳೂರು: ಮಹಿಳೆಯೋರ್ವಳು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಸಂಜೆ ಉಳ್ಳಾಲ ಠಾಣಾ ವ್ಯಾಪ್ತಿಯ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಕಂಕನಾಡಿ ಬೈಪಾಸ್ ರಸ್ತೆಯ ವಿಜಯ್‌ ಎಂಬುವರ ಪತ್ನಿ ತುಳಸಿ (51) ಆತ್ಮಹತ್ಯೆಗೆ ಶರಣಾದ ಮಹಿಳೆ. ಜೆಪ್ಪು ಸಮೀಪ ಬಸ್ಸಿನಿಂದ ಇಳಿದ ಮಹಿಳೆ ನೇತ್ರಾವತಿ ಸೇತುವೆವರೆಗೆ ನಡೆದುಕೊಂಡು ಬಂದಿದ್ದು, ಅಲ್ಲಿ ವ್ಯಾನಿಟಿ ಬ್ಯಾಗ್ ಹಾಗೂ ಚಪ್ಪಲಿಯನ್ನು ಇಟ್ಟು ನದಿಗೆ ಹಾರಿದ್ದಾರೆ ಎನ್ನಲಾಗಿದೆ. ತುಳಸಿ ನದಿಗೆ ಹಾರುವುದನ್ನು ಕಂಡ ದ್ವಿಚಕ್ರ ಸವಾರರೊಬ್ಬರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ […]

ಎತ್ತಿನಹೊಳೆ ವಿರೋಧಿ ಹೋರಾಟ ಯಾವೂದೇ ಜಾತಿ, ಧರ್ಮಕ್ಕೆ ಸೀಮಿತವಲ್ಲ: ಹರಿಕೃಷ್ಣ ಬಂಟ್ವಾಳ್

Monday, December 12th, 2016
Ratha-yathre

ಬೆಳ್ತಂಗಡಿ: ನೇತ್ರಾವತಿ ನದಿ ಎಂಬುದು ಯಾವೂದೇ ಪಕ್ಷಕ್ಕೆ ಸಂಬಂಧಿಸಿದಲ್ಲ. ಇದು ಜಿಲ್ಲೆಯ ಜನರ ಜನರ ಸ್ವತ್ತು. ಎತ್ತಿನಹೊಳೆ ವಿರೋಧಿ ಹೋರಾಟ ಯಾವೂದೇ ಜಾತಿ, ಧರ್ಮಕ್ಕೆ ಸೀಮಿತವಲ್ಲ. ಇದು ನಮ್ಮ ಜಿಲ್ಲೆಯ ಜನತೆಯ ಬದುಕಿನ ಪ್ರಶ್ನೆ ಎತ್ತಿನಹೊಳೆ ಯೋಜನೆ ಹಣ ಮಾಡುವ ಯೋಜನಯೇ ಹೊರತು ಯಾರಿಗೂ ನೀರು ಕೊಡುವ ಉದ್ದೇಶ ಇದರಲ್ಲಿ ಇಲ್ಲ ಎಂದು ಯಾತ್ರೆ ಸಮಿತಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ. ಅವರು ಧರ್ಮಸ್ಥಳದಲ್ಲಿ ಎತ್ತಿನಹೊಳೆ ವಿರೋಧಿಸಿ-ನೇತ್ರಾವತಿ ಉಳಿಸಿ ಸಮಿತಿಯ ವತಿಯಿಂದ ಪಂಚತೀರ್ಥ- ಸಪ್ತಕ್ಷೇತ್ರ ರಥಯಾತ್ರೆಯ ಸಾರ್ವಜನಿಕ […]

ತುಳುನಾಡಿನ ಜನರ ನಿರಂತರ ಹೋರಾಟವನ್ನು ಅಡಗಿಸುವ ಯತ್ನಗಳು ನಡೆಯುತ್ತಿವೆ: ಶೈಲೇಶ್ ಆರ್. ಜೆ

Thursday, November 3rd, 2016
Tulu-nadu

ಮಂಗಳೂರು: ದೇಶಕ್ಕೆ ಸ್ವಾತಂತ್ರ ನಂತರ 1956ರಲ್ಲಿ ಭಾಷಾವಾರು ಪ್ರಾಂತ್ಯಗಳನ್ನು ರಚಿಸುವಾಗ ತುಳುಭಾಷಿಕ ಪ್ರದೇಶಗಳನ್ನು ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಹಂಚಿ ತುಳುವರ ನ್ಯಾಯಯುತವಾದ ಬೇಡಿಕೆಯನ್ನು ಕಡೆಗಣಿಸಲಾಯಿತು ಎಂದು ತುಳುನಾಡ್ ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷ ಶೈಲೇಶ್ ಆರ್. ಜೆ. ಆರೋಪಿಸಿದರು. ತುಳು ಭಾಷೆಯನ್ನು ನಿರಂತರವಾಗಿ ಕಡೆಗಣಿಸಲಾಗುತ್ತಿದೆ. ಕರ್ನಾಟಕ ಮತ್ತು ಕೇರಳ ರಾಜ್ಯಗಳು ತುಳು ಭಾಷೆಗೆ ಎರಡನೇ ರಾಜ್ಯ ಭಾಷೆ ಸ್ಥಾನಮಾನವನ್ನು ನೀಡದೆ ವಂಚಿಸಿವೆ. ಇನ್ನು ತುಳುನಾಡಿನ ಜನರ ನಿರಂತರ ಹೋರಾಟವನ್ನು ಅಡಗಿಸುವ ಯತ್ನಗಳು ನಡೆಯುತ್ತಿವೆ. ಇದೀಗ ಎತ್ತಿನಹೊಳೆ […]

ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಅ 6 ರಂದು ರಸ್ತಾ ರೋಕೋ

Monday, October 3rd, 2016
sarva-college

ಮಂಗಳೂರು: ಎತ್ತಿನಹೊಳೆ ಯೋಜನೆಗೆ ವಿರೋಧಿಸುತ್ತಿರುವ ಕರಾವಳಿ ಜನರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸದೆ ಇರುವುದನ್ನು ಖಂಡಿಸಿ ಜಿಲ್ಲೆಯ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಅ 6 ರಂದು ರಸ್ತಾ ರೋಕೋ ನಡೆಸಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ದಿನಕರ ಶೆಟ್ಟಿ ಹೇಳಿದರು. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಬೆಳಗ್ಗೆ ಬೆಸೆಂಟ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗು ವುದು ಎಂದು ಎಚ್ಚರಿಸಿದರು. ಜಿಲ್ಲೆಯ ಬಗ್ಗೆ ಸರ್ಕಾರ, ಮುಖ್ಯಮಂತ್ರಿಗಳು, ಕ್ಯಾಬಿನೆಟ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವರ್ತನೆ […]

ಎತ್ತಿನಹೊಳೆ ಯೋಜನೆಗೆ ವಿರುದ್ಧವಾಗಿ ತೀರ್ಪು ಬರಲೆಂದು ಪ್ರಾರ್ಥನೆ

Thursday, September 15th, 2016
yetthinahole-project

ಮಂಗಳೂರು: ದೆಹಲಿಯ ರಾಷ್ಟ್ರೀಯ ಹಸಿರು ಪೀಠದಲ್ಲಿ ಸೆ. 21ರಂದು ನೇತ್ರಾವತಿ ನದಿ ತಿರುವು ಯೋಜನೆ ಕುರಿತು ವಿರುದ್ಧವಾಗಿ ತೀರ್ಪು ಬರಲೆಂದು ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿ ಸದಸ್ಯರು ನಗರದ ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು. ಆರಂಭದಲ್ಲಿ ಕದ್ರಿ ಮಂಜುನಾಥ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲೆಯವರು ಶಾಂತ ಸ್ವಭಾವದವರು. ಈವರೆಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಾರೆ. ಆದರೆ, ಸರ್ಕಾರ ಇದನ್ನು ಅರ್ಥಮಾಡಿಕೊಂಡಿಲ್ಲ. ಸರ್ಕಾರ ಕಿವಿಗೊಡದೆ ಹೋದಾಗ […]

ಸ್ನಾನ ಮಾಡಲು ತೆರಳಿದ್ದ ಯುವಕನೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

Tuesday, September 6th, 2016
Rajanikanth

ಬಂಟ್ವಾಳ: ಸ್ನೇಹಿತರೊಂದಿಗೆ ಸ್ನಾನ ಮಾಡಲು ತೆರಳಿದ್ದ ಯುವಕನೋರ್ವ ಇಲ್ಲಿನ ಬಿ.ಸಿ. ರೋಡ್‌‌ ಸಮೀಪ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಮಂಗಳೂರು ಶ್ರೀನಿವಾಸ್ ಕಾಲೇಜಿನ ದ್ವಿತೀಯ ಬಿಬಿಎಂ ವಿದ್ಯಾರ್ಥಿಯಾಗಿದ್ದ ನಂತೂರು ನಿವಾಸಿ ರಜನಿಕಾಂತ್ (25) ಎಂಬಾತನೆ ಮೃತ ಯುವಕ. ಈತ ಸ್ನೇಹಿತರೊಂದಿಗೆ ನದಿಯ ಆಳ ತಿಳಿಯದೆ ಸ್ನಾನ ಮಾಡಲು ಇಳಿದಿದ್ದು ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾಧಿಕಾರಿ ನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು […]

ಖಾಸಗಿ ಬಸ್ ಉದ್ಯಮಿ ನಾಪತ್ತೆ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

Thursday, August 11th, 2016
Narayana-Alwa

ಮಂಗಳೂರು: ನಗರದ ಖಾಸಗಿ ಬಸ್ ಉದ್ಯಮಿಯೊಬ್ಬರು ನಾಪತ್ತೆಯಾಗಿದ್ದು, ಉಳ್ಳಾಲ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಜೆಪ್ಪಿನಮೊಗರು ನಿವಾಸಿ ನಾರಾಯಣ ಆಳ್ವ (60) ಎಂಬುವರು ಇಂದು ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದಾರೆ. ಮನೆ ಮಂದಿ ಆಳ್ವರಿಗಾಗಿ ಹುಡುಕಿ ಬಳಿಕ ದಕ್ಷಿಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ನಂತರ ನೇತ್ರಾವತಿ ಸೇತುವೆ ಬಳಿ ಆಗಮಿಸಿದ ಪೊಲೀಸರು ಹುಡುಕಾಟ ಆರಂಭಿಸಿದ್ದು, ಆಳ್ವರ ಕಾರು ಉಳ್ಳಾಲ ಸೇತುವೆಯಲ್ಲಿ ಪತ್ತೆಯಾಗಿದೆ. ಕಾರನ್ನು ಠಾಣೆಯಲ್ಲಿರಿಸಿದ್ದಾರೆ. […]

ನೇತ್ರಾವತಿ ನದಿ ಉಳಿಸಲು ವಿವಿಧ ಸಂಘಟನೆಗಳಿಂದ ಪಂಪ್‌ವೆಲ್‌ನಲ್ಲಿ ರಸ್ತೆ ತಡೆ ಚಳವಳಿ

Thursday, October 15th, 2015
Yethina Hole pumpwell

ಮಂಗಳೂರು : ರಾಜ್ಯ ಸರಕಾರ ಎತ್ತಿನ ಹೊಳೆ ಯೋಜನೆಗೆ ಮಣೆಹಾಕಿ ಜಿಲ್ಲೆಯ ಜನತೆಯನ್ನು ಮೋಸ ಮಾಡುತ್ತಿರುವುದರ ವಿರುದ್ದ ನೇತ್ರಾವತಿ ನದಿ ಸಂರಕ್ಷಣಾ ಒಕ್ಕೂಟ,ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳೂರಿನ ಪಂಪ್‌ವೆಲ್‌ನಲ್ಲಿ ಇಂದು ಗುರುವಾರ ರಸ್ತೆ ತಡೆ ಚಳವಳಿ ನಡೆಸಲಾಯಿತು. ಬೆಳಗ್ಗೆ 10 ಗಂಟೆಯಿಂದ ಪಂಪ್‌ವೆಲ್‌ ಜಂಕ್ಷನ್‌ನಲ್ಲಿ ನಾಲ್ಕೂ ದಿಕ್ಕಿನ ರಸ್ತೆಗಳಲ್ಲಿ ಸಂಚಾರಕ್ಕೆ ತಡೆ ಉಂಟು ಮಾಡಿ ಸುಮಾರು 2 ಗಂಟೆಗಳ ಕಾಲ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ಚಳವಳಿ ಪ್ರತಿಭಟನೆಯಲ್ಲಿ ಸ್ವಾಮೀಜಿಗಳು, ಶಾಸಕರು , ಧಾರ್ಮಿಕ ಮುಖಂಡರು, ಕರಾವಳಿ […]

ನಿಡ್ಡೋಡಿಯಲ್ಲಿ ಉಷ್ಣ ವಿದ್ಯುತ್‌ ಸ್ಥಾವರ ನಿರ್ಮಾಣ ಇಲ್ಲ : ಸಚಿವ ಬಿ. ರಮಾನಾಥ ರೈ

Saturday, November 2nd, 2013
ramanath

ಮಂಗಳೂರು : ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಇಲಾಖೆಯ ಸಚಿವ ಬಿ. ರಮಾನಾಥ ರೈ ನಿಡ್ಡೋಡಿಯಲ್ಲಿ ಉಷ್ಣ ವಿದ್ಯುತ್‌ ಸ್ಥಾವರ ನಿರ್ಮಾಣ ಇಲ್ಲ ಎಂದು ಶುಕ್ರವಾರ ಘೋಷಿಸಿದರು. ಸಚಿವ ಬಿ. ರಮಾನಾಥ ರೈ ಅವರು ಕನ್ನಡಪರ ಚಿಂತಕರ ಚಾವಡಿ ‘ಕನ್ನಡ ಕಟ್ಟೆ’ಯನ್ನು ಉದ್ಘಾಟಿಸಿ, ಜಿಲ್ಲೆಯ ಪರಿಸರಕ್ಕೆ ಹಾನಿಯಾಗುವ ಅಥವಾ ಜನತೆಗೆ ಬೇಡವಾದ ಯಾವ ಯೋಜನೆಗಳೂ ಇಲ್ಲಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನೇತ್ರಾವತಿ ನದಿ ತಿರುವು ಪ್ರಸ್ತಾವನೆಯ ಬಗ್ಗೆಯೂ ಮರುಪರಿಶೀಲನೆಗೆ ಕೋರಲಾಗಿದೆ ಎಂದರು. ಕನ್ನಡಪರ ಕಾರ್ಯವನ್ನು ಕ್ರಿಯಾಶೀಲವಾಗಿ ನಡೆಸುವಂತೆ […]

ಮದುವೆಗೆ ಬಂದಿದ್ದ ಯುವಕ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

Monday, September 9th, 2013
Praveen

ಬಂಟ್ವಾಳ : ಸಜಿಪ ಮುನ್ನೂರು ಗ್ರಾಮದ ಮಂಜಲ್ಪಾದೆ ಎಂಬಲ್ಲಿ ಸ್ನೇಹಿತನ ಮದುವೆಗೆಂದು ಬಂದಿದ್ದ ಯುವಕನೋರ್ವ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋದ ಘಟನೆ ರವಿವಾರ ಬೆಳಗ್ಗೆ ನಡೆದಿದೆ. ರವಿವಾರ ಕಟೀಲಿನಲ್ಲಿ  ತನ್ನ ಸ್ನೆಹಿತ ಹರೀಶ್ ಎಂಬವರ ಮದುವೆಗೆ ಬಂದಿದ್ದ ಕಡೇಶ್ವಾಲ್ಯ ಗ್ರಾಮದ ಪ್ರವೀಣ್ ಕುಲಾಲ್(20) ನೀರುಪಾಲಾದ ದುರ್ದೈವಿ.  ಈತನೊಂದಿಗೆ ನದಿಗೆ ಸ್ನಾನಕ್ಕೆ ಇಳಿದಿದ್ದ ಕಿರಣ್ ಅಮ್ಟೂರು, ಅಜಯ್ ಹೊನ್ನಾವರ ಹಾಗೂ ಕಮಲಾಕ್ಷ ಶಾಂತಿಗುಡ್ಡೆ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]